Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಕಾಸರಗೋಡು ಶಾಲೆಯಲ್ಲಿ ಪ್ಯಾಲೆಸ್ತೀನ್ ಪರ ಮೂಕಾಭಿನಯಕ್ಕೆ ತಡೆ: ತನಿಖೆಗೆ ಆದೇಶಿಸಿದ ಸರ್ಕಾರ

    ನಾಸಾ ಬಾಹ್ಯಾಕಾಶ ಕೇಂದ್ರ ಕಚೇರಿಗೆ ಭೇಟಿ ನೀಡಿದ ಬಸವರಾಜ ಹೊರಟ್ಟಿ, ಯುಟಿ ಖಾದರ್‌

    ನವೆಂಬರ್ 22ರ ಒಳಗೆ ಬಿಹಾರ ವಿಧಾನಸಭಾ ಚುನಾವಣೆ, ಮತಗಟ್ಟೆಗೆ ಮೊಬೈಲ್ ಕೊಂಡೊಯ್ಯಬಹುದು: ಜ್ಞಾನೇಶ್ ಕುಮಾರ್

    ಧರ್ಮಸ್ಥಳ ಕೇಸ್‌ಗೆ ಟ್ವಿಸ್ಟ್; ಎಸ್‌ಐಟಿ ತಂಡದಿಂದ ಇಬ್ಬರು ಅಂಬುಲೆನ್ಸ್ ಡ್ರೈವರ್‌ಗಳ ವಿಚಾರಣೆ

    ಧರ್ಮಸ್ಥಳ ಕೇಸ್‌ಗೆ ಟ್ವಿಸ್ಟ್; ಎಸ್‌ಐಟಿ ತಂಡದಿಂದ ಇಬ್ಬರು ಅಂಬುಲೆನ್ಸ್ ಡ್ರೈವರ್‌ಗಳ ವಿಚಾರಣೆ

    ರಹೀಂ ಕೊಲೆ‌ ಪ್ರಕರಣ: ಭರತ್ ಕುಮ್ಡೇಲ್ ಸೇರಿ ಆರೋಪಿಗಳ ವಿರುದ್ಧ ಕೋಕಾ‌ ಕಾಯ್ದೆಯಡಿ ಕೇಸ್: 14 ಆರೋಪಿಗಳ ಮೇಲೆ ‘ಕೋಕಾ’ ಕಾಯ್ದೆ ದಾಖಲು

    Coldrif Syrup Ban: ಮಕ್ಕಳ ಸರಣಿ ಸಾವು; ಕರ್ನಾಟಕದಲ್ಲೂ ಕೋಲ್ಡ್ರಿಫ್ ಸಿರಪ್​​​ ನಿಷೇಧ!

    ಮಕ್ಕಳನ್ನ ಕೊಲ್ಲುತ್ತಿದೆ ಕೆಮ್ಮಿನ ಸಿರಪ್.. ಕೇಂದ್ರ ಸರ್ಕಾರದಿಂದ ತುರ್ತು ಎಚ್ಚರಿಕೆ..!

    ಕಾರ್ಕಳ ; ಹರೆಯದ ಮಗಳ ಕತ್ತು ಹಿಸುಕಿ ಹತ್ಯೆಗೈದು ಆತ್ಮಹತ್ಯೆ ಎಂದು ಬಿಂಬಿಸಿದ್ದ ತಾಯಿ, ಮರಣೋತ್ತರ ಪರೀಕ್ಷೆಯಲ್ಲಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ !

    ಉಳ್ಳಾಲ: ದಸರಾ ಶೋಭಾಯಾತ್ರೆಯಲ್ಲಿ ತಡರಾತ್ರಿ ಧ್ವನಿವರ್ಧಕ ಬಳಕೆಗೆ ಪೊಲೀಸ್‌ ಆಕ್ಷೇಪ; ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ಮೂವರು ವಶಕ್ಕೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಕಾಸರಗೋಡು ಶಾಲೆಯಲ್ಲಿ ಪ್ಯಾಲೆಸ್ತೀನ್ ಪರ ಮೂಕಾಭಿನಯಕ್ಕೆ ತಡೆ: ತನಿಖೆಗೆ ಆದೇಶಿಸಿದ ಸರ್ಕಾರ

    ನಾಸಾ ಬಾಹ್ಯಾಕಾಶ ಕೇಂದ್ರ ಕಚೇರಿಗೆ ಭೇಟಿ ನೀಡಿದ ಬಸವರಾಜ ಹೊರಟ್ಟಿ, ಯುಟಿ ಖಾದರ್‌

    ನವೆಂಬರ್ 22ರ ಒಳಗೆ ಬಿಹಾರ ವಿಧಾನಸಭಾ ಚುನಾವಣೆ, ಮತಗಟ್ಟೆಗೆ ಮೊಬೈಲ್ ಕೊಂಡೊಯ್ಯಬಹುದು: ಜ್ಞಾನೇಶ್ ಕುಮಾರ್

    ಧರ್ಮಸ್ಥಳ ಕೇಸ್‌ಗೆ ಟ್ವಿಸ್ಟ್; ಎಸ್‌ಐಟಿ ತಂಡದಿಂದ ಇಬ್ಬರು ಅಂಬುಲೆನ್ಸ್ ಡ್ರೈವರ್‌ಗಳ ವಿಚಾರಣೆ

    ಧರ್ಮಸ್ಥಳ ಕೇಸ್‌ಗೆ ಟ್ವಿಸ್ಟ್; ಎಸ್‌ಐಟಿ ತಂಡದಿಂದ ಇಬ್ಬರು ಅಂಬುಲೆನ್ಸ್ ಡ್ರೈವರ್‌ಗಳ ವಿಚಾರಣೆ

    ರಹೀಂ ಕೊಲೆ‌ ಪ್ರಕರಣ: ಭರತ್ ಕುಮ್ಡೇಲ್ ಸೇರಿ ಆರೋಪಿಗಳ ವಿರುದ್ಧ ಕೋಕಾ‌ ಕಾಯ್ದೆಯಡಿ ಕೇಸ್: 14 ಆರೋಪಿಗಳ ಮೇಲೆ ‘ಕೋಕಾ’ ಕಾಯ್ದೆ ದಾಖಲು

    Coldrif Syrup Ban: ಮಕ್ಕಳ ಸರಣಿ ಸಾವು; ಕರ್ನಾಟಕದಲ್ಲೂ ಕೋಲ್ಡ್ರಿಫ್ ಸಿರಪ್​​​ ನಿಷೇಧ!

    ಮಕ್ಕಳನ್ನ ಕೊಲ್ಲುತ್ತಿದೆ ಕೆಮ್ಮಿನ ಸಿರಪ್.. ಕೇಂದ್ರ ಸರ್ಕಾರದಿಂದ ತುರ್ತು ಎಚ್ಚರಿಕೆ..!

    ಕಾರ್ಕಳ ; ಹರೆಯದ ಮಗಳ ಕತ್ತು ಹಿಸುಕಿ ಹತ್ಯೆಗೈದು ಆತ್ಮಹತ್ಯೆ ಎಂದು ಬಿಂಬಿಸಿದ್ದ ತಾಯಿ, ಮರಣೋತ್ತರ ಪರೀಕ್ಷೆಯಲ್ಲಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ !

    ಉಳ್ಳಾಲ: ದಸರಾ ಶೋಭಾಯಾತ್ರೆಯಲ್ಲಿ ತಡರಾತ್ರಿ ಧ್ವನಿವರ್ಧಕ ಬಳಕೆಗೆ ಪೊಲೀಸ್‌ ಆಕ್ಷೇಪ; ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ಮೂವರು ವಶಕ್ಕೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಜೆಎನ್​ಯು: ರಾವಣನ ಹತ್ತು ತಲೆಗಳಲ್ಲಿ ಖಾಲಿದ್, ಶಾರ್ಜೀಲ್ ಫೋಟೊ, ಭುಗಿಲೆದ್ದ ಘರ್ಷಣೆ

editor tv by editor tv
October 3, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ಜೆಎನ್​ಯು ವಿಶ್ವವಿದ್ಯಾಲಯದಲ್ಲಿ ರಾವಣನ ದಹನ ಕಾರ್ಯಕ್ರಮ ನಡೆದಿದೆ. ಈ ವೇಳೆ ರಾವಣನ ಪ್ರತಿಕೃತಿ ದಹಿಸುವ ಸಮಯದಲ್ಲಿ ರಾವಣನ ಹತ್ತು ತಲೆಗಳಲ್ಲಿ ಜೆಎನ್​​ಯುವಿನ ಹಳೆಯ ವಿದ್ಯಾರ್ಥಿಗಳಾಸ ಖಾಲಿದ್, ಶಾರ್ಜೀಲ್ ಫೋಟೊಗಳನ್ನು ಅಂಟಿಸಲಾಗಿತ್ತು. ಇದರಿಂದಾಗಿ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ಭುಗಿಲೆದ್ದಿತ್ತು.ಖಾಲಿದ್ ಮತ್ತು ಇಮಾಮ್ ಇಬ್ಬರೂ ಪ್ರಸ್ತುತ ಸಿಎಎ ವಿರೋಧಿ ಪ್ರತಿಭಟನೆಗಳು ಮತ್ತು ದೆಹಲಿ ಗಲಭೆ ಸಂಬಂಧಿಸಿದ ಪ್ರಕರಣಗಳಲ್ಲಿ ವಿಚಾರಣೆಯನ್ನು ಎದುರಿಸುತ್ತಿದ್ದಾರೆ.

ಜೆಎನ್​ಯು: ರಾವಣನ ಹತ್ತು ತಲೆಗಳಲ್ಲಿ ಖಾಲಿದ್, ಶಾರ್ಜೀಲ್ ಫೋಟೊ, ಭುಗಿಲೆದ್ದ ಘರ್ಷಣೆ

ನವದೆಹಲಿ, ಅಕ್ಟೋಬರ್ 03: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(JNU)ದಲ್ಲಿ ಗುರುವಾರ ರಾವಣ ದಹನ ಕಾರ್ಯಕ್ರಮದ ವೇಳೆ ಘರ್ಷಣೆ ಸಂಭವಿಸಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮತ್ತು ಎಡಪಂಥೀಯ ವಿದ್ಯಾರ್ಥಿ ಗುಂಪುಗಳ ನಡುವೆ ಗಲಾಟೆ ನಡೆದಿದೆ. ಎರಡೂ ವಿದ್ಯಾರ್ಥಿ ಗುಂಪುಗಳು ಪರಸ್ಪರ ಚಪ್ಪಲಿಗಳನ್ನು ಎಸೆಯಲು ಪ್ರಾರಂಭಿಸಿದವು. ದುರ್ಗಾ ಮೂರ್ತಿ ವಿಸರ್ಜನಾ ಮೆರವಣಿಗೆಯ ಮೇಲೆ ಎಡಪಂಥೀಯ ವಿದ್ಯಾರ್ಥಿ ಗುಂಪುಗಳು ದಾಳಿ ಮಾಡಿವೆ ಎಂದು ಎಬಿವಿಪಿ ಆರೋಪಿಸಿದೆ.

ಅಲ್ಲಿನ ಮಾಜಿ ಜೆಎನ್‌ಯು ವಿದ್ಯಾರ್ಥಿಗಳಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಫೋಟೊಗಳನ್ನು ಬಳಸಲಾಗಿದೆ ಎಂದು ವರದಿಯಾಗಿದೆ. ಖಾಲಿದ್ ಮತ್ತು ಇಮಾಮ್ ಇಬ್ಬರೂ ಪ್ರಸ್ತುತ ಸಿಎಎ ವಿರೋಧಿ ಪ್ರತಿಭಟನೆಗಳು ಮತ್ತು ದೆಹಲಿ ಗಲಭೆ ಸಂಬಂಧಿಸಿದ ಪ್ರಕರಣಗಳಲ್ಲಿ ವಿಚಾರಣೆಯನ್ನು ಎದುರಿಸುತ್ತಿದ್ದಾರೆ.

ರಾವಣ ದಹನ ಕಾರ್ಯಕ್ರಮದ ಮೂಲಕ ಎಬಿವಿಪಿ ರಾಜಕೀಯ ಪ್ರಚಾರಕ್ಕಾಗಿ ಧರ್ಮವನ್ನು ಬಳಸುತ್ತಿದೆ ಎಂದು ಎಡಪಂಥೀಯ ಸಂಘಟನೆಗಳು ಆರೋಪಿಸಿದವು. ಆದಾಗ್ಯೂ, ಈ ವಿಷಯದ ಬಗ್ಗೆ ಜೆಎನ್‌ಯು ಆಡಳಿತದಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.

ಎಐಎಸ್ಎ, ಎಸ್‌ಎಫ್‌ಐ ಮತ್ತು ಡಿಎಸ್‌ಎಫ್ ಸೇರಿದಂತೆ ಎಡಪಂಥೀಯ ಗುಂಪುಗಳು ಸಂಜೆ 7 ಗಂಟೆ ಸುಮಾರಿಗೆ ಸಬರಮತಿ ಟಿ-ಪಾಯಿಂಟ್ ಬಳಿ ವಿಸರ್ಜನಾ ಮೆರವಣಿಗೆಯ ಮೇಲೆ ಹಿಂಸಾತ್ಮಕ ದಾಳಿ ನಡೆಸಿದವು ಎಂದು ಎಬಿವಿಪಿ ಆರೋಪ ಮಾಡಿದೆ.

ಕಲ್ಲು ತೂರಾಟ ಮತ್ತು ಮಾತಿನ ಚಕಮಕಿಯಲ್ಲಿ ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಎಬಿವಿಪಿ ಹೇಳಿಕೊಂಡಿದೆ. ಇದು ಕೇವಲ ಧಾರ್ಮಿಕ ಕಾರ್ಯಕ್ರಮದ ಮೇಲಿನ ದಾಳಿಯಲ್ಲ, ಬದಲಾಗಿ ವಿಶ್ವವಿದ್ಯಾಲಯದ ಹಬ್ಬದ ಸಂಪ್ರದಾಯ ಮತ್ತು ವಿದ್ಯಾರ್ಥಿಗಳ ನಂಬಿಕೆಯ ಮೇಲಿನ ನೇರ ದಾಳಿಯಾಗಿದೆ. ಎಬಿವಿಪಿ ಇಂತಹ ಸಾಂಸ್ಕೃತಿಕ ದಾಳಿಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಜೆಎನ್‌ಯು ಎಬಿವಿಪಿ ಅಧ್ಯಕ್ಷ ಮಾಯಾಂಕ್ ಪಾಂಚಲ್ ಹೇಳಿದ್ದಾರೆ.

ರಾವಣನ ಪ್ರತಿಕೃತಿಯ 10 ತಲೆಗಳನ್ನು ಸುಟ್ಟುಹಾಕಲಾಗಿದ್ದು, CAA ಹೋರಾಟ ಗಾರರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಸೇರಿದಂತೆ ಹಲವರ ಛಾಯಾಚಿತ್ರಗಳನ್ನು ಆ ತಲೆಗಳು ಒಳಗೊಂಡಿತ್ತು. ಇದನ್ನು ನೋಡಿದ ಎಡಪಂಥೀಯ ವಿದ್ಯಾರ್ಥಿಗಳು ಕೋಪಗೊಂಡುವಿರೋಧ ವ್ಯಕ್ತ ಪಡಿಸಿಸಿದರು ಈ ವೇಳೆ ABVP ಕಾರ್ಯಕರ್ತರು ಹಿಂಸಾತ್ಮಕ ದಾಳಿ ನಡೆಸಿದರು ಎಂದು ಹೇಳಲಾಗುತ್ತಿದೆ. ನಿಜವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

ಜೆಎನ್‌ಯು ವಿದ್ಯಾರ್ಥಿ ಸಂಘದ ಜಂಟಿ ಕಾರ್ಯದರ್ಶಿ ವೈಭವ್ ಮೀನಾ ಕೂಡ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದರು, ಇದು ಜೆಎನ್‌ಯುನ ಸಾಂಸ್ಕೃತಿಕ ಸಾಮರಸ್ಯ ಮತ್ತು ಸಹೋದರತ್ವದ ಮೇಲಿನ ನೇರ ದಾಳಿ ಎಂದು ಕರೆದರು.

Previous Post

ಬಿಜೆಪಿಯವರೇ ಮೊದಲು ನಿಮ್ಮ ಮಕ್ಕಳನ್ನು ಧರ್ಮ ರಕ್ಷಣೆಗೆ ಬಿಡಿ: ಸಚಿವ ಪ್ರಿಯಾಂಕ್‌ ಖರ್ಗೆ

Next Post

ಶಿವಮೊಗ್ಗ | ಮಗಳನ್ನು ಕೊಂದು ಶವದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ

Next Post

ಶಿವಮೊಗ್ಗ | ಮಗಳನ್ನು ಕೊಂದು ಶವದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.