Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಧರ್ಮಸ್ಥಳ ಸಮಾಧಿ ರಹಸ್ಯ: 12 ಮೂಳೆ ಸಿಕ್ಕ ಜಾಗದಲ್ಲಿ ಶೀಟ್‌ ಹಾಕಿ ಭದ್ರತೆ, ಆ.1ರ ಬೆಳಗ್ಗೆಯಿಂದಲೇ ಶೋಧ

editor tv by editor tv
July 31, 2025
in ಸುದ್ದಿ
0
ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ – ಕೊನೆಗೂ ಅಸ್ಥಿಪಂಜರ ಪತ್ತೆ?
1.9k
VIEWS
Share on FacebookShare on TwitterShare on Whatsapp

ಧರ್ಮಸ್ಥಳದ ನೇತ್ರಾವತಿ ನದಿ ತಟದಲ್ಲಿ ನಡೆಯುತ್ತಿರುವ ಸಮಾಧಿ ಅಗೆಯುವ ಕಾರ್ಯಾಚರಣೆಯಲ್ಲಿ ಮಹತ್ವದ ಬೆಳವಣಿಗೆಗಳು. ೧೨ ಮೂಳೆಗಳು ಮತ್ತು ತಲೆಬುರುಡೆಯ ಭಾಗಗಳು ಪತ್ತೆಯಾಗಿದ್ದು, ಎಸ್ಐಟಿ ತಂಡ ಮುಂದಿನ ತನಿಖೆಗಾಗಿ ಸಂಗ್ರಹಿಸಿದೆ. ಸಾಕ್ಷ್ಯ ನಾಶವಾಗದಂತೆ ಕಟ್ಟೆಚ್ಚರ ಭದ್ರತೆ ಕೈಗೊಳ್ಳಲಾಗಿದೆ.

ಬೆಳ್ತಂಗಡಿ: ಧರ್ಮಸ್ಥಳ ಸಮೀಪದ ನೇತ್ರಾವತಿ ನದಿಯ ತಟದಲ್ಲಿ ನಡೆದಿದ್ದ ಸಮಾಧಿ ಅಗೆಯುವ ಕಾರ್ಯಾಚರಣೆ ತಾತ್ಕಾಲಿಕವಾಗಿ ಅಂತ್ಯಗೊಳ್ಳುತ್ತಿದೆ. ಇಂದಿನ ಕಾರ್ಯಾಚರಣೆ ಮುಗಿದು, ಮಣ್ಣು ತೆರವುಗೊಳಿಸಿದ್ದ ಕೂಲಿಯಾಳುಗಳು ಹಾಗೂ ಮಿನಿ ಹಿಟಾಚಿ ಯಂತ್ರ ಸ್ಥಳದಿಂದ ವಾಪಸಾಗುತ್ತಿದೆ. ಎಸ್ಐಟಿ ತಂಡ ನಾಳೆ (ಗುರುವಾರ) ಬೆಳಿಗ್ಗೆಯಿಂದ ಪಾಯಿಂಟ್ ನಂ. 7ರಲ್ಲಿ ಸಮಾಧಿ ಅಗೆಯುವ ಮುಂದಿನ ಹಂತದ ಕಾರ್ಯಚರಣೆಯನ್ನು ಆರಂಭಿಸಲಿದೆ. ಈ ಸ್ಥಳ ಹೆದ್ದಾರಿ ಪಕ್ಕದಲ್ಲಿರುವ ಕಾರಣದಿಂದಾಗಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಸ್ಥಳದಲ್ಲಿ ಭದ್ರತೆಯೆಂಬ ದೃಷ್ಟಿಯಿಂದ, ನಾಳೆ ನೇತ್ರಾವತಿ ಸೇತುವೆ ಹಾಗೂ ಸುತ್ತಮುತ್ತಿನ ಪ್ರದೇಶಕ್ಕೆ ಸಾರ್ವಜನಿಕರು ಗುಂಪಾಗಿ ಸೇರುವಂತಿಲ್ಲ. ಎಸ್ಐಟಿ ಹಾಗೂ ಸ್ಥಳೀಯ ಪೊಲೀಸರ ನಿಯಂತ್ರಣದಲ್ಲಿ ಮಾತ್ರ ಕಾರ್ಯಚರಣೆ ನಡೆಯಲಿದೆ.

ಮಹಜರು ಪ್ರಕ್ರಿಯೆಯಲ್ಲಿ ಏನೇನಾಯ್ತು?

ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಆರನೇ ಪಾಯಿಂಟ್‌ನಲ್ಲಿ ಎಸ್ಐಟಿ ತಂಡ ಕಾನೂನು ಪ್ರಕ್ರಿಯೆಗಳನ್ನು ಹಂತ ಹಂತವಾಗಿ ಮುಂದುವರಿಸುತ್ತಿದೆ. ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಅವರ ಸಮ್ಮುಖದಲ್ಲಿ ಮಹಜರು ಪ್ರಕ್ರಿಯೆ ಜಾರಿಯಲ್ಲಿದೆ. ಮಹಜರಿನ ಸಂದರ್ಭದಲ್ಲಿಯೇ ಸಹಾಯ ಆಯುಕ್ತರ ಸೂಚನೆಯಂತೆ ‘ಮಹಜರು ಯಾಕೆ ಮಾಡಲಾಗುತ್ತಿದೆ’ ಎಂಬುದನ್ನು ಲಿಖಿತವಾಗಿ ದಾಖಲಿಸಲಾಗಿದೆ. ಸ್ಥಳೀಯ ಪ್ರತ್ಯಕ್ಷದರ್ಶಿಗಳ ಹಾಗೂ ಸಾಕ್ಷಿಗಳ ಸಮ್ಮುಖದಲ್ಲಿ ಮಹಜರು ಕಾರ್ಯಾಚರಣೆ ನಡೆಸಲಾಗಿದೆ.

ಪ್ರತೀ ಹಂತವನ್ನು ಎಸ್ಐಟಿ ತಂಡ ದೃಶ್ಯ ಹಾಗೂ ಛಾಯಾಚಿತ್ರದ ಮೂಲಕ ದಾಖಲಿಸಿದ್ದು, ಸ್ಥಳದ ವಿವರ, ಎಷ್ಟು ಎಲುಬುಗಳು ಪತ್ತೆಯಾದವು, ಅವು ಹೇಗೆ ಲಭಿಸಿವೆ ಎಂಬ ಮಾಹಿತಿ ದಾಖಲಾತಿಯಲ್ಲಿ ಸೇರಿಸಲಾಗಿದೆ. ಈ ದಾಖಲಾತಿಗೆ ಅನುಗುಣವಾಗಿ ವಶಪಡಿಸಿಕೊಳ್ಳುವ ಮೆಮೊ (Seizure Memo) ತಯಾರಿಸಲಾಗುತ್ತಿದೆ. ಅಸ್ಥಿಪಂಜರದ ಪ್ರತಿಯೊಂದು ಮೂಳೆಯನ್ನೂ bio-safe evidence bags‌ಗಳಲ್ಲಿ ಸಂಗ್ರಹಿಸಿ, ಸಂಬಂಧಿತ ಸ್ಥಳ, ದಿನಾಂಕ ಹಾಗೂ ಪ್ರಾಥಮಿಕ ಗುರುತು (initial marking) ನೀಡಲಾಗಿದೆ.

12 ಮೂಳೆಗಳು ಪತ್ತೆ

ಎಸ್ಐಟಿ ತಂಡ ಆರನೇ ಪಾಯಿಂಟ್‌ನಲ್ಲಿ ಪ್ರತ್ಯಕ್ಷ ತನಿಖೆ ನಡೆಸಿದ ವೇಳೆ, ಒಟ್ಟು 12 ಮೂಳೆಗಳು ಪತ್ತೆಯಾಗಿವೆ. ಇದರಲ್ಲಿ ಕಾಲಿನ ಎರಡು ದೊಡ್ಡ ಮೂಳೆಗಳು ಹಾಗೂ ಇತರ ಸಣ್ಣ ಮೂಳೆಗಳು ಸೇರಿವೆ. ಜೊತೆಗೆ, ಪುರುಷನ ತಲೆಬುರುಡೆಯ ಎರಡು ಭಾಗಗಳು ಕೂಡ ಪತ್ತೆಯಾಗಿವೆ. ಪತ್ತೆಯಾದ ಎಲ್ಲ ಅವಶೇಷಗಳನ್ನು ಮುಂದಿನ ವಿಧಾನ ವಿಜ್ಞಾನ (FSL) ಪರಿಶೀಲನೆಗಾಗಿ ಎಫ್ಎಸ್ಎಲ್ ತಂಡ ಸಂಗ್ರಹಿಸಿ ಕೊಂಡೊಯ್ಯುತ್ತಿದೆ. ಇದೀಗ ಅಂತಿಮ ದೃಢೀಕರಣಕ್ಕಾಗಿ ವೈದ್ಯಕೀಯ ಮತ್ತು ಡಿಎನ್‌ಎ ಪರೀಕ್ಷೆಗಳಿಗೂ ನಿರೀಕ್ಷೆ ಇದೆ.

ಸಾಕ್ಷ್ಯ ನಾಶವಾಗದಂತೆ ಕಟ್ಟೆಚ್ಚರ ಭದ್ರತೆ

ಸಮಾಧಿಯಿಂದ ಅಸ್ಥಿಪಂಜರ ಪತ್ತೆಯಾದ ಹಿನ್ನೆಲೆ, ಎಸ್ಐಟಿ ಅಧಿಕಾರಿಗಳು ಯಾವುದೇ ಸಾಕ್ಷ್ಯ ನಾಶವಾಗದಂತೆ ಕಟ್ಟೆಚ್ಚರ ಭದ್ರತೆ ಕೈಗೊಂಡಿದ್ದಾರೆ. ಸಮಾಧಿಯೊಳಗೆ ನೀರು ತುಂಬುವ ಸಾಧ್ಯತೆ ಇರುವ ಕಾರಣದಿಂದ ಸಾಕ್ಷ್ಯಗಳು ಹಾನಿಯಾಗುವ ಆತಂಕ ಇದೆ. ಈ ಹಿನ್ನೆಲೆಯಲ್ಲಿ, ಸಮಾಧಿಯ ಮೇಲ್ಭಾಗ ಹಾಗೂ ನಾಲ್ಕು ದಿಕ್ಕುಗಳಲ್ಲಿ ಶೀಟ್‌ಗಳನ್ನು ಅಳವಡಿಸಿ ಪ್ರಾಥಮಿಕ ಸಂರಕ್ಷಣಾ ಕ್ರಮ ಕೈಗೊಳ್ಳಲಾಗಿದೆ. ಸ್ಥಳದಲ್ಲಿರುವ ಗುಂಡಿಯ ಸುತ್ತಲೂ ನಾಲ್ಕು ತಡೆಗೋಡೆಗಳಂತೆ ಶೀಟ್ ಹಾಕಿ ಸುರಕ್ಷತೆ ಒದಗಿಸಲಾಗಿದೆ.

ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಭೇಟಿ

ಎಸ್ಐಟಿ ಮುಖ್ಯಸ್ಥ ಪ್ರಣವ್ ಕುಮಾರ್ ಮೊಹಾಂತಿ ಮಂಗಳೂರಿನಿಂದ ಹೊರಟು ಬೆಳ್ತಂಗಡಿಯ ಎಸ್ಐಟಿ ಕಚೇರಿಗೆ ಆಗಮಿಸುವ ನಿರೀಕ್ಷೆ ಇದೆ. ಅಲ್ಲಿಂದ ಸ್ಪಾಟ್ ನಂಬರ್ 6ಗೆ ಸ್ಥಳ ಪರಿಶೀಲನೆಗೆ ತೆರಳುವ ಸಾಧ್ಯತೆ ಇದೆ. ಸ್ಥಳದ ಭದ್ರತಾ ನಿರ್ವಹಣೆಯ ಜೊತೆಗೆ, ಮುಂದಿನ ತನಿಖಾ ಪ್ರಕ್ರಿಯೆ ಮತ್ತು ನ್ಯಾಯ ವೈದ್ಯಕೀಯ ವರದಿಗಳಿಗಾಗಿ ಬಿಗಿಯಾದ ಕ್ರಮಗಳನ್ನು ಎಸ್ಐಟಿ ಕೈಗೊಂಡಿದ್ದು, ಪರಿಶೀಲನೆಗಳು ತೀವ್ರಗತಿಯಲ್ಲಿ ಸಾಗುತ್ತಿವೆ.

Previous Post

ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ – ಕೊನೆಗೂ ಅಸ್ಥಿಪಂಜರ ಪತ್ತೆ?

Next Post

ಭಾರತದ್ದು ಸತ್ತೋದ ಆರ್ಥಿಕತೆ – ಹೀನ ಪದ ಬಳಸಿದ ಟ್ರಂಪ್‌

Next Post
ಭಾರತದ್ದು ಸತ್ತೋದ ಆರ್ಥಿಕತೆ – ಹೀನ ಪದ ಬಳಸಿದ ಟ್ರಂಪ್‌

ಭಾರತದ್ದು ಸತ್ತೋದ ಆರ್ಥಿಕತೆ – ಹೀನ ಪದ ಬಳಸಿದ ಟ್ರಂಪ್‌

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.