Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

Anti Conversion Bill: ವಿಧಾನ ಪರಿಷತ್​ನಲ್ಲಿ ಇಂದು ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸಿದ್ಧತೆ

editor tv by editor tv
September 15, 2022
in ರಾಜ್ಯ, ಸುದ್ದಿ
0
Anti Conversion Bill: ವಿಧಾನ ಪರಿಷತ್​ನಲ್ಲಿ ಇಂದು ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸಿದ್ಧತೆ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ವಿಧಾನ ಪರಿಷತ್​ನಲ್ಲಿ ಗುರುವಾರ (ಸೆ 15) ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಆಡಳಿತಾರೂಢ ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ಮಂಡನೆಗೆ ಪೂರ್ವಭಾವಿಯಾಗಿ ನಿನ್ನೆ (ಸೆ 14) ನಗರದ ಚಾಮರಾಜಪೇಟೆಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (Rashtriya Swayamsevak Sangh – RSS) ಕಚೇರಿಯಲ್ಲಿ ವಿಧಾನ ಪರಿಷತ್​ನ ಬಿಜೆಪಿ ಸದಸ್ಯರ ಸಭೆ ನಡೆಯಿತು. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕೇಶವಕೃಪಾದಲ್ಲಿ ವಿಧೇಯಕ ಮಂಡನೆ ವೇಳೆ ಪ್ರಬಲವಾಗಿ ಸಮರ್ಥಿಸಿಕೊಳ್ಳುವ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ವಿಧಾನ ಪರಿಷತ್​ ಬಿಜೆಪಿ ಸದಸ್ಯರಿಗೆ ಈ ಸಂಬಂಧ ಆರ್​ಎಸ್​ಎಸ್​ ನಿರ್ದೇಶನ ನೀಡಿದೆ. ವಿಧಾನ ಪರಿಷತ್​ನಲ್ಲಿ ಇಂದು ಪ್ರಶೋತ್ತರ ಕಲಾಪ ನಂತರ ವಿಧೇಯಕ ಮಂಡನೆಯಾಗುವ ಸಾಧ್ಯತೆಯಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ವಿಧೇಯಕವನ್ನು ಮಂಡಿಸಲಿದ್ದಾರೆ.

ಆರ್​ಎಸ್​ಎಸ್​ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಸಮಾಜ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್​ನ ಸರ್ಕಾರಿ ಮುಖ್ಯ ಸಚೇತಕ ವೈ.ಎ.ನಾರಾಯಣಸ್ವಾಮಿ, ಪರಿಷತ್​ ಸದಸ್ಯರಾದ ಎನ್.ರವಿಕುಮಾರ್, ತುಳಸಿ ಮುನಿರಾಜುಗೌಡ, ಕೆ.ಎಸ್.ನವೀನ್, ಪ್ರತಾಪಸಿಂಹ ನಾಯಕ, ಎಂ.ಕೆ.ಪ್ರಾಣೇಶ್​ ಉಪಸ್ಥಿತರಿದ್ದರು.

ಮತಾಂತರ ನಿಷೇಧ ವಿಧೇಯಕಕ್ಕೆ ಈಗಾಗಲೇ ವಿಧಾನಸಭೆಯಲ್ಲಿ ಅನುಮೋದನೆ ದೊರೆತಿದೆ. ಆದರೆ ವಿಧಾನ ಪರಿಷತ್​ನಲ್ಲಿ ಈವರೆಗೆ ಮಸೂದೆಯನ್ನು ಸರ್ಕಾರ ಮಂಡಿಸಿಲ್ಲ. ಮಸೂದೆ ಮಂಡಿಸುವ ತಡವಾದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯ ಮೂಲಕ ಕಾಯ್ದೆಯನ್ನು ಸರ್ಕಾರ ಜಾರಿಗೆ ತಂದಿತ್ತು. ಪ್ರಸ್ತುತ ವಿಧಾನ ಪರಿಷತ್​ನಲ್ಲಿ ಬಿಜೆಪಿಯ 41 ಸದಸ್ಯರಿದ್ದಾರೆ. ಕಾಂಗ್ರೆಸ್​ನ 26 ಮತ್ತು ಜೆಡಿಎಸ್​ನ 8 ಸದಸ್ಯರಿದ್ದಾರೆ. ಸಂಖ್ಯಾಬಲದಲ್ಲಿ ಮೇಲುಗೈ ಸಾಧಿಸಿರುವುದರಿಂದ ಮಸೂದೆಗೆ ಅಂಗೀಕಾರ ಪಡೆದುಕೊಳ್ಳುವ ಉತ್ಸಾಹ ಬಿಜೆಪಿಗೆ ಬಂದಿದೆ.

ಮತಾಂತರ ನಿಷೇಧ ಕಾಯ್ದೆಯ ಮುಖ್ಯಾಂಶಗಳು

1) ಮತಾಂತರ ಅಗಬಯಸುವ ವ್ಯಕ್ತಿ 60 ದಿನಗಳ ಮೊದಲು ಫಾರ್ಮ್ 1 ಅನ್ನು ಭರ್ತಿ ಮಾಡಿ ಜಿಲ್ಲಾಧಿಕಾರಿ ಅಥವಾ ಅಪರ ಜಿಲ್ಲಾಧಿಕಾರಿ ಬಳಿ ಮಾಹಿತಿ ನೀಡತಕ್ಕದ್ದು.

2) ಮತಾಂತರ ಮಾಡಿಸುವ ವ್ಯಕ್ತಿಯೂ ಕೂಡ ಒಂದು ತಿಂಗಳ ಮೊದಲು ಈಗಾಗಲೇ ಫಾರ್ಮ್ 2 ಅನ್ನು ಭರ್ತಿಮಾಡಿ ಜಿಲ್ಲಾಧಿಕಾರಿ ಅಥವಾ ಅಪರ ಜಿಲ್ಲಾಧಿಕಾರಿಗೆ ಮಾಹಿತಿ ನೀಡತಕ್ಕದ್ದು

3) ಮತಾಂತರವಾದ ಒಂದು ತಿಂಗಳ ಬಳಿಕ ಡಿಕ್ಲರೇಷನ್ ಫಾರ್ಮ್ ಅಥವಾ ಘೋಷಣಾಪತ್ರವನ್ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ಭರ್ತಿ ಮಾಡಿ ನೀಡತಕ್ಕದ್ದು

4) ಡಿಕ್ಲರೇಷನ್ ಮಾಡಿದ 21 ದಿನಗಳ ಬಳಿಕ ಮತಾಂತರ ಹೊಂದಿದ ವ್ಯಕ್ತಿ ಖುದ್ದು ಹಾಜರಾಗಿ ಗುರುತು ನೀಡತಕ್ಕದ್ದು

5) ಈ ವೇಳೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತಾಂತರೊತ್ತರ ಘಟನೆಯ ಸಂಪೂರ್ಣ ಘಟನೆಯನ್ನು ದಾಖಲಿಸತಕ್ಕದ್ದು

6) ತಕರಾರುಗಳಿದ್ದಲ್ಲಿ ತಕರಾರು ಎತ್ತಿದ ವ್ಯಕ್ತಿ ಹಾಗೂ ತಕರಾರಿನ ಸ್ವರೂಪವನ್ನ ದಾಖಲಿಸತಕ್ಕದ್ದು

7) ಮತಾಂತರ ಹೊಂದಿದವರಿಗೆ ಜಿಲ್ಲಾ ದಂಡಾಧಿಕಾರಿಗಳು ದೃಢೀಕರಿಸಿದ ಪ್ರತಿಗಳನ್ನು ನೀಡತಕ್ಕದ್ದು

8) ತಕರಾರುಗಳಿದ್ದ ಪಕ್ಷದಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಬಂಧ ಪಟ್ಟ ಇಲಾಖೆಗಳಾದ ಕಂದಾಯ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ಸೇರಿದಂತೆ ಇತರ ಸಂಬಂಧ ಪಟ್ಟ ಇಲಾಖೆಗಳಿಗೆ ಮಾಹಿತಿ ನೀಡತಕ್ಕದ್ದು.

9) ಮ್ಯಾಜಿಸ್ಟ್ರೇಟ್​‌ರಿಂದ ಮಾಹಿತಿ ಸ್ವಕರಿಸಿದ ಬಳಿಕ ಸಂಬಂಧಪಟ್ಟ ಇಲಾಖೆ ಮತಾಂತರ ಹೊಂದಿದ ವ್ಯಕ್ತಿಯ ಸಾಮಾಜಿಕ ಸ್ಥಾನಮಾನ ಹಾಗೂ ಸರ್ಕಾರದಿಂದ ಸಿಗುವ ಆರ್ಥಿಕ ಲಾಭಗಳ ಬಗ್ಗೆ ಸೂಕ್ತ ಕ್ರಮ ವಹಿಸುವುದು.

Previous Post

ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆ, ವೆಂಟಿಲೇಟರ್ ಸ್ಥಗಿತ: ಮೂವರು ರೋಗಿಗಳ ದಾರುಣ ಸಾವು

Next Post

ಸರ್ಕಾರದ ಡಬಲ್ ಗೇಮ್ ಬಯಲು – ಕೈ ಪ್ರಭಾವಿ ನಾಯಕ ಜಾರ್ಜ್ ಒತ್ತುವರಿ ಕಾಟಾಚಾರಕ್ಕೆ ತೆರವು

Next Post
ಸರ್ಕಾರದ ಡಬಲ್ ಗೇಮ್ ಬಯಲು – ಕೈ ಪ್ರಭಾವಿ ನಾಯಕ ಜಾರ್ಜ್ ಒತ್ತುವರಿ ಕಾಟಾಚಾರಕ್ಕೆ ತೆರವು

ಸರ್ಕಾರದ ಡಬಲ್ ಗೇಮ್ ಬಯಲು – ಕೈ ಪ್ರಭಾವಿ ನಾಯಕ ಜಾರ್ಜ್ ಒತ್ತುವರಿ ಕಾಟಾಚಾರಕ್ಕೆ ತೆರವು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.