

ಬೆಂಗಳೂರು: ವಿಧಾನ ಸಭೆ ಚುನಾವಣೆ ಸಮೀಸುತ್ತಿದ್ದಂತೆ ರಾಜಕೀಯ ವಲಯದಲ್ಲಿ ತಯಾರಿ ಜೋರಾಗಿದೆ. ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಮೂಲಕ ಜನರನ್ನು ತಲುಪುತ್ತಿದ್ದು ಬಿಜೆಪಿ ಜನ ಸಂಕಲ್ಪದಿಂದ ಮತದಾರರ ಮನ ಗೆಲ್ಲಲು ಯತ್ನಿಸುತ್ತಿದೆ. ಮತ್ತೊಂದೆಡೆ ಜೆಡಿಎಸ್ ಪಕ್ಷ ಕೂಡ ಮುಂಬರುವ ಚುನಾವಣೆಗೆ ಭರ್ಜರಿ ಸಿದ್ದತೆ ಮಾಡಿಕೊಳ್ಳುತ್ತಿದೆ. ನವೆಂಬರ್ 1ರಿಂದ ಜೆಡಿಎಸ್ ಪಂಚರತ್ನ ರಥಯಾತ್ರೆ ಆರಂಭಿಸಲು ತಯಾರಿ ನಡೆಸಿದೆ.
ನವೆಂಬರ್ 1ರಿಂದ ಜೆಡಿಎಸ್ ಪಂಚರತ್ನ ಜನಸಂಪರ್ಕ ರಥಯಾತ್ರೆ ಆರಂಭವಾಗುತ್ತಿದ್ದು ಮೊದಲ ಹಂತದ ಪಂಚರತ್ನ ರಥಯಾತ್ರೆಯ ಪಟ್ಟಿ ಬಿಡುಗಡೆ ಮಾಡಲಾಗಿದೆ. ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ರಥಯಾತ್ರೆ ನಡೆಯಲಿದೆ. ಉದ್ಯೋಗ, ಶಿಕ್ಷಣ, ನೀರಾವರಿ, ಕೃಷಿ, ಆರೋಗ್ಯ ಸೇರಿದಂತೆ ಪಂಚಯಾತ್ರೆಯಲ್ಲಿ ಈ ಬಗ್ಗೆ ಯೋಜನೆ ರೂಪಿಸಲಾಗಿದೆ.
ನ.1ರಿಂದ ಕೋಲಾರ ಜಿಲ್ಲೆಯ ಮುಳಬಾಗಿಲಿನಿಂದ ರಥಯಾತ್ರೆ ಆರಂಭವಾಗುತ್ತೆ.
ನವೆಂಬರ್ 6 ರಿಂದ 10ರವರೆಗೆ ಚಿಕ್ಕಬಳ್ಳಾಪುರದಲ್ಲಿ ರಥಯಾತ್ರೆ ನಡೆಯುತ್ತೆ.
ನ.11ರಿಂದ 13ರವರೆಗೆ ಬೆಂಗಳೂರು ಗ್ರಾ. ಜಿಲ್ಲೆಯಲ್ಲಿ ಸಂಚಾರ
ನ.14ರಿಂದ 23ರವರೆಗೆ ತುಮಕೂರು ಜಿಲ್ಲೆಯಲ್ಲಿ ರಥಯಾತ್ರೆ
ನ.24 ರಿಂದ 30ರವರೆಗೆ ಹಾಸನ ಜಿಲ್ಲೆಯಲ್ಲಿ ರಥಯಾತ್ರೆ
ಡಿ.1ರಂದು ಕುಣಿಗಲ್ ಕ್ಷೇತ್ರದಲ್ಲಿ ಸಂಚರಿಸಲಿರುವ ರಥಯಾತ್ರೆ
ಡಿ.2ರಿಂದ 5ರವರೆಗೆ ರಾಮನಗರ ಜಿಲ್ಲೆಯಲ್ಲಿ ರಥಯಾತ್ರೆ
ಮೊದಲ ಹಂತದಲ್ಲಿ 35 ದಿನಗಳ ಕಾಲ ರಥಯಾತ್ರೆ ನಡೆಯಲಿದೆ. ಈ ರಥಯಾತ್ರೆ ಮೂಲಕ ಎರಡು ರಾಷ್ಟ್ರೀಯ ಪಕ್ಷಗಳಿಗೆ ಟಕ್ಕರ್ ಕೊಡಲು JDS ಪ್ಲ್ಯಾನ್ ಮಾಡಿಕೊಂಡಿದೆ. ಪಂಚರತ್ನ ರಥಯಾತ್ರೆ ಮೂಲಕ ಅಧಿಕಾರಕ್ಕೆ ಏರಲು ಪ್ಲ್ಯಾನ್ ಮಾಡಿದೆ. ಇದನ್ನೂ ಓದಿ: ನ.1ರಿಂದ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಆರಂಭ, ಅಂದೇ ಅಭ್ಯರ್ಥಿಗಳ ಘೋಷಣೆ: ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ
ಬೆಂಗಳೂರು: ನವೆಂಬರ್ 1 ರಂದು ಪಂಚರತ್ನ ರಥಯಾತ್ರೆ ಆರಂಭವಾಗಲಿದ್ದು, ಈ ವೇಳೆಯೇ ಜೆಡಿಎಸ್ ಅಭ್ಯರ್ಥಿಗಳ ಘೋಷಣೆ ಮಾಡಲಾಗುತ್ತಿದೆ. ಬೆಂಗಳೂರಿನ ಜೆ.ಪಿ.ಭವನದಲ್ಲಿ ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಗೊಂದಲವಿರುವ ಕ್ಷೇತ್ರಗಳ ಮುಖಂಡರನ್ನು ಕರೆದು ಸಭೆ ಮಾಡಿದ್ದಾರೆ. ಹೆಚ್.ಡಿ.ಕೋಟೆ, ಮಧುಗಿರಿ, ಶಿರಾ ಕ್ಷೇತ್ರಗಳ ಮುಖಂಡರೊಂದಿಗೆ ಸಭೆ ಮಾಡಲಾಗಿದೆ. ಆಕಾಂಕ್ಷಿಗಳ ಪರ ಲಾಬಿಗೆ ನೂರಾರು ಬೆಂಬಲಿಗರು ಬಂದಿದ್ದಾರೆ. ಮೊದಲ ಹಂತದಲ್ಲಿ 120 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕುಮಾರಸ್ವಾಮಿ ಸಿದ್ಧತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಮೈಸೂರು ಭಾಗದಲ್ಲಿ ಸೋನಿಯಾ, ರಾಹುಲ್, ಪ್ರಿಯಾಂಕಾ ರ್ಯಾಲಿ ಮಾಡಿದ್ದಾರೆ. ಅವರ ಕುಟುಂಬದ ಎಲ್ಲ ಸದಸ್ಯರು ಬಂದರೂ ಹಿನ್ನಡೆ ಆಗಲ್ಲ. ಕರ್ನಾಟಕದಲ್ಲಿ ಯಾವುದೇ ಬದಲಾವಣೆ ತರಲು ಸಾಧ್ಯವಿಲ್ಲ. ಪಾದಯಾತ್ರೆಯಿಂದ ಜನರಿಗೆ ಏನು ಸಂದೇಶ ಕೊಡುತ್ತಿದ್ದಾರೆ. ಮೊದಲು ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಮುಗಿಯಲಿ. ನಮ್ಮ ಪಂಚರತ್ನ ಯಾತ್ರೆ ಏನು ಎಂದು ತೋರಿಸುತ್ತೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾರವಾಗಿ ನುಡಿದರು.