Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

Japanese Encephalitis: ಜಪಾನೀಸ್ ಎನ್ಸಿಫಲಾಟೀಸ್ ಲಸಿಕೆಯಿಂದ ಸಾವು ಸಂಭವಿಸುತ್ತದಾ? ಕಲಬುರಗಿ ಆರೋಗ್ಯ ಇಲಾಖೆ ಹೇಳುವುದೇನು?

editor tv by editor tv
December 13, 2022
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೆದಳು ಜ್ವರ ನಿಯಂತ್ರಣಕ್ಕೆ, ಜಪಾನೀಸ್ ಎನ್ಸಿಫಲಾಟೀಸ್ ಲಸಿಕೆಯನ್ನು (Japanese Encephalitis) ಆರೋಗ್ಯ ಇಲಾಖೆ (health department) ವತಿಯಿಂದ ನೀಡಲಾಗುತ್ತಿದೆ. ಐದು ವರ್ಷದಿಂದ 15 ವರ್ಷದ ಮಕ್ಕಳಿಗೆ ಈ ಲಸಿಕೆ ನೀಡಲಾಗುತ್ತಿದೆ. ಆದ್ರೆ ಇದೇ ಲಸಿಕೆ ಪಡೆದ ಮೇಲೆ ಜ್ವರದಿಂದ ಬಳಲಿ ಓರ್ವ ಬಾಲಕ (boy) ಮೃತಪಟ್ಟಿದ್ದಾನೆ ಅಂತ ಬಾಲಕನ ಕುಟುಂಬದವರು ಆರೋಪ ಮಾಡಿದ್ದಾರೆ. ಇತ್ತ ಆರೋಗ್ಯ ಇಲಾಕೆಯ ಅಧಿಕಾರಿಗಳು ಮಾತ್ರ ಲಸಿಕೆಯಿಂದ ಸಾವು ಸಂಭವಿಸೋದಿಲ್ಲ, ಬೇರೆ ಕಾರಣದಿಂದ ಮೃತಪಟ್ಟಿರಬಹುದು, ವದಂತಿಗಳನ್ನು ನಂಬಬಾರದು ಅಂತಿದ್ದಾರೆ.

ಇದ್ದೊಬ್ಬ ಮಗನ ಮೇಲೆ ಬೆಟ್ಟದಷ್ಟು ಆಸೆ, ಭರವಸೆ ಇಟ್ಟುಕೊಂಡಿದ್ದ ಈ ಮಹಿಳೆಗೆ ಇದೀಗ ದಿಕ್ಕೆ ತೋಚದಂತಾಗಿದೆ. ಮಗ ಬಾರದ ಲೋಕಕ್ಕೆ ಹೋಗಿದ್ದು ಆಕಾಶವೇ ತಲೆ ಮೇಲೆ ಬಿದ್ದಂತಾಗಿದೆ. ಹೌದು ಕಲಬುರಗಿ (Kalaburagi) ತಾಲೂಕಿನ ಹೀರಾಪುರ ಗ್ರಾಮದ ನಿವಾಸಿಯಾಗಿರುವ ಜಗದೇವಿ ಜಮಾದಾರ್ ಅನ್ನೋ ಮಹಿಳೆಯ 10 ವರ್ಷದ ಪುತ್ರ, ಇದೇ ಡಿಸೆಂಬರ್ 9 ರಂದು ಮೃತಪಟ್ಟಿದ್ದಾನೆ. ಕೂಲಿ ಕೆಲಸ ಮಾಡುವ ಜಗದೇವಿಯ ಪತಿ ಅನೇಕ ವರ್ಷಗಳ ಹಿಂದೆಯೇ ಬಾರದ ಲೋಕಕ್ಕೆ ಹೋಗಿದ್ದರೆ, ಇದ್ದೊಬ್ಬ ಮಗನನ್ನು ಚೆನ್ನಾಗಿ ಓದಿಸಬೇಕು ಅಂತ ಜಗದೇವಿ, ತನ್ನ ಹತ್ತು ವರ್ಷದ ಪುತ್ರ ಆಕಾಶ್ ನನ್ನು ಹೀರಾಪುರದಲ್ಲಿರುವ ಖಾಸಗಿ ಶಾಲೆಗೆ ಸೇರಿಸಿದ್ದರು.

ಆದ್ರೆ ಜ್ವರ ಅಂತ ಮೂರ್ನಾಲ್ಕು ದಿನ ಬಳಲಿದ ಬಾಲಕ ಬಾರದ ಲೋಕಕ್ಕೆ ಹೋಗಿದ್ದಾನೆ. ಆದ್ರೆ ಜಗದೇವಿ, ಮಾತ್ರ ತನ್ನ ಮಗನ ಸಾವಿಗೆ ಜಪಾನಿಸ್ ಎನ್ಸಿಫಲಾಟೀಸ್ ಲಸಿಕೆಯೇ ಕಾರಣ ಅಂತ ಆರೋಪಿಸುತ್ತಿದ್ದಾರೆ. ಹೀಗಾಗಿ ಜಗದೇವಿ ಮತ್ತು ಹೀರಾಪುರದ ಅನೇಕ ಸ್ಥಳೀಯರು ಇಂದು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ರು. ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡಬೇಕು ಅಂತ ಆಗ್ರಹಿಸಿದ್ರು.

ಹೌದು ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಮೆದಳು ಜ್ವರ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ವತಿಯಿಂದ ಜಪಾನೀಸ್ ಎನ್ಸಿಫಲಾಟೀಸ್ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದೆ. ಐದರಿಂದ ಹದಿನೈದು ವರ್ಷದೊಳಗಿನ ಮಕ್ಕಳಿಗೆ ಈ ಲಸಿಕೆಯನ್ನು ನೀಡಲಾಗುತ್ತಿದೆ. ಡಿಸೆಂಬರ್ 5 ರಿಂದ ರಾಜ್ಯದ ಕಲಬುರಗಿ, ಬಾಗಲಕೋಟೆ, ಗದಗ, ಹಾವೇರಿ, ಉಡುಪಿ, ತುಮಕೂರು, ಹಾಸನ, ದಕ್ಷಿಣ ಕನ್ನಡ, ರಾಮನಗರ ಹಾಗೂ ಯಾದಗಿರಿ ಜಿಲ್ಲೆಯಲ್ಲಿನ ಮಕ್ಕಳಿಗೆ ನೀಡಲಾಗುತ್ತಿದೆ.

ಕಲಬುರಗಿ ಜಿಲ್ಲೆಯಲ್ಲಿಯೇ 7 ಲಕ್ಷ 20 ಸಾವಿರ ಮಕ್ಕಳಿಗೆ ಈ ಲಸಿಕೆಯನ್ನು ನೀಡಲಾಗುತ್ತಿದೆ. ಇದೇ ಲಸಿಕೆಯನ್ನು ಡಿಸೆಂಬರ್ 5 ರಂದು ಆಕಾಶ್ ನಿಗೆ ಆತನ ಖಾಸಗಿ ಶಾಲೆಯಲ್ಲಿ ಆರೋಗ್ಯ ಇಲಾಕೆ ಸಿಬ್ಬಂದಿ ನೀಡಿದ್ದರು. ಆದ್ರೆ ಲಸಿಕೆ ಪಡೆದಿದ್ದ ಆಕಾಶ ಡಿಸೆಂಬರ್ 9 ರಂದು ಮೃತಪಟ್ಟಿದ್ದಾನೆ ಎಂದು ಮೃತ ಆಕಾಶನ ತಾಯಿ ಜಗದೇವಿ ಜಮಾದಾರ್ ಆರೋಪಿಸಿದ್ದಾರೆ.

ಲಸಿಕೆ ಪಡೆದ ನಂತರ ಆಕಾಶ್ ನಿಗೆ ಜ್ವರ ಬಂದಿತ್ತಂತೆ. ಹೀಗಾಗಿ ಜಗದೇವಿ, ಸ್ಥಳೀಯ ವೈದ್ಯರ ಬಳಿ ತೋರಿಸಿದ್ದರಂತೆ. ಆದ್ರೆ ಶುಕ್ರವಾರ ಹೆಚ್ಚಿನ ಜ್ವರ ಬಂದಾಗ, ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದ್ರೆ ಜ್ವರ ಹೆಚ್ಚಾಗಿದ್ದರಿಂದ, ಬಾಲಕ ಆಸ್ಪತ್ರೆಗೆ ದಾಖಲಾಗುವ ಮುನ್ನವೇ ಬಾರದ ಲೋಕಕ್ಕೆ ಹೋಗಿದ್ದಾನೆ. ತನ್ನ ಮಗನಿಗೆ ಈ ಮೊದಲು ಯಾವುದೇ ಸಮಸ್ಯೆ ಇರಲಿಲ್ಲಾ. ಆತನಿಗೆ ನೆಗಡಿ, ಜ್ವರವು ಇರಲಿಲ್ಲ.

ಆದ್ರೆ ಲಸಿಕೆ ಪಡೆದ ನಂತರ, ಜ್ವರದಿಂದ ಬಳಲಿ ತನ್ನ ಮಗ ಮೃತಪಟ್ಟಿದ್ದಾನೆ ಅಂತ ಜಗದೇವಿ ಆರೋಪಿಸುತ್ತಿದ್ದಾರೆ. ಆದ್ರೆ ಆರೋಗ್ಯ ಇಲಾಖೆಯವರು ಮಾತ್ರ ಜಗದೇವಿ ಆರೋಪವನ್ನು ಅಲ್ಲಗಳೆದಿದ್ದಾರೆ. ಜಪಾನೀಸ್ ಎನ್ಸಿಫಲಾಟೀಸ್ ಲಸಿಕೆಯನ್ನು ಮೆದಳು ಜ್ವರ ನಿಯಂತ್ರಣಕ್ಕಾಗಿ ನೀಡಲಾಗುತ್ತಿದೆ. ಈ ಲಸಿಕೆಯಿಂದ ಯಾವುದೇ ಅಡ್ಡಪರಿಣಾಮಗಳಿಲ್ಲ, ಸಾಯುವುದೂ ಇಲ್ಲಾ. ಹೀಗಾಗಿ ಪಾಲಕರು ಆತಂಕ ಪಡದೆ, ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಬೇಕು. ಇನ್ನು ಬಾಲಕ ಆಕಾಶ್ ನಿಗೆ ಲಸಿಕೆ ಹಾಕಿಸಿದ್ದರಿಂದ ಸತ್ತಿಲ್ಲ, ಬೇರೆ ಆರೋಗ್ಯ ಸಮಸ್ಯೆ ಇದ್ದಿರಬಹುದು ಎಂದು ಡಾ. ರಾಜಶೇಖರ ಮಾಲಿ, ಕಲಬುರಗಿ ಜಿಲ್ಲಾ ಆರೋಗ್ಯಾಧಿಕಾರಿ ಅವರು ಸ್ಪಷ್ಟಪಡಿಸಿದ್ದಾರೆ.

ಅನೇಕರು ಜಪಾನೀಸ್ ಎನ್ಸಿಫಲಾಟೀಸ್ ಲಸಿಕೆಯಿಂದ ತೊಂದರೆ ಆಗಿದೆ ಅಂತ ಹೇಳಿದ್ರೆ, ಜನರ ಆರೋಪಗಳನ್ನು ಆರೋಗ್ಯ ಇಲಾಖೆಯವರು ಅಲ್ಲಗಳೆದಿದ್ದಾರೆ. ಹೀಗಾಗಿ ಕೆಲ ಗೊಂದಲ ಮೂಡಿದ್ದು, ಗೊಂದಲಗಳನ್ನು ಆರೋಗ್ಯ ಇಲಾಖೆಯವರು ಬಗೆಹರಿಸುವ ಕೆಲಸ ಮಾಡಬೇಕಿದೆ. ಜೊತೆಗೆ ಜಾಗೃತಿ ಮೂಡಿಸುವ ಕೆಲಸವೂ ಮಾಡಬೇಕಿದೆ. 

Previous Post

ಶೀಘ್ರದಲ್ಲೇ ಬೀಡಿ ಸಿಗರೇಟ್‌ ಸೇಲ್‌ ನಿಷೇಧ..! ಕೇಂದ್ರ ಸರ್ಕಾರಕ್ಕೆ ಸಂಸದೀಯ ಸಮಿತಿ ಸಲಹೆ

Next Post

ಕಾರ್ಕಳ ಕ್ಷೇತ್ರ ಬಿಟ್ಟು ಹೋಗುವಂತೆ ಸಚಿವ ಸುನಿಲ್ ಕುಮಾರ್​ಗೆ ಮನವಿಯೊಂದಿಗೆ ಸವಾಲ್ ಹಾಕಿದ ಮುತಾಲಿಕ್

Next Post
ಕಾರ್ಕಳ ಕ್ಷೇತ್ರ ಬಿಟ್ಟು ಹೋಗುವಂತೆ ಸಚಿವ ಸುನಿಲ್ ಕುಮಾರ್​ಗೆ ಮನವಿಯೊಂದಿಗೆ ಸವಾಲ್ ಹಾಕಿದ ಮುತಾಲಿಕ್

ಕಾರ್ಕಳ ಕ್ಷೇತ್ರ ಬಿಟ್ಟು ಹೋಗುವಂತೆ ಸಚಿವ ಸುನಿಲ್ ಕುಮಾರ್​ಗೆ ಮನವಿಯೊಂದಿಗೆ ಸವಾಲ್ ಹಾಕಿದ ಮುತಾಲಿಕ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.