Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಎಪಿಎಲ್‌ಗೆ ಬದಲಾದ ಅರ್ಹ ಬಿಪಿಎಲ್ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್; ದಾಖಲೆ ಇದ್ರೆ 45 ದಿನದೊಳಗೆ ಮತ್ತೆ ಬಿಪಿಎಲ್ ಕಾರ್ಡ್ ಭಾಗ್ಯ

    ಆರೋಪಿಗಳ ಖುಲಾಸೆಗೆ ಆಕ್ರೋಶ; ಗುಜರಾತ್ ಕೋರ್ಟ್​ನಲ್ಲಿ ನ್ಯಾಯಮೂರ್ತಿ ಮೇಲೆ ಚಪ್ಪಲಿ ಎಸೆದ ವ್ಯಕ್ತಿ

    ಆರೋಪಿಗಳ ಖುಲಾಸೆಗೆ ಆಕ್ರೋಶ; ಗುಜರಾತ್ ಕೋರ್ಟ್​ನಲ್ಲಿ ನ್ಯಾಯಮೂರ್ತಿ ಮೇಲೆ ಚಪ್ಪಲಿ ಎಸೆದ ವ್ಯಕ್ತಿ

    ಕೋಲಾರ: ಶಿಕ್ಷಕಿ ಅಕ್ತರ್ ಬೇಗಂ ನಿಗೂಢ ಸಾವು, ಸಮೀಕ್ಷೆ ಒತ್ತಡಕ್ಕೆ ಸಂಬಂಧವಿಲ್ಲ: ಜಿಲ್ಲಾಧಿಕಾರಿ

    ಆರ್‌ಎಸ್‌ಎಸ್‌ ಟೀಕಿಸಿದ್ದಕ್ಕೆ ಬೆದರಿಕೆ ಕರೆ, ಅವಾಚ್ಯ ಶಬ್ಧಗಳಿಂದ ನಿಂದನೆ: ವಿಡಿಯೋ ಹಂಚಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ

    ಹಿಂದಿ ಹೋರ್ಡಿಂಗ್ಸ್‌, ಸಿನಿಮಾ, ಹಾಡುಗಳು ನಿಷೇಧಿಸುವ ಮಸೂದೆ ಇಂದು ಮಂಡನೆ? – ತಮಿಳುನಾಡು ಸರ್ಕಾರ ಸಿದ್ಧತೆ

    Udupi | ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

    ಕಾಲೇಜ್ ಹುಡುಗಿಯರನ್ನಿಟ್ಟುಕೊಂಡು ದಂಧೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ

    ಇಂಟರ್‌ನ್ಯಾಷನಲ್ ನಂಬರ್‌ನಿಂದ ಬೆದರಿಕೆ ಕರೆ, ನಾನು ಹೆದರಲ್ಲ: ಪ್ರಿಯಾಂಕ್ ಖರ್ಗೆ

    ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

    ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಎಪಿಎಲ್‌ಗೆ ಬದಲಾದ ಅರ್ಹ ಬಿಪಿಎಲ್ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್; ದಾಖಲೆ ಇದ್ರೆ 45 ದಿನದೊಳಗೆ ಮತ್ತೆ ಬಿಪಿಎಲ್ ಕಾರ್ಡ್ ಭಾಗ್ಯ

    ಆರೋಪಿಗಳ ಖುಲಾಸೆಗೆ ಆಕ್ರೋಶ; ಗುಜರಾತ್ ಕೋರ್ಟ್​ನಲ್ಲಿ ನ್ಯಾಯಮೂರ್ತಿ ಮೇಲೆ ಚಪ್ಪಲಿ ಎಸೆದ ವ್ಯಕ್ತಿ

    ಆರೋಪಿಗಳ ಖುಲಾಸೆಗೆ ಆಕ್ರೋಶ; ಗುಜರಾತ್ ಕೋರ್ಟ್​ನಲ್ಲಿ ನ್ಯಾಯಮೂರ್ತಿ ಮೇಲೆ ಚಪ್ಪಲಿ ಎಸೆದ ವ್ಯಕ್ತಿ

    ಕೋಲಾರ: ಶಿಕ್ಷಕಿ ಅಕ್ತರ್ ಬೇಗಂ ನಿಗೂಢ ಸಾವು, ಸಮೀಕ್ಷೆ ಒತ್ತಡಕ್ಕೆ ಸಂಬಂಧವಿಲ್ಲ: ಜಿಲ್ಲಾಧಿಕಾರಿ

    ಆರ್‌ಎಸ್‌ಎಸ್‌ ಟೀಕಿಸಿದ್ದಕ್ಕೆ ಬೆದರಿಕೆ ಕರೆ, ಅವಾಚ್ಯ ಶಬ್ಧಗಳಿಂದ ನಿಂದನೆ: ವಿಡಿಯೋ ಹಂಚಿಕೊಂಡ ಸಚಿವ ಪ್ರಿಯಾಂಕ್ ಖರ್ಗೆ

    ಹಿಂದಿ ಹೋರ್ಡಿಂಗ್ಸ್‌, ಸಿನಿಮಾ, ಹಾಡುಗಳು ನಿಷೇಧಿಸುವ ಮಸೂದೆ ಇಂದು ಮಂಡನೆ? – ತಮಿಳುನಾಡು ಸರ್ಕಾರ ಸಿದ್ಧತೆ

    Udupi | ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

    ಕಾಲೇಜ್ ಹುಡುಗಿಯರನ್ನಿಟ್ಟುಕೊಂಡು ದಂಧೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ

    ಇಂಟರ್‌ನ್ಯಾಷನಲ್ ನಂಬರ್‌ನಿಂದ ಬೆದರಿಕೆ ಕರೆ, ನಾನು ಹೆದರಲ್ಲ: ಪ್ರಿಯಾಂಕ್ ಖರ್ಗೆ

    ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

    ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಎಪಿಎಲ್‌ಗೆ ಬದಲಾದ ಅರ್ಹ ಬಿಪಿಎಲ್ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್; ದಾಖಲೆ ಇದ್ರೆ 45 ದಿನದೊಳಗೆ ಮತ್ತೆ ಬಿಪಿಎಲ್ ಕಾರ್ಡ್ ಭಾಗ್ಯ

editor tv by editor tv
October 15, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

BPL APL Card

ಬೆಂಗಳೂರು: ಎಪಿಎಲ್‌ಗೆ (APL) ಬದಲಾದ ಅರ್ಹರಿಗೆ ಮತ್ತೆ ಬಿಪಿಎಲ್‌ ಕಾರ್ಡ್‌ (BPL Card) ಭಾಗ್ಯ ಸಿಗಲಿದೆ. ಹೌದು, ಅನರ್ಹ ಬಿಪಿಎಲ್ ಕಾರ್ಡ್‌ಗಳ ರದ್ದತಿ ಪ್ರಕ್ರಿಯೆ ಮಧ್ಯೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಮೂಲಕ ಅರ್ಹತೆ ಇದ್ರೂ ಎಪಿಎಲ್‌ಗೆ ಬದಲಾಗಿ ವಂಚಿತರಾದವರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ‌.

45 ದಿನಗಳೊಳಗೆ ಅರ್ಹರಿಗೆ ಮತ್ತೆ ಬಿಪಿಎಲ್ ಕಾರ್ಡ್ ವಿತರಿಸಲು ಸರ್ಕಾರ ಆಹಾರ ಇಲಾಖೆಗೆ ಗಡುವು ಕೊಟ್ಟಿದೆ. ಎಪಿಎಲ್‌ಗೆ ಬದಲಾದವರು ಪೂರಕ ದಾಖಲೆ ಇದ್ದರೆ ಮತ್ತೆ ಬಿಪಿಎಲ್ ಕಾರ್ಡ್ ಪಡೆಯಲು ಅವಕಾಶ ಮಾಡಿಕೊಡಲಾಗಿದೆ. ಒಂದು ಕಡೆ ಅನರ್ಹ ಬಿಪಿಎಲ್‌ ಕಾರ್ಡ್‌ದಾರರನ್ನು ಪತ್ತೆ ಮಾಡಿ ಎಪಿಎಲ್‌ ಕಾರ್ಡ್‌ ನೀಡಲು ಆಹಾರ ಇಲಾಖೆ ಮುಂದಾಗಿದೆ. ಇನ್ನೊಂದು ಕಡೆ ಅರ್ಹ ಬಿಪಿಎಲ್‌ ಕಾರ್ಡ್‌ದಾರರು ಎಪಿಎಲ್‌ಗೆ ಬದಲಾಗಿದ್ರೆ ಅಂಥವರಿಗೆ ನ್ಯಾಯ ಕೊಡಲು ಮುಂದಾಗಿದೆ. 

7,76,206 ಪಡಿತರ ಚೀಟಿಗಳು ರಾಜ್ಯದಲ್ಲಿ ಅನರ್ಹವೆಂದು ಕೇಂದ್ರ ಸರ್ಕಾರ ಗುರುತು ಮಾಡಿದೆ. ಆದರೆ, ರಾಜ್ಯ ಸರ್ಕಾರದ ಲೆಕ್ಕದ ಪ್ರಕಾರ 13,87,651 ಅನರ್ಹ ಪಡಿತರ ಚೀಟಿಗಳಿವೆ. ಇಂತಹ ಅನರ್ಹ ಚೀಟಿಗಳನ್ನು ಬಿಪಿಎಲ್‌ ಬದಲಿಗೆ ಎಪಿಎಲ್‌ ಆಗಿ ಪರಿವರ್ತಿಸುವ ಕೆಲಸ ನಡೀತಿದೆ.‌‌ ಇದರ ಮಧ್ಯೆ ಒಂದು ವೇಳೆ ಅರ್ಹರ ಕಾರ್ಡ್‌ ಎಪಿಎಲ್‌ಗೆ ಬದಲಾಗಿದ್ದಲ್ಲಿ ಅಂಥವರಿಗೆ ಬ್ಯಾಕ್ ಟು ಬಿಪಿಎಲ್‌ ಭಾಗ್ಯವೂ ಸಿಗಲಿದೆ. ಇದಕ್ಕಾಗಿ 45 ದಿನದೊಳಗೆ ಅಗತ್ಯ ದಾಖಲೆ ಸಹಿತ ತಹಶೀಲ್ದಾರ್‌ಗೆ ಮನವಿ ಸಲ್ಲಿಸಬೇಕು. ಅಧಿಕಾರಿಗಳು ಸ್ಥಳ ಪರಿಶೀಲನೆ ಮತ್ತು ದಾಖಲೆಗಳನ್ನು ಪರಿಶೀಲನೆ ಮಾಡಿ ಅರ್ಹರಿದ್ದಲ್ಲಿ ಅಂಥವರಿಗೆ ಬಿಪಿಎಲ್‌ ಕಾರ್ಡ್‌ ನೀಡಲು ಸರ್ಕಾರ ಸೂಚನೆ ಕೊಟ್ಟಿದೆ.

ಇದೇ ವೇಳೆ ಬಿಎಪಿಎಲ್‌ಗೆ ಅರ್ಜಿ ಸಲ್ಲಿಸಿ ವರ್ಷಗಳಿಂದ ಕಾಯುತ್ತಿರುವವರಿಗೂ ಗುಡ್ ನ್ಯೂಸ್ ಇದೆ. ಹೊಸದಾಗಿ ಪಡಿತರ ಚೀಟಿಗೆ ಈಗಾಗಲೇ 2.96 ಲಕ್ಷ ಅರ್ಜಿ ಸಲ್ಲಿಕೆ ಆಗಿವೆ. ಈ ಅರ್ಜಿಗಳ ವಿಲೇವಾರಿ ಮಾಡುವವರೆಗೆ ಬಿಪಿಎಲ್‌ಗೆ ಹೊಸದಾಗಿ ಅರ್ಜಿ ಆಹ್ವಾನಿಸಬಾರದು ಎಂದು ಸರ್ಕಾರ ನಿರ್ದೇಶಿಸಿದೆ. ಸದ್ಯದಲ್ಲೇ ಹೊಸ ಬಿಪಿಎಲ್ ಕಾರ್ಡ್‌ಗಳ ವಿತರಣೆಗೂ ಕ್ರಮದ ಭರವಸೆ ಕೊಡಲಾಗಿದೆ. 

ಎಪಿಎಲ್‌ಗೆ ಬದಲಾದ ಅರ್ಹರಿಗೆ ಮತ್ತೆ ಬಿಪಿಎಲ್‌ ಕಾರ್ಡ್‌ ಭಾಗ್ಯ!
* ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
* ಬಿಪಿಎಲ್ ಕಾರ್ಡ್ ವಂಚಿತ ಅರ್ಹರಿಗೆ ಗುಡ್ ನ್ಯೂಸ್!
* 45 ದಿನಗಳೊಳಗೆ ಅರ್ಹರಿಗೆ ಮತ್ತೆ ಬಿಪಿಎಲ್ ಕಾರ್ಡ್!
* ಎಪಿಎಲ್‌ಗೆ ಬದಲಾದವರಿಗೆ ಪೂರಕ ದಾಖಲೆ ಇದ್ದರೆ ಮತ್ತೆ ಬಿಪಿಎಲ್ ಕಾರ್ಡ್
* ಕೇಂದ್ರದ ಪ್ರಕಾರ ರಾಜ್ಯದಲ್ಲಿ 7,76,206 ಪಡಿತರ ಚೀಟಿಗಳಿವೆ
* ರಾಜ್ಯ ಸರ್ಕಾರದ ಲೆಕ್ಕದ ಪ್ರಕಾರ 13,87,651 ಅನರ್ಹ ಪಡಿತರ ಚೀಟಿಗಳು
* 45 ದಿನದೊಳಗೆ ಅಗತ್ಯ ದಾಖಲೆ ಸಹಿತ ತಹಶೀಲ್ದಾರ್‌ಗೆ ಮನವಿ ಸಲ್ಲಿಸಬೇಕು
* ಅಧಿಕಾರಿಗಳು ಸ್ಥಳ ಪರಿಶೀಲನೆ ಮತ್ತು ದಾಖಲೆ ಪರಿಶೀಲಿಸಿ ಅರ್ಹರಿದ್ದಲ್ಲಿ ಬಿಪಿಎಲ್‌ ಕಾರ್ಡ್
* ಹೊಸದಾಗಿ ಪಡಿತರ ಚೀಟಿಗೆ ಸಲ್ಲುಸಿರೋ 2.96 ಲಕ್ಷ ಅರ್ಜಿಗಳ ವಿಲೇವಾರಿಗೂ ಕ್ರಮ
* ಹಳೆಯ ಅರ್ಜಿಗಳ ವಿಲೇವಾರಿವರೆಗೂ ಬಿಪಿಎಲ್‌ಗೆ ಹೊಸಗಿ ಅರ್ಜಿ ಆಹ್ವಾನವಿಲ್ಲ

Previous Post

ಆರೋಪಿಗಳ ಖುಲಾಸೆಗೆ ಆಕ್ರೋಶ; ಗುಜರಾತ್ ಕೋರ್ಟ್​ನಲ್ಲಿ ನ್ಯಾಯಮೂರ್ತಿ ಮೇಲೆ ಚಪ್ಪಲಿ ಎಸೆದ ವ್ಯಕ್ತಿ

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.