Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಪೆರೋಲ್‌ನಲ್ಲಿ ಹೊರಗಿರುವ ರೇಪ್ ಪ್ರಕರಣದ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಆನ್‌ಲೈನ್‌ನಲ್ಲಿ ಪ್ರವಚನ!: ಬಿಜೆಪಿ ಮುಖಂಡರ ಭಾಗಿ

editor tv by editor tv
October 20, 2022
in ರಾಷ್ಟ್ರೀಯ, ಸುದ್ದಿ
0
ಪೆರೋಲ್‌ನಲ್ಲಿ ಹೊರಗಿರುವ ರೇಪ್ ಪ್ರಕರಣದ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಆನ್‌ಲೈನ್‌ನಲ್ಲಿ ಪ್ರವಚನ!: ಬಿಜೆಪಿ ಮುಖಂಡರ ಭಾಗಿ
1.9k
VIEWS
Share on FacebookShare on TwitterShare on Whatsapp

ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ, ಪತ್ರಕರ್ತನ ಹತ್ಯೆ ಪ್ರಕರಣದಲ್ಲಿ 20 ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ಆತನಿಗೆ ಈ ವರ್ಷ ಚುನಾವಣೆಗಳು ಹತ್ತಿರವಿದ್ದಾಗ ಮೂರು ಬಾರಿ ಪೆರೋಲ್ ನೀಡಲಾಗಿದೆ!

ಅತ್ಯಾಚಾರ ಮತ್ತು ಕೊಲೆ ಅಪರಾಧಿ, ಡೇರಾ ಸಚ್ಚಾ ಸೌಧದ ವಿವಾದಾತ್ಮಕ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಹರಿಯಾಣದ ರೋಹ್ಟಕ್ ಜಿಲ್ಲೆಯ ಸುನಾರಿಯಾ ಜೈಲಿನಿಂದ 40 ದಿನಗಳ ಪೆರೋಲ್‌ನಲ್ಲಿರುವಾಗ ಆನ್‌ಲೈನ್ ಸತ್ಸಂಗ (ಪ್ರವಚನ) ನಡೆಸಲು ಪ್ರಾರಂಭಿಸಿದ್ದಾರೆ. ಮಂಗಳವಾರ ಬಿಜೆಪಿ ನಾಯಕ ಮತ್ತು ಕರ್ನಾಲ್‌ನ ಮಾಜಿ ಮೇಯರ್ ರೇಣು ಬಾಲ ಗುಪ್ತಾ ಕೂಡ ಅವರ ಆರ್ಶಿವಾದ ಪಡೆದಿದ್ದಾರೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶದ ಬರ್ಸಾದಿಂದ ನಡೆಸಿದ ಸುಮಾರು ಎರಡು ಗಂಟೆಗಳ ಸತ್ಸಂಗದಲ್ಲಿ ಹಲವಾರು ಇತರ ಸ್ಥಳೀಯ ರಾಜಕಾರಣಿಗಳು ಸಹ ಭಾಗವಹಿಸಿದ್ದರು. ಅಲ್ಲಿ ಗುಪ್ತಾ ಡೇರಾ ಮುಖ್ಯಸ್ಥರನ್ನು “ಪಿತಾಜಿ” ಎಂದು ಸಂಬೋಧಿಸಿದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹರಿಯಾಣದಲ್ಲಿ ಪಂಚಾಯತ್ ಚುನಾವಣೆಗಳು ಮತ್ತು ಆದಂಪುರ ಉಪಚುನಾವಣೆ ಕೆಲವೆ ದಿನಗಳಲ್ಲಿ ನಡೆಯುವ ಸಂದರ್ಭದಲ್ಲಿ ಅತ್ಯಾಚಾರ ಅಪರಾಧಿಗೆ ಪೆರೋಲ್ ನೀಡಿದ್ದು ಏಕೆ ಎಂಬ ಪ್ರಶ್ನೆಗಳು ಎದ್ದಿವೆ. ಆದರೆ  ಕರ್ನಾಲ್ ಕ್ಷೇತ್ರವನ್ನು ಪ್ರತಿನಿಧಿಸುವ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ಕಾರಾಗೃಹಗ ಸಚಿವ ರಂಜಿತ್ ಸಿಂಗ್ ಪೆರೋಲ್ ನೀಡಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಇದೊಂದು “ವಾಡಿಕೆಯ ಕಾರ್ಯವಿಧಾನ” ಮತ್ತು “ಅಪರಾಧಿಯ ಕಾನೂನುಬದ್ಧ ಹಕ್ಕು” ಎಂದು ಬಣ್ಣಿಸಿದ್ದಾರೆ.

ರೇಪ್ ಪ್ರಕರಣದಲ್ಲಿ ಅಪರಾಧಿಯೆಂದು ಸಾಬೀತಾಗಿರುವ ಗುರ್ಮೀತ್ ರಾಮ್ ರಹೀಮ್ ಸಿಂಗ್ ಪೆರೋಲ್ ಮೇಲೆ ಹೊರಬಂದು ಸತ್ಸಂಗ ನಡೆಸುತ್ತಾರೆ. ಸ್ಥಳೀಯ ಚುನಾವಣೆಗಳು ಹತ್ತಿರವಿರುವುದರಿಂದ ಕರ್ನಾಲ್ ಮಾಜಿ ಮೇಯರ್ ಮತ್ತು ಹಿಸ್ಸಾ ಮೇಯರ್ ಅಪರಾಧಿಯ ಆರ್ಶಿವಾದ ಪಡೆಯುತ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದ್ರುವ್ ರಾಠೀ ಟ್ವೀಟ್ ಮಾಡಿದ್ದಾರೆ

Out on parole, A convicted rapist Gurmeet Ram Rahim holds a satsang.
Karnal Mayor Renu Bala Gupta attended the online Satsang to take his blessings just before panchayat elections. pic.twitter.com/GHvf7fjbY4

— Mohammed Zubair (@zoo_bear) October 19, 2022

ತನ್ನ ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಪಂಚಕುಲ ವಿಶೇ‍ಷ ಸಿಬಿಐ ನ್ಯಾಯಾಲಯವು 2017ರಲ್ಲಿ ಆತನನ್ನು ದೋಷಿ ಎಂದು ಪರಿಗಣಿಸಿ 20 ವರ್ಷಗಳ ಶಿಕ್ಷೆ ವಿಧಿಸಿದೆ. ಅಲ್ಲದೆ ಪತ್ರಕರ್ತನ ಹತ್ಯೆ ಮತ್ತು ಮಾಜಿ ಮ್ಯಾನೇಜರ್‌ನ ಹತ್ಯೆಗೆ ಸಂಚು ರೂಪಿಸಿದ ಆರೋಪದಲ್ಲಿ ಗುರ್ಮೀತ್ ರಾಮ್ ರಹೀಮ್‌ನನ್ನು ಅಪರಾಧಿ ಎಂದು ಘೋಷಿಸಲಾಗಿದೆ. ಆದರೆ ಈ ಒಂದು ವರ್ಷದಲ್ಲಿ ಚುನಾವಣೆಗಳು ಹತ್ತಿರವಿದ್ದಾಗ ಆತನಿಗೆ ಮೂರು ಬಾರಿ ಪೆರೋಲ್ ನೀಡಲಾಗಿದೆ! ಫೆಬ್ರವರಿಯಲ್ಲಿ ಪಂಜಾಬ್ ಚುನಾವಣೆಗಿದ್ದಾಗ, ಜೂನ್‌ನಲ್ಲಿ ಮತ್ತು ಅಕ್ಟೋಬರ್ 14 ರಂದು ಆತನಿಗೆ ಪೆರೋಲ್ ನೀಡಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ನಾನು ಆಶ್ರಮವನ್ನು ತಲುಪಿದ್ದೇನೆ. ದೇವರು ಎಲ್ಲರಿಗೂ ಸಂತೋಷ ನೀಡಲಿ. ಮೊದಲೇ ಹೇಳಿದಂತೆ ನಂಬಿಕೆ ಇರಲಿ. ನನ್ನ ಮಕ್ಕಳ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ಪರಮ ತಂದೆ, ಪರಮಾತ್ಮ, ನಿಮಗೆ ಬಹಳಷ್ಟು ಸಂತೋಷವನ್ನು ನೀಡಲಿ. ಸ್ವಲ್ಪ ಸಮಯದ ಹಿಂದೆ ಇಲ್ಲಿ ಬಂದರು. ನೀವು ಆ ಸಮುದ್ರಗಳನ್ನು ನೆನಪಿಸಿಕೊಳ್ಳುತ್ತೀರಿ. ಸಮುದ್ರಗಳು ಹೆಚ್ಚು ಏರಿವೆ. ನೀವೆಲ್ಲರೂ ಅದನ್ನು ನೋಡುತ್ತಿದ್ದೀರಿ. ನಾನು ನಿಮ್ಮೊಂದಿಗೆ ಮಾತನಾಡುತ್ತಲೇ ಇರುತ್ತೇನೆ. ಮಕ್ಕಳು, ಯುವಕರು ಮತ್ತು ಹಿರಿಯರಿಗೆ ಆಶೀರ್ವಾದ” ಎಂದು ಅವರು ವೀಡಿಯೊದಲ್ಲಿ ಹೇಳಿದ್ದಾರೆ.

Previous Post

ರುಪಾಯಿ ಮೌಲ್ಯ 61 ಪೈಸೆ ಕುಸಿತ: ಒಂದು ಡಾಲರ್‌ಗೆ 83 ರೂ.

Next Post

ಮುಸ್ಲಿಮರು ಲಕ್ಷ್ಮಿಯನ್ನು ಪೂಜಿಸದಿದ್ದರೂ ಕೋಟ್ಯಧಿಪತಿಗಳಾಗಿಲ್ಲವೇ?; ಬಿಜೆಪಿ ಶಾಸಕ ಲಾಲನ್ ಪಾಸ್ವಾನ್ ಹೇಳಿಕೆ

Next Post
ಮುಸ್ಲಿಮರು ಲಕ್ಷ್ಮಿಯನ್ನು ಪೂಜಿಸದಿದ್ದರೂ ಕೋಟ್ಯಧಿಪತಿಗಳಾಗಿಲ್ಲವೇ?; ಬಿಜೆಪಿ ಶಾಸಕ  ಲಾಲನ್ ಪಾಸ್ವಾನ್ ಹೇಳಿಕೆ

ಮುಸ್ಲಿಮರು ಲಕ್ಷ್ಮಿಯನ್ನು ಪೂಜಿಸದಿದ್ದರೂ ಕೋಟ್ಯಧಿಪತಿಗಳಾಗಿಲ್ಲವೇ?; ಬಿಜೆಪಿ ಶಾಸಕ ಲಾಲನ್ ಪಾಸ್ವಾನ್ ಹೇಳಿಕೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.