Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

Tumkur: ಆಸ್ಪತ್ರೆಯಲ್ಲಿನ ಅಮಾನುಷ ವರ್ತನೆಯಿಂದ ನಾನು ದಿಗ್ಭ್ರಮೆಗೊಳಗಾಗಿದ್ದೇನೆ: ಆರೋಗ್ಯ ಸಚಿವ

editor tv by editor tv
November 4, 2022
in ಸುದ್ದಿ
0
Tumkur: ಆಸ್ಪತ್ರೆಯಲ್ಲಿನ ಅಮಾನುಷ ವರ್ತನೆಯಿಂದ ನಾನು ದಿಗ್ಭ್ರಮೆಗೊಳಗಾಗಿದ್ದೇನೆ: ಆರೋಗ್ಯ ಸಚಿವ
1.9k
VIEWS
Share on FacebookShare on TwitterShare on Whatsapp

ತುಮಕೂರು: ಜಿಲ್ಲಾಸ್ಪತ್ರೆಯಲ್ಲಿ ನಡೆದ ಬಾಣಂತಿ ಮತ್ತು ಅವಳಿ ಮಕ್ಕಳ ಸಾವು ಪ್ರಕರಣ ಸಂಬಂಧ ಕರ್ತವ್ಯದಲ್ಲಿದ್ದ ವೈದ್ಯೆ ಡಾ.ಉಷಾ, ನರ್ಸ್​​ಗಳಾದ ಯಶೋಧ, ದಿವ್ಯ, ಸವಿತಾ ಅವರನ್ನು ಅಮಾನತ್ತು ಮಾಡಿ ಆದೇಶಿಸಲಾಗಿದೆ. ಘಟನೆ ಸಂಬಂಧ ಹೆಚ್ಚಿನ ತನಿಖೆಗೂ ಆದೇಶಿಸಲಾಗಿದೆ. ಸಾವನಪ್ಪಿದ ಬಾಣಂತಿ ಕಸ್ತೂರಿಗೆ ಈಗಾಗಲೇ ಏಳು ವರ್ಷದ ಹೆಣ್ಣು ಮಗು ಇದ್ದು, ಈ ನತದೃಷ್ಟ ಹೆಣ್ಣುಮಗು ಇಂದು ನಿರ್ಗತಿಕಳಾಗಿದ್ದಾಳೆ. ಆಕೆಯನ್ನ ಕುಟುಂಬಸ್ಥರು ಪೋಷಿಸದಿದ್ದಲ್ಲಿ ಜಿಲ್ಲಾಡಳಿತದಿಂದ 18 ರ್ಷದವರೆಗೂ ಉಚಿತ ಶಿಕ್ಷಣ, ವಸತಿ ಕಲ್ಪಿಸಲು ವ್ಯವಸ್ಥೆ ಮಾಡುತ್ತೇವೆ ಹಾಗೂ ವೈಯಕ್ತಿಕವಾಗಿ ನಾನು ಆಕೆಯ ಅಕೌಂಟ್​ನಲ್ಲಿ ಎಫ್‌ಡಿ ಮಾಡಲು ಇಚ್ಚಿಸಿದ್ದೇನೆ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದಾರೆ. ನಿನ್ನೆ ಮುಂಜಾನೆ ಘಟನೆ ನಡೆದಿದ್ದು, ತಡರಾತ್ರಿ ಆರೋಗ್ಯ ಸಚಿವ ಡಾ.ಸುಧಾಕರ್ ತುಮಕೂರು ಜಿಲ್ಲಾಸ್ಪತ್ರೆಗೆ ದೌಡಾಯಿಸಿ ಘಟನೆಯ ಸಂಪೂರ್ಣ ಮಾಹಿತಿ ಪಡೆದಿದ್ದರು. ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ, ಜಿಲ್ಲಾ ಶಸ್ತ್ರಚಿಕಿತ್ಸಕರು ಸೇರಿದಂತೆ ಅಧಿಕಾರಿಗಳ ಸಭೆ ನಡೆಸಿದ್ದರು.

ಮೂವರ ಸಾವಿಗೆ ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳ ನಿರ್ಲಕ್ಷ್ಯ ಕಾರಣವಾಗಿತ್ತು. ಗರ್ಭಿಣಿಯೊಂದಿಗೆ ಅಮಾನವೀಯವಾಗಿ ವರ್ತಿಸಿದ ಜಿಲ್ಲಾಸ್ಪತ್ರೆ ಸಿಬ್ಬಂದಿಗಳು ಬಾಣಂತಿ ಹಾಗೂ ಅವಳಿ ನವಜಾತ ಶಿಶುಗಳ ಸಾವಿಗೆ ಕಾರಣರಾಗಿದ್ದರು. ನವೆಂಬರ್ 2 ರ ರಾತ್ರಿ ತುಮಕೂರು ನಗರದ ಭಾರತಿನಗರ ವಾಸಿ ತುಂಬು ಗರ್ಭಿಣಿ ಕಸ್ತೂರಿ ಹೆರಿಗೆ ನೋವಿನಿಂದ ಜಿಲ್ಲಾಸ್ಪತ್ರೆಗೆ ಹೋಗಿದ್ದಳು. ತಮಿಳು ನಾಡು ಮೂಲದ ಈಕೆ ಅನಾಥೆ ಮಹಿಳೆಯಾಗಿದ್ದರಿಂದ ತಾಯಿ ಕಾರ್ಡ್, ಆಧಾರ್ ಕಾರ್ಡ್ ಸೇರಿದಂತೆ ಯಾವುದೇ ದಾಖಲಾತಿ ಇರಲಿಲ್ಲ. ಆದರೆ ಆಸ್ಪತ್ರೆ ಸಿಬ್ಬಂದಿಗಳು ತಾಯಿ ಕಾರ್ಡ್, ಆಧಾರ್ ಕಾರ್ಡ್ ಕೇಳಿದ್ದಾರೆ. ಕೊಡದೇ ಇದ್ದಾಗ ಅಡ್ಮಿಷನ್ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ. ಇದರಿಂದ ವಿಧಿ ಇಲ್ಲದೇ ವಾಪಸ್ ಮನೆಗೆ ಬಂದ ಕಸ್ತೂರಿ ನಿನ್ನೆ ಬೆಳಗಿನ ಜಾವ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾಳೆ. ಬಳಿಕ ನಿತ್ರಾಣಗೊಂಡ ಬಾಣಂತಿ ಹಾಗೂ ಎರಡೂ ಶಿಶು ಸಾವನಪ್ಪಿತ್ತು. ಘಟನೆ ಬೆನ್ನಲ್ಲೇ ಸಾಕಷ್ಟು ಆಕ್ರೋಷಕ್ಕೆ ಕಾರಣವಾಗಿತ್ತು.

ಜಿಲ್ಲಾಸ್ಪತ್ರೆ ಭೇಟಿ ಬಳಿಕ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಸುಧಾಕರ್, ತುಂಬು ಗರ್ಭಿಣಿ ಮಹಿಳೆ ಬಂದಾಗ ದಾದಿಯರು ಒಳಗಡೆ ಕರೆದುಕೊಂಡು ಹೋಗಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವೇಳೆ ತಾಯಿ ಕಾರ್ಡ್, ಆಧಾರ್ ಕಾರ್ಡ್ ಕೇಳಿದ್ದಾರೆ. ಅದ್ಯಾವುದೂ ಆಕೆಯ ಬಳಿ ಇರಲಿಲ್ಲಾ. ಅಕ್ಕಪಕ್ಕದ ಮನೆಯವರು ಒತ್ತಾಯ ಪೂರ್ವಕವಾಗಿ ಆಕೆಯನ್ನ ಕರೆದುಕೊಂಡು ಬಂದಿದ್ದಾರೆ. ಮೊದಲ ಹೆರಿಗೆ ನಾರ್ಮಲ್ ಆಗಿದೆ. ಇದು ಕೂಡ ಹಾಗೇ ಆಗುತ್ತದೆ ಎಂದು ಗರ್ಭಿಣಿ ಮಹಿಳೆ ಅಂದುಕೊಂಡಿದ್ದಾರೆ. ಕರ್ತವ್ಯದಲ್ಲಿದ್ದ ದಾದಿಯರು ವಿಶೇಷ ಆರೈಕೆಯಲ್ಲಿ ಆ ಮಹಿಳೆಗೆ ತಕ್ಷಣ ಚಿಕಿತ್ಸೆ ಕೊಡಬಹುದಿತ್ತು, ಆದರೆ ಅದೂ ಆಗಿಲ್ಲಾ. ಮೇಲ್ನೋಟಕ್ಕೆ ಇದು ಹೆರಿಗೆ ವಾರ್ಡ್​ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮೂವರು ನರ್ಸ್​​ಗಳು ಕರ್ತವ್ಯಲೋಪ ಎಸಗಿದ್ದಾರೆ ಅಂತಾ ಅನಿಸಿದೆ. ಅಲ್ಲಿ ಕರ್ತವ್ಯದಲ್ಲಿ ಡಾಕ್ಟರ್ ಕೂಡ ಇದ್ದರು. ದಾದಿಯರು ಏನೇ ಹೇಳಿದರೂ ಅವರಾದರೂ ಬಂದು ಚಿಕಿತ್ಸೆ ಕೊಡಬಹುದಿತ್ತು, ಇದು ಕರ್ತವ್ಯ ನಿರ್ಲಕ್ಷ್ಯ ಮಾತ್ರವಲ್ಲ ಅಮಾನುಷವಾಗಿ ನಡೆದುಕೊಂಡಿದ್ದಾರೆ. ಈ ಘಟನೆಯಿಂದ ನಾನು ದಿಗ್ಭ್ರಮೆಗೊಳಗಾಗಿದ್ದೇನೆ. ಹಾಗಾಗಿ ನಾಲ್ಕು ಜನರನ್ನ ಅಮಾನತ್ತು ಮಾಡಲಾಗಿದೆ ಎಂದಿದ್ದಾರೆ.

ಘಟನೆ ಸಂಬಂಧ ಆಸ್ಪತ್ರೆಗೆ ಭೇಟಿ ನೀಡಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ರಾಜಕಾರಣ ಮಾತನಾಡಲು ನಾನು ಇಲ್ಲಿಗೆ ಭೇಟಿ ನೀಡಿಲ್ಲ. ಒಬ್ಬ ವೈದ್ಯನಾಗಿ, ಆರೋಗ್ಯ ಸಚಿವನಾಗಿ ಬಂದಿದ್ದೇನೆ. ಸಿದ್ದರಾಮಯ್ಯ, ಕುಮಾರಸ್ವಾಮಿ ಪ್ರಶ್ನೆಗೆ ನಾಳೆ ಬೆಳಗ್ಗೆ ಉತ್ತರಿಸುತ್ತೇನೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಏನಾಗಿತ್ತೆಂದು ನಾಳೆ ಉತ್ತರಿಸುತ್ತೇನೆ ಎಂದರು.

Previous Post

ಬಿಲ್ಲವರಿಗೆ ಮೀಸಲಾತಿ ನೀಡಿ – ಬೃಹತ್ ಹಕ್ಕೋತ್ತಾಯ

Next Post

ಅವಹೇಳನಕಾರಿ ಸುದ್ದಿ ಪ್ರಕಟ: ಅಜಿತ್ ಹನುಮಕ್ಕನವರ್ ವಿರುದ್ಧ ಜಾಮೀನು ರಹಿತ ವಾರೆಂಟ್‌ಗೆ ಮನವಿ

Next Post
ಅವಹೇಳನಕಾರಿ ಸುದ್ದಿ ಪ್ರಕಟ: ಅಜಿತ್ ಹನುಮಕ್ಕನವರ್ ವಿರುದ್ಧ ಜಾಮೀನು ರಹಿತ ವಾರೆಂಟ್‌ಗೆ ಮನವಿ

ಅವಹೇಳನಕಾರಿ ಸುದ್ದಿ ಪ್ರಕಟ: ಅಜಿತ್ ಹನುಮಕ್ಕನವರ್ ವಿರುದ್ಧ ಜಾಮೀನು ರಹಿತ ವಾರೆಂಟ್‌ಗೆ ಮನವಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.