Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಬರೀ ಕೋಮು ಭಾಷಣ ಬಿಟ್ಟು ನೀವೇನು ಮಾಡಿದ್ದೀರಿ?, ಭಟ್ಕಳ ಶಾಸಕ ಸುನೀಲ್‌ ನಾಯ್ಕ್‌ಗೆ ತಂಝೀಮ್‌ ಸಂಸ್ಥೆ ಪ್ರಶ್ನೆ

editor tv by editor tv
September 21, 2022
in ರಾಜ್ಯ, ಸುದ್ದಿ
0
ಬರೀ ಕೋಮು ಭಾಷಣ ಬಿಟ್ಟು ನೀವೇನು ಮಾಡಿದ್ದೀರಿ?, ಭಟ್ಕಳ ಶಾಸಕ ಸುನೀಲ್‌ ನಾಯ್ಕ್‌ಗೆ ತಂಝೀಮ್‌  ಸಂಸ್ಥೆ ಪ್ರಶ್ನೆ
1.9k
VIEWS
Share on FacebookShare on TwitterShare on Whatsapp

ಭಟ್ಕಳ (ಸೆ. 21): ಭಟ್ಕಳದ ಆಸರಕೇರಿಯ ನಿಚ್ಚಲಮಕ್ಕಿ ದೇವಸ್ಥಾನದ ದ್ವಾರ ನಿರ್ಮಾಣಕ್ಕೆ ಸಂಬಂಧಿಸಿ ತಂಝೀಮ್ ಯಾವುದೇ ರೀತಿಯ ಆಕ್ಷೇಪ ವ್ಯಕ್ತಪಡಿಸಿಲ್ಲ ಹಾಗೂ ಪುರಸಭೆಗೆ ದೂರನ್ನೂ ನೀಡಿಲ್ಲ. ಆದರೆ, ಶಾಸಕ ಸುನೀಲ್ ನಾಯ್ಕ್ ಉದ್ದೇಶಪೂರ್ವಕವಾಗಿ ಈ ಪ್ರಕರಣದಲ್ಲಿ ತಂಝೀಮ್ ಸಂಸ್ಥೆಯನ್ನು ಎಳೆದು ತರುತ್ತಿದ್ದಾರೆ ಎಂದು ಆರೋಪಿಸಿರುವ ತಂಝೀಮ್ ಸಂಸ್ಥೆ, ಶಾಸಕರ ವಿರುದ್ಧ ಕಿಡಿಕಾರಿದೆ. ಆಸರಕೇರಿಯ ನಿಚ್ಚಲಮಕ್ಕಿ ದೇವಸ್ಥಾನದ ದ್ವಾರ ನಿರ್ಮಾಣ ಸಂಬಂಧಿಸಿದಂತೆ ಉಂಟಾದ ವಿವಾದದಲ್ಲಿ ಶಾಸಕ ಸುನೀಲ್ ನಾಯ್ಕ್ ಉದ್ದೇಶಪೂರ್ವಕವಾಗಿ ತಂಝೀಮ್ ಸಂಸ್ಥೆ ಹಾಗೂ ಇಸ್ಲಾಂ ಧರ್ಮವನ್ನು ಎಳೆದು ತರುತ್ತಿದ್ದಾರೆ. ಇಂತಹ ಸಣ್ಣ ಮನಸ್ಥಿತಿ ರಾಜಕಾರಣ ಶೋಭೆ ತರುವಂತಹದ್ದಲ್ಲ ಎಂದು ತಂಝೀಮ್ ಸಂಸ್ಥೆಯ ಅಧ್ಯಕ್ಷ ಎಸ್.ಎಂ.ಸೈಯ್ಯದ್ ಪರ್ವಾಝ್ ಹಾಗೂ ಪ್ರಧಾನ ಕಾರ್ಯದರ್ಶಿ ಅಬ್ದುಲ್‌ ರವೀದ್, ಎಂ.ಜೆ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಂಝೀಮ್ ಸಂಸ್ಥೆ ಯಾವಾಗಲೂ ಸೌಹಾರ್ದತೆ, ಶಾಂತಿಯಿಂದ ಪರಸ್ಪರ ಕೂಡಿ ಬಾಳುವಂತೆ ಮಾಡಿದ ಇತಿಹಾಸ ಹೊಂದಿದೆ ಹೊರತು ವಿನಾಕಾರಣ ನಿಮ್ಮ ಹಾಗೆ ಇತರರ ಧಾರ್ಮಿಕ ನಂಬಿಕೆಯ ವಿಷಯದಲ್ಲಿ ಮೂಗು ತೂರಿಸುವುದು ತಂಝೀಮ್ ಮತ್ತು ಮುಸ್ಲಿಂ ಸಮುದಾಯದ ಜಾಯಮಾನವಲ್ಲ. ನೀವು ಬೇಕಾದರೆ ನಿಮ್ಮ ರಾಜಕೀಯ ಲಾಭಕ್ಕಾಗಿ ಏನು ಬೇಕಾದರೂ ಮಾಡಿಕೊಳ್ಳಿ. ಇಲ್ಲಿನ ಹಿಂದೂ-ಮುಸ್ಲಿಮರ ನಡುವೆ ಹುಳಿ ಹಿಂಡುವಲ್ಲಿ ನೀವು ಯಶಸ್ವಿಯಾಗಿದ್ದೀರಿ ಎಂದು ತಿಳಿದುಕೊಂಡರೆ ಅದು ನಿಮ್ಮ ಮೂರ್ಖತನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾನೂನು ಪ್ರಕಾರ ಎಲ್ಲಿ ಬೇಕಾದರೂ ಮಹಾದ್ವಾರ ಕಟ್ಟಿಕೊಳ್ಳಿ: ನೀವು ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಿಲ್ಲೊಂದು ರೀತಿಯ ಕೋಮು ಪ್ರಚೋದಕ ಮಾತುಗಳನ್ನು ಆಡುತ್ತಾ ಬಂದಿದ್ದೀರಿ. ಕ್ಷೇತ್ರದ ಅಭಿವೃದ್ಧಿಯ ಕೆಲಸ ಬಿಡಿ, ನಿಮಗೆ ಓಟು ಕೊಟ್ಟು ನಿಮ್ಮನ್ನು ಆರಿಸಿಕೊಟ್ಟ ಜನರನ್ನೂ ನೆಮ್ಮದಿಯಾಗಿ ಬದುಕಲು ಬಿಡುತ್ತಿಲ್ಲ, ಎಲ್ಲೆಂದರಲ್ಲಿ ಮೂಗು ತೂರಿಸುತ್ತ ಇಡೀ ವ್ಯವಸ್ಥೆಯನ್ನೇ ಹಾಳು ಮಾಡಿದ್ದೀರಿ. ಈಗ ಚುನಾವಣೆಗೆ ಕೇವಲ ಕೆಲವು ತಿಂಗಳು ಬಾಕಿ ಇರಬೇಕಾದರೆ ಮಹಾದ್ವಾರದ ನಿರ್ಮಾಣದ ನಾಟಕವಾಡುತ್ತಿದ್ದೀರಿ. ಮಹಾದ್ವಾರ ನಿರ್ಮಾಣಕ್ಕೆ ತಂಝೀಮ್ ಆಗಲಿ ಮುಸ್ಲಿಮ್ ಸಮುದಾಯವಾಗಲಿ ಯಾವತ್ತೂ ಆಕ್ಷೇಪ ವ್ಯಕ್ತಪಡಿಸಿಲ್ಲ. ಮುಂದೆಯೂ ಆಕ್ಷೇಪಿಸುವುದಿಲ್ಲ. ಪುರಸಭೆಯಲ್ಲಿ ಕಾನೂನು ಪ್ರಕಾರ ಅಧಿಕೃತವಾಗಿ ಅನುಮತಿ ಪಡೆದು ನೀವು ಎಲ್ಲಿ ಬೇಕಾದರೂ ಏನು ಬೇಕಾದರೂ ಕಟ್ಟಿಕೊಳ್ಳಿ. ಅಮಾಯಕ ಹಿಂದೂ ಸಹೋದರರನ್ನು ನೀವು ಯಾಮಾರಿಸುವುದನ್ನು ಬಿಟ್ಟುಬಿಡಿ. ಮುಂದೆ ನೀವು ಆಯ್ಕೆಯಾಗುತ್ತೀರೋ ಅಥವಾ ನಿಮಗೆ ಟಿಕೆಟು ಸಿಗುತ್ತದೋ ಇಲ್ಲವೋ ಗೊತ್ತಿಲ್ಲ. ಉಳಿದ ದಿನಗಳಷ್ಟಾದರೂ ಸ್ವಲ್ಪ ಜನಹಿತ ಕಾರ್ಯಗಳನ್ನು ಮಾಡಿ ಭಟ್ಕಳ ಕ್ಷೇತ್ರದ ಅಭಿವೃದ್ಧಿಗೆ ಒತ್ತು ಕೊಡಿ. ಅದನ್ನು ಬಿಟ್ಟು ತಂಝೀಮ್ ಮತ್ತು ಮುಸ್ಲಿಮ್ ಸಮುದಾಯಕ್ಕೆ ಸಂಬಂಧ ಪಡೆದ ವಿಷಯಗಳಲ್ಲಿ ವಿವಾದಗಳನ್ನು ತಮ್ಮ ಮೈಮೇಲೆ ಹಾಕಿಕೊಳ್ಳಬೇಡಿ ಎಂದು ತಂಝೀಮ್‌ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಯಾವುದೇ ಸಂದರ್ಭದಲ್ಲಿ ಹಿಂದೂ (Hindu) ಬಾಂಧವರ ಧಾರ್ಮಿಕ ವಿಷಯಗಳಿಗೆ ಧಕ್ಕೆಯಾಗದ ರೀತಿಯಲ್ಲಿ ಅವರನ್ನು ಗೌರವಿಸುತ್ತ ಬಂದಿರುವ ನೂರಾರು ವರ್ಷಗಳ ಇತಿಹಾಸ ನಮ್ಮದು. ಇದಕ್ಕೆ ಸಾಕಷ್ಟು ಉದಾಹರಣೆಗಳು ಸಹ ಕೊಡಬಹುದು. ಚನ್ನಪಟ್ಟಣ ಹನುಮಂತ (Chennapattana Hanumantha Temple) ದೇವಸ್ಥಾನವಾಗಲಿ, ಮಾರಿಕಟ್ಟೆ ದೇವಸ್ಥಾನವಾಗಲಿ ಇಲ್ಲಿನ ಹಿಂದೂ-ಮುಸ್ಲಿಂ ಪರಸ್ಪರ ಸಹಕಾರದಿಂದಲೇ ನಡೆಯುತ್ತಾ ಬಂದಿವೆ ಎನ್ನುವುದಕ್ಕೆ ಸಾಕಷ್ಟು ಉದಾಹರಣೆಗಳಿವೆ. ಅಲ್ಲದೇ, ಆಸರಕೇರಿಯ ನಿಚ್ಚಲಮಕ್ಕಿ ದೇವಸ್ಥಾನದ ಮುಂದಿನ ರಸ್ತೆಯ ತಿರುವು ನಿರ್ಮಾಣ ಮಾಡಿದಾಗಲೂ ನಾವು ಯಾವುದೇ ಆಕ್ಷೇಪಗಳನ್ನು ಎತ್ತಿಲ್ಲ. ಅಲ್ಲಿ ನಿಜಕ್ಕೂ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಆದರೂ ಕೂಡ ನಾವು ಸಹಿಸಿಕೊಂಡು ಬಂದಿದ್ದೇವೆ. ಇದು ಇಲ್ಲಿನ ನಾಮಧಾರಿ ಸಮುದಾಯ ನಮ್ಮ ಮೇಲೆ ಹೊಂದಿರುವ ಪ್ರೀತಿ, ವಿಶ್ವಾಸದ ಫಲವಾಗಿದೆ. ಈಗ ನೀವು ರಾಜಕೀಯ ದುರ್ಲಾಭದ ಉದ್ದೇಶದಿಂದ ಜವಾಬ್ದಾರಿತ ಸ್ಥಾನದಲ್ಲಿದ್ದು ಹೀಗೆಲ್ಲಾ ಬೇಜವಾಬ್ದಾರಿಯುತವಾಗಿ ವರ್ತಿಸಿದರೆ ಜನರು ಹಾಗೂ ಭಗವಂತ ನಿಮಗೆ ಕ್ಷಮಿಸುವುದಿಲ್ಲ. ನೀವು ಕಾನೂನು ರೀತಿಯಲ್ಲಿ ದ್ವಾರ ನಿರ್ಮಾಣಕ್ಕೆ ಅನುಮತಿ ಪಡೆದುಕೊಂಡು ನಿರ್ಮಾಣ ಮಾಡಿ ಎಂದು ಹೇಳಿದೆ.

Previous Post

ಉಳ್ಳಾಲ ನಗರಸಭೆಯ ದುರಾಡಳಿತ ಮತ್ತು ಅವ್ಯವಹಾರದ ವಿರುದ್ಧ ನಗರಸಭಾ ಕಛೇರಿಗೆ ಮುತ್ತಿಗೆ : SDPI

Next Post

ಮಂಗಳೂರು: SDPI,PFI ಜಿಲ್ಲಾ ಕಚೇರಿ ಸೇರಿದಂತೆ ನಾಯಕರ ಮನೆ ಮೇಲೆ ಎನ್ಐಎ ದಾಳಿ

Next Post
ಮಂಗಳೂರು: SDPI,PFI ಜಿಲ್ಲಾ ಕಚೇರಿ ಸೇರಿದಂತೆ ನಾಯಕರ ಮನೆ ಮೇಲೆ ಎನ್ಐಎ ದಾಳಿ

ಮಂಗಳೂರು: SDPI,PFI ಜಿಲ್ಲಾ ಕಚೇರಿ ಸೇರಿದಂತೆ ನಾಯಕರ ಮನೆ ಮೇಲೆ ಎನ್ಐಎ ದಾಳಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.