
ಧರ್ಮಸ್ಥಳದಲ್ಲಿ ಬುರುಡೆ ರಹಸ್ಯ ಬೆನ್ನತ್ತಿರುವ ಎಸ್ಐಟಿ ಅಧಿಕಾರಿಗಳಿಗೆ ಮಣ್ಣು ಅಗೆಯುವಾಗ ಕೆಂಪು ರವಿಕೆ, ಒಂದು ಪ್ಯಾನ್ ಕಾರ್ಡ್, ಡೆಬಿಟ್ ಕಾರ್ಡ್ ಪತ್ತೆಯಾಗಿದೆ.

ಇಂದು ಧರ್ಮಸ್ಥಳದ ನೇತ್ರಾವತಿ ತಟದಲ್ಲಿ 1, 2,3 ನೇ ಪಾಯಿಂಟ್ನಲ್ಲಿ ಮಣ್ಣು ಅಗೆಯಲಾಗಿತ್ತು. 1, 2,3ನೇ ಪಾಯಿಂಟ್ನಲ್ಲಿ ಏನೂ ಸಿಕ್ಕಿರಲಿಲ್ಲ. ಆದ್ರೆ, ಇದೀಗ ಮಣ್ಣು ಅಗೆಯುವಾಗ ಪಾಯಿಂಟ್-1ರಲ್ಲಿ ಒಂದು ಪ್ಯಾನ್ ಕಾರ್ಡ್, ಡೆಬಿಟ್ ಕಾರ್ಡ್ ಪತ್ತೆಯಾಗಿದ್ದು, ಈ ಬಗ್ಗೆ ಎಸ್ಐಟಿ ಟೀಂ ತನಿಖೆ ಮಾಡುತ್ತಿದೆ.

ಅಲ್ಲದೇ ಪಾಯಿಂಟ್-1ರಲ್ಲಿ ಪ್ಯಾನ್,ಡೆಬಿಟ್ ಕಾರ್ಡ್ ಜೊತೆಗೆ ಕೆಂಪು ರವಿಕೆ ಪತ್ತೆಯಾಗಿದೆ. ಲಕ್ಷ್ಮೀ ಎನ್ನುವ ಮಹಿಳೆಯ ಪ್ಯಾನ್ ಕಾರ್ಡ್ ಎಂದು ಅನನ್ಯ ತಾಯಿ ಸುಜಾತ ಭಟ್ ವಕೀಲರಿಂದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತನಿಖಾ ಹಂತದಲ್ಲಿರುವಾಗಲೇ ವಕೀಲ ಮಂಜುನಾಥ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನಿನ್ನೆ ಪಾಯಿಂಟ್1ರ ಸ್ಥಳದಲ್ಲಿ
ಲಕ್ಷ್ಮೀ ಎಂಬ ಮಹಿಳೆಯ ಪ್ಯಾನ್ ಕಾರ್ಡ್ ಪತ್ತೆಯಾಗಿದೆ. ಅಲ್ಲದೇ ಪುರುಷನ ಡೆಬಿಟ್ ಕಾರ್ಡ್ಗಳು ಪತ್ತೆಯಾಗಿವೆ ಎಂದು ಹೇಳಿಕೆ ನೀಡಿದ್ದಾರೆ. ಸದ್ಯ 20 ಕಾರ್ಮಿಕರಿಂದ ದೂರುದಾರನ ನಿರ್ದೇಶನದಂತೆ ಅಗೆಯೋ ಕಾರ್ಯಾಚರಣೆ ಮುಂದುವರಿದಿದೆ.
