Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಮರಣದಂಡನೆ ರದ್ದು, ಶೀಘ್ರದಲ್ಲೇ ನಿಮಿಷಾ ಪ್ರಿಯಾ ಬಿಡುಗಡೆ; ಧರ್ಮಗುರು ಡಾ. ಕೆ.ಎ. ಪೌಲ್ ಘೋಷಣೆ

editor tv by editor tv
July 22, 2025
in ರಾಷ್ಟ್ರೀಯ
0
ಮರಣದಂಡನೆ ರದ್ದು, ಶೀಘ್ರದಲ್ಲೇ ನಿಮಿಷಾ ಪ್ರಿಯಾ ಬಿಡುಗಡೆ; ಧರ್ಮಗುರು ಡಾ. ಕೆ.ಎ. ಪೌಲ್ ಘೋಷಣೆ
1.9k
VIEWS
Share on FacebookShare on TwitterShare on Whatsapp

ಯೆಮೆನ್​​ನಲ್ಲಿ ಗಲ್ಲು ಶಿಕ್ಷೆಗೆ ಒಳಗಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ರದ್ದತಿಗೆ ಭಾರತ ಸರ್ಕಾರ ಸೇರಿದಂತೆ ಆಕೆಯ ಕುಟುಂಬ ಶತಾಯಗತಾಯ ಪ್ರಯತ್ನಿಸುತ್ತಿದೆ. ಈ ನಡುವೆ ಯೆಮೆನ್‌ನಲ್ಲಿ ತೀವ್ರ ರಾಜತಾಂತ್ರಿಕ ಪ್ರಯತ್ನದ ನಂತರ ಧರ್ಮ ಗುರು ಕೆಎ ಪೌಲ್ ಗೆಲುವು ಸಾಧಿಸಿದ್ದಾರೆ ಎನ್ನಲಾಗಿದೆ. ಭಾರತೀಯ ನರ್ಸ್‌ ನಿಮಿಷಾಳ ಮರಣದಂಡನೆ ರದ್ದುಗೊಂಡಿದೆ ಎಂದು ಕೆಎ ಪೌಲ್ ಹೇಳಿದ್ದಾರೆ.

ನವದೆಹಲಿ, ಜುಲೈ 22: 38 ವರ್ಷದ ಭಾರತೀಯ ಪ್ರಜೆಯಾದ ಕೇರಳದ ನರ್ಸ್ ನಿಮಿಷಾ ಪ್ರಿಯಾಳ ಮರಣದಂಡನೆಯನ್ನು ಜುಲೈ 16ರಂದು ನಿಗದಿಪಡಿಸಲಾಗಿತ್ತು. ಆದರೆ, ಭಾರತೀಯ ಅಧಿಕಾರಿಗಳ ಹಸ್ತಕ್ಷೇಪದ ನಂತರ ಅದನ್ನು ಮುಂದೂಡಲಾಯಿತು. ಆಕೆ ಪ್ರಸ್ತುತ ಇರಾನ್ ಬೆಂಬಲಿತ ಹೌತಿಗಳ ನಿಯಂತ್ರಣದಲ್ಲಿರುವ ಯೆಮೆನ್ ರಾಜಧಾನಿ ಸನಾದಲ್ಲಿರುವ ಜೈಲಿನಲ್ಲಿದ್ದಾರೆ. ಈ ಪ್ರಕರಣದ ಪ್ರಮುಖ ರಾಜತಾಂತ್ರಿಕ ಬೆಳವಣಿಗೆಯಲ್ಲಿ, ಯೆಮೆನ್‌ನಲ್ಲಿ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ವಿಧಿಸಲಾದ ಮರಣದಂಡನೆಯನ್ನು ಯೆಮೆನ್ ಮತ್ತು ಭಾರತೀಯ ನಾಯಕರ ವ್ಯಾಪಕ ಪ್ರಯತ್ನದ ನಂತರ ರದ್ದುಗೊಳಿಸಲಾಗಿದೆ ಎಂದು ಧರ್ಮ ಗುರು ಡಾ. ಕೆಎ ಪೌಲ್ ಮಂಗಳವಾರ ರಾತ್ರಿ (ಸ್ಥಳೀಯ ಸಮಯ) ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.

ಯೆಮೆನ್ ಮತ್ತು ಭಾರತೀಯ ನಾಯಕರ ವ್ಯಾಪಕ ಪ್ರಯತ್ನಗಳ ನಂತರ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ ಎಂದು ಜಾಗತಿಕ ಶಾಂತಿ ಉಪಕ್ರಮದ ಸಂಸ್ಥಾಪಕ ಡಾ. ಕೆ.ಎ. ಪೌಲ್ ಮಂಗಳವಾರ ಯೆಮೆನ್‌ನ ಸನಾದಿಂದ ವೀಡಿಯೊ ಸಂದೇಶದಲ್ಲಿ ಹೇಳಿಕೊಂಡಿದ್ದಾರೆ. ಇದರಲ್ಲಿ ಡಾ. ಪೌಲ್ ಯೆಮೆನ್ ನಾಯಕರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಕಳೆದ 10 ದಿನಗಳಿಂದ ಹಗಲಿರುಳು ಪ್ರಯತ್ನ ನಡೆಸಿದ ನಾಯಕರ ಪರಿಶ್ರಮಕ್ಕೆ ಫಲ ಸಿಕ್ಕಿದೆ ಎಂದಿರುವ ಡಾ. ಪೌಲ್, “ನಿಮಿಷಾ ಪ್ರಿಯಾ ಅವರ ಗಲ್ಲು ಶಿಕ್ಷೆ ರದ್ದಾಗಿದ್ದು, ಇದನ್ನು ಯಶಸ್ವಿಗೊಳಿಸಲು ಭಾಗಿಯಾಗಿರುವ ಎಲ್ಲಾ ನಾಯಕರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ದೇವರ ದಯೆಯಿಂದ, ಅವರನ್ನು ಬಿಡುಗಡೆ ಮಾಡಿ ಭಾರತಕ್ಕೆ ಕರೆದೊಯ್ಯಲಾಗುವುದು. ನಿಮ್ಮ ರಾಜತಾಂತ್ರಿಕರನ್ನು ಕಳುಹಿಸಿದ್ದಕ್ಕೆ ಮತ್ತು ನಿಮಿಷಾ ಅವರನ್ನು ವೃತ್ತಿಪರವಾಗಿ, ಸುರಕ್ಷಿತವಾಗಿ ಕರೆದೊಯ್ಯಲು ತಯಾರಿ ನಡೆಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಹೇಳಿದ್ದಾರೆ.

BIG BREAKING NEWS. Indian Nurse Nimisha Priya from Sanaa , Yemen Prison will be released . English & Telugu . pic.twitter.com/oAbX5LABly

— Dr KA Paul (@KAPaulOfficial) July 21, 2025

ನಿಮಿಷಾ ಪ್ರಿಯಾಳನ್ನು ಜುಲೈ 16ರಂದು ಗಲ್ಲಿಗೇರಿಸಲು ನಿರ್ಧರಿಸಲಾಗಿತ್ತು. ಆದರೆ, ಆಕೆಯ ಕುಟುಂಬದೊಂದಿಗೆ ಸಂಭಾವ್ಯ ಒಪ್ಪಂದಕ್ಕೆ ಹೆಚ್ಚಿನ ಸಮಯವನ್ನು ಪಡೆಯಲು ಭಾರತವು ಒತ್ತಡ ಹೇರಿದ ನಂತರ ಯೆಮೆನ್ ಅಧಿಕಾರಿಗಳು ಆಕೆಯ ಮರಣದಂಡನೆಯನ್ನು ಮುಂದೂಡಿದರು.

ನಿಮಿಷಾ ಪ್ರಿಯಾಳ ತಾಯಿ ಪ್ರೇಮಕುಮಾರಿ ಕಳೆದ ವರ್ಷ ತನ್ನ ಮಗಳ ಬಿಡುಗಡೆಗಾಗಿ ಮನವಿ ಮಾಡಲು ಯೆಮೆನ್‌ಗೆ ಪ್ರಯಾಣ ಬೆಳೆಸಿದರು. ಕೇರಳದ ಸುನ್ನಿ ಧರ್ಮಗುರು ಒಬ್ಬರು ಮಧ್ಯಪ್ರವೇಶಕ್ಕಾಗಿ ಪ್ರಮುಖ ಯೆಮೆನ್ ಧಾರ್ಮಿಕ ಗುರುಗಳನ್ನು ಸಂಪರ್ಕಿಸಿದರು. ಈ ಪ್ರಯತ್ನಗಳ ಹೊರತಾಗಿಯೂ, ಯೆಮೆನ್‌ನಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಔಪಚಾರಿಕ ರಾಜತಾಂತ್ರಿಕ ಸಂಬಂಧಗಳ ಕೊರತೆಯಿಂದಾಗಿ ಅಡೆತಡೆಗಳು ಮುಂದುವರೆದಿವೆ.

Previous Post

ಧರ್ಮಸ್ಥಳ :39 ವರ್ಷಗಳ ಹಿಂದಿನ ಪದ್ಮಲತಾ ಹತ್ಯೆ ಪ್ರಕರಣ ಮತ್ತೆ ಮುನ್ನಲೆಗೆ

Next Post

ಗೊತ್ತಿಲ್ದೇ ತಪ್ಪಾಗಿದೆ ಎಂದ KGF ಬಾಬು.. ಅಮಿರ್​ ಖಾನ್, ಬಿಗ್​ಬಿ ಬಳಿ ಖರೀದಿಸಿದ್ದ ಕಾರುಗಳ ಟ್ಯಾಕ್ಸ್ ಪಾವತಿ!

Next Post

ಗೊತ್ತಿಲ್ದೇ ತಪ್ಪಾಗಿದೆ ಎಂದ KGF ಬಾಬು.. ಅಮಿರ್​ ಖಾನ್, ಬಿಗ್​ಬಿ ಬಳಿ ಖರೀದಿಸಿದ್ದ ಕಾರುಗಳ ಟ್ಯಾಕ್ಸ್ ಪಾವತಿ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.