Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಪಂಪ್‌ವೆಲ್‌ನಲ್ಲಿ ನೋಟಿನ ಬಂಡಲ್‌ಗ‌ಳು ಪತ್ತೆ! ಕುತೂಹಲ ಮೂಡಿಸಿದ ಮೆಕ್ಯಾನಿಕ್‌ ಹೇಳಿಕೆ

editor tv by editor tv
December 7, 2022
in ಕರಾವಳಿ, ಸುದ್ದಿ
0
ಪಂಪ್‌ವೆಲ್‌ನಲ್ಲಿ ನೋಟಿನ ಬಂಡಲ್‌ಗ‌ಳು ಪತ್ತೆ! ಕುತೂಹಲ ಮೂಡಿಸಿದ ಮೆಕ್ಯಾನಿಕ್‌ ಹೇಳಿಕೆ
1.9k
VIEWS
Share on FacebookShare on TwitterShare on Whatsapp

ಮಂಗಳೂರು : ನಗರದ ಪಂಪ್‌ವೆಲ್‌ ಬಸ್‌ನಿಲ್ದಾಣದ ಬಳಿ ವ್ಯಕ್ತಿಯೋರ್ವರಿಗೆ ನೋಟಿನ ಬಂಡಲ್‌ಗ‌ಳು ದೊರೆತಿವೆ ಎನ್ನಲಾಗಿದ್ದು ಇದರ ವಾರಸುದಾರರು ಪತ್ತೆಯಾಗಿಲ್ಲ.

ಬಸ್‌ಗಳ ಮೆಕ್ಯಾನಿಕ್‌ ಆಗಿರುವ ವ್ಯಕ್ತಿಯೋರ್ವರಿಗೆ ನೋಟುಗಳು ಸಿಕ್ಕಿದ್ದು ಆ ವ್ಯಕ್ತಿ ಅದರಿಂದ ಕೆಲವು ನೋಟುಗಳನ್ನು ತೆಗೆದು ಮದ್ಯ ಖರೀದಿಸಿದ್ದ. ಆತನ ಬಳಿ ಇರುವ ನೋಟುಗಳ ಬಗ್ಗೆ ಸಾರ್ವಜನಿಕ ರೋರ್ವರು ಪೊಲೀಸರಿಗೆ ಮಾಹಿತಿ ನೀಡಿದ್ದು ಅದರಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ವ್ಯಕ್ತಿ ಮತ್ತು ನೋಟುಗಳನ್ನು ವಶಕ್ಕೆ ಪಡೆದುಕೊಂಡಿದ್ದರು ಎಂದು ತಿಳಿದುಬಂದಿದೆ.

ಮತ್ತೋರ್ವನಿಗೂ ಪಾಲು
ಪೊಲೀಸರು ವಿಚಾರಿಸಿದಾಗ ಈ ನೋಟುಗಳು ಬಸ್‌ ನಿಲ್ದಾಣದ ಸಮೀಪ ದೊರೆತಿವೆ. ಇದರಲ್ಲಿ ಸ್ವಲ್ಪ ಹಣವನ್ನು ತನ್ನ ಜತೆ ಇದ್ದ ಮತ್ತೋರ್ವ ವ್ಯಕ್ತಿ ತೆಗೆದುಕೊಂಡು ಹೋಗಿದ್ದಾನೆ ಎಂಬುದಾಗಿ ಮಾಹಿತಿ ನೀಡಿದ್ದ. ನೋಟು ಹೊಂದಿದ್ದ ವ್ಯಕ್ತಿ ಮದ್ಯದ ನಶೆಯಲ್ಲಿದ್ದ ಎನ್ನಲಾಗಿದೆ.

“5ರಿಂದ 10 ಲ.ರೂ. ಇತ್ತು’
“ನೋಟುಗಳಿದ್ದ ಬಾಕ್ಸ್‌ ಪಂಪ್‌ವೆಲ್‌ ಬಸ್‌ನಿಲ್ದಾಣದ ಬಳಿ ರೋಡ್‌ ನಲ್ಲಿ ಬಿದ್ದಿತ್ತು. ಅದರಲ್ಲಿದ್ದ ಹಣವನ್ನು ನಾನು ಲೆಕ್ಕ ಮಾಡಿಲ್ಲ. ಅದರಲ್ಲಿ 5ರಿಂದ 10 ಲ.ರೂ. ಇರಬಹುದು. ನಾನು ಅದರಿಂದ 500 ರೂ. ಮುಖಬೆಲೆಯ 2 ನೋಟುಗಳನ್ನು ತೆಗೆದೆ. ಇಬ್ಬರೂ ಕುಡಿದೆವು. ಒಂದು ಕಟ್ಟನ್ನು ಇನ್ನೊಬ್ಬನಿಗೆ ಕೊಟ್ಟಿದ್ದೇನೆ. ನನ್ನನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಿಸಿದರು. ಹಣ ಪಡೆದುಕೊಂಡರು. ಕದ್ದ ಹಣ ಅಲ್ಲ ಎಂದು ಹೇಳಿದ್ದೇನೆ. ಬಾಕ್ಸ್‌ ನಲ್ಲಿ ನಂಬರ್‌ ಇದ್ದಿದ್ದರೆ ಅವರಿಗೆ ಮರಳಿಸಬಹುದಿತ್ತು. ನನಗೆ ಇಂತಹ ಹಣ ಬೇಡವೇ ಬೇಡ. ಮನೆಗೂ ಕೊಂಡು ಹೋಗುತ್ತಿರಲಿಲ್ಲ. ನಾನು ಬಸ್‌ನಲ್ಲಿ ದುಡಿಯುತ್ತಿದ್ದೇನೆ. ಅಷ್ಟೇ ಸಾಕು’ ಎಂಬುದಾಗಿ ಹಣ ಹೊಂದಿದ್ದ ಮೆಕ್ಯಾನಿಕ್‌ ಹೇಳಿದ್ದಾರೆ.

10 ಲ.ರೂ. ಅಲ್ಲ, 49,000 ರೂ.
“ಹಣ ಹೊಂದಿದ್ದ ವ್ಯಕ್ತಿ ಹೇಳುವಂತೆ 10 ಲ.ರೂ. ಇರಲಿಲ್ಲ. ನಾವು ಸ್ಥಳದಲ್ಲಿಯೇ ಸಾರ್ವಜನಿಕರ ಎದುರಿನಲ್ಲಿಯೇ ಎಣಿಕೆ ಮಾಡಿದ್ದೇವೆ. ಅದರ ವೀಡಿಯೋ ದಾಖಲೆಗಳು ಕೂಡ ಇವೆ. ಅದರಲ್ಲಿ 49,000 ರೂ. ಮಾತ್ರ ಇತ್ತು. ವಾರಸುದಾರರು ಯಾರೆಂದು ಗೊತ್ತಾಗಿಲ್ಲ. ನೋಟು ಹೊಂದಿದ್ದ ವ್ಯಕ್ತಿ ತನಗೆ ಬಸ್‌ ನಿಲ್ದಾಣದಲ್ಲಿ ಸಿಕ್ಕಿವೆ ಎಂದಿದ್ದಾರೆ. ಈ ಹಣದ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಿ ನ್ಯಾಯಾಲಯದ ಆದೇಶದಂತೆ ಮುಂದಿನ ಪ್ರಕ್ರಿಯೆ ನಡೆಸಲಾಗುವುದು’ ಎಂದು ಕಂಕನಾಡಿ ನಗರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

Previous Post

ಕನಚೂರು ಆಸ್ಪತ್ರೆ :ಒಳರೋಗಿಗಳಿಗೆ ಬ್ರಹತ್ ಉಚಿತ ಆರೋಗ್ಯ ತಪಾಸಣಾಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ, ಡಿಸೆಂಬರ್ 7 ರಿಂದ 17ರವರೆಗೆ

Next Post

ಮಂಗಳೂರು :ಕುಡುಕನಿಗೆ ಸಿಕ್ಕಿದ ಹತ್ತು ಲಕ್ಷ ರೂ. ಪೊಲೀಸರ ಪಾಲಾಯ್ತಾ? – 10 ಲಕ್ಷ, ಹತ್ತೇ ನಿಮಿಷದಲ್ಲಿ ಮಂಗಮಾಯ

Next Post
ಪಂಪ್‌ವೆಲ್‌ನಲ್ಲಿ ನೋಟಿನ ಬಂಡಲ್‌ಗ‌ಳು ಪತ್ತೆ! ಕುತೂಹಲ ಮೂಡಿಸಿದ ಮೆಕ್ಯಾನಿಕ್‌ ಹೇಳಿಕೆ

ಮಂಗಳೂರು :ಕುಡುಕನಿಗೆ ಸಿಕ್ಕಿದ ಹತ್ತು ಲಕ್ಷ ರೂ. ಪೊಲೀಸರ ಪಾಲಾಯ್ತಾ? – 10 ಲಕ್ಷ, ಹತ್ತೇ ನಿಮಿಷದಲ್ಲಿ ಮಂಗಮಾಯ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.