Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಚುನಾವಣೆ

Karnataka Assembly Elections: ಬೆಳ್ತಂಗಡಿಯಲ್ಲಿ ಪೂಂಜಾ ಸೋಲಿಸಲು ಈ ಅಸ್ತ್ರ ಬಳಸುತ್ತಾ ಕಾಂಗ್ರೆಸ್​?

editor tv by editor tv
September 26, 2022
in ಚುನಾವಣೆ, ಸುದ್ದಿ
0
Karnataka Assembly Elections: ಬೆಳ್ತಂಗಡಿಯಲ್ಲಿ ಪೂಂಜಾ ಸೋಲಿಸಲು ಈ ಅಸ್ತ್ರ ಬಳಸುತ್ತಾ ಕಾಂಗ್ರೆಸ್​?
1.9k
VIEWS
Share on FacebookShare on TwitterShare on Whatsapp

ಕೇಸರಿ ಪಕ್ಷ ತನ್ನ ಗಟ್ಟಿ ಬೇರುಗಳನ್ನು ಹೊಂದಿರುವ ದಕ್ಷಿಣ ಕನ್ನಡದಲ್ಲಿ ತನ್ನ ಪಾರುಪತ್ಯ ಮುಂದುವರೆಸುವ ಸಿದ್ಧತೆ ಈಗಾಗಲೇ ಆರಂಭಿಸಿದೆ. ಪ್ರತಿ ಪಕ್ಷಗಳ ಅಸ್ತ್ರದ ನಡುವೆಯೂ ಜನರ ವಿಶ್ವಾಸ ಗಳಿಸಲು ತಂತ್ರಗಳನ್ನು ಹೆಣೆಯುತ್ತಿದೆ. ಸದ್ಯ ಕರಾವಳಿ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ (Belthangady) ರಾಜಕೀಯ ಸ್ಥಿತಿಗತಿ ಹೇಗಿದೆ? ಇಲ್ಲಿನ ಟಿಕೆಟ್​ ಆಕಾಂಕ್ಷಿಗಳು ಯಾರು? ಪಕ್ಷ ಯಾರನ್ನು ತನ್ನ ಅಭ್ಯರ್ಥಿಯನ್ನಾಗಿಸಲು ಬಯಸುತ್ತಿದೆ? ಜಾತಿ ಲೆಕ್ಕಾಚಾರ ಹೇಗಿದೆ ಎಂಬಿತ್ಯಾದಿ ಪ್ರಶ್ನೆಗಳ ಉತ್ತರ ಹೀಗಿದೆ ನೋಡಿ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಇನ್ನು ಕೆಲವೇ ಸಮಯ ಬಾಕಿ ಇದೆ. ಹೀಗಿರುವಾಗ ಇತ್ತ ರಾಜಕೀಯ ನಾಯಕರು ಮತದಾರರನ್ನು ನೆನಪಿಸಿಕೊಳ್ಳಲು ಆರಂಭಿಸಿದ್ದಾರೆ. ಒಂದೆಡೆ ವಿರೋಧ ಪಕ್ಷಗಳು ಆಡಳಿತ ಪಕ್ಷದ ವೈಫಲ್ಯಗಳನ್ನು ಜನರಿಗೆ ತೋರಿಸುತ್ತಿದ್ದರೆ, ಇತ್ತ ಆಡಳಿತ ಪಕ್ಷ ಕೊನೆಯ ಪ್ರಯತ್ನವೆಂಬಂತೆ ಅಭಿವೃದ್ಧಿ ಕಾರ್ಯಕ್ರಮಗಳತ್ತ ಚಿತ್ತ ನೆಟ್ಟಿದೆ. ಈ ಪೈಪೋಟಿಯಲ್ಲಿ ಯಾರು ಯಶಸ್ಸು ಪಡೆಯುತ್ತಾರೆಂಬುವುದೇ ಕುತೂಹಲದ ಪ್ರಶ್ನೆ. ಇನ್ನು ಹೀಗಿರುವಾಗ ಕೇಸರಿ ಪಕ್ಷ ತನ್ನ ಗಟ್ಟಿ ಬೇರುಗಳನ್ನು ಹೊಂದಿರುವ ದಕ್ಷಿಣ ಕನ್ನಡದಲ್ಲಿ ಪಾರುಪತ್ಯ ಮುಂದುವರೆಸುವ ಸಿದ್ಧತೆ ಈಗಾಗಲೇ ಆರಂಭಿಸಿದೆ. ಪ್ರತಿ ಪಕ್ಷಗಳ ಅಸ್ತ್ರದ ನಡುವೆಯೂ ಜನರ ವಿಶ್ವಾಸ ಗಳಿಸಲು ತಂತ್ರಗಳನ್ನು ಹೆಣೆಯುತ್ತಿದೆ. ಸದ್ಯ ಕರಾವಳಿ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ (Belthangady) ರಾಜಕೀಯ ಸ್ಥಿತಿಗತಿ ಹೇಗಿದೆ? ಇಲ್ಲಿನ ಟಿಕೆಟ್​ ಆಕಾಂಕ್ಷಿಗಳು ಯಾರು? ಪಕ್ಷ ಯಾರನ್ನು ತನ್ನ ಅಭ್ಯರ್ಥಿಯನ್ನಾಗಿಸಲು ಬಯಸುತ್ತಿದೆ? ಜಾತಿ ಲೆಕ್ಕಾಚಾರ ಹೇಗಿದೆ ಎಂಬಿತ್ಯಾದಿ ಪ್ರಶ್ನೆಗಳ ಉತ್ತರ ಹೀಗಿದೆ ನೋಡಿ.

ಚಾರ್ಮಾಡಿ-ಶಿರಾಡಿ ಮತ್ತು ಕುದುರೆಮುಖ ಘಟ್ಟದ ಬೆಟ್ಟಸಾಲುಗಳ ಬುಡದಲ್ಲಿರುವ ಬೆಳ್ತಂಗಡಿ ದಕ್ಷಿಣ ಕನ್ನಡದ ಅತಿ ವಿಸ್ತಾರವಾದ ತಾಲೂಕು. ಇಲ್ಲಿನ ಬಹುತೇಕ ಜನರು ತೋಟಗಾರಿಕೆ, ಹೈನುಗಾರಿಕೆ, ಕೃಷಿ ಕೂಲಿ ಮಾಡಿಯೇ ಜೀವನ ಸಾಗಿಸುತ್ತಿದ್ದಾರೆ. ಇನ್ನು ಹಚ್ಚ ಹಸಿರಿನ ಪ್ರಕೃತಿಯ ಮಧ್ಯೆ ಶಾಂತಿಯುತವಾಗಿದ್ದ ಬೆಳ್ತಂಗಡಿ ಇತ್ತೀಚೆಗೆ ಕೋಮು ಸೂಕ್ಷ್ಮ ಪ್ರದೇಶವಾಗಿ ಮಾರ್ಪಾಡಾಗಿದೆ. ಇತರ ತಾಲೂಕುಗಳಲ್ಲಿ ಸದ್ದು ಮಾಡುವ ಕೋಮು ಗಲಭೆಯ ಬಿಸಿ ಇಲ್ಲಿಯೂ ಆವರಿಸುತ್ತದೆ. ಹೀಗಾಗಿ ಧರ್ಮಗಳ ನಡುವಿನ ಕಲಹ ಇಲ್ಲಿಯೂ ಸಾಮಾನ್ಯವಾಗಿದೆ. ಅಚ್ಚ ತುಳುವ ಸಂಸ್ಕೃತಿಯ ಬೆಳ್ತಂಗಡಿಯ ಉದ್ದಗಲದಲ್ಲಿ ಭೂತಕೋಲ, ದೈವಾರಾಧನೆ, ನಾಗಾರಾಧನೆಯಷ್ಟೇ ಪ್ರಖರವಾಗಿ ತೆಂಕುತಿಟ್ಟಿನ ಯಕ್ಷಗಾನದ ಗಾನ-ತಾಳ-ನೃತ್ಯ ವೈಭವ ಹಾಸುಹೊಕ್ಕಾಗಿದೆ. ತುಳು ಇಲ್ಲಿಯ ಜನರು ಆಡುವ ಪ್ರಮುಖ ಭಾಷೆಯಾಗಿದೆ.

ಚಿಕ್ಕಮಗಳೂರು ಜಿಲ್ಲೆಯೊಂದಿಗೆ ಗಡಿ ಹಂಚಿಕೊಂಡಿರುವ ಬೆಳ್ತಂಗಡಿಯಲ್ಲಿ 84 ಗ್ರಾಮಗಳಿವೆ. ಇನ್ನು ಇಲ್ಲಿನ ರಾಜಕಾರಣವನ್ನು ಗಮನಿಸಿದರೆ, ದಕ್ಷಿಣ ಕನ್ನಡದ ಉಳಿದ ಕ್ಷೇತ್ರಗಳಂತೆ ಇದು ಕೇಸರಿ ಪಡೆಯ ಭದ್ರಕೋಟೆ ಅಲ್ಲ ಎಂಬುವುದು ಈವರೆಗಿನ ಚುನಾವಣೆಗಳ ಫಲಿತಾಂಶ ಸ್ಪಷ್ಟಪಡಿಸಿದೆ. ಕೈ ಹಾಗೂ ಕಲಮ ಪಾಳಯ ನಡುವಿನ ಪೈಪೋಟಿ ಇಲ್ಲಿ ಮುಂದುವರೆದಿದೆ. ಇನ್ನು ಭಾರತದ ಪ್ರಖ್ಯಾತ ದೇವಸ್ಥಾನ ಎಂದೆನಿಸಿಕೊಂಡಿರುವ ಧರ್ಮಸ್ಥಳ ದೇವಾಲಯವೂ ಇಲ್ಲಿನ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸಿದೆ. ಶ್ರೀ ಮಂಜುನಾಥ ಸ್ವಾಮಿಯ ಆಶೀರ್ವಾದ ಇಲ್ಲದೆ ಬೆಳ್ತಂಗಡಿಯಲ್ಲಿ ರಾಜಕಾರಣ ಮಾಡುವುದು ಅಥವಾ ಆಕಾಂಕ್ಷಿಗಳು ಯಾವುದೇ ಪಕ್ಷದ ಟಿಕೆಟ್ ಗಳಿಸಿಕೊಳ್ಳುವುದು ಕಷ್ಟವೆಂಬುದು ಸಾರ್ವತ್ರಿಕ ಅನಿಸಿಕೆಯಾಗಿದೆ. .

ಪ್ರಮುಖ ಆಕಾಂಕ್ಷಿಗಳು ಯಾರು?

ಬೆಳ್ತಂಗಡಿ ಕ್ಷೇತ್ರದಲ್ಲಿ ಕಾಂಗ್ರೆಸ್​ ಹಾಗೂ ಬಿಜೆಪಿ ನಡುವೆ ಸ್ಪರ್ಧೆ ನಡೆಯುತ್ತಿದ್ದು, ಇವೆರಡು ಪಕ್ಷದ ಅಭ್ಯರ್ಥಿಗಳೇ ಹೆಚ್ಚಿನ ಪ್ರಮಾಣದ ಮತ ಗಳಿಸುತ್ತಾರೆ. ಇಲ್ಲಿನ ಪ್ರಮುಖ ನಾಯಕರು ತಮ್ಮದೇ ಬಣ ಕಟ್ಟಿಕೊಂಡಿದ್ದು, ಟಿಕೆಟ್​ಗಾಗಿ ಕಿತ್ತಾಡುವುದು ಪ್ರತೀ ಬಾರಿ ಚುನಾವಣೆಯಲ್ಲಿ ಕಂಡು ಬರುತ್ತದೆ ಎನ್ನಲಾಗಿದೆ,

ಬಿಜೆಪಿ ಟಿಕೆಟ್​ ಆಕಾಂಕ್ಷಿಗಳು ಯಾರು?

ಹರೀಶ್​ ಪೂಂಜಾ, ಹಾಲಿ ಶಾಸಕ: ಕಳೆದ ಚುನಾವಣೆಯಲ್ಲಿ ದಕ್ಷಿಣ ಕನ್ನಡದಿಂದ ಹಲವಾರು ಹೊಸ ಮುಖಗಳು ಗೆದ್ದು ಬಂದಿದ್ದವು. ಅದರಲ್ಲಿ ಬೆಳ್ತಂಗಡಿ ಶಾಸಕ ಹರೀಶ್​ ಪೂಂಜಾ ಕೂಡಾ ಒಬ್ಬರು. ಮೊದಲ ಬಾರಿ ಗೆಲುವು ಸಾಧಿಸಿದ ಅವರು ವಿಧಾನಸಭೆ ಪ್ರವೇಶಿಸಿದ್ದಾರೆ. ಇನ್ನು ಈ ಕ್ಷೇತ್ರದಲ್ಲಿ ಹರೀಶ್ ಪೂಂಜಾ, ಇವರ ಜನಪ್ರಿಯತೆ ಯಾವ ಮಟ್ಟಕ್ಕಿದೆ ಎಂದರೆ ರಕ್ಷಿಣ ಕನ್ನಡದ ಬೇರೆ ಕ್ಷೇತ್ರದಿಂದ ಸ್ಪರ್ಧಿಸಿದರೂ ಗೆಲ್ಲಬಹುದಾದ ತಾಕತ್ತುಳ್ಳವರಾಗಿದ್ದಾರೆ. ಈ ಹಿಂದೆ ಗಣಿ ಧಣಿ ಜನಾರ್ದನ ರೆಡ್ಡಿ ಕಂಪನಿಯ ಲೀಗಲ್ ಎಡ್ವೈಸರ್ ತಂಡದಲ್ಲಿ ಜೂನಿಯರ್ ಆಗಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ. ಹೀಗಿರುವಾಗ ಈ ಬಾರಿಯೂ ಬಿಜೆಪಿ ಅಭ್ಯರ್ಥಿಯಾಗಿ ಪೂಂಜಾ ಕಣಕ್ಕಿಳಿಯುವ ಸಾಧ್ಯತೆ ಇದೆ.

ವಸಂತ್ ಬಂಗೇರ: ಮಾಜಿ ಶಾಸಕರಾಗಿರುವ ವಸಂತ್ ಬಂಗೇರ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್​ನ ಟಿಕೆಟ್​ ಆಕಾಂಕ್ಷಿಯಾಗಿದ್ದಾರೆ. ಆರಂಭದಲ್ಲಿ ಬಿಜೆಪಿ ನಾಯಕರಾಗಿದ್ದ ವಸಂತ್ ಬಂಗೇರ ತದನಂತರ ಜೆಡಿಎಸ್​ಗೆ ಸೇರಿದ್ದರು. ಬಳಿಕ ಇಲ್ಲಿಯೂ ಅಸಮಾಧಾನಗೊಂಡಿದ್ದ ಅವರು ಕಾಂಗ್ರೆಸ್​ ಸೇರ್ಪಡೆಯಾಗಿದ್ದರು, ಮತದಾರರು ನಾಯಕನೊಬ್ಬನನ್ನು ನೋಡಿ ಮತ ನೀಡುತ್ತಾರೆ ಎಂಬುವುದಕ್ಕೆ ವಸಂತ್ ಬಂಗೇರ ಸೂಕ್ತ ಸಾಕ್ಷಿಯಾಗಿದ್ದಾರೆ. ಪಕ್ಷ ನೋಡದೇ ಜನರು ಅವರಿಗೆ ಮತ ನೀಡಿದ್ದಾರೆ.  ಅಲ್ಲದೇ ಬಿಜೆಪಿಯಲ್ಲಿ ಟಿಕೆಟ್ ಸಿಗದೆ ಹತಾಶೆಯಿಂದ ಕಾಂಗ್ರೆಸ್​ ಸೇರಿರುವ ಪ್ರಬಲ ಒಕ್ಕಲಿಗ ಸಮುದಾಯದ ರಂಜನ್ ಗೌಡ ಅವರೂ ವಸಂತ ಬಂಗೇರರ ಬೆನ್ನಿಗಿದ್ದಾರೆನ್ನಲಾಗಿದೆ.

ರಕ್ಷಿತ್ ಶಿವರಾಂ: ಇವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಬಿ. ಕೆ. ಹರಿಪ್ರಸಾದ್​ ಅವರ ಸಹೋದರ ಬಿ.ಕೆ.ಶಿವರಾಮ್ ಮಗ. ರಕ್ಷಿತ್ ತಾಯಿಯ ತವರು ಬೆಳ್ತಂಗಡಿಯಲ್ಲಿದೆ. ರಕ್ಷಿತ್ ಓದಿ ಬೆಳೆದಿದ್ದು ಬೆಳ್ತಂಗಡಿಯಲ್ಲಿ. ಕಾಂಗ್ರೆಸ್ ಶಾಸಕರಾಗುವ ಆಸೆಯಲ್ಲಿ ರಾಜಕಾರಣ ಮಾಡುತ್ತಿರುವ ರಕ್ಷಿತ್‌ಗೆ ಡಿಸಿಸಿ ಅಧ್ಯಕ್ಷ ಹರೀಶ್‌ ಕುಮಾರ್ ಬಣದ ಬೆಂಬಲವಿದೆಯೆನ್ನಲಾಗುತ್ತಿದೆ.

ಇನ್ನು ಬೆಳ್ತಂಗಡಿ ಕ್ಷೇತ್ರದ ಒಟ್ಟು ಮತರಾರರೆಷ್ಟು? ಯಾವ ಜಾತಿಯ ಜನರಿದ್ದಾರೆ ಎಂಬ ಮಾಹಿತಿ ಇಲ್ಲಿದೆ ನೋಡಿ.

ಒಟ್ಟು ಮತದಾರರು218880
ಬಿಲ್ಲವ60000
ಒಕ್ಕಲಿಗ45000
ಮುಸ್ಲಿಂ30000
ಎಸ್​ಸಿ/ಎಸ್​ಟಿ25000
ವಿಶ್ವಕರ್ಮ4000
ಕುಲಾಲ್3000

2018 ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್​ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿತ್ತು. ಅಂತಿಮವಾಗಿ ಬಿಜೆಪಿಯ ಹರೀಶ್ ಪೂಂಜಾ ಗೆಲುವು ಸಾಧಿಸಿದ್ದರು. ಹೀಗಿತ್ತು 2018ರ ಫಲಿತಾಂಶ.

ಅಭ್ಯರ್ಥಿ ಹೆಸರುಮತಗಳು
ಬಿಜೆಪಿಹರೀಶ್ ಪೂಂಜಾ98,417
ಕಾಂಗ್ರೆಸ್ವಸಂತ್ ಬಂಗೇರ75,443

Previous Post

ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವುದಕ್ಕಾಗಿ ಜೆಡಿಯು, ಅಕಾಲಿದಳ ಮತ್ತು ಶಿವಸೇನಾ ಬಿಜೆಪಿ ಮೈತ್ರಿ ತೊರೆದದ್ದು: ತೇಜಸ್ವಿ ಯಾದವ್

Next Post

ಯಾವುದೇ ಪ್ರಚಾರವಿಲ್ಲದೆ ಸಮಾಜ ಸೇವೆಯಲ್ಲಿ ತೊಡಗಿದೆ ಎಂ ಎನ್ ಜಿ ಫೌಂಡೇಶನ್ (ರಿ) ಸಂಸ್ಥೆ

Next Post
ಯಾವುದೇ ಪ್ರಚಾರವಿಲ್ಲದೆ ಸಮಾಜ ಸೇವೆಯಲ್ಲಿ ತೊಡಗಿದೆ ಎಂ ಎನ್ ಜಿ ಫೌಂಡೇಶನ್ (ರಿ) ಸಂಸ್ಥೆ

ಯಾವುದೇ ಪ್ರಚಾರವಿಲ್ಲದೆ ಸಮಾಜ ಸೇವೆಯಲ್ಲಿ ತೊಡಗಿದೆ ಎಂ ಎನ್ ಜಿ ಫೌಂಡೇಶನ್ (ರಿ) ಸಂಸ್ಥೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.