Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಆಧುನಿಕ ಔಷಧಿ ನಿರಾಕರಿಸಿದ ಪೋಷಕರು, ಜಾಂಡೀಸ್‌ಗೆ ಮಗು ಬಲಿ

editor tv by editor tv
July 2, 2025
in ರಾಷ್ಟ್ರೀಯ
0
ಆಧುನಿಕ ಔಷಧಿ ನಿರಾಕರಿಸಿದ ಪೋಷಕರು, ಜಾಂಡೀಸ್‌ಗೆ ಮಗು ಬಲಿ
1.9k
VIEWS
Share on FacebookShare on TwitterShare on Whatsapp

Ashraf Kammaje Published : Jul 02 2025, 02:15 PM

ಕೇರಳದ ಮಲ್ಲಪ್ಪುರಂನಲ್ಲಿ ಸುಶಿಕ್ಷಿತ ದಂಪತಿಗಳು ಆಧುನಿಕ ಔಷಧಿ ಮತ್ತು ಚುಚ್ಚುಮದ್ದುಗಳನ್ನು ನಿರಾಕರಿಸಿದ್ದರಿಂದ ಒಂದು ವರ್ಷದ ಮಗು ಜಾಂಡೀಸ್‌ನಿಂದ ಮೃತಪಟ್ಟಿದೆ.

ಮಲ್ಲಪುರಂ: ಮಗು ಜನಿಸಿದ ಕೂಡಲೇ ಮಗುವಿಗೆ ಹಲವು ಚುಚ್ಚುಮದ್ದುಗಳನ್ನು ನೀಡಲಾಗುತ್ತದೆ. ಹೀಗೆ ನೀಡುವ ಚುಚ್ಚುಮದ್ದುಗಳಲ್ಲಿ ಹಲವು ಮಾರಕ ಕಾಯಿಲೆಗಳನ್ನು ತಡೆಗಟ್ಟುವ ಔಷಧಿಗಳಿರುತ್ತವೆ. ಆದರೆ ಕೇರಳದಲ್ಲಿ ಸುಶಿಕ್ಷಿತ ದಂಪತಿಯೇ ಈ ಎಲ್ಲಾ ಆಧುನಿಕ ಔಷಧಿ ಹಾಗೂ ಚುಚ್ಚುಮದ್ದುಗಳನ್ನು ನಿರಾಕರಿಸುವ ಮೂಲಕ ಮಗುವಿನ ಜೀವಕ್ಕೆ ತಾವೇ ಯಮಸ್ವರೂಪಿಗಳಾದಂತಹ ಘಟನೆ ನಡೆದಿದೆ.

kerala couple reject modern medicine baby died of jaundice

ಹೌದು ಕೇರಳದಲ್ಲಿ ಸುಶಿಕ್ಷಿತ ದಂಪತಿಯ ಅಸುಕ್ಷಿತ ನಡೆಯಿಂದಾಗಿ ಒಂದು ವರ್ಷದ ಮಗು ಜೀವ ಬಿಟ್ಟಿದೆ. ಈ ವಿಚಾರ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಪೋಷಕರ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ವೈದ್ಯರ ಚಿಕಿತ್ಸೆ ಇಲ್ಲದೇ ಪ್ರಾಣ ಬಿಟ್ಟು ಒಂದು ವರ್ಷದ ಮಗು ಜಾಂಡೀಸ್(ಕಾಮಾಲೆ ರೋಗ, ಹಳದಿ ಕಾಯಿಲೆ) ದಿಂದ ಬಳಲುತ್ತಿತ್ತು.

ಕೇರಳದ ಮಲ್ಲಪ್ಪುರಂನಲ್ಲಿ ಈ ಘಟನೆ ನಡೆದಿದೆ. ಪೋಷಕರು ಅಧುನಿಕ ಔಷಧಿಯನ್ನು ನಿರಾಕರಿಸಿದ ಹಿನ್ನೆಲೆ ಮಗುವಿನ ಕಾಯಿಲೆಗೆ ಚಿಕಿತ್ಸೆ ನೀಡಲಾಗಿಲ್ಲ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಹೀಗೆ ಪೋಷಕರ ನಿರ್ಲಕ್ಷ್ಯದಿಂದಾಗಿ ಮೃತಪಟ್ಟ ಮಗುವನ್ನು ಇಸೇನ್ ಇರ್ಹಾನ್ ಎಂದು ಗುರುತಿಸಲಾಗಿದೆ. ಈ ಮಗು ಹೀರಾ ಹರೀರಾ ಹಾಗೂ ನವಾಜ್ ಎಂಬುವವರ ಪುತ್ರನಾಗಿದ್ದು, ಇವರು ಮಲ್ಲಪುರಂ ಜಿಲ್ಲೆಯ ಕೊಟ್ಟಕ್ಕಲ್ ನಿವಾಸಿಗಳಾಗಿದ್ದಾರೆ. ಮಗು ಇಸೇನ್ ಇರ್ಹಾನ್ ಜೂನ್ 27ರಂದು ಜಾಂಡೀಸ್‌ನಿಂದ ಮೃತಪಟ್ಟಿದೆ. ಪೊಲೀಸರು ಹಾಗೂ ಆರೋಗ್ಯ ಅಧಿಕಾರಿಗಳು ಮಗುವಿಗೆ ಯಾವುದೇ ರೀತಿಯ ಆಧುನಿಕ ಚಿಕಿತ್ಸೆ ನೀಡಲಾಗಿಲ್ಲ ಎಂದು ಅನುಮಾನ ಪಟ್ಟಿದ್ದಾರೆ.

ಈ ಮಗುವಿನ ತಾಯಿ ಹೀರಾ ಹರೀರಾ ಆಕ್ಯುಪಂಕ್ಚರ್ ಪ್ರಾಕ್ಟಿಸ್ ಮಾಡುವವರಾಗಿದ್ದು, ಅವರು ಈ ಹಿಂದೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಆಧುನಿಕ ವೈದ್ಯ ಪದ್ಧತಿಯನ್ನು ವಿರೋಧಿಸಿರುವ ಪೋಸ್ಟ್‌ಗಳು ಈಗ ವೈರಲ್ ಆಗುತ್ತಿದ್ದು, ಈ ವಿಚಾರ ಈಗ ಭಾರಿ ಚರ್ಚೆಯಲ್ಲಿದೆ.

ಮನೆಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ ವೇಳೆ, ಮಗುವಿನ ಪೋಷಕರು ಮಗು ಎದೆಹಾಲು ಸೇವಿಸಿದ ಕೆಲವೇ ಹೊತ್ತಿನಲ್ಲಿ ಜೀವ ಬಿಟ್ಟಿದೆ ಎಂದು ಮಾಹಿತಿ ನೀಡಿದ್ದಾರೆ. ಈ ವೇಳೆ ಆರೋಗ್ಯಾಧಿಕಾರಿಗಳು ನಡೆಸಿದ ವಿಚಾರಣೆಯಲ್ಲಿ ಮಗುವಿಗೆ ಯಾವುದೇ ಚುಚ್ಚುಮದ್ದುಗಳನ್ನು ಕೂಡ ನೀಡಿಲ್ಲ ಎಂಬುದು ತಿಳಿದು ಬಂದಿದೆ.

ಮಗುವಿನ ಸಾವಿನ ನಂತರ ಪೋಷಕರು ಮಗುವಿನ ಅಂತ್ಯಕ್ರಿಯೆಯನ್ನು ಮುಂದುವರಿಸಿದರೂ, ಪೊಲೀಸರು ನಂತರ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲು ನಿರ್ಧರಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಏಪ್ರಿಲ್‌ನಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ, ಮಲಪ್ಪುರಂನಲ್ಲಿ 35 ವರ್ಷದ ಅಸ್ಮಾ ಎಂಬ ಮಹಿಳೆ ಮನೆಯಲ್ಲಿಯೇ ಹೆರಿಗೆಯ ಸಮಯದಲ್ಲಿ ಸಾವನ್ನಪ್ಪಿದರು. ಇದಾದ ನಂತರ ‘ಮಡವೂರ್ ಖಾಫಿಲಾ’ ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ಆಕೆಯ ಪತಿ ಸಿರಾಜುದ್ದೀನ್ ಅವರನ್ನು ಪೊಲೀಸರು ಬಂಧಿಸಿದ್ದರು. ಈತನ ವಿರುದ್ಧ ಬಂಧಿಸಿ ಕೊಲೆಯಲ್ಲದ ನರಹತ್ಯೆ ಮತ್ತು ಸಾಕ್ಷ್ಯಗಳನ್ನು ನಾಶಮಾಡಲು ಯತ್ನಿಸಿದ ಆರೋಪ ಹೊರಿಸಲಾಯಿತು. ಈತ ಎರ್ನಾಕುಲಂನ ಪೆರುಂಬವೂರ್‌ನಲ್ಲಿ ಅಸ್ಮಾ ಅವರ ಶವವನ್ನು ರಹಸ್ಯವಾಗಿ ಹೂಳಲು ಯತ್ನಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ. ಈತನೂ ಕೂಡ ತನ್ನ ಚಾನೆಲ್‌ನಲ್ಲಿ ಹೆರಿಗೆಯ ಸಮಯದಲ್ಲಿ ಆಧುನಿಕ ವೈದ್ಯಕೀಯ ಆರೈಕೆಯ ವಿರುದ್ಧ ತಪ್ಪು ಮಾಹಿತಿ ನೀಡಿದ್ದ.

Previous Post

ಹಾಸನ ಜಿಲ್ಲೆಯ ಹಠಾತ್ ಸಾವುಗಳಿಗೂ ವ್ಯಾಕ್ಸಿನ್‌ಗೂ ಸಂಬಂಧ ಇಲ್ಲ -ಕಾರಣ ನೀಡಿದ ಕೇಂದ್ರ ಸರ್ಕಾರ

Next Post

ಬೆಂಜನಪದವು ಶಾಲಾ ಕ್ರೀಡಾಂಗಣಕ್ಕೆ ಮಂಜೂರಾದ 10 ಕೋಟಿ ರೂ. ಹಣ ಬಿಡುಗಡೆಗೆ ಶಾಸಕ ಮಂಜುನಾಥ ಭಂಡಾರಿ ಸೂಚನೆ

Next Post
ಬೆಂಜನಪದವು ಶಾಲಾ ಕ್ರೀಡಾಂಗಣಕ್ಕೆ ಮಂಜೂರಾದ 10 ಕೋಟಿ ರೂ. ಹಣ ಬಿಡುಗಡೆಗೆ ಶಾಸಕ ಮಂಜುನಾಥ ಭಂಡಾರಿ ಸೂಚನೆ

ಬೆಂಜನಪದವು ಶಾಲಾ ಕ್ರೀಡಾಂಗಣಕ್ಕೆ ಮಂಜೂರಾದ 10 ಕೋಟಿ ರೂ. ಹಣ ಬಿಡುಗಡೆಗೆ ಶಾಸಕ ಮಂಜುನಾಥ ಭಂಡಾರಿ ಸೂಚನೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.