Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಧರ್ಮಸ್ಥಳದ AI ವಿಡಿಯೋ ಹಾಕಿ ಹಲ್​ಚಲ್​ ಸೃಷ್ಟಿಸಿದ್ದ ಸಮೀರ್​ ಬಿಗ್​ಬಾಸ್​ಗೆ?

editor tv by editor tv
July 24, 2025
in ರಾಜ್ಯ
0
ಧರ್ಮಸ್ಥಳದ AI ವಿಡಿಯೋ ಹಾಕಿ ಹಲ್​ಚಲ್​ ಸೃಷ್ಟಿಸಿದ್ದ ಸಮೀರ್​ ಬಿಗ್​ಬಾಸ್​ಗೆ?
1.9k
VIEWS
Share on FacebookShare on TwitterShare on Whatsapp

ಯುಟ್ಯೂಬ್​ ಮೂಲಕ ಸಂಚಲನ ಸೃಷ್ಟಿಸ್ತಿರೋ ಯೂಟ್ಯೂಬರ್​ ಸಮೀರ್​ ಎಂ.ಡಿ. ಬಿಗ್​ಬಾಸ್​ಗೆ ಹೋಗುತ್ತಿದ್ದಾರಾ? ಏನಿದುದ ವಿಷ್ಯ? ಇಲ್ಲಿದೆ ಡಿಟೇಲ್ಸ್​… 

ಸಮೀರ್​ ಎಂಡಿ ಇತ್ತೀಚಿನ ದಿನಗಳಲ್ಲಿ ಭಾರಿ ಚರ್ಚೆಯಲ್ಲಿ ಇರುವ ಹೆಸರು. ಧರ್ಮಸ್ಥಳದಲ್ಲಿ ಬರ್ಬರವಾಗಿ ಹ*ತ್ಯೆಗೀಡಾದ ಸೌಜನ್ಯಾ ಎಂಬ ಯುವತಿಯ ಪ್ರಕರಣ ಇಡೀ ದೇಶದಲ್ಲಿಯೇ ಸಂಚಲನ ಮೂಡಿಸುತ್ತಿದೆ. ಇಂಥ ಹೀನ ಕೃತ್ಯ ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುವ ಕೂಗು ಜೋರಾಗುತ್ತಿದೆ. ಅವರು ಯಾರೇ ಆಗಿದ್ದರೂ, ಅವರನ್ನು ಬಿಡಬಾರದು, ಮುಗ್ಧ ಹೆಣ್ಣುಮಕ್ಕಳ ಮಾನ,ಪ್ರಾಣ ತೆಗೆಯುವ ಕ್ರೂರಿಗಳಿಗೆ ಶಿಕ್ಷೆ ಆಗಬೇಕು ಎನ್ನುವುದು ಎಲ್ಲರ ಮಾತು. ಈ ಘಟನೆಯ ಬೆನ್ನಲ್ಲೇ ಹಲವಾರು ಬೆಳವಣಿಗೆಗಳು ನಡೆಯುತ್ತಿವೆ. ಈ ಪ್ರಕರಣದ ಬಗ್ಗೆ ಸಾಕಷ್ಟು ವರದಿ ಮಾಡಿ ಫೇಮಸ್​ ಆದವರು ಯೂಟ್ಯೂಬರ್​ ಸಮೀರ್​ ಎಂ.ಡಿ. ಇವರು ಮತ್ತೊಮ್ಮೆ ಸೌಜನ್ಯ ಪ್ರಕರಣದ ಬಗ್ಗೆ ವಿಡಿಯೋ ಮಾಡಿದ್ದರಿಂದಲೇ ಅದು ಮತ್ತೆ ಮುನ್ನೆಲೆಗೆ ಬಂದಿದ್ದು ಅಪರಾಧಿಗಳ ಬುಡ ಅಲುಗಾಡಿಸುತ್ತಿದೆ.

ಆದರೆ ಅದರ ಬೆನ್ನಲ್ಲೇ ಇದೀಗ ಧರ್ಮಸ್ಥಳದಲ್ಲಿ ಸರಣಿ ಹತ್ಯೆ ನಡೆದಿದೆ ಎನ್ನುವ ವಿಷಯ ಸಂಚಲನ ಮೂಡಿಸುತ್ತಿದೆ. ಒಬ್ಬೊಬ್ಬರು ಒಂದೊಂದು ರೀತಿಯ ಮಾಹಿತಿಯನ್ನು ಈ ಬಗ್ಗೆ ನೀಡುತ್ತಿದ್ದಾರೆ. ಇದರ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಇದಾಗಲೇ, ರಾಜ್ಯ ಸರ್ಕಾರ, ತನಿಖಾ ತಂಡವನ್ನು ನೇಮಿಸಿದ್ದು ಅದರ ಬಗ್ಗೆ ವಿಚಾರಣೆ ನಡೆಯುತ್ತಿದೆ. ಆದರೆ ಇದರ ನಡುವೆಯೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ತನಿಖೆ ಹಂತದಲ್ಲಿ ಇರುವಾಗಲೇ ಇಲ್ಲಿ ನಡೆಯುತ್ತಿರುವ ಸರಣಿ ಸಾವಿಗೆ ನಾನೇ ಸಾಕ್ಷಿ, ನನಗೆ ಎಲ್ಲವೂ ಗೊತ್ತಿದೆ, ಅದಲ್ಲಿ ಈ ರೀತಿ ನಡೆಯುತ್ತಿರುವುದು ನಿಜ, ಅದು ನನಗೆ ಗೊತ್ತಾದ ಕಾರಣ ತೊಂದರೆ ನೀಡುತ್ತಿದ್ದಾರೆ ಇತ್ಯಾದಿಯಾಗಿ ಯುವಕನೊಬ್ಬ ಮಾತನಾಡಿದ್ದ ವಿಡಿಯೋ ಶೇರ್​ ಮಾಡಿದ್ದರು ಸಮೀರ್​.

ಈ ವಿಡಿಯೋದ ಹಿನ್ನೆಲೆಯಲ್ಲಿ ಸಮೀರ್​ ವಿರುದ್ಧ ಹಲವರು ದೂರು ದಾಖಲು ಮಾಡಿದ್ದಾರೆ. ದೂರು ದಾಖಲಾಗುತ್ತಿದ್ದಂತೆಯೇ ತಮ್ಮ ಯೂಟ್ಯೂಬ್​ನಿಂದ ಸಮೀರ್​ ವಿಡಿಯೋ ಡಿಲೀಟ್ ಕೂಡ ಮಾಡಿದ್ದಾರೆ. ಆದರೆ, ವಿಡಿಯೋ ಡೌನ್​ಲೋಡ್​ ಮಾಡಿಕೊಂಡವರು ಅದನ್ನು ತಮ್ಮ ಖಾತೆಯಲ್ಲಿ ಶೇರ್​ ಮಾಡುತ್ತಲೇ ಇದ್ದಾರೆ. ಇಂತಿಪ್ಪ ಸಮೀರ್​ ಎಂಡಿ ಇದೀಗ ಬಿಗ್​ಬಾಸ್​ಗೆ ಹೋಗುತ್ತಿದ್ದಾರೆ ಎನ್ನುವ ವಿಷಯ ಸೋಷಿಯಲ್​ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

ಅಷ್ಟಕ್ಕೂ ಎಲ್ಲರಿಗೂ ತಿಳಿದಿರುವಂತೆ, ಬಿಗ್​ಬಾಸ್​ ಎಂದರೇನೇ ಅಲ್ಲಿ ಕಾಂಟ್ರವರ್ಸಿ ಜನರಿಗೆ ಮನ್ನಣೆ ಸಿಗುವುದು ಎನ್ನುವುದು. ಕಾಂಟ್ರವರ್ಸಿ ಮೂಲಕ ‘ಖ್ಯಾತಿ’ ಗಳಿಸಿವರಿಗೆ, ಕೇಸು ದಾಖಲಾದವರಿಗೆ, ಜೈಲಿಗೆ ಹೋಗಿ ಬಂದವರಿಗೆ, ವಿವಾದ ಸೃಷ್ಟಿಸಿಕೊಂಡವರಿಗೆ… ಹೀಗೆ ಇಂಥವರ ಸಂಖ್ಯೆ ಹೆಚ್ಚಿಗೆ ಇದ್ದು, ಅದನ್ನು ಬ್ಯಾಲೆನ್ಸ್​ ಮಾಡುವುದಕ್ಕಾಗಿ ಯಾವುದೇ ಆಪಾದನೆ ಇಲ್ಲದ ಒಂದಿಷ್ಟು ಜನರನ್ನು ದೊಡ್ಮನೆಗೆ ಪ್ರವೇಶ ಕೊಡುವುದು ಇದೆ. ಆದರೆ ಯಾವುದೇ ವಿವಾದ ಇಲ್ಲದೇ ಸೈಲೆಂಟ್​ ಆಗಿರುವ ವ್ಯಕ್ತಿಗಳು ಮೊದಲ ಕೆಲವು ವಾರಗಳಲ್ಲಿಯೇ ಬಿಗ್​ಬಾಸ್​ನಿಂದ ಹೊರಕ್ಕೆ ಬರುವುದು, ಇದಾಗಲೇ ಎಲ್ಲಾ ಭಾಷೆಗಳ ಬಿಗ್​ಬಾಸ್​ ನೋಡುತ್ತಿರುವವರಿಗೆ ಗುಟ್ಟಾಗಿ ಉಳಿದ ವಿಷಯವೇನಲ್ಲ.

ಇದೇ ಕಾರಣಕ್ಕೆ ಯುಟ್ಯೂಬ್​ ಮೂಲಕ ಅಸಂಖ್ಯ ಅಭಿಮಾನಿಗಳನ್ನು ಪಡೆದುಕೊಂಡಿರುವ ಸಮೀರ್​ ಅವರೂ ಬಿಗ್​ಬಾಸ್ ಮನೆಗೆ ಹೋಗಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಇವರಿಗೆ ಸ್ಪರ್ಧಿಸಲು ಅವಕಾಶ ಕೊಡಿ ಎಂದು ಕೆಲವರು ಹೇಳುತ್ತಿದ್ದರೆ, ನಕಲಿ ವಿಡಿಯೋ ಸೃಷ್ಟಿಸಿ ಇಡೀ ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವವರಿಗೆ ಅವಕಾಶ ಕೊಡಬಾರದು ಎಂದು ಮತ್ತೆ ಕೆಲವರು ಹೇಳುತ್ತಿದ್ದಾರೆ. ಇದಾಗಲೇ ಸುದೀಪ್​ ಅವರು ಯಾವುದೇ ವಿವಾದ ಇರುವ ವ್ಯಕ್ತಿಯನ್ನು ಆಯ್ಕೆ ಮಾಡುವುದಿಲ್ಲ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಆದರೆ ವಿವಾದ ಇಲ್ಲದ ವ್ಯಕ್ತಿ ಬಿಗ್​ಬಾಸ್​ನಲ್ಲಿ ಇರುವುದಿಲ್ಲ ಎನ್ನುವ ಸತ್ಯ ತಮಗೆ ಗೊತ್ತಿದೆ ಎಂದು ನೆಟ್ಟಿಗರು ಅಭಿಪ್ರಾಯ ಪಡುತ್ತಿದ್ದಾರೆ. ಒಟ್ಟಿನಲ್ಲಿ ಬಿಗ್​ಬಾಸ್​ ಒಳಗೆ ಯಾರು ಹೋಗುತ್ತಾರೆ, ಯಾರು ಹೋಗಲ್ಲ ಎನ್ನುವುದು ಇನ್ನಷ್ಟೇ ತಿಳಿಯಬೇಕಿದೆ.

Previous Post

ಮುಂಬೈ ರೈಲು ಸ್ಫೋಟ ಕೇಸ್​ಗೆ ಟ್ವಿಸ್ಟ್.. 12 ಅಪರಾಧಿಗಳ ಖುಲಾಸೆ ಆದೇಶಕ್ಕೆ ಸುಪ್ರೀಂ ತಡೆ,ಅವರ ಬಿಡುಗಡೆಗೆ ಯಾವುದೇ ತಡೆ ಇಲ್ಲ

Next Post

ಚಿಕ್ಕಮಗಳೂರಲ್ಲಿ ಕಾಡು ಆನೆ ದಾಳಿಗೆ ಉಸಿರು ಚೆಲ್ಲಿದ ಮಹಿಳೆ

Next Post

ಚಿಕ್ಕಮಗಳೂರಲ್ಲಿ ಕಾಡು ಆನೆ ದಾಳಿಗೆ ಉಸಿರು ಚೆಲ್ಲಿದ ಮಹಿಳೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.