Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಬ್ಲಡ್ ಮನಿ ನಿರಾಕರಿಸಿದ ಮೃತನ ಸೋದರ; ಯೆಮೆನ್​ನಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಬಹುತೇಕ ಖಚಿತ

editor tv by editor tv
July 17, 2025
in ರಾಷ್ಟ್ರೀಯ
0
ಬ್ಲಡ್ ಮನಿ ನಿರಾಕರಿಸಿದ ಮೃತನ ಸೋದರ; ಯೆಮೆನ್​ನಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಬಹುತೇಕ ಖಚಿತ
1.9k
VIEWS
Share on FacebookShare on TwitterShare on Whatsapp

ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ಕೊಲೆ ಪ್ರಕರಣದಲ್ಲಿ ಯೆಮೆನ್ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. ಆಕೆಯ ಗಲ್ಲು ಶಿಕ್ಷೆಯನ್ನು ತಡೆಯಲು ಇರುವ ಏಕೈಕ ಮಾರ್ಗವೆಂದರೆ ಅದು ಬ್ಲಡ್ ಮನಿ (ಮೃತನ ಕುಟುಂಬದವರಿಗೆ ಆರೋಪಿಯಿಂದ ಆರ್ಥಿಕ ಸಹಾಯ) ಎಂದು ಹೇಳಲಾಗಿತ್ತು. ಆದರೆ, ಬ್ಲಡ್ ಮನಿಯನ್ನು ಮೃತ ವ್ಯಕ್ತಿ ತಲಾಲ್ ಅವರ ಸೋದರ ನಿರಾಕರಿಸಿದ್ದಾರೆ. ಇದರಿಂದ ನಿಮಿಷಾ ಪ್ರಿಯಾ ಭವಿಷ್ಯ ಮತ್ತೆ ತೂಗುಗತ್ತಿಯ ಮೇಲೆ ನಿಂತಿದೆ.

ನವದೆಹಲಿ, ಜುಲೈ 16: ಭಾರತದ ಕೇರಳದ ನರ್ಸ್ ನಿಮಿಷಾ ಪ್ರಿಯಾ ಯೆಮೆನ್​​ನಲ್ಲಿ ತನ್ನ ಬ್ಯುಸಿನೆಸ್ ಪಾರ್ಟನರ್ ಕೊಲೆಯ ಅಪರಾಧದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ. ಆದರೆ, ಆ ಪ್ರಕರಣದಲ್ಲಿ ಜುಲೈ 16 ಅಂದರೆ ಇಂದು ಗಲ್ಲಿಗೇರಬೇಕಾಗಿದ್ದ ಆಕೆಯ ಮರಣದಂಡನೆಯನ್ನು ಮುಂದೂಡಲಾಗಿತ್ತು. ಬ್ಲಡ್ ಮನಿ ಮೂಲಕ ಈ ಸಮಸ್ಯೆ ಇತ್ಯರ್ಥ ಮಾಡಿಕೊಂಡರೆ ಆಕೆಗೆ ಗಲ್ಲು ಶಿಕ್ಷೆಯನ್ನು ತಪ್ಪಿಸಲು ಕಾನೂನಿನಲ್ಲಿ ಅವಕಾಶವಿತ್ತು. ಆದರೆ, ಆ ಆಯ್ಕೆಯೂ ನಿಮಿಷಾಳಿಗೆ ಇಲ್ಲದಂತಾಗಿದೆ. ಏಕೆಂದರೆ ಮೃತ ವ್ಯಕ್ತಿ ತಲಾಲ್ ಅವರ ಸೋದರ ಬ್ಲಡ್ ಮನಿಗೆ ತಮ್ಮ ಒಪ್ಪಿಗೆಯಿಲ್ಲ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ನಿಮಿಷಾ ಪ್ರಿಯಾ ನೇಣಿಗೇರುವುದು ಬಹುತೇಕ ಖಚಿತವಾಗಿದೆ.

ಯೆಮೆನ್‌ನಲ್ಲಿ ನಿಗದಿಯಾಗಿದ್ದ ಮರಣದಂಡನೆಯನ್ನು ಮುಂದೂಡಿದ ನಂತರ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ತಾತ್ಕಾಲಿಕ ಪರಿಹಾರ ಸಿಕ್ಕಿತ್ತು. ಆದರೆ ನಿಮಿಷಾ ಹತ್ಯೆ ಮಾಡಿದ್ದ ಯೆಮೆನ್ ನಾಗರಿಕ ತಲಾಲ್ ಅಬ್ದೋ ಮಹ್ದಿ ಅವರ ಸಹೋದರ ಇತ್ತೀಚೆಗೆ ನೀಡಿದ ಹೇಳಿಕೆಯ ನಂತರ ಅವರ ಭವಿಷ್ಯದ ಬಗ್ಗೆ ಕಳವಳಗಳು ಹೆಚ್ಚಾಗಿವೆ. ನಿಮಿಷಾಳ ಮರಣದಂಡನೆಯನ್ನು ವಜಾಗೊಳಿಸಲು ಭಾರತದಿಂದಲೂ ಸಾಕಷ್ಟು ಪ್ರಯತ್ನಗಳಾಗುತ್ತಿವೆ. ಆದರೆ, ಯೆಮೆನ್​​ನಲ್ಲಿ ಬಹಳ ಕಠಿಣ ಕಾನೂನು ಇರುವುದರಿಂದ ಬೇರೆ ಯಾವುದೇ ಹಸ್ತಕ್ಷೇಪವೂ ಅಲ್ಲಿ ಸಹಾಯ ಮಾಡುತ್ತಿಲ್ಲ.

ಮರಣದಂಡನೆಯನ್ನು ಮುಂದೂಡುವುದನ್ನು ಮಹ್ದಿ ಅವರ ಸಹೋದರ ಅಬ್ದೆಲ್‌ಫತ್ತಾ ಮಹ್ದಿ ಟೀಕಿಸಿದ್ದಾರೆ. ಮೃತರ ಕುಟುಂಬದಿಂದ ನಿಮಿಷಾಗೆ ಕ್ಷಮೆ ಪಡೆಯುವ ಪ್ರಯತ್ನಗಳನ್ನು ಮತ್ತು ಭಾರತ ಸರ್ಕಾರ ಸೇರಿದಂತೆ ವಿವಿಧ ಪಕ್ಷಗಳಿಂದ ಮಧ್ಯಸ್ಥಿಕೆಯ ಮಾತುಕತೆಗಳನ್ನು ಅವರು ಬಲವಾಗಿ ತಿರಸ್ಕರಿಸಿದ್ದಾರೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಅಬ್ದುಲ್‌ ಫತ್ತಾಹ್, ಇಸ್ಲಾಮಿಕ್ ಶರಿಯಾ ಕಾನೂನಿನ ಪ್ರಕಾರ ಕ್ವಿಸಾಸ್ (ಪ್ರತೀಕಾರ)ಗಾಗಿ ನಮ್ಮ ಬೇಡಿಕೆ ದೃಢವಾಗಿದೆ. ಮರಣದಂಡನೆ ಜಾರಿಯಾಗುವವರೆಗೆ ಕಾನೂನು ಕ್ರಮಗಳನ್ನು ಮುಂದುವರಿಸುತ್ತೇವೆ. ಮರಣದಂಡನೆಯನ್ನು ಮುಂದೂಡಿದ ಮಾತ್ರಕ್ಕೆ ಆಕೆ ಗಲ್ಲಿಗೇರುವುದು ತಪ್ಪುವುದಿಲ್ಲ ಎಂದು ಹೇಳಿದ್ದಾರೆ.

ಮಂಗಳವಾರ ಕೇರಳದ ಮುಸ್ಲಿಂ ಧರ್ಮಗುರುವೊಬ್ಬರ ಮಧ್ಯಸ್ಥಿಕೆಯ ನಂತರ ಯೆಮೆನ್ ಅಧಿಕಾರಿಗಳು ಇಂದು ನಿಗದಿಪಡಿಸಲಾಗಿದ್ದ ನಿಮಿಷಾ ಅವರ ಮರಣದಂಡನೆಯನ್ನು ಅನಿರ್ದಿಷ್ಟ ದಿನಾಂಕಕ್ಕೆ ಮುಂದೂಡಿದ ನಂತರ ಈ ಹೇಳಿಕೆಗಳು ಬಂದಿವೆ. “ಇಂದು ಏನು ನಡೆಯುತ್ತಿದೆ ಎಂಬುದು ನಮಗೂ ಅಚ್ಚರಿ ತಂದಿದೆ. ಮಧ್ಯಸ್ಥಿಕೆ ಪ್ರಯತ್ನಗಳ ಬಗ್ಗೆ ಈ ಎಲ್ಲಾ ಮಾತುಗಳು ಹೊಸದಲ್ಲ. ಇಷ್ಟು ವರ್ಷಗಳ ನಮ್ಮ ಕಾನೂನು ಹೋರಾಟದಲ್ಲಿ ರಹಸ್ಯ ಪ್ರಯತ್ನಗಳು ಮತ್ತು ಮಧ್ಯಸ್ಥಿಕೆಗೆ ಗಂಭೀರ ಪ್ರಯತ್ನಗಳು ನಡೆದಿವೆ. ಆದರೆ ನಾವು ಎದುರಿಸಿದ ಒತ್ತಡಗಳು ನಮ್ಮನ್ನು ಬದಲಾಯಿಸಿಲ್ಲ. ನಮ್ಮ ಬೇಡಿಕೆ ಸ್ಪಷ್ಟವಾಗಿದೆ. ಕ್ವಿಸಾಸ್ (ಪ್ರತೀಕಾರ) ಬಿಟ್ಟು ಬೇರೇನೂ ಇಲ್ಲ” ಎಂದು ಅವರು ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಯೆಮೆನ್ ಕಾನೂನಿನಡಿಯಲ್ಲಿ ಮೃತರ ಕುಟುಂಬದಿಂದ ಅಪರಾಧಿ ಕ್ಷಮಾದಾನವನ್ನು ಪಡೆಯಬಹುದು. ಈ ಸಂದರ್ಭದಲ್ಲಿ ನಿಮಿಷಾ ಮನವಿ ಮಾಡಿದರೆ ಮೃತ ವ್ಯಕ್ತಿ ತಲಾಲ್ ಅಬ್ದೋ ಮೆಹದಿ ಅವರ ಕುಟುಂಬವು ನಿಮಿಷಾ ಅವರನ್ನು ಕ್ಷಮಿಸುವ ಅಧಿಕಾರವನ್ನು ಹೊಂದಿದೆ. ಆಗ ಮಾತ್ರ ಅವರ ಗಲ್ಲು ಶಿಕ್ಷೆ ರದ್ದಾಗುವ ಸಾಧ್ಯತೆ ಇರುತ್ತದೆ. ಆದರೆ, ಮೃತನ ಕುಟುಂಬ ಕ್ಷಮೆಗೆ ಅಥವಾ ಬ್ಲಡ್ ಮನಿ (ಆರ್ಥಿಕ ಸಹಾಯ)ಗೆ ಒಪ್ಪಿಲ್ಲ. ಕೇರಳ ಮೂಲದ ಬಿಲಿಯನೇರ್ ಎಂ.ಎ. ಯೂಸುಫ್ ಅಲಿ ನಿಮಿಷಾಗೆ ಅಗತ್ಯವಿರುವ ಯಾವುದೇ ಹಣಕಾಸಿನ ಸಹಾಯವನ್ನು ನೀಡಲು ಇಚ್ಛೆ ವ್ಯಕ್ತಪಡಿಸಿದ್ದರು. ಭಾರತ ಸರ್ಕಾರ ಕೂಡ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ನಿಮಿಷಾಳ ಬಿಡುಗಡೆಗೆ ಪ್ರಯತ್ನಿಸುತ್ತಿದೆ.

Previous Post

ದೂರು ಹೇಳಿಕೊಂಡು ಬಂದ ಮಹಿಳೆ ಮೇಲೆ ಅತ್ಯಾಚಾರ: ಸಂತ್ರಸ್ಥ ಮಹಿಳೆಯ ಗಂಡ ಮತ್ತು ಕಾವೂರು ಪೊಲೀಸ್ ಠಾಣೆಯ ಕಾನ್ ಸ್ಟೇಬಲ್​​ ಬಂಧನ

Next Post

ಬೆಟ್ಟಿಂಗ್ ಗೀಳಿಗೆ ಬಿದ್ದು ಪೊಲೀಸಪ್ಪ ದುರಂತ ಅಂತ್ಯ; ಹೆಂಡತಿ, ಇಬ್ಬರು ಮಕ್ಕಳು ಅನಾಥ..

Next Post

ಬೆಟ್ಟಿಂಗ್ ಗೀಳಿಗೆ ಬಿದ್ದು ಪೊಲೀಸಪ್ಪ ದುರಂತ ಅಂತ್ಯ; ಹೆಂಡತಿ, ಇಬ್ಬರು ಮಕ್ಕಳು ಅನಾಥ..

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.