Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಕ್ರೀಡೆ

Asia Cup Final: ಇಂದು ಏಷ್ಯಾಕಪ್ 2022 ಫೈನಲ್: ಪ್ರಶಸ್ತಿಗಾಗಿ ಶ್ರೀಲಂಕಾ-ಪಾಕಿಸ್ತಾನ ಸೆಣೆಸಾಟ

editor tv by editor tv
September 11, 2022
in ಕ್ರೀಡೆ, ಸುದ್ದಿ
0
Asia Cup Final: ಇಂದು ಏಷ್ಯಾಕಪ್ 2022 ಫೈನಲ್: ಪ್ರಶಸ್ತಿಗಾಗಿ ಶ್ರೀಲಂಕಾ-ಪಾಕಿಸ್ತಾನ ಸೆಣೆಸಾಟ
1.9k
VIEWS
Share on FacebookShare on TwitterShare on Whatsapp

ಹದಿನೈದನೆ ಆವೃತ್ತಿಯ ಏಷ್ಯಾಕಪ್ (Asia Cup) ಅಂತಿಮ ಘಟ್ಟಕ್ಕೆ ಬಂದುನಿಂತಿದೆ. ಇಂದು ದುಬೈಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯಲಿದ್ದು ದಸುನ್ ಶನಕ ನಾಯಕತ್ವದ ಶ್ರೀಲಂಕಾ ಹಾಗೂ ಬಾಬರ್ ಅಜಮ್ (Babar Azam) ನೇತೃತ್ವದ ಪಾಕಿಸ್ತಾನ (Sri Lanka vs Pakistan) ತಂಡಗಳು ಮುಖಾಮುಖಿ ಆಗಲಿದೆ. ಉಭಯ ತಂಡಗಳು ಸಾಕಷ್ಟು ಬಲಿಷ್ಠವಾಗಿದ್ದು ಹೈವೋಲ್ಟೇಜ್ ಮ್ಯಾಚ್ ಆಗುವುದರಲ್ಲಿ ಅನುಮಾನವಿಲ್ಲ. ಒಂದು ದಿನದ ಹಿಂದೆಯಷ್ಟೆ ಸೂಪರ್ 4 ಹಂತದ ಕೊನೆಯ ಪಂದ್ಯದಲ್ಲಿ ಲಂಕಾ–ಪಾಕ್ ಎದುರಾಗಿತ್ತು. ಇದರಲ್ಲಿ ಲಂಕಾ 5 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿತ್ತು. ಹೀಗಾಗಿ ಲಂಕಾ ಈ ಗೆಲುವಿನ ಆತ್ಮವಿಶ್ವಾಸದೊಂದಿಗೆ ಕಣಕ್ಕಿಳಿಯಲಿದೆ. ಇತ್ತ ಪಾಕಿಸ್ತಾನಕ್ಕೆ ಪ್ರಶಸ್ತಿ ಮುಖ್ಯವಾಗಿದೆ.

ಸೋಲಿನೊಂದಿಗೆ ಏಷ್ಯಾಕಪ್ 2022 ಟೂರ್ನಿ ಆರಂಭಿಸಿದ್ದ ಲಂಕಾ ನಿಧಾನವಾಗಿ ಲಯ ಕಂಡುಕೊಂಡಿತು. ಈಗ ಬ್ಯಾಟಿಂಗ್–ಬೌಲಿಂಗ್​ನಲ್ಲಿ ಬಲಿಷ್ಠವಾಗಿ ಹೊರಹೊಮ್ಮಿದೆ. ಲಂಕಾಕ್ಕೆ ಕೂಡ ಈ ಪ್ರಶಸ್ತಿ ತುಂಬಾನೆ ಮುಖ್ಯ. ಯಾಕೆಂದರೆ ಕಳೆದ ಕೆಲ ಸಮಯಗಳಿಂದ ರಾಜಕೀಯ ಬಿಕ್ಕಟ್ಟು ಮತ್ತು ಆರ್ಥಿಕ ಸಂಕಷ್ಟದಿಂದ ಸಿಂಹಳೀಯರ ದೇಶ ನಲುಗಿದೆ. ಏಷ್ಯಾ ಕಪ್‌ ಗೆದ್ದು ತನ್ನ ದೇಶದ ಜನರ ನೋವನ್ನು ಅಲ್ಪ ಮರೆಸುವ ಅವಕಾಶ ಶನಕ ಬಳಗಕ್ಕೆ ದೊರೆತಿದೆ.

ಲಂಕಾ ಪರ ಕುಸಾಲ್‌ ಮೆಂಡಿಸ್‌ ಮತ್ತು ಪಥುಮ್‌ ನಿಸಾಂಕ ಉತ್ತಮ ಆರಂಭ ನೀಡುತ್ತಿರುವುದು ತಂಡಕ್ಕೆ ದೊಡ್ಡ ಪ್ಲಸ್ ಪಾಯಿಂಟ್. ಮಧ್ಯಮ ಕ್ರಮಾಂಕದಲ್ಲಿ ಧನುಷ್ಕಾ ಗುಣತಿಲಕ, ಭನುಕಾ ರಾಜಪಕ್ಷ ಮತ್ತು ದಸುನ್‌ ಶನಕ ಆಧಾರವಾಗುತ್ತಿದ್ದಾರೆ. ವನಿಂದು ಹಸರಂಗ ಸ್ಪಿನ್ ಜಾದು ಕೆಲಸ ಮಾಡುತ್ತಿದ್ದು ಇವರಿಗೆ ಮಹೀಶ್ ತೀಕ್ಷಣ ಉತ್ತಮ ಸಾಥ್ ನೀಡುತ್ತಿದ್ದಾರೆ. ದಿಲ್ಶಾನ್ ಮಧುಶಂಕ ಹಾಗೂ ಪ್ರಮೋದ್ ಮಧುಶನ್ ಮಾರಕ ದಾಳಿ ಸಂಘಟಿಸಬೇಕಿದೆ.

ಇತ್ತ ಪಾಕಿಸ್ತಾನಕ್ಕೆ ನಾಯಕ ಬಾಬರ್ ಅಜಮ್ ಫಾರ್ಮ್ ದೊಡ್ಡ ಚಿಂತೆಯಾಗಿದೆ. ಈ ಬಾರಿಯ ಏಷ್ಯಾಕಪ್​ನಲ್ಲಿ ಬಾಬರ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಇಂದು ಫೈನಲ್ ಕದನ ಆಗಿರುವುದರಿಂದ ಇವರ ಮೇಲೆ ಸಾಕಷ್ಟು ಒತ್ತಡವಿದೆ. ಮೊಹಮ್ಮದ್ ರಿಜ್ವಾನ್ ಕೂಡ ಎಚ್ಚರಿಕೆಯಿಂದ ಬ್ಯಾಟ್ ಬೀಸಬೇಕಿದೆ. ಫಖರ್ ಜಮನ್, ಇಫ್ತಿಖರ್ ಅಹ್ನದ್, ಕುಶ್ದಿಲ್ ಹಾಗೂ ನವಾಜ್ ಬ್ಯಾಟಿಂಗ್​ನಲ್ಲಿ ಇನ್ನಷ್ಟು ಕೊಡುಗೆ ನೀಡಬೇಕು. ಪಾಕ್‌ ತಂಡದ ಬಲ ಬೌಲಿಂಗ್‌ ವಿಭಾಗ. ನಸೀಮ್‌ ಶಾ, ಹ್ಯಾರಿಸ್‌ ರೌಫ್ ಮತ್ತು ಮೊಹಮ್ಮದ್‌ ಹಸ್ನೈನ್ ವೇಗಿಗಳಾದರೆ, ಶಾದಾಬ್‌ ಖಾನ್‌ ಮತ್ತು ಮೊಹಮ್ಮದ್‌ ನವಾಜ್‌ ಸ್ಪಿನ್ ವಿಭಾಗದಲ್ಲಿ ಮಿಂಚುತ್ತಿದ್ದಾರೆ.

ದುಬೈ ಕ್ರಿಕೆಟ್ ಸ್ಟೇಡಿಯಮ್‌ನಲ್ಲಿ ಸಾಮಾನ್ಯವಾಗಿ 160-170ರಷ್ಟು ರನ್‌ಗಳಿಸಿದರೆ ಸ್ಪರ್ಧಾತ್ಮಕ ಸ್ಕೋರ್ ಗಳಿಸಿದಂತಾಗುತ್ತದೆ. ಆದರೆ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭಾರತ 182 ರನ್‌ಗಳ ಗುರಿ ನೀಡಿಯೂ ಅದನ್ನು ರಕ್ಷಿಸಲು ವಿಫಲವಾಗಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಇನ್ನು ನೇರ ಬೌಂಡರಿಗಳು ಚಿಕ್ಕದಾಗಿದ್ದು ಅದರ ಲಾಭವನ್ನು ಬ್ಯಾಟರ್‌ಗಳು ಪಡೆದುಕೊಳ್ಳಬಹುದು. ಸೀಮ್ ಹಾಗೂ ಬೌನ್ಸ್‌ಗೆ ಅನುಕೂಲವಾಗಲಿದ್ದು ಸ್ಪಿನ್ನರ್‌ಗಳಿಗೆ ಕಡಿಮೆ ನೆರವು ದೊರೆಯಲಿದೆ. ಪಂದ್ಯದ ಸಮಯದಲ್ಲಿ ಮಳೆಯಾಗುವ ಯಾವುದೇ ಸಂಭವವಿಲ್ಲ.

ಸಂಭಾವ್ಯ ಪ್ಲೇಯಿಂಗ್ XI:

ಶ್ರೀಲಂಕಾ: ದನುಷ್ಕ ಗುಣತಿಲಕ, ಪಥುಮ್‌ ನಿಸಾಂಕ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಚರಿತ್ ಅಸಲಂಕಾ, ಭನುಕಾ ರಾಜಪಕ್ಷ, ದಸುನ್‌ ಶನಕ (ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ಮಹೀಶ ತೀಕ್ಷಣ, ದಿಲ್ಶನ್ ಮಧುಶಂಕ, ಮತೀಶ ಪತಿರಣ.

ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್‌ಕೀಪರ್), ಫಖರ್ ಜಮಾನ್, ಇಫ್ತಿಕಾರ್ ಅಹ್ಮದ್, ಶದಾಬ್ ಖಾನ್, ಮೊಹಮ್ಮದ್ ನವಾಜ್, ಆಸಿಫ್ ಅಲಿ, ಕುಶ್ದಿಲ್ ಶಾ, ಹ್ಯಾರಿಸ್ ರೌಫ್, ನಸೀಮ್ ಶಾ, ಮೊಹಮ್ಮದ್ ಹಸ್ನೈನ್.

ಪಂದ್ಯ ಆರಂಭ: ಸಂಜೆ 7.30

Previous Post

ತಾಲಿಬಾನ್ ತರಬೇತಿ ವೇಳೆ ಹೆಲಿಕಾಪ್ಟರ್ ಪತನ – ಮೂವರು ಸಾವು

Next Post

ED Raid: ಕೋಲ್ಕತ್ತಾದಲ್ಲಿ ಇಡಿ ದಾಳಿ, ಎಲ್ಲೆಲ್ಲೂ ಕಂತೆ ಕಂತೆ ನೋಟುಗಳು, ಎಣಿಸಿ ಎಣಿಸಿ ಸುಸ್ತಾದ ಅಧಿಕಾರಿಗಳು

Next Post
ED Raid: ಕೋಲ್ಕತ್ತಾದಲ್ಲಿ ಇಡಿ ದಾಳಿ, ಎಲ್ಲೆಲ್ಲೂ ಕಂತೆ ಕಂತೆ ನೋಟುಗಳು, ಎಣಿಸಿ ಎಣಿಸಿ ಸುಸ್ತಾದ ಅಧಿಕಾರಿಗಳು

ED Raid: ಕೋಲ್ಕತ್ತಾದಲ್ಲಿ ಇಡಿ ದಾಳಿ, ಎಲ್ಲೆಲ್ಲೂ ಕಂತೆ ಕಂತೆ ನೋಟುಗಳು, ಎಣಿಸಿ ಎಣಿಸಿ ಸುಸ್ತಾದ ಅಧಿಕಾರಿಗಳು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.