Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ್ದ ಪ್ರತಾಪ್ ಸಿಂಹ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

    ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ್ದ ಪ್ರತಾಪ್ ಸಿಂಹ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

    75 ಮಂದಿ ಪ್ರಯಾಣಿಕರಿದ್ದ BMTC ಬಸ್‌ನಲ್ಲಿ ಭಾರೀ ಬೆಂಕಿ – ಬಸ್‌ ಸುಟ್ಟು ಕರಕಲು

    ಅಸ್ಸಾಂನ ಗುವಾಹಟಿಯಲ್ಲಿ 5.8 ತೀವ್ರತೆಯ ಭೂಕಂಪ – ಉತ್ತರ ಬಂಗಾಳ, ಭೂತಾನ್‌ನಲ್ಲೂ ಕಂಪನ

    ಭಾರತ-ಪಾಕ್ ಮ್ಯಾಚ್ ನೋಡಲ್ಲ.. ಕೇಂದ್ರ ಸರ್ಕಾರ ವಿರುದ್ಧ ಕಿಡಿ ಕಾರಿದ MLA ಪ್ರದೀಪ್ ಈಶ್ವರ್

    ಅಮ್ಮ ಮಾಡಿದ ಸಣ್ಣ ನಿರ್ಲಕ್ಷ್ಯ.. ದುರಂತ ಅಂತ್ಯಕಂಡ ಕಂದಮ್ಮ..

    ವಲಸೆ ವಿರೋಧಿಸಿ 1 ಲಕ್ಷಕ್ಕೂ ಅಧಿಕ ಜನರಿಂದ ಲಂಡನ್​ನಲ್ಲಿ ಮೆರವಣಿಗೆ – ಪ್ರತಿಭಟನೆ ಪೊಲೀಸರ ಮೇಲೆ ಹಲ್ಲೆ

    ವಲಸೆ ವಿರೋಧಿಸಿ 1 ಲಕ್ಷಕ್ಕೂ ಅಧಿಕ ಜನರಿಂದ ಲಂಡನ್​ನಲ್ಲಿ ಮೆರವಣಿಗೆ – ಪ್ರತಿಭಟನೆ ಪೊಲೀಸರ ಮೇಲೆ ಹಲ್ಲೆ

    ಸಾಲಬಾಧೆ – ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರು ಸಾವು

    ಕುಂದಾಪುರ ; ಚಲಿಸುತ್ತಿದ್ದ ಬೈಕ್ ಮೇಲೆ ಹಾರಿದ ಕಡವೆ ; 22 ವರ್ಷದ ಯುವಕ ಬಲಿ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ್ದ ಪ್ರತಾಪ್ ಸಿಂಹ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

    ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ್ದ ಪ್ರತಾಪ್ ಸಿಂಹ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

    75 ಮಂದಿ ಪ್ರಯಾಣಿಕರಿದ್ದ BMTC ಬಸ್‌ನಲ್ಲಿ ಭಾರೀ ಬೆಂಕಿ – ಬಸ್‌ ಸುಟ್ಟು ಕರಕಲು

    ಅಸ್ಸಾಂನ ಗುವಾಹಟಿಯಲ್ಲಿ 5.8 ತೀವ್ರತೆಯ ಭೂಕಂಪ – ಉತ್ತರ ಬಂಗಾಳ, ಭೂತಾನ್‌ನಲ್ಲೂ ಕಂಪನ

    ಭಾರತ-ಪಾಕ್ ಮ್ಯಾಚ್ ನೋಡಲ್ಲ.. ಕೇಂದ್ರ ಸರ್ಕಾರ ವಿರುದ್ಧ ಕಿಡಿ ಕಾರಿದ MLA ಪ್ರದೀಪ್ ಈಶ್ವರ್

    ಅಮ್ಮ ಮಾಡಿದ ಸಣ್ಣ ನಿರ್ಲಕ್ಷ್ಯ.. ದುರಂತ ಅಂತ್ಯಕಂಡ ಕಂದಮ್ಮ..

    ವಲಸೆ ವಿರೋಧಿಸಿ 1 ಲಕ್ಷಕ್ಕೂ ಅಧಿಕ ಜನರಿಂದ ಲಂಡನ್​ನಲ್ಲಿ ಮೆರವಣಿಗೆ – ಪ್ರತಿಭಟನೆ ಪೊಲೀಸರ ಮೇಲೆ ಹಲ್ಲೆ

    ವಲಸೆ ವಿರೋಧಿಸಿ 1 ಲಕ್ಷಕ್ಕೂ ಅಧಿಕ ಜನರಿಂದ ಲಂಡನ್​ನಲ್ಲಿ ಮೆರವಣಿಗೆ – ಪ್ರತಿಭಟನೆ ಪೊಲೀಸರ ಮೇಲೆ ಹಲ್ಲೆ

    ಸಾಲಬಾಧೆ – ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರು ಸಾವು

    ಕುಂದಾಪುರ ; ಚಲಿಸುತ್ತಿದ್ದ ಬೈಕ್ ಮೇಲೆ ಹಾರಿದ ಕಡವೆ ; 22 ವರ್ಷದ ಯುವಕ ಬಲಿ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ್ದ ಪ್ರತಾಪ್ ಸಿಂಹ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

editor tv by editor tv
September 15, 2025
in ರಾಜ್ಯ
0
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ್ದ ಪ್ರತಾಪ್ ಸಿಂಹ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
1.9k
VIEWS
Share on FacebookShare on TwitterShare on Whatsapp

ಮೈಸೂರು ದಸರಾ ಉದ್ಘಾಟನೆಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೂರು ಪಿಐಎಲ್​ಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಇದರೊಂದಿಗೆ, ಅರ್ಜಿ ಸಲ್ಲಿಸಿದ್ದ ಬಿಜೆಪಿ ನಾಯಕ ಪ್ರತಾಪ್ ಸಿಂಹ ಹಾಗೂ ಇತರರಿಗೆ ಹಿನ್ನಡೆಯಾದಂತಾಗಿದೆ. ಯಾವುದೇ ಹಕ್ಕು ಉಲ್ಲಂಘನೆ ಆಗಿಲ್ಲದೇ ಇರುವುದರಿಂದ ಅರ್ಜಿ ವಜಾ ಮಾಡಲಾಗುತ್ತಿದೆ ಎಂದು ಕೋರ್ಟ್ ಹೇಳಿದೆ.

ಮೈಸೂರು, ಸೆಪ್ಟೆಂಬರ್ 15: ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ (Banu Mushtaq) ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ನಾಯಕ ಪ್ರತಾಪ್ ಸಿಂಹ (Pratap Simha) ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಸೋಮವಾರ ವಜಾಗೊಳಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ಸಿಜೆ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿಎಂ ಜೋಶಿ ಅವರಿದ್ದ ಪೀಠ, ದಸರಾ ಉದ್ಘಾಟನೆ ವಿಚಾರದಲ್ಲಿ ಯಾವುದೇ ಹಕ್ಕು ಉಲ್ಲಂಘನೆ ಆಗಿರುವುದು ಕಂಡುಬಂದಿಲ್ಲ, ಹೀಗಾಗಿ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದಿದೆ.

ಬಾನು ಮುಷ್ತಾಕ್ ಅವರನ್ನು ಉದ್ಘಾಟನೆಗೆ ಆಹ್ವಾನಿಸಿದ್ದು ಸರಿಯಲ್ಲ. ಅವರು ಹಿಂದೂ ವಿರೋಧಿ, ಕನ್ನಡ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಪರ ವಕೀಲ ಸುದರ್ಶನ್ ವಾದ ಮಂಡಿಸಿದರು. ಭುವನೇಶ್ವರಿ, ಕನ್ನಡ ಬಾವುಟದ ಬಗ್ಗೆ ಮುಷ್ತಾಕ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದ ವಕೀಲರು, ಬಾನು ಮುಷ್ತಾಕ್ ನೀಡಿದ ಹೇಳಿಕೆಯ ಇಂಗ್ಲಿಷ್ ಅನುವಾದ ಸಲ್ಲಿಕೆ ಮಾಡಿದರು.

ಪ್ರತಾಪ್ ಸಿಂಹ ವಕೀಲರ ವಾದಕ್ಕೆ ಕೋರ್ಟ್ ಹೇಳಿದ್ದೇನು?

ಪ್ರತಾಪ್ ಸಿಂಹ ಪರ ವಕೀಲರು ಮಂಡಿಸಿದ್ದ ವಾದಕ್ಕೆ ಪ್ರತಿಯಾಗಿ, ಈ ದೇಶದಲ್ಲಿ ತಮ್ಮ ಅಭಿಪ್ರಾಯವನ್ನು ಹೇಳುವುದು ತಪ್ಪಲ್ಲವಲ್ಲ. ನಿಮ್ಮ ಯಾವ ಹಕ್ಕು ಉಲ್ಲಂಘನೆಯಾಗಿದೆ ಹೇಳಿ ಸಿಜೆ ವಿಭು ಬಖ್ರು ಪ್ರಶ್ನೆ ಮಾಡಿದರು. ನಿಮ್ಮ ಅಭಿಪ್ರಾಯವನ್ನು ಕೂಡಾ ಸೂಕ್ತ ವೇದಿಕೆಯಲ್ಲಿ ಹೇಳಬಹುದು. ಆದರೆ ಸಂವಿಧಾನ ನೀಡಿರುವ ಯಾವ ಹಕ್ಕು ಉಲ್ಲಂಘನೆಯಾಗಿದೆ ಹೇಳಿ ಎಂದರು.

ಪೂಜಾರಿಯ ಪೂಜೆಯ ಹಕ್ಕನ್ನು ಕಿತ್ತುಕೊಂಡಿದ್ದರೆ ಪ್ರಶ್ನಿಸಬಹುದು. ವ್ಯಕ್ತಿಯ ಆಸ್ತಿಯನ್ನು ಕಿತ್ತುಕೊಂಡಿದ್ದರೆ ಪ್ರಶ್ನಿಸಬಹುದು. ಆದರೆ ಇಲ್ಲಿ ನಿಮ್ಮ ಯಾವ ಹಕ್ಕನ್ನು ಕಿತ್ತುಕೊಳ್ಳಲಾಗಿದೆ ಎಂದು ಸಿಜೆ ಪ್ರಶ್ನಿಸಿದರು.

ಆಗ ಪ್ರತಾಪ್ ಸಿಂಹ ಪರ ವಕೀಲರು, ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆಯ ಸಂಪ್ರದಾಯವಿದೆ. ಆದರೆ, ಬಾನು ಮುಷ್ತಾಕ್ ಅವರಿಂದ ಉದ್ಘಾಟನೆಗೆ ವಿರೋಧವಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಶಿಷ್ಟಾಚಾರ ಪಾಲಿಸುವುದು ಬೇರೆ ವಿಚಾರ. ಆದರೆ ನಿಮ್ಮ ಕಾನೂನಾತ್ಮಕ ಹಕ್ಕಿನ ಬಗ್ಗೆ ವಾದ ಮಂಡಿಸಿ ಎಂದಿದೆ. ಅಲ್ಲದೆ, ಧರ್ಮವನ್ನು ಪಾಲಿಸುವ ಹಕ್ಕನ್ನು ಸಂವಿಧಾನದಲ್ಲಿ ಗುರುತಿಸಲಾಗಿದೆ ಎಂದಿದೆ.

ಪ್ರತಾಪ್ ಸಿಂಹ ಮಾತ್ರವಲ್ಲದೆ ಟಿ. ಗಿರೀಶ್ ಕುಮಾರ್, ಹೆಚ್.ಎಸ್.ಗೌರವ್ ಎಂಬವರೂ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅವುಗಳನ್ನೂ ಕೋರ್ಟ್ ವಜಾಗೊಳಿಸಿದೆ.

ಸರ್ಕಾರದ ಪರ ವಕೀಲರ ವಾದ ಏನಿತ್ತು?

ಸರ್ಕಾರದ ಪರ ವಾದ ಮಂಡಿಸಿದ ಎಜಿ ಶಶಿಕಿರಣ್ ಶೆಟ್ಟಿ, ಅರ್ಜಿದಾರರಿಗೆ ದಂಡ ವಿಧಿಸಬೇಕೆಂದು ಆಗ್ರಹಿಸಿದರು. ದಸರಾ ಉದ್ಘಾಟಿಸಿದ ನಿಸಾರ್ ಅಹಮದ್ ಜೊತೆಗೆ ಪ್ರತಾಪ್ ಸಿಂಹ ಇದ್ದರು. ಆಗ ವಿರೋಧಿಸದೇ, ಈಗ ಮುಸ್ಲಿಂ ಮಹಿಳೆ‌ ಎಂಬ ಕಾರಣಕ್ಕೆ ವಿರೋಧಿಸುತ್ತಿದ್ದಾರೆ ಎಂದರು. ತಾರತಮ್ಯ ಮಾಡುವಂತಿಲ್ಲವೆಂದು ಮುಜರಾಯಿ ಇಲಾಖೆ ಸುತ್ತೋಲೆಯಿದೆ. ದೇವಾಲಯಗಳಿಗೆ ಯಾರು ಬೇಕಾದರೂ ಬರಲು ಅವಕಾಶವಿದೆ ಎಂದು ಎಜಿ ಶಶಿಕಿರಣ್ ಶೆಟ್ಟಿ ವಾದಿಸಿದರು.

Previous Post

75 ಮಂದಿ ಪ್ರಯಾಣಿಕರಿದ್ದ BMTC ಬಸ್‌ನಲ್ಲಿ ಭಾರೀ ಬೆಂಕಿ – ಬಸ್‌ ಸುಟ್ಟು ಕರಕಲು

Next Post

ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

Next Post
ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.