Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಸುರತ್ಕಲ್ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ: ಡೆಡ್ ಲೈನ್ ಮೀರಿದ್ರೆ ಉಗ್ರ ಹೋರಾಟದ ಎಚ್ಚರಿಕೆ!

editor tv by editor tv
October 28, 2022
in ಕರಾವಳಿ, ಸುದ್ದಿ
0
ಸುರತ್ಕಲ್ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ: ಡೆಡ್ ಲೈನ್ ಮೀರಿದ್ರೆ ಉಗ್ರ ಹೋರಾಟದ ಎಚ್ಚರಿಕೆ!
1.9k
VIEWS
Share on FacebookShare on TwitterShare on Whatsapp

ಕೆಲದಿನಗಳ ಹಿಂದೆ ಸಾಕಷ್ಟು ಹೈಡ್ರಾಮಕ್ಕೆ ಕಾರಣವಾಗಿದ್ದ ಸುರತ್ಕಲ್ ಟೋಲ್ ಪ್ಲಾಜಾ (Surathkal toll gate) ಗದ್ದಲ ಮತ್ತೆ ಮುನ್ನಲೆಗೆ ಬಂದಿದೆ. ಟೋಲ್ ಗೇಟ್ ತೆರವಿಗೆ ಇದೀಗ ಹಗಲು ರಾತ್ರಿಯ ಅನಿರ್ಧಾಷ್ಟಾವಧಿ ಧರಣಿ ಪ್ರಾರಂಭವಾಗಿದೆ. ಅಹಿತಕರ ಘಟನೆ ನಡೆಯದಂತೆ ಪೊಲೀಸರು ಟೋಲ್ ಗೇಟ್ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಹೌದು.. ಮಂಗಳೂರು ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್‌ನಲ್ಲಿರುವ ಟೋಲ್ ಗೇಟ್ ಅಕ್ರಮ ಎಂಬುದು ಹಲವು ವರ್ಷಗಳ ಆರೋಪ. ಈ ಟೋಲ್ ಪ್ಲಾಜಾ ತೆರವಿಗೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸಮಾನಮನಸ್ಕ ಸಂಘಟನೆಗಳು ಆರು ವರ್ಷಗಳಿಂದ ಹೋರಾಟ ನಡೆಸುತ್ತಲೆ ಬಂದಿದೆ. ವಾರಗಳ ಹಿಂದಷ್ಟೇ ನಡೆದಿದ್ದ ಪ್ರತಿಭಟನೆ ತೀವ್ರ ಸ್ವರೂಪಕ್ಕೆ ತೆರಳಿ ಸಾಕಷ್ಟು ಹೈಡ್ರಾಮಕ್ಕೆ ಕಾರಣವಾಗಿತ್ತು. ಟೋಲ್ ಪ್ಲಾಜಾಕ್ಕೆ ಮುತ್ತಿಗೆ ಹಾಕಿದ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದರು. ಇದೀಗ ಮತ್ತೆ ಟೋಲ್‌ಗೇಟ್ ತೆರವಿಗೆ ಅನಿರ್ದಿಷ್ಟಾವಧಿ ಧರಣಿ ಪ್ರಾರಂಭವಾಗಿದೆ. ಟೋಲ್ ಪ್ಲಾಜಾದ 200 ಮೀ ದೂರದಲ್ಲಿ ಹೋರಾಟಗಾರರು ಹಗಲು ರಾತ್ರಿಯ ಧರಣಿ ಆರಂಭಿಸಿದ್ದಾರೆ. ಸಂಸದ ನಳೀನ್ ಕುಮಾರ್ ಕಟೀಲ್ ನವೆಂಬರ್ 7ರವರಗೆ ಕಾಲಾವಕಾಶ ಕೇಳಿದ್ದು ಆ ಬಳಿಕವೂ ಟೋಲ್ ಗೇಟ್ ತೆರವು ಆಗದಿದ್ದರೆ ಹೋರಾಟದ ಸ್ವರೂಪ ಬದಲಾಗುತ್ತೆ ಎಂದು ಹೋರಾಟಗಾರರು ಎಚ್ಚರಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್‌ನಲ್ಲಿ 2015ರಲ್ಲಿ ಟೋಲ್ ಪ್ಲಾಜಾ ಆರಂಭಗೊಂಡಿತ್ತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮದ ಪ್ರಕಾರ 60 ಕಿಲೋಮೀಟರ್ ಅಂತರದಲ್ಲಿ ಟೋಲ್ ಪ್ಲಾಜಾ ಇರಬೇಕು. ಆದರೆ ಸುರತ್ಕಲ್ ಟೋಲ್‌ನಿಂದ ಉಡುಪಿಯ ಹೆಜಮಾಡಿ ಟೋಲ್ ಪ್ಲಾಜಾಕ್ಕೆ ದೂರ ಕೇವಲ 17 ಕಿ.ಮೀ. ಹೀಗಾಗಿ ಸುರತ್ಕಲ್ ಟೋಲ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮವನ್ನು ಮೀರಿದೆ ಎಂಬ ಆರೋಪ ಹೋರಾಟಗಾರರದ್ದು.

ಅಕ್ರಮವಾಗಿ ಇಲ್ಲಿ ಹಲವು ವರ್ಷಗಳಿಂದ ಟೋಲ್ ಸಂಗ್ರಹ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಹೋರಾಟಗಾರರು ಸುರತ್ಕಲ್ ಟೋಲ್‌ಗೇಟ್ ‌ಮುಚ್ಚುವಂತೆ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ. ವಾರಗಳ ಹಿಂದಿನ ಹೋರಾಟ ವಿಕೋಪಕ್ಕೆ ತಿರುಗಿದ್ದರಿಂದ ಈ ಬಾರಿ ಮುನ್ನಚ್ಚರಿಕೆ ಕ್ರಮವಾಗಿ ಟೋಲ್ ಪ್ಲಾಜಾದ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. 144 ಸೆಕ್ಷನ್ ಅನ್ವಯ ನಿಷೇಧಾಜ್ಞೆಯನ್ನು ಮಂಗಳೂರು ಕಮಿಷನರ್ ಶಶಿಕುಮಾರ್ ‌ಜಾರಿ ಮಾಡಿದ್ದು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಹೀಗಾಗಿ 200ಮೀ ದೂರದಲ್ಲಿಯೇ ಈ ಧರಣಿ ನಡೆಯುತ್ತಿದೆ ಎಂದು ಕಾಂಗ್ರೆಸ್ ಮಾಜಿ ಕಾರ್ಪೂರೇಟರ್ ಪ್ರತಿಭಾ ಕುಳಾಯಿ ಹೇಳಿದ್ದಾರೆ.

ಈ ಅನಿರ್ಧಿಷ್ಟಾವಧಿ ಧರಣಿಗೆ ಕಾಂಗ್ರೆಸ್, ಡಿವೈಎಫ್ಐ, ಸಿಪಿಐಎಂ, ಎಸ್. ಡಿ. ಪಿ. ಐ ಸೇರಿ ಹತ್ತಾರು ಸಮಾನ ಮನಸ್ಕ ಸಂಘಟನೆಗಳು ಬೆಂಬಲಿಸಿದೆ. ಧರಣಿಯಲ್ಲಿ ಕಾಂಗ್ರೆಸ್‌ನ ಮಾಜಿ ಸಚಿವರುಗಳು ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ. ಸದ್ಯ ಈ ಅನಿರ್ಧಿಷ್ಟಾವಧಿ ಧರಣಿಯನ್ನು ನವೆಂಬರ್ 7ರವರೆಗೆ ಶಾಂತಿಯುತವಾಗಿ ನಡೆಸಿ ಆ ಬಳಿಕವೂ ಟೋಲ್ ಗೇಟ್ ತೆರವು ಆಗದೇ ಇದ್ದರೆ ಹೋರಾಟದ ಸ್ವರೂಪ ಬೇರೆಯಾಗಿರುತ್ತೆ ಎಂದು ಹೋರಾಟಗಾರರು ಹೇಳಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

Previous Post

ಗೋ ವ್ಯಾಪಾರಿಗಳ ಮನೆ,ಅಂಗಡಿ ಜಪ್ತಿ ಮಾಡಿದ ಜಿಲ್ಲಾಡಳಿತದ ನಡೆ ಅಧಿಕಾರ ದುರುಪಯೋಗದ ಪರಮಾವಧಿ:ಎಸ್‌ಡಿಪಿಐ ಆಕ್ರೋಶ

Next Post

ಆಪರೇಷನ್ ಕಮಲ ಆರೋಪ: ಶಾಸಕ-ಸ್ವಾಮೀಜಿ ಆಡಿಯೋ ಲೀಕ್, ಬಿಎಲ್ ಸಂತೋಷ್ ಹೆಸರು ಪ್ರಸ್ತಾಪ

Next Post
ಆಪರೇಷನ್ ಕಮಲ ಆರೋಪ: ಶಾಸಕ-ಸ್ವಾಮೀಜಿ ಆಡಿಯೋ ಲೀಕ್, ಬಿಎಲ್ ಸಂತೋಷ್ ಹೆಸರು ಪ್ರಸ್ತಾಪ

ಆಪರೇಷನ್ ಕಮಲ ಆರೋಪ: ಶಾಸಕ-ಸ್ವಾಮೀಜಿ ಆಡಿಯೋ ಲೀಕ್, ಬಿಎಲ್ ಸಂತೋಷ್ ಹೆಸರು ಪ್ರಸ್ತಾಪ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.