Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಇದನ್ನೂ ಇಲ್ಲಿಗೆ ನಿಲ್ಲಿಸೋದಿಲ್ಲ’.. ಜಾಗೃತಿ ವಿಡಿಯೋ ಡಿಲೀಟ್ ಬೆನ್ನಲ್ಲೇ ಶಿಕ್ಷಕಿ ವಂದನಾ ರೈ ಹೇಳಿದ್ದೇನು..?

editor tv by editor tv
July 17, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp
https://newsfirstlive.com/wp-content/uploads/2025/07/vandana-rai.jpg

ಉಡುಪಿ: ಮಕ್ಕಳೊಂದಿಗೆ ನೃತ್ಯ ಮಾಡುತ್ತಾ ಆಟದ ಜೊತೆ ಪಾಠ ಮಾಡಿ ರೀಲ್ಸ್ ವೀಡಿಯೋ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ ಈ ಶಿಕ್ಷಕಿ. ಡ್ಯಾನ್ಸ್ ಟೀಚರ್ ಎಂದೇ ಫೇಮಸ್ ಆಗಿದ್ದ ಕಾರ್ಕಳ ತಾಲೂಕಿನ ಖಾಸಗಿ ಶಾಲೆಯ ಶಿಕ್ಷಕಿ ವಂದನಾ ರೈ ಅವರು ಇತ್ತೀಚೆಗೆ ತಮ್ಮ ವಿದ್ಯಾರ್ಥಿಗಳನ್ನು ಮೊಬೈಲ್‌ ಗೀಳಿನಿಂದ ಹೇಗಾದರೂ ದೂರ ಮಾಡಬೇಕೆನ್ನುವ ಸದುದ್ದೇಶದಿಂದ ಶಾಲೆಯಲ್ಲಿ ಒಂದು ಸಣ್ಣ ಸ್ಕಿಟ್ ಮಾಡಿದ್ದರು.

ವಿದ್ಯಾರ್ಥಿನಿಗೆ ಕಣ್ಣಿಗೆ ಬಟ್ಟೆ ಕಟ್ಟಿ ಮೊಬೈಲ್ ನೋಡಿ ನೋಡಿ ಈ ಬಾಲಕಿಯ ಕಣ್ಣು ಹೇಗೆ ಹೋಗಿದೆ ನೋಡಿ ಅಂತ ಉಳಿದ ಮಕ್ಕಳಲ್ಲಿ ಭಯದ ಮೂಲಕವಾದ್ರೂ‌ ಮೊಬೈಲ್‌ ಎಡಿಕ್ಷನ್ ‌ನಿಂದ ವಿದ್ಯಾರ್ಥಿಗಳನ್ನು ದೂರವಿಡಲು ತರಗತಿಯಲ್ಲಿ ಜಾಗೃತಿ ವೀಡಿಯೋ ಮಾಡಿ ಸೋಷಿಯಲ್​ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದರು.

ಇದೇ ವಿಡಿಯೋಗೆ ನೆಟ್ಟಿಗರು ಶಿಕ್ಷಕಿ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಅಲ್ಲದೇ ಸಾಕಷ್ಟು ನೆಗೆಟಿವ್ ಕಾಮೆಂಟ್ಸ್​ ಬಂದ ಬೆನ್ನಲ್ಲೇ ಶಿಕ್ಷಕಿ ವಿಡಿಯೋ ಡಿಲೀಟ್ ಮಾಡಿ ಕ್ಷಮೆ ಕೇಳಿದ್ದಾರೆ. ಜೊತೆಗೆ ಈ ಬಗ್ಗೆ ನ್ಯೂಸ್​ ಫಸ್ಟ್​ನೊಂದಿಗೆ ಶಿಕ್ಷಕಿ ವಂದನಾ ರೈ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಬಗ್ಗೆ ಮಾತಾಡಿದ ಶಿಕ್ಷಕಿ, ಈ ಆಲೋಚನೆ ಬಂದದ್ದೇ ಪೋಷಕರ ಸಲಹೆ ಮೇಲೆ. ಮೊಬೈಲ್ ಬಳಸದಂತೆ ಜಾಗೃತಿ ಮೂಡಿಸುವಂತೆ ಪೋಷಕರು ಒತ್ತಾಯಿಸಿದ್ದರು. ಅಷ್ಟೆಲ್ಲ ನೃತ್ಯದ ಮೂಲಕ ಪಾಠ ಮಾಡುವ ವೀಡಿಯೋ ಜೊತೆಗೆ ಜಾಗೃತಿ ಕೆಲಸ ಮಾಡಿ ಅಂತ ಹೇಳಿದ್ರು. ಮೊಬೈಲ್ ಅವೇರ್ನೆಸ್ ಯಾಕೆ ಮಾಡಬಾರದು ಅಂತ ಪೋಷಕರು ಸಲಹೆ ನೀಡಿದ್ರು. ಎಲ್‌ಕೆಜಿ ಮಗುವಿನ ತಾಯಿ ನನ್ನ ಮಗಳು ಮೊಬೈಲ್ ಅತೀ ಹೆಚ್ಚು ನೋಡ್ತಾಳೆ. ಒಂದು ಮೊಬೈಲ್ ಅವೇರ್ನೆಸ್ ಚಟುವಟಿಕೆ ಮಾಡಿ ಎಂದು ಮನವಿ ಮಾಡಿದ್ರು. ಮನಸ್ಸಿಗೆ ಮುಟ್ಟುವಂತ ಸ್ಟ್ರಾಂಗ್ ಕಂಟೆಂಟ್ ಇರುವ ವೀಡಿಯೋ ಮಾಡಿ ಎಂದು ಸಲಹೆ ಬಂದಿತ್ತು. ಪೋಷಕರ ಇಂತಹ ಸಲಹೆ ಮೇಲೆ ಮೊಬೈಲ್ ಬಳಸದಂತೆ ಜಾಗೃತಿ ಮೂಡಿಸುವ ಚಟುವಟಿಕೆ ಮಾಡಿದ್ದೇನೆ. ಕಣ್ಣಿಗೆ ಬಟ್ಟೆ ಕಟ್ಟಿ ಆ್ಯಕ್ಟ್ ಮಾಡಿದ ಬಾಲಕಿಯ ತಂದೆಗೆ ಈ‌ ಬಗ್ಗೆ ಮೊದಲೇ ತಿಳಿಸಿದ್ದೆವು. ಮೊಬೈಲ್ ಬಳಸದಂತೆ ಮಾಡುವುದು ನಮ್ಮ ಉದ್ದೇಶವಾಗಿತ್ತು. ನಾನು ಓರ್ವ ಶಿಕ್ಷಕಿ ‌ನಾನು ಒಬ್ಬಳು ತಾಯಿ. ಮಗುವಿನ ಮನಸ್ಥಿಗೆ ಭಂಗ-ಆಘಾತ ತರುವ ಉದ್ದೇಶ ಇಲ್ಲವೇ ಇಲ್ಲ ಎಂದರು

ಮತ್ತೆ ಮಾತನ್ನು ಮುಂದುವರೆಸಿದ ಶಿಕ್ಷಕಿ, ಮೊಬೈಲ್.. ಮೊಬೈಲ್ ಎನ್ನುವ ಗೀಳಿಗೆ ಹೋಗಿ‌ ಕೇಳದ ಮಕ್ಕಳಿಗೆ ಈ ಪ್ರಯೋಗ. ಪಾಸಿಟಿವ್ ಹಾಗೂ ನೆಗೆಟಿವ್ ಕಮೆಂಟ್ ಎರಡನ್ನೂ ಸ್ವೀಕರಿಸುತ್ತೇನೆ. ನಮ್ಮ ಮಕ್ಕಳು ಯಾರೂ ಗಂಭೀರವಾಗಿ ತೆಗೆದುಕೊಂಡಿಲ್ಲ. ಕೆಲವರು ಕಣ್ಣಿಗೆ ಟೊಮೆಟೊ ಸಾಸ್ ಹಾಕಿದ್ದಾರಾ ಎಂದು ಕೆಲವು ಮಕ್ಕಳು ಕೇಳಿದ್ರೆ, ಕೆಲವು ಮಕ್ಕಳು ಮನೆಗೆ ಹೋದ ಮೇಲೆ ನಮಗೆ ಮೊಬೈಲ್‌ ಬೇಡ ಎಂದು ಹೇಳಿದ್ದಾರೆ. ಯಾರೋ ಏನೋ ಹೇಳಿದ್ದಾರೆ ಅಂತ ನನ್ನ ಚಟುವಟಿಕೆ, ಜಾಗೃತಿ ಮೂಡಿಸುವುದು ನಿಲ್ಲಿಸುವುದಿಲ್ಲ. ನನ್ನ ತಪ್ಪಿದ್ರೆ ತಿದ್ದಿಕೊಳ್ತೇನೆ. ಕೇರಳ ತಮಿಳುನಾಡು ಭಾಗದಲ್ಲಿ ನನ್ನ ವೀಡಿಯೋ ಪಾಸಿಟಿವ್ ಆಗಿ ವೈರಲ್ ಆಗಿದೆ. ಮಕ್ಕಳು ಮೊಬೈಲ್ ಗೀಳಿಗೆ ಬೀಳಲು ಪೋಷಕರೇ ಮುಖ್ಯ ಕಾರಣ. ಮೊದಲೆಲ್ಲ ಚಂದಮಾಮ ತೋರಿಸುತ್ತಿದ್ರು ಈಗ ಮೊಬೈಲ್ ತೋರಿಸಲಾಗುತ್ತಿದೆ. ನಮ್ಮ ಉದ್ದೇಶ ಮಕ್ಕಳ ಕಣ್ಣಿಗೆ ಹಾನಿಯಾಗಬಾರದು ಎಂಬುದಷ್ಟೇ. ಕೋವಿಡ್ ಮೊದಲು ನಾನು ನೃತ್ಯದ ಮೂಲಕ ಪಾಠವನ್ನ ಮಾಡುತ್ತಿದ್ದೆ. ಕೋವಿಡ್ ಸಮಯದಲ್ಲಿ ನನ್ನ ಪಾಠದ ಶೈಲಿ ಎಲ್ಲರಿಗೂ ಇಷ್ಟವಾಯ್ತು. ಈಗ ಪೋಷಕರು ಹಾಗೂ ಮಕ್ಕಳು ಇಬ್ಬರೂ ನನ್ನಿಂದ ಇದನ್ನೇ ನಿರೀಕ್ಷಿಸುತ್ತಾರೆ. ಆಕ್ಟಿವಿಟಿ ಮೂಲಕ ಮಾಡಿದ್ರೆ ಮಾತ್ರ ಮಕ್ಕಳಿಗೆ ಸುಲಭವಾಗಿ ಪಾಠ ಅರ್ಥವಾಗುತ್ತೆ. ಮೊಬೈಲ್ ಜಾಗೃತಿ ವೀಡಿಯೋವನ್ನ ನಾನು ಮಾಡಿದ್ದು ಒಂದೆರಡು ನಿಮಿಷ ಅಷ್ಟೆ. ಆದ್ರೆ ದಿನದ ಏಳೆಂಟು ಗಂಟೆ ಶಾಲೆಯಲ್ಲಿ ಮಕ್ಕಳೊಂದಿಗೆ ದಿನ ಕಳೆಯುತ್ತೇನೆ. ನಾನೊಬ್ಬಳು ನೃತ್ಯ ಶಿಕ್ಷಕಿ. ಹವ್ಯಾಸ ತರಗತಿಯಲ್ಲಿ ನಾನು ನೃತ್ಯವನ್ನು ಬಿಟ್ಟು ಬೇರೆನೂ ಮಾಡಲು ಆಗಲ್ಲ. ನೃತ್ಯದಲ್ಲಿ ನೃತ್ಯವನ್ನೇ ಮಾಡಬೇಕು ಹೊರತು ಪಾಠವನ್ನಲ್ಲ. ಕೇವಲ ಪಾಠ ಪ್ರವಚನ ಮಾಡೋದಲ್ಲ ದೈಹಿಕ ಚಟುವಟಿಕೆ ಕೂಡ ಬೇಕು. ಈಗಿನ ಮಕ್ಕಳು ಪ್ರ್ಯಾಕ್ಟಿಕಲ್ ಆಗಿ ಕಲಿಯಲು ಇಷ್ಟಪಡುತ್ತಾರೆ ಎಂದಿದ್ದಾರೆ.

Previous Post

ದಕ್ಷಿಣ ಕನ್ನಡದಲ್ಲಿ ಮುಂದುವರಿದ ಮಳೆ: ಮಣ್ಣಗುಂಡಿ ಬಳಿ ಗುಡ್ಡಕುಸಿತ, ಬೆಂ-ಮಂ ರಾ.ಹೆದ್ದಾರಿ ಬಂದ್

Next Post

ಮಂಗಳೂರಿನಲ್ಲಿ ಉದ್ಯಮಿ, ಶ್ರೀಮಂತರಿಗೆ 200 ಕೋಟಿಗೂ ಅಧಿಕ ವಂಚಿಸಿದ ಜಪ್ಪಿನಮೊಗರು ನಿವಾಸಿ ರೋಶನ್ ಸಲ್ಡಾನ ಅರೆಸ್ಟ್

Next Post
ಮಂಗಳೂರಿನಲ್ಲಿ ಉದ್ಯಮಿ, ಶ್ರೀಮಂತರಿಗೆ 200 ಕೋಟಿಗೂ ಅಧಿಕ ವಂಚಿಸಿದ ಜಪ್ಪಿನಮೊಗರು ನಿವಾಸಿ ರೋಶನ್ ಸಲ್ಡಾನ ಅರೆಸ್ಟ್

ಮಂಗಳೂರಿನಲ್ಲಿ ಉದ್ಯಮಿ, ಶ್ರೀಮಂತರಿಗೆ 200 ಕೋಟಿಗೂ ಅಧಿಕ ವಂಚಿಸಿದ ಜಪ್ಪಿನಮೊಗರು ನಿವಾಸಿ ರೋಶನ್ ಸಲ್ಡಾನ ಅರೆಸ್ಟ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.