Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಬಿಹಾರಕ್ಕೆ ಭೇಟಿ ನೀಡಿದ ತೆಲಂಗಾಣ ಸಿಎಂ ಕೆಸಿಆರ್‌‌: ‘ಬಿಜೆಪಿ ಮುಕ್ತ ಭಾರತ’ಕ್ಕೆ ಕರೆ

editor tv by editor tv
September 1, 2022
in ರಾಷ್ಟ್ರೀಯ, ಸುದ್ದಿ
0
ಬಿಹಾರಕ್ಕೆ ಭೇಟಿ ನೀಡಿದ ತೆಲಂಗಾಣ ಸಿಎಂ ಕೆಸಿಆರ್‌‌: ‘ಬಿಜೆಪಿ ಮುಕ್ತ ಭಾರತ’ಕ್ಕೆ ಕರೆ
1.9k
VIEWS
Share on FacebookShare on TwitterShare on Whatsapp

ಬುಧವಾರ ಬಿಹಾರಕ್ಕೆ ಭೇಟಿ ನೀಡಿದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್(ಕೆಸಿಆರ್‌‌) ಅವರು ರಾಜ್ಯದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ಹಾಗೂ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಅವರನ್ನು ಭೇಟಿ ಮಾಡಿ ‘ಬಿಜೆಪಿ-ಮುಕ್ತ ಭಾರತ’ ಕ್ಕೆ ಕರೆ ನೀಡಿದ್ದಾರೆ.

ಇಬ್ಬರು ನಾಯಕರ ಭೇಟಿಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ತೆಲಂಗಾಣ ಸಿಎಂ ಕೆಸಿಆರ್‌, ದೇಶವನ್ನು ಕಾಡುತ್ತಿರುವ ಅನೇಕ ಅನಾಹುತಗಳಿಗೆ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೂಪಾಯಿ ಮೌಲ್ಯ ಕುಸಿತ, ರೈತರ ಪ್ರತಿಭಟನೆ, ನಿರುದ್ಯೋಗ ಮತ್ತು ಬೆಲೆ ಏರಿಕೆಗೆ ನರೇಂದ್ರ ಮೋದಿ ಸರ್ಕಾರವೆ ಕಾರಣ ಎಂದು ಅವರು ಹೇಳಿದ್ದಾರೆ.

ಬಿಜೆಪಿಯ ವಿರುದ್ಧ ತೃತೀಯ ರಂಗದ ವಿಚಾರವಾಗಿ ಕೆಸಿಆರ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಭೇಟಿ ಮಾಡಿದ್ದಾರೆ. ಜೂನ್ 2020 ರಲ್ಲಿ ಗಾಲ್ವಾನ್ ಕಣಿವೆಯಲ್ಲಿ ಚೀನೀ ಸೈನಿಕರೊಂದಿಗಿನ ಘರ್ಷಣೆಯಲ್ಲಿ ಮಡಿದ ಬಿಹಾರದ ಐವರು ಸೈನಿಕರ ಸಂಬಂಧಿಕರಿಗೆ ತಲಾ 10 ಲಕ್ಷ ರೂಪಾಯಿ ಚೆಕ್‌ಗಳನ್ನು ಹಸ್ತಾಂತರಿಸುವುದು ಕೆಸಿಆರ್ ಅವರ ಪಾಟ್ನಾ ಭೇಟಿಯ ಅಧಿಕೃತ ಉದ್ದೇಶವಾಗಿತ್ತು.

ಸಿಎಂ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರೊಂದಿಗೆ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಸಿಆರ್, ಬೆಲೆ ಏರಿಕೆ, ನಿರುದ್ಯೋಗ, ಖಾಸಗೀಕರಣ ನೀತಿಗಳ ಮೇಲೆ ಒಕ್ಕೂಟ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ‘ಬಿಜೆಪಿ-ಮುಕ್ತ ಭಾರತ’ಕ್ಕೆ ಕರೆ ನೀಡಿದ್ದಾರೆ.

ಸಾಧ್ಯವಿರುವ ಯಾವುದೇ ವಿಧಾನದಿಂದ ಬಿಜೆಪಿಯನ್ನು ಅಧಿಕಾರದಿಂದ ಹೊರಹಾಕಲು ನಾವು ಪ್ರಯತ್ನಿಸಬೇಕು ಎಂದು ಕೆಸಿಆರ್ ಹೇಳಿದ್ದಾರೆ.

ಪಾಟ್ನಾದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ಕೆಸಿಆರ್‌‌ ಭೇಟಿ ಮಾಡಿದ್ದಾರೆ. 2024 ರಲ್ಲಿ ನಿತೀಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಸವಾಲಾಗುತ್ತಾರೆಯೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೆಸಿಆರ್‌, “ನಿತೀಶ್ ಅವರು ದೇಶದ ಅತ್ಯುತ್ತಮ ಮತ್ತು ಹಿರಿಯ ನಾಯಕರಲ್ಲಿ ಒಬ್ಬರು. ಈ ಬಗ್ಗೆ ನಾನು ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಎಲ್ಲಾ ವಿರೋಧ ಪಕ್ಷಗಳು ಒಟ್ಟಾಗಿ ಕೂತು ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಪಾಟ್ನಾ ಸಭೆಯ ಸಂದರ್ಭದಲ್ಲಿ, ಕೆಸಿಆರ್ ಮತ್ತು ನಿತೀಶ್ ಕುಮಾರ್ ಇಬ್ಬರೂ ಬಿಜೆಪಿಗೆ ಪರ್ಯಾಯವಾಗಿ ಮುಖ್ಯ ವಿರೋಧ ಪಕ್ಷದ ರಂಗ (ಕಾಂಗ್ರೆಸ್ ಇಲ್ಲದೆ)ವಾಗಿ ಇರುತ್ತೇವೆ, ಇದು ತೃತೀಯ ರಂಗವಲ್ಲ ಎಂದು ಹೇಳಿದ್ದಾರೆ. “ತನ್ನ ಸಣ್ಣ ರಾಜಕೀಯ ಲಾಭಕ್ಕಾಗಿ ಕೋಮು ಭಾವನೆಗಳನ್ನು ಪ್ರಚೋದಿಸಿ ಅಪಾಯಕಾರಿ ಆಟವಾಡುತ್ತಿರುವ ಬಿಜೆಪಿ ವಿರುದ್ಧ ನಮ್ಮದು ತೃತೀಯ ರಂಗವಲ್ಲ, ಪ್ರಮುಖ ರಂಗವಾಗಿದೆ” ಎಂದು ಕೆಸಿಆರ್ ಹೇಳಿದ್ದಾರೆ.

Previous Post

PM Modi in Kochi ಬಿಜೆಪಿ ಸರ್ಕಾರವಿರುವಲ್ಲಿ ವೇಗದ ಅಭಿವೃದ್ದಿ, ಕೇರಳಕ್ಕೂ ಬೇಕು ಡಬಲ್ ಎಂಜಿನ್ ಸರ್ಕಾರ: ಮೋದಿ

Next Post

Murugha Shree Arrest: ಪೋಕ್ಸೋ ಕಾಯ್ದೆಯಡಿ ಮುರುಘಾ ಮಠದ ಮುರುಘಾ ಶ್ರೀ ಅರೆಸ್ಟ್​

Next Post
Murugha Shir: ಪೊಲೀಸರ ವಶಕ್ಕೆ ಮುರುಘಾ ಶ್ರೀಗಳು; ಮಠದ ಸುತ್ತಮುತ್ತ ಪೊಲೀಸರ ಸರ್ಪಗಾವಲು

Murugha Shree Arrest: ಪೋಕ್ಸೋ ಕಾಯ್ದೆಯಡಿ ಮುರುಘಾ ಮಠದ ಮುರುಘಾ ಶ್ರೀ ಅರೆಸ್ಟ್​

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.