Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

6 ವಾರ್ಡ್ ಗಳ ನಾಗರಿಕರಿಗಾಗಿ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ಚಾಲನೆ

editor tv by editor tv
October 17, 2022
in ಕರಾವಳಿ, ಸುದ್ದಿ
0
6 ವಾರ್ಡ್ ಗಳ ನಾಗರಿಕರಿಗಾಗಿ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ಚಾಲನೆ
1.9k
VIEWS
Share on FacebookShare on TwitterShare on Whatsapp

ಪಚ್ಚನಾಡಿ, ಕಾವೂರು, ಕದ್ರಿಪದವು, ದೇರೆಬೈಲು, ತಿರುವೈಲ್, ಕುಡುಪು ಸೇರಿಸಿ 6 ವಾರ್ಡ್ ಗಳ ನಾಗರಿಕರಿಗಾಗಿ ಸರಕಾರಿ ಸೇವಾ ಸೌಲಭ್ಯಗಳ ಜನಸ್ಪಂದನಾ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ಚಾಲನೆ

1200 ರಷ್ಟು ನಾಗರಿಕರು ಭಾಗವಹಿಸಿದ, 30 ಕ್ಕೂ ಹೆಚ್ಚು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದ ಜನಸ್ಪಂದನಾ ಕಾರ್ಯಕ್ರಮ ಭಾನುವಾರ ಯಶಸ್ವಿಯಾಗಿ ನಡೆಯಿತು.

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅರ್ಹ ಫಲಾನುಭವಿಗಳಿಗೆ ವಾಹನ, ಸರಕಾರದ ಹಲವು ಯೋಜನೆಗಳ ಸಹಾಯಧನದ ಚೆಕ್ ವಿತರಣೆ, ಮನೆ ಮಂಜೂರಾತಿ ಪತ್ರ, ಹಕ್ಕುಪತ್ರ, ಅಭಾ ಕಾರ್ಡ್ ಸಹಿತ ಜನಸಾಮಾನ್ಯರಲ್ಲಿ ಮಾಹಿತಿಯ ಕೊರತೆ ಇರುವ ಸರಕಾರದ ಅನೇಕ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಶಾಸಕರಾದ ಡಾ.ಭರತ್ ಶೆಟ್ಟಿಯವರ ಜನಸ್ಪಂದನಾ ಕಾರ್ಯಕ್ರಮ ಯಶಸ್ವಿಯಾಯಿತು.

ಸರಕಾರದ ಯೋಜನೆ, ಸೌಲಭ್ಯಗಳನ್ನು ಸುಲಭವಾಗಿ ಜನರಿಗೆ ತಲುಪಿಸಲು ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ.
ನಾಗರಿಕರ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳಿಗೂ ಅನುಕೂಲವಾಗಲಿ ಎನ್ನುವ ದೃಷ್ಟಿಯಿಂದ ನಮ್ಮ ಕ್ಷೇತ್ರದ ಏಳು ಕಡೆ ಇಂತಹ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು. ಆರೋಗ್ಯ ಇಲಾಖೆಯಿಂದ ಹಿಡಿದು ಕಾರ್ಮಿಕ ಇಲಾಖೆಯನ್ನು ಸೇರಿಸಿ ಕಂದಾಯ ಇಲಾಖೆಯ ತನಕ ವಿವಿಧ ಇಲಾಖೆಗಳು ಒಂದೇ ಸೂರಿನಲ್ಲಿ ಪರಿಹಾರ ನೀಡುವಂತೆ ಮಾಡಲಾಗಿದೆ. ಹಕ್ಕುಪತ್ರ, ಮಾಸಾಶನ, ಪಿಂಚಣಿ, ವಿಕಲಚೇತನ ಸವಲತ್ತು, ಕಾರ್ಮಿಕ ಕಾರ್ಡ್, ಆಯುಷ್ಮಾನ್ ಕಾರ್ಡ್, ಆಧಾರ ಕಾರ್ಡ್ ಸಹಿತ ಎಲ್ಲವೂ ಇಲ್ಲಿ ಶೀಘ್ರದಲ್ಲಿ ಮಾಡಿಕೊಡಲಾಗುತ್ತದೆ. ಯಾವುದೇ ಕಾರಣಕ್ಕೆ ಒಂದು ದಿನದಲ್ಲಿ ಪರಿಹಾರ ಆಗದ ಸಮಸ್ಯೆ ಇದ್ದರೆ ಇಲಾಖೆ ಅಧಿಕಾರಿಗಳೊಂದಿಗೆ ಕಾರಣ ಚರ್ಚಿಸಿ ವಾರದೊಳಗೆ ಮನೆ, ಕಚೇರಿಗೆ ಪ್ರಮಾಣಪತ್ರ ತಲುಪಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಶಾಸಕರಾದ ಡಾ.ಭರತ್ ಶೆಟ್ಟಿಯವರು ಹೇಳಿದ್ದಾರೆ.
ಅವರು ಪದವಿನಂಗಡಿಯ ಬೆನಕ ಸಭಾಂಗಣದಲ್ಲಿ ಪರಿಸರದ ಆರು ವಾರ್ಡ್ ಗಳನ್ನು ಒಳಗೊಂಡ ಜನಸ್ಪಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.
ಒಂದು ವೇಳೆ ಇಲ್ಲಿರುವ ಯಾವ ಇಲಾಖೆಯಲ್ಲಿಯೂ ಸಮಸ್ಯೆಗೆ ಪರಿಹಾರ ಸಿಗದೇ ಇದ್ದಲ್ಲಿ ತಮ್ಮ ಆಪ್ತಸಹಾಯಕರ ಬಳಿ ತಿಳಿಸಿದ್ದಲ್ಲಿ ತಮ್ಮ ಶಾಸಕರ ಕಚೇರಿಯಿಂದ ಫಾಲೋ ಅಪ್ ಮಾಡಲಾಗುವುದು ಎಂದು ಶಾಸಕರು ತಿಳಿಸಿದರು.


ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಪುಟ್ಟರಾಜು, ಮಹಾನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಹೇಮಲತಾ ರಘು ಸಾಲ್ಯಾನ್, ಪಾಲಿಕೆ ಸದಸ್ಯರಾದ ಸಂಗೀತಾ ಆರ್ ನಾಯಕ್, ಗಾಯತ್ರಿ ರಾವ್,ರಂಜಿನಿ ಕೋಟ್ಯಾನ್, ಭಾಸ್ಕರ್ ಮೊಯ್ಲಿ , ಪಕ್ಷದ ಮಂಡಲ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಪುರ, ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ಮಹಾಶಕ್ತಿ ಕೇಂದ್ರದ‌ ಪ್ರಮುಖರು, ಶಕ್ತಿ ಕೇಂದ್ರ ಪ್ರಮುಖರು, ಬೂತ್ ಪ್ರಮುಖರು, ವಿವಿಧ ಇಲಾಖೆಯ ಅಧಿಕಾರಿಗಳು, ಕಾರ್ಯಕರ್ತರು ಜೊತೆಗಿದ್ದರು.

Previous Post

ಹೆತ್ತಮ್ಮನನ್ನು ಹೊರದಬ್ಬಿದ ದುರುಳರು: ಬೀದಿಗೆ ಬಿದ್ದ ಅಜ್ಜಿಯನ್ನು ಕಚ್ಚಿ ತಿಂದ ನಾಯಿಗಳು

Next Post

ಮಳಲಿ ಮಸೀದಿ ವಿವಾದ: ನ.9ಕ್ಕೆ ತೀರ್ಪನ್ನು ಕಾಯ್ದಿರಿಸಿದ ನ್ಯಾಯಾಲಯ

Next Post
ಮಳಲಿ ಮಸೀದಿ ವಿವಾದ: ನ.9ಕ್ಕೆ ತೀರ್ಪನ್ನು ಕಾಯ್ದಿರಿಸಿದ ನ್ಯಾಯಾಲಯ

ಮಳಲಿ ಮಸೀದಿ ವಿವಾದ: ನ.9ಕ್ಕೆ ತೀರ್ಪನ್ನು ಕಾಯ್ದಿರಿಸಿದ ನ್ಯಾಯಾಲಯ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.