Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಆತನಿಗಿನ್ನೂ 22 ವರ್ಷ, ಸೌದಿ ಅರೇಬಿಯಾದಲ್ಲಿ ವಾರ್ಷಿಕ 58 ಲಕ್ಷ ರೂ ಸಂಬಳದ ದೊಡ್ಡ ಕೆಲಸ ಸಿಕ್ಕಿತ್ತು, ಆದರೆ ಹೃದಯಾಘಾತದಿಂದ ಹಠಾತ್ ಸಾವು!

editor tv by editor tv
September 27, 2022
in ವಿದೇಶ, ಸುದ್ದಿ
0
ಆತನಿಗಿನ್ನೂ 22 ವರ್ಷ, ಸೌದಿ ಅರೇಬಿಯಾದಲ್ಲಿ ವಾರ್ಷಿಕ 58 ಲಕ್ಷ ರೂ ಸಂಬಳದ ದೊಡ್ಡ ಕೆಲಸ ಸಿಕ್ಕಿತ್ತು, ಆದರೆ ಹೃದಯಾಘಾತದಿಂದ ಹಠಾತ್ ಸಾವು!
1.9k
VIEWS
Share on FacebookShare on TwitterShare on Whatsapp

ತೆಲಂಗಾಣ ರಾಜ್ಯ ವೈದ್ಯಕೀಯ ಸೇವೆಗಳ ಮೂಲಸೌಕರ್ಯ ಅಭಿವೃದ್ಧಿ ನಿಗಮ (ಟಿಎಸ್‌ಎಂಎಸ್‌ಐಡಿಸಿ -TSMSIDC) ವ್ಯವಸ್ಥಾಪಕ ನಿರ್ದೇಶಕ ಕೆ. ಚಂದ್ರಶೇಖರ್ ರೆಡ್ಡಿ ಅವರ ಹಿರಿಯ ಪುತ್ರ ಕಟ್ಟಾ ಅಭಿಜಿತ್ ರೆಡ್ಡಿ ಹೃದಯಾಘಾತದಿಂದ ಚಿಕ್ಕ ವಯಸ್ಸಿಗೇ ಮೃತಪಟ್ಟಿದ್ದಾರೆ. ಅಭಿಜಿತ್ ರೆಡ್ಡಿಗೆ ಇನ್ನೂ 22 ವರ್ಷ ಕೂಡ ಆಗಿಲ್ಲ.

ತೆಲಂಗಾಣ ರಾಜ್ಯ ವೈದ್ಯಕೀಯ ಸೇವೆಗಳ ಮೂಲಸೌಕರ್ಯ ಅಭಿವೃದ್ಧಿ ನಿಗಮ (TSMSIDC) ಎಂಡಿ ಕೆ ಚಂದ್ರಶೇಖರ್ ರೆಡ್ಡಿ ಅವರ ಹಿರಿಯ ಪುತ್ರ ಕಟ್ಟಾ ಅಭಿಜಿತ್ ರೆಡ್ಡಿ (22) ಹೃದಯಾಘಾತದಿಂದ ಅಸುನೀಗಿದ್ದಾರೆ. 22 ವರ್ಷವೂ ಇಲ್ಲದ ಅಭಿಜಿತ್ ರೆಡ್ಡಿ ಮೊನ್ನೆ ರಾತ್ರಿ (ಸೆಪ್ಟೆಂಬರ್ 25) ಟಿವಿಯಲ್ಲಿ ಭಾರತ-ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯವನ್ನು ನೋಡುತ್ತಾ ನಿದ್ದೆಗೆ ಜಾರಿದ್ದರು. ಮಧ್ಯರಾತ್ರಿಯ ನಂತರ 2 ಗಂಟೆಯ ಸಮಯದಲ್ಲಿ ಹೃದಯ ನೋವಿನಿಂದ ಅವರು ಇದ್ದಕ್ಕಿದ್ದಂತೆ ಚೀರಾಡಿದ್ದಾರೆ. ತಕ್ಷಣ ಕುಟುಂಬಸ್ಥರು ಆತನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ, ಅಭಿಜಿತ್ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. ಅಭಿಜಿತ್ ವಾರಂಗಲ್ ನಲ್ಲಿ ಕೆಮಿಕಲ್ ಇಂಜಿನಿಯರಿಂಗ್ ಬಿ. ಟೆಕ್ ಓದುತ್ತಿದ್ದ.

ಸೌದಿ ಅರೇಬಿಯಾದ ತೈಲ ಕಂಪನಿ ‘ಸೌದಿ ಅರಾಮ್ಕೊ’ದಲ್ಲಿ ವರ್ಷಕ್ಕೆ 70 ಸಾವಿರ ಡಾಲರ್ (ಸುಮಾರು 58 ಲಕ್ಷ ರೂ.) ವಾರ್ಷಿಕ ಸಂಬಳದ ಕೆಲಸ ಸಿಕ್ಕಿತು. ಮುಂದಿನ ತಿಂಗಳು ಕೆಲಸಕ್ಕೆ ಸೇರುವ ಮುನ್ನ ಹೃದಯಾಘಾತದಿಂದ ಹಠಾತ್ತನೆ ನಿಧನರಾದರು. ಬೆಳೆದ ಮಗ ಕಣ್ಣೆದುರೇ ಕುಸಿದು ಬೀಳುತ್ತಿದ್ದಂತೆ ಚಂದ್ರಶೇಖರ್ ರೆಡ್ಡಿ ದಂಪತಿ ಕಣ್ಣೀರಿಟ್ಟರು. ಚಂದ್ರಶೇಖರ್ ರೆಡ್ಡಿ ಅವರ ಹುಟ್ಟೂರು ನಾಗರ್ ಕರ್ನೂಲ್ ಜಿಲ್ಲೆಯ ಉಪ್ಪುತಾಳ. ಅಭಿಜಿತ್ ಅವರ ಅಕಾಲಿಕ ಮರಣಕ್ಕೆ ತೆಲಂಗಾಣ ರಾಜ್ಯ ಆರೋಗ್ಯ ಸಚಿವ ಹರೀಶ್ ರಾವ್, ಶಾಸಕರಾದ ಡಾ. ಸಿ. ಲಕ್ಷ್ಮರೆಡ್ಡಿ ಮತ್ತು ಈಟಲ ರಾಜೇಂದರ್ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಎಂಎಲ್‌ಸಿ ಪಲ್ಲಾ ರಾಜೇಶ್ವರ್ ರೆಡ್ಡಿ, ಟಿಎಸ್‌ಎಂಎಸ್‌ಎಸ್‌ಐಡಿಸಿ ಅಧ್ಯಕ್ಷ ಎರ್ರೊಳ್ಳ ಶ್ರೀನಿವಾಸ್ ಮತ್ತು ಇತರ ಅಧಿಕಾರಿಗಳು ಚಂದ್ರಶೇಖರ್ ರೆಡ್ಡಿ ಮನೆಗೆ ಭೇಟಿ ನೀಡಿದರು.

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಬಹಳಷ್ಟು ಯುವಜನತೆ ಸಾವಿಗೀಡಾಗುತ್ತಿದ್ದಾರೆ. ಈ ರೀತಿಯ ಸಾವಿಗೆ ಮುಖ್ಯ ಕಾರಣವೆಂದರೆ ಹೃದಯ ಸ್ನಾಯುವಿನ ದುರ್ಬಲತೆ. ಕೋವಿಡ್‌ನಿಂದ ಚೇತರಿಸಿಕೊಂಡವರಲ್ಲಿಯೂ ಸಹ, ಹೃದಯ ಮತ್ತು ಕಾಲುಗಳ ರಕ್ತನಾಳಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆಯಿಂದ ಸಾವುಗಳು ಸಂಭವಿಸುತ್ತಿವೆ. ಫಿಟ್ನೆಸ್ ಮಾತ್ರೆಗಳನ್ನು ಬಳಸುವವರಿಗೂ ಈ ರೀತಿಯ ಅಪಾಯ ಹೆಚ್ಚು. ವಿಶೇಷವಾಗಿ ದೈಹಿಕ ವ್ಯಾಯಾಮದ ಕೊರತೆ ಇರುವವರಲ್ಲಿ ಹಠಾತ್ ಹೃದಯಾಘಾತ ಸಂಭವಿಸುವ ಸಾಧ್ಯತೆ ಹೆಚ್ಚು. ಅಭಿಜಿತ ರೆಡ್ಡಿ ಅವರ ಸಾವು ಕೂಡ ಹೀಗೆಯೇ ನಡೆದಿದೆ ಎಂದು ಹಿರಿಯ ಹೃದ್ರೋಗ ತಜ್ಞ ಡಾ. ರಮೇಶ ಗುಡಪಾಟಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Previous Post

ನಳಿನ್ ಕುಮಾರ್ ಕಟೀಲ್‌ ಒಬ್ಬ ವಿದೂಷಕ, ಮೆಚ್ಯೂರಿಟಿ ಇಲ್ಲ!

Next Post

Breaking News: 5 ವರ್ಷಗಳ ಅವಧಿಗೆ PFI ನಿಷೇಧಿಸಿ ಕೇಂದ್ರ ಸರ್ಕಾರ ಅಧಿಸೂಚನೆ

Next Post
Breaking News: 5 ವರ್ಷಗಳ ಅವಧಿಗೆ PFI ನಿಷೇಧಿಸಿ ಕೇಂದ್ರ ಸರ್ಕಾರ ಅಧಿಸೂಚನೆ

Breaking News: 5 ವರ್ಷಗಳ ಅವಧಿಗೆ PFI ನಿಷೇಧಿಸಿ ಕೇಂದ್ರ ಸರ್ಕಾರ ಅಧಿಸೂಚನೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.