Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಮಂಗಳೂರು ಪಾಲಿಕೆಯಲ್ಲಿ ನಕಲಿ ತೆರಿಗೆ ನೋಂದಣಿ ಜಾಲ: ಮಧ್ಯವರ್ತಿಯಿಂದ ಲಕ್ಷಾಂತರ ರೂ ದೋಖಾ

editor tv by editor tv
July 3, 2025
in ರಾಜ್ಯ
0
ಮಂಗಳೂರು ಪಾಲಿಕೆಯಲ್ಲಿ ನಕಲಿ ತೆರಿಗೆ ನೋಂದಣಿ ಜಾಲ: ಮಧ್ಯವರ್ತಿಯಿಂದ ಲಕ್ಷಾಂತರ ರೂ ದೋಖಾ
1.9k
VIEWS
Share on FacebookShare on TwitterShare on Whatsapp

ಮಂಗಳೂರಿನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಬೆಳಕಿಗೆ ಬಂದ ಬೆನ್ನಲ್ಲೇ ಇದೀಗ ತೆರಿಗೆ ನೋಂದಣಿಯಲ್ಲಿ ನಕಲಿ ಸರ್ಟಿಫಿಕೇಟ್ ಸೃಷ್ಟಿಸಿ ಲಕ್ಷಾಂತರ ರೂ ದೋಖಾ ಮಾಡುತ್ತಿರುವ ಜಾಲವೊಂದು ಪತ್ತೆ ಆಗಿದೆ. ಈ ಬಗ್ಗೆ ವಂಚನೆಗೊಳಗಾದವರಿಂದ ಪಾಲಿಕೆಗೆ ದೂರು ನೀಡಲಾಗಿದ್ದು, ಪಾಲಿಕೆ ಕೂಡ ಈ ಕುರಿತಾಗಿ ಪೊಲೀಸರಿಗೆ ದೂರು ನೀಡಿದೆ.

ಮಂಗಳೂರು, ಜುಲೈ 03: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಕಲಿ ತೆರಿಗೆ ನೋಂದಣಿ (fake tax scam) ಜಾಲವೊಂದು ಪತ್ತೆ ಆಗಿದ್ದು, ನಕಲಿ ಪ್ರಮಾಣಪತ್ರಗಳನ್ನುಸೃಷ್ಟಿಸಿ ಲಕ್ಷಾಂತರ ರೂ ವಂಚನೆ ಮಾಡಿರುವಂತಹ ಘಟನೆ ಬೆಳಕಿಗೆ ಬಂದಿದೆ. ಮಹಾನಗರ ಪಾಲಿಕೆಯಿಂದ ನೀಡುವ ಸರ್ಟಿಫಿಕೇಟ್​​ನ್ನೇ ವಂಚಕರು ಕಂಪ್ಯೂಟರ್ ತಂತ್ರಜ್ಞಾನ ಬಳಸಿ ನಕಲಿ ಮಾಡಿ ವಂಚಿಸಿದ್ದಾರೆ. ಅಷ್ಟೇ ಅಲ್ಲದೆ ಉದ್ದಿಮೆದಾರರಿಂದ ಹಣ ಸಂಗ್ರಹಿಸಿ ಪಾಲಿಕೆಗೆ ಕಟ್ಟದೆ ಕೆಲ ಏಜೆಂಟರು ದೋಖಾ ಮಾಡಿದ್ದಾರೆ. ಸದ್ಯ ಪಾಲಿಕೆಯಿಂದ ಕಂಕನಾಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಈ ನಕಲಿ ಸರ್ಟಿಫಿಕೇಟ್​​ ಮೇಲ್ನೋಟಕ್ಕೆ ನೋಡಿದರೆ ಯಾವುದೇ ವ್ಯತ್ಯಾಸ ಕಂಡುಬರುತ್ತಿಲ್ಲ. ಆದರೆ ಕೆಲ‌ ಸರ್ಟಿಫಿಕೇಟ್​​ನಲ್ಲಿ ಯಾರದ್ದೋ ಕ್ಯೂ ಆರ್ ಕೋಡ್ ಬಳಕೆ ಮಾಡಲಾಗಿದ್ದು, ಸ್ಕ್ಯಾನ್ ಮಾಡಿದಾಗ ಬೇರೆ ಉದ್ದಿಮೆದಾರರ ಪರವಾನಗಿ ಪತ್ರ ಲಭ್ಯವಾಗುತ್ತಿದೆ. ಅತ್ತ ಉದ್ದಿಮೆದಾರರು ಇದೇ ಮೂಲ ಪ್ರತಿ ಎಂದು ನಂಬಿದ್ದಾರೆ.

ಇನ್ನು ಕೆಲ‌ ಸರ್ಟಿಫಿಕೇಟ್​​ಗಳಲ್ಲಿ ಪರವಾನಗಿ ನವೀಕರಣದ ದಿನಾಂಕಗಳಷ್ಟೇ ಬದಲಾವಣೆ ಮಾಡಲಾಗಿದೆ. ಸುಮಾರು 4,500 ಉದ್ದಿಮೆ ಪರವಾನಗಿಯನ್ನು ನಕಲಿ ಮಾಡಿರುವ ಸಂಶಯ ವ್ಯಕ್ತವಾಗಿದೆ. ಹೀಗಾಗಿ ನಕಲಿ ಸರ್ಟಿಫಿಕೇಟ್ ನೀಡಿ ವಂಚಿಸಿರುವ ಬಗ್ಗೆ ಅನುಮಾನಗಳು ಮೂಡಿದ್ದು, ಸರ್ಟಿಫಿಕೇಟ್​ಗಳ ಪರಿಶೀಲನೆಗೆ ಪಾಲಿಕೆ ಆಯುಕ್ತ ರವೀಂದ್ರ ನಾಯಕ್ ಸಿಬ್ಬಂದಿಗಳಿಗೆ ಸೂಚಿಸಿದ್ದಾರೆ.

ಮಧ್ಯವರ್ತಿ ವಿರುದ್ಧ ದೂರು

ಸದ್ಯ ವಂಚನೆಗೊಳಗಾದವರಿಂದ ಮಂಗಳೂರು ಮಹಾನಗರ ಪಾಲಿಕೆಗೆ ಮಧ್ಯವರ್ತಿ ಪೃಥ್ವಿರಾಜ್‌ ಶೆಟ್ಟಿ ಎಂಬವರ ವಿರುದ್ಧ ದೂರು ನೀಡಲಾಗಿದೆ. ಕೊಡಲೇ ಎಚ್ವೆತ್ತುಕೊಂಡ ಪಾಲಿಕೆ ಕೂಡ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಪಾಲಿಕೆ ಕಮಿಷನರ್ ರವೀಂದ್ರ ನಾಯಕ್​ ಹೇಳಿದ್ದಿಷ್ಟು 

ಈ ಕುರಿತಾಗಿ ಮಂಗಳೂರು ಮಹಾನಗರ ಪಾಲಿಕೆ ಕಮಿಷನರ್ ರವೀಂದ್ರ ನಾಯಕ್ ಪ್ರತಿಕ್ರಿಯಿಸಿದ್ದು, ಇಬ್ಬರು ವ್ಯಕ್ತಿಗಳು ಕಚೇರಿಗೆ ಬಂದು ದೂರು ನೀಡಿದ್ದಾರೆ. ಅವರ ಹೆಸರಿನಲ್ಲಿ ಪೃಥ್ವಿರಾಜ್‌ ಶೆಟ್ಟಿ ಎಂಬ ವ್ಯಕ್ತಿ ನಕಲಿ ಸರ್ಟಿಫಿಕೇಟ್ ಸೃಷ್ಟಿಸಿರುವ ಬಗ್ಗೆ ಹೇಳಿದ್ದಾರೆ. ಅವರು ನೀಡಿದ ಹಣ ದುರುಪಯೋಗ ಮಾಡಿ ನಕಲಿ ಸರ್ಟಿಫಿಕೇಟ್ ನೀಡಿದ್ದಾರೆ. ಮೇಲ್ನೋಟಕ್ಕೆ ಪರಿಶೀಲನೆ ಮಾಡಿದಾಗ ಆಸ್ತಿ ತೆರಿಗೆ ಮತ್ತು ಉದ್ದಿಮೆ ಪರವಾನಗಿ ನಕಲಿ ಮಾಡಿರೋದು ಗೊತ್ತಾಗಿದೆ. ಈ ಬಗ್ಗೆ ನಮ್ಮ ವಲಯ ಆಯುಕ್ತರಿಗೆ ದೂರು ದಾಖಲಿಸಲು ಸೂಚಿಸಲಾಗಿದೆ ಎಂದಿದ್ದಾರೆ.

ಇನ್ನು ಹೆಚ್ಚಿನ ಉದ್ದಿಮೆ ಪರವಾನಗಿ ತಿದ್ದುಪಡಿಯಾಗಿರುವ ಸಾಧ್ಯತೆ ಇದೆ. ಈ ಬಗ್ಗೆ ಪರಿಶೀಲನೆ ನಡೆಸಲು ಸಿಬ್ಬಂದಿಗಳಿಗೆ ಸೂಚಿಸಿದ್ದೇನೆ. ಸುಮಾರು ‌4,500 ಉದ್ದಿಮೆ ಪರವಾನಗಿ ನವೀಕರಣ ಆಗಲು ಬಾಕಿ ಇದೆ. ಅದನ್ನ ಪರಿಶೀಲನೆ ಮಾಡಿದರೆ ನಕಲಿ ಆಗಿರುವ ಸಾಧ್ಯತೆ ಗೊತ್ತಾಗುತ್ತೆ. ಉದ್ದಿಮೆದಾರರು ತಮ್ಮ ಪರವಾನಗಿ ಸರ್ಟಿಫಿಕೇಟ್ ಅನ್ನು ಕೂಡಲೇ ಪರಿಶೀಲನೆ ಮಾಡಿ. ಏನೇ ಸಮಸ್ಯೆ ಇದ್ದರೂ ಪಾಲಿಕೆಗೆ ಬಂದು ಅಧಿಕಾರಿಗಳನ್ನು ಭೇಟಿ ಮಾಡಬಹುದು ಎಂದು ಅವರು ತಿಳಿಸಿದರು.

ದಾಖಲೆ ತಿದ್ದುಪಡಿ, ನಕಲಿ ಆಗಿದೆಯಾ ಎಂದು ಅವರೇ ಪರಿಶೀಲನೆ ಮಾಡಿಕೊಳ್ಳಬಹುದು. ನಮ್ಮ ಗಮನಕ್ಕೆ ತಂದರೆ ಕಾನೂನು ರೀತಿಯ ಕ್ರಮ ಕೈಗೊಳ್ಳುತ್ತೇವೆ. ಎಲ್ಲಾ ಪಾವತಿಗೂ ಆನ್​​ಲೈನ್​ ವ್ಯವಸ್ಥೆ ಇದೆ. ಆನ್​ಲೈನ್​ಪಾವತಿ ಮಾಡಿ ತಮ್ಮ ಸೇವೆಯನ್ನು ಮನೆಯಲ್ಲಿಯೇ ಮಾಡಿಕೊಳ್ಳಬಹುದು. ಮಧ್ಯವರ್ತಿಗಳ ಬಳಿ ಹೋಗದೆ ನಾಗರಿಕರು ಮಾಡಬಹುದು. ಏನೇ ಸೇವೆ ಬೇಕು ಅಂದ್ರು ನಮ್ಮ ಅಧಿಕಾರಿಗಳು, ಸಿಬ್ಬಂದಿಗಳು ಸಹಾಯ ಮಾಡುತ್ತಾರೆ. ನಕಲಿ, ವಂಚನೆ, ಭ್ರಷ್ಟಾಚಾರ ತಡೆಯಲು ಇದು ಸಹಕಾರಿ ಆಗಲಿದೆ ಎಂದು ಕಮಿಷನರ್ ರವೀಂದ್ರ ನಾಯಕ್​ ಹೇಳಿದ್ದಾರೆ.

Previous Post

ದಕ್ಷಿಣ ಕನ್ನಡ: ಕೇವಲ 6 ತಿಂಗಳಲ್ಲಿ 85 ಜನ ಹೃದಯಾಘಾತದಿಂದ ಸಾವು! ಆರೋಗ್ಯಾಧಿಕಾರಿಯಿಂದ ಶಾಕಿಂಗ್ ಮಾಹಿತಿ

Next Post

ಉಡುಪಿ ಮೂಲಕ ನಡೀತಿದ್ದ ಅಂತಾರಾಷ್ಟ್ರೀಯ ಡ್ರಗ್ಸ್‌ ಜಾಲ ಬಯಲು: 8 ಮಂದಿ ಸೆರೆ

Next Post
ಉಡುಪಿ ಮೂಲಕ ನಡೀತಿದ್ದ ಅಂತಾರಾಷ್ಟ್ರೀಯ ಡ್ರಗ್ಸ್‌ ಜಾಲ ಬಯಲು: 8 ಮಂದಿ ಸೆರೆ

ಉಡುಪಿ ಮೂಲಕ ನಡೀತಿದ್ದ ಅಂತಾರಾಷ್ಟ್ರೀಯ ಡ್ರಗ್ಸ್‌ ಜಾಲ ಬಯಲು: 8 ಮಂದಿ ಸೆರೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.