Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಜಲ ಜೀವನ್ ಮಿಷನ್: ಶೀರ್ಘವೇ ಬಂಟ್ವಾಳ ಕ್ಷೇತ್ರದಲ್ಲಿ 100ರಷ್ಟು ಸಾಧನೆ,26.58 ಕೋಟಿ ರೂ. ವೆಚ್ಚದ ಕಾಮಗಾರಿಗೆ ಶಾಸಕ ರಾಜೇಶ್ ನಾಯ್ಕ್ ರಿಂದ ಶಿಲನ್ಯಾಸ

editor tv by editor tv
October 1, 2022
in ಕರಾವಳಿ, ಸುದ್ದಿ
0
ಜಲ ಜೀವನ್ ಮಿಷನ್: ಶೀರ್ಘವೇ ಬಂಟ್ವಾಳ ಕ್ಷೇತ್ರದಲ್ಲಿ 100ರಷ್ಟು ಸಾಧನೆ,26.58 ಕೋಟಿ ರೂ. ವೆಚ್ಚದ ಕಾಮಗಾರಿಗೆ ಶಾಸಕ ರಾಜೇಶ್ ನಾಯ್ಕ್ ರಿಂದ ಶಿಲನ್ಯಾಸ
1.9k
VIEWS
Share on FacebookShare on TwitterShare on Whatsapp

ಜಲ ಜೀವನ್ ಮಿಷನ್: ಶೀರ್ಘವೇ ಬಂಟ್ವಾಳ ಕ್ಷೇತ್ರದಲ್ಲಿ 100ರಷ್ಟು ಸಾಧನೆ

26.58 ಕೋಟಿ ರೂ. ವೆಚ್ಚದ ಕಾಮಗಾರಿಗೆ ಶಾಸಕ ರಾಜೇಶ್ ನಾಯ್ಕ್ ರಿಂದ ಶಿಲನ್ಯಾಸ

ಬಂಟ್ವಾಳ, ಅ.1: ಕ್ಷೇತ್ರದಲ್ಲಿ ಇನ್ನು ಬಾಕಿ ಉಳಿದಿರುವ ಐದು ಗ್ರಾಮಗಳಿಗೆ ಜಲ ಜೀವನ್ ಮಿಷನ್ ಯೋಜನೆ ಅನುಷ್ಠಾನಗೊಂಡರೆ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರತೀಯೊಂದು ಮನೆಗೂ ಒಂದೆರಡು ವರ್ಷದಲ್ಲಿ ಶುದ್ಧ ಕುಡಿಯುವ ನಳ್ಳಿ ನೀರು ಲಭ್ಯವಾಗಲಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಹೇಳಿದರು.

ಬಂಟ್ವಾಳ ಕ್ಷೇತ್ರದ ಕಳ್ಳಿಗೆ, ಕರಿಯಂಗಳ, ಅಮ್ಮುಂಜೆ, ಬಡಗಬೆಳ್ಳೂರು ಮತ್ತು ತೆಂಕಬೆಳ್ಳೂರು ಗ್ರಾಮಗಳಿಗೆ ಜಲಜೀವನ್ ಮಿಷನ್ ಯೋಜನೆಯಡಿ ಸಂಪರ್ಕ ಕಲ್ಪಿಸುವ 26.58 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶುದ್ದ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗೆ ಬೆಂಜನಪದವು ಮೇಲಿನ ಸೈಟ್ ಎಂಬಲ್ಲಿ ಗುರುವಾರ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ಬಂಟ್ವಾಳ ಕ್ಷೇತ್ರದ 39 ಗ್ರಾಮ ಪಂಚಾಯತ್ ಗಳ ಪೈಕಿ 34 ಗ್ರಾಮ ಪಂಚಾಯತ್ ಗಳಿಗೆ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಪೂರೈಸಲು ಈಗಾಗಲೇ ಅನುದಾನ ಬಿಡುಗಡೆಗೊಂಡು ಕಾಮಗಾರಿಗೆ ಚಾಲನೆ ನೀಡಲಾಗಿದೆ. ಸಜೀಪ ಮುನ್ನೂರು, ಸಜೀಪ ಮೂಡ, ವೀರಕಂಭ, ಮಂಚಿ, ಬೋಳಂತ್ತೂರು ಗ್ರಾಮಗಳು ಬಾಕಿ ಉಳಿದಿದ್ದು ಯೋಜನೆಯಡಿ ಇಲ್ಲಿಗೆ ಬೇಕಾದ ಅನುದಾನ ಬಿಡುಗಡೆಗೆ ಅನುಮೋದನೆ ದೊರೆತಿದ್ದು, ಕೂಡಲೇ ಅನುದಾನ ಬಿಡುಗಡೆಗೊಂಡು ಕಾಮಗಾರಿ ಆರಂಭವಾಗಲಿದೆ ಎಂದು ಅವರು ತಿಳಿಸಿದರು.

2024ರ ವೇಳೆಗೆ ದೇಶದ ಪ್ರತಿಯೊಂದು ಕುಟುಂಬಕ್ಕೂ ಸೂರು, ಪ್ರತಿ ಮನೆಗೂ ನಳ್ಳಿ ನೀರು ನೀಡುವುದು ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಬಂಟ್ವಾಳ ಕ್ಷೇತ್ರದಲ್ಲಿ ಶೀರ್ಘದಲ್ಲೇ ಈ ಯೋಜನೆ 100ರಷ್ಟು ಗುರಿ ಸಾಧಿಸಲಿದೆ. ಶಾಸಕನಾಗಿ ಕ್ಷೇತ್ರದ ಜನತೆಗೆ ಅತ್ಯಗತ್ಯವಾಗಿ ಬೇಕಾದ ರಸ್ತೆ, ಕುಡಿಯುವ ನೀರನ್ನು ಒದಗಿಸಿದ ತೃಪ್ತಿ ನನಗೆ ಇದೆ ಎಂದರು ಅವರು ಹೇಳಿದರು.

ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮಾತನಾಡಿ, ನಾಲ್ಕೂವರೆ ವರ್ಷಗಳಲ್ಲಿ 1,800 ಕೋಟಿ ರೂ.ಗೂ ಹೆಚ್ಚಿನ ಅನುದಾನದಲ್ಲಿ 1,400ರಷ್ಟು ರಸ್ತೆಗಳನ್ನು ಅಭಿವೃದ್ಧಿ ಪಡಿಸಿದ ಕೀರ್ತಿ ಶಾಸಕ ರಾಜೇಶ್ ನಾಯ್ಕ್ ಗೆ ಇದೆ. ಪ್ರಧಾನಿ ಮೋದಿ ಅವರ ಕನಸಿನ ಯೋಜನೆಯನ್ನು ಅತೀ ವೇಗವಾಗಿ ಬಂಟ್ವಾಳ ಕ್ಷೇತ್ರದಲ್ಲಿ ಅನುಷ್ಠಾನಕ್ಕೆ ತಂದು ಒಂದೆರಡು ವರ್ಷದಲ್ಲಿ ಕ್ಷೇತ್ರದ ಪ್ರತೀ ಮನೆಗೆ ಕುಡಿಯುವ ನಳ್ಳಿ ನೀರು ಸಿಗುವಂತೆ ಮಾಡಿದ್ದಾರೆ. ಇದು ಶಾಸಕರಿಗೆ ಜನತೆಯ ಮೇಲಿರುವ ಕಾಳಜಿ ಮತ್ತು ಅವರಲ್ಲಿರುವ ಬದ್ಧತೆಗೆ ಸಾಕ್ಷ್ಯಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಾಯಿತು. ವೇದಿಕೆಯಲ್ಲಿ ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಕಳ್ಳಿಗೆ ಗ್ರಾಪಂ ಅಧ್ಯಕ್ಷೆ ಯಶೋಧ ದಯಾನಂದ, ಅಮ್ಮುಂಜೆ ಗ್ರಾಪಂ ಅಧ್ಯಕ್ಷ ವಾಮನ ಆಚಾರ್ಯ, ಬಡಗಬೆಳ್ಳೂರು ಗ್ರಾಪಂ ಅಧ್ಯಕ್ಷ ಪ್ರಕಾಶ್ ಆಳ್ವ, ಮೇರೆಮಜಲು ಗ್ರಾಪಂ ಅಧ್ಯಕ್ಷೆ ಜಯಶ್ರೀ ಕರ್ಕೇರ, ಮುಖ್ಯ ಕಾರ್ಯನಿರ್ವಾಹಕ ಇಂಜಿನಿಯರ್ ನರೇಂದ್ರಬಾಬು, ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಜಿಕೆ ನಾಯಕ್, ಗುತ್ತಿಗೆದಾರ ಸುಧಾಕರ ಶೆಟ್ಟಿ, ಗಿರಿಪ್ರಕಾಶ್ ತಂತ್ರಿ ಹಾಗೂ ಗ್ರಾಪಂ ಸದಸ್ಯರು, ಪಿಡಿಒಗಳು ಮತ್ತಿತರರು ಉಪಸ್ಥಿತರಿದ್ದರು.

ಕಳ್ಳಿಗೆ ಗ್ರಾಪಂ ಉಪಾಧ್ಯಕ್ಷ ದಾಮೋದರ ನೆತ್ತರಕೆರೆ ಸ್ವಾಗತಿಸಿ, ವಂದಿಸಿದರು.

Previous Post

ದೆಹಲಿ :ಇನ್ಮುಂದೆ PUC ಪ್ರಮಾಣ ಪತ್ರ ಇದ್ರೆ ಮಾತ್ರ ಪೆಟ್ರೋಲ್, ಡೀಸೆಲ್

Next Post

5G Services Launch: ದೇಶದ ಈ 13 ನಗರಗಳಿಗೆ ಸಿಗಲಿದೆ ಮೊದಲು 5G ಸೇವೆ, ನಿಮ್ಮ ನಗರ ಈ ಪಟ್ಟಿಯಲ್ಲಿದೇಯಾ?

Next Post
5G Services Launch: ದೇಶದ ಈ 13 ನಗರಗಳಿಗೆ ಸಿಗಲಿದೆ ಮೊದಲು 5G ಸೇವೆ, ನಿಮ್ಮ ನಗರ ಈ ಪಟ್ಟಿಯಲ್ಲಿದೇಯಾ?

5G Services Launch: ದೇಶದ ಈ 13 ನಗರಗಳಿಗೆ ಸಿಗಲಿದೆ ಮೊದಲು 5G ಸೇವೆ, ನಿಮ್ಮ ನಗರ ಈ ಪಟ್ಟಿಯಲ್ಲಿದೇಯಾ?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.