
ಫಾಜಿಲ್ ಕೊಲೆ ಆರೋಪಿಗಳನ್ನ ಶೀಘ್ರವೇ ಬಂಧಿಸುತ್ತೇವೆ ಎಂದು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ ನೀಡಿದರು. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳ ಸುಳಿವು ಸಿಕ್ಕಿದೆ. ಇಂದು ಸಂಜೆಯಿಂದ ವಿಶೇಷ ಕಾರ್ಯಾಚರಣೆ ಮಾಡುತ್ತೇವೆ. ಯಾರು ಕೂಡ ವದಂತಿಗಳಿಗೆ ಕಿವಿ ಕೊಡಬಾರದು. ಫಾಜಿಲ್ ಮನೆಯವರು ಹತ್ಯೆಯ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಿದರು. ವಿವಿಧ ಆಯಾಮಗಳಿಂದ ಪ್ರಕರಣದ ತನಿಖೆ ಮಾಡುತ್ತಿದ್ದೇವೆ. ಸಿಸಿಟಿವಿ ದೃಶ್ಯ ಆಧರಿಸಿ ಕಾರು ಪತ್ತೆ ಹಚ್ಚಿ ತನಿಖೆ ಮಾಡ್ತಿದ್ದೇವೆ. ಯಾವುದೇ ಕಾರಣಕ್ಕೂ ಕಾನೂನು ಕೈಗೆತ್ತಿಕೊಳ್ಳಬಾರದು. ಈಗಿರುವ ಪೊಲೀಸ್ ಬಂದೋಬಸ್ತ್ ಮುಂದುವರಿಸುತ್ತೇವೆ. ಗಡಿಭಾಗದಲ್ಲಿ ವಾಹನಗಳನ್ನ ಚೆಕ್ ಮಾಡಲಾಗುತ್ತದೆ. ಸಾರ್ವಜನಿಕರು ಪೊಲೀಸರಿಗೆ ಸಹಕಾರ ನೀಡಬೇಕು ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.
ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ಸುಳಿವು ಪತ್ತೆ :
ಆಗ್ತಿದ್ದಂತೆ ಅಧಿಕಾರಿಗಳ ತುರ್ತು ಸಭೆ ಮಾಡಲಾಯಿತು. ಪ್ರಕರಣದ ಕುರಿತಾಗಿ ಅಲೋಕ್ ಕುಮಾರ್ ಮಾಹಿತಿ ಪಡೆದರು. ಆರೋಪಿಗಳ ಮಾಹಿತಿ ಕಲೆ ಹಾಕಿರುವ ಹಿನ್ನೆಲೆ ಬಂಧಿಸುವ ಬಗ್ಗೆ ಸಭೆಯಲ್ಲಿ ಪಿನ್ ಟು ಪಿನ್ ಮಾಹಿತಿ ಚರ್ಚೆ ಮಾಡಲಾಗಿದ್ದು, ಈಗಾಗಲೇ 14 ಜನರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
