Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಕ್ರೀಡೆ

FIFA World Cup 2022: ಮೆಸ್ಸಿ ಮ್ಯಾಜಿಕ್​ಗೆ ಮಂಡಿಯೂರಿದ ಕ್ರೊಯೇಷಿಯಾ; 6ನೇ ಬಾರಿಗೆ ಫೈನಲ್​ಗೇರಿದ ಅರ್ಜೆಂಟೀನಾ!

editor tv by editor tv
December 14, 2022
in ಕ್ರೀಡೆ, ಸುದ್ದಿ
0
FIFA World Cup 2022: ಮೆಸ್ಸಿ ಮ್ಯಾಜಿಕ್​ಗೆ ಮಂಡಿಯೂರಿದ ಕ್ರೊಯೇಷಿಯಾ; 6ನೇ ಬಾರಿಗೆ ಫೈನಲ್​ಗೇರಿದ ಅರ್ಜೆಂಟೀನಾ!
1.9k
VIEWS
Share on FacebookShare on TwitterShare on Whatsapp

ಕತಾರ್‌ನಲ್ಲಿ ನಡೆಯುತ್ತಿರುವ ಫುಟ್‌ಬಾಲ್ ವಿಶ್ವಕಪ್‌ನ ಮೊದಲ ಸೆಮಿಫೈನಲ್ ಪಂದ್ಯವನ್ನು ಗೆಲ್ಲುವ ಮೂಲಕ ಅರ್ಜೆಂಟೀನಾ ಎಂಟು ವರ್ಷಗಳ ನಂತರ ಫೈನಲ್‌ಗೆ ಲಗ್ಗೆ ಇಟ್ಟಿದೆ. ಸೆಮಿಫೈನಲ್ ಪಂದ್ಯದಲ್ಲಿ ಕ್ರೊಯೇಷಿಯಾ ತಂಡವನ್ನು 3-0 ಗೋಲುಗಳ ಅಂತರದಿಂದ ಮಣಿಸಿದ ಅರ್ಜೆಂಟೀನಾ 6ನೇ ಬಾರಿಗೆ ಫಿಪಾ ವಿಶ್ವಕಪ್ ಫೈನಲ್ ಪ್ರವೇಶಿಸಿದೆ. ಇದಕ್ಕೂ ಮೊದಲು 2014ರಲ್ಲಿ ಅರ್ಜೆಂಟೀನಾ ಫೈನಲ್ ತಲುಪಿತ್ತಾದರೂ ಅಲ್ಲಿ ಜರ್ಮನಿ ವಿರುದ್ಧ ಸೋತು ಚಾಂಪಿಯನ್ ಪಟ್ಟಕ್ಕೇರುವ ಅವಕಾಶವನ್ನು ಕಳೆದುಕೊಂಡಿತ್ತು. ಈ ಗೆಲುವಿನೊಂದಿಗೆ ಅರ್ಜೆಂಟೀನಾ ವಿಶ್ವಕಪ್ ಇತಿಹಾಸದಲ್ಲಿ ಆರನೇ ಬಾರಿಗೆ ಫೈನಲ್​ಗೇರಿದ ಸಾಧನೆ ಮಾಡಿದೆ. ಈಗ ಡಿಸೆಂಬರ್ 18 ರಂದು ನಡೆಯಲಿರುವ ಫೈನಲ್​ನಲ್ಲಿ, ಫ್ರಾನ್ಸ್ ಅಥವಾ ಮೊರಾಕೊ ನಡುವಿನ ಸೆಮಿಫೈನಲ್ ಪಂದ್ಯದ ವಿಜೇತ ತಂಡ ಅರ್ಜೆಂಟೀನಾ ತಂಡವನ್ನು ಎದುರಿಸಲಿದೆ.

ಲಿಯೋನೆಲ್ ಮೆಸ್ಸಿಯನ್ನ ಅದ್ಭುತ ಆಟದಿಂದ ಅರ್ಜೆಂಟೀನಾ ಫೈನಲ್‌ಗೆ ಲಗ್ಗೆ ಇಟ್ಟಿದೆ. ಈ ಮೂಲಕ ಮೆಸ್ಸಿ ನಾಯಕತ್ವದಲ್ಲಿ ಅರ್ಜೆಂಟೀನಾ ತಂಡ ಎರಡನೇ ಬಾರಿಗೆ ಫೈನಲ್ ಆಡಲಿದೆ. ಇದಕ್ಕೂ ಮೊದಲು 2014 ರಲ್ಲಿ, ಮೆಸ್ಸಿ ನಾಯಕತ್ವದಲ್ಲಿ ಅರ್ಜೆಂಟೀನಾ ತಂಡ ಫೈನಲ್​ಗೆ ಲಗ್ಗೆ ಇಟ್ಟಿತ್ತು. ಆದರೆ ಫೈನಲ್​ನಲ್ಲಿ ಜರ್ಮನಿ ಎದುರು ಸೋತಿದ್ದರಿಂದ ಪ್ರಶಸ್ತಿ ಎತ್ತಿಹಿಡಿಯಲು ಸಾಧ್ಯವಾಗಿರಲಿಲ್ಲ.

ಮೆಸ್ಸಿ ಅದ್ಭುತ ಪ್ರದರ್ಶನ

ಭಾರತೀಯ ಕಾಲಮಾನದ ಪ್ರಕಾರ ಮಂಗಳವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಮೆಸ್ಸಿ ಅದ್ಭುತ ಪ್ರದರ್ಶನ ನೀಡಿ, ಪಂದ್ಯದ 34ನೇ ನಿಮಿಷದಲ್ಲಿ ಸಿಕ್ಕ ಪೆನಾಲ್ಟಿ ಅವಕಾಶವನ್ನು ಗೋಲಾಗಿ ಪರಿವರ್ತಿಸುವಲ್ಲಿ ಮೆಸ್ಸಿ ಯಶಸ್ವಿಯಾದರು. ಈ ಮೂಲಕ ತಂಡಕ್ಕೆ ಮೊದಲ ಗೋಲು ದಾಖಲಿಸಿದರು. ಇದಾದ ಬಳಿಕ ಜೂಲಿಯನ್ ಅಲ್ವಾರೆಜ್ 39ನೇ ನಿಮಿಷದಲ್ಲಿ ಮತ್ತೊಂದು ಗೋಲು ದಾಖಲಿಸಿದರು.ನಂತರ, ಆಟದ 69 ನೇ ನಿಮಿಷದಲ್ಲಿ, ಜೂಲಿಯಾನ್​ ಅಲ್ವಾರೆಜ್ ಮತ್ತೊಂದು ಗೋಲು ಬಾರಿಸುವ ಮೂಲಕ ಕ್ರೊಯೇಷಿಯಾ ತಂಡವನ್ನು ಪಂದ್ಯದಿಂದಲೇ ಹೊರಹಾಕಿದರು.

ಅರ್ಜೆಂಟೀನಾ ಫೈನಲ್ ಇತಿಹಾಸ

ಫಿಫಾ ವಿಶ್ವಕಪ್​ನಲ್ಲಿ ಇದುವರೆಗೆ ಆರು ಬಾರಿ ಬಾರಿ ಫೈನಲ್​ಗೆ ಎಂಟ್ರಿಕೊಟ್ಟಿರುವ ಅರ್ಜೆಂಟೀನಾ ಹಲವು ಏರುಪೇರುಗಳನ್ನು ಕಂಡಿದೆ. 1930 ರಲ್ಲಿ ನಡೆದ ವಿಶ್ವಕಪ್​ನಲ್ಲಿ ಮೊದಲ ಬಾರಿಗೆ ಫೈನಲ್​ಗೆ ಲಗ್ಗೆ ಇಟ್ಟಿದ್ದ ಅರ್ಜೆಂಟೀನಾ, ಆ ಪಂದ್ಯದಲ್ಲಿ ಉರುಗ್ವೆ ವಿರುದ್ಧ ಸೋತು ಪ್ರಶಸ್ತಿ ಕೈಚೆಲ್ಲಿತ್ತು. ನಂತರ 1978 ರ ಫಿಫಾ ವಿಶ್ವಕಪ್ ಫೈನಲ್‌ನಲ್ಲಿ ನೆದರ್ಲ್ಯಾಂಡ್ಸ್ ತಂಡವನ್ನು ಮಣಿಸಿದ ಅರ್ಜೆಂಟೀನಾ ಮೊದಲ ಬಾರಿಗೆ ಪ್ರಶಸ್ತಿ ಎತ್ತಿ ಹಿಡಿದಿತ್ತು. ಅದರ ನಂತರ 1986 ರಲ್ಲಿ ಫೈನಲ್​ ಆಡಿದ್ದ ಅರ್ಜೆಂಟೀನಾ, ಪಶ್ಚಿಮ ಜರ್ಮನಿಯನ್ನು 3-2 ಗೋಲುಗಳಿಂದ ಸೋಲಿಸಿ ಮತ್ತೊಮ್ಮೆ ಪ್ರಶಸ್ತಿ ಬಾಚಿಕೊಂಡಿತ್ತು. 1990 ರಲ್ಲಿ ಮತ್ತೊಮ್ಮೆ ಫೈನಲ್​ಗೆ ಪ್ರವೇಶಿಸಿದ್ದ ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡವನ್ನು 1-0 ಗೋಲುಗಳಿಂದ ಸೋಲಿಸುವುದರೊಂದಿಗೆ ಪಶ್ಚಿಮ ಜರ್ಮನಿ ಚಾಂಪಿಯನ್ ಪಟ್ಟಕ್ಕೇರಿತ್ತು. 1990 ರ ನಂತರ 2014 ರಲ್ಲಿ ಅಂದರೆ ಬರೋಬ್ಬರಿ 24 ವರ್ಷಗಳ ಬಳಿಕ ಫೈನಲ್​ಗೆ ಲಗ್ಗೆ ಇಟ್ಟಿದ್ದ ಅರ್ಜೆಂಟೀನಾ ತಂಡವನ್ನು 1-0 ಗೋಲುಗಳ ಅಂತರದಿಂದ ಮಣಿಸಿದ ಜರ್ಮನಿ ವಿಶ್ವ ಸಾಮ್ರಾಟನಾಗಿ ಮೆರೆದಾಡಿತ್ತು.

ಈ ಗೆಲುವಿನೊಂದಿಗೆ ಅರ್ಜೆಂಟೀನಾ ಕಳೆದ ವಿಶ್ವಕಪ್‌ನಲ್ಲಿ ಕ್ರೊಯೇಷಿಯಾ ವಿರುದ್ಧದ ಸೋಲಿಗೆ ಸೇಡು ತೀರಿಸಿಕೊಂಡಿದೆ. ರಷ್ಯಾದಲ್ಲಿ ನಡೆದ 2018 ರ ವಿಶ್ವಕಪ್‌ನ ಗುಂಪು ಸುತ್ತಿನಲ್ಲಿ ಕ್ರೊಯೇಷಿಯಾ ಅರ್ಜೆಂಟೀನಾವನ್ನು 3-0 ಗೋಲುಗಳಿಂದ ಸೋಲಿಸಿತ್ತು. ವಿಶ್ವಕಪ್‌ನಲ್ಲಿ ಕ್ರೊವೇಷಿಯಾ ವಿರುದ್ಧದ ಮೂರು ಪಂದ್ಯಗಳಲ್ಲಿ ಅರ್ಜೆಂಟೀನಾ ತಂಡ ಇದುವರೆಗೆ ಎರಡು ಬಾರಿ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ

Previous Post

ಮಂಗಳೂರಿನ ಲಾಡ್ಜ್ ಒಂದರಲ್ಲಿ ನಗ್ನ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ, ಅನುಮಾನಕ್ಕೆ ಕಾರಣವಾದ ಟ್ಯಾಬ್ಲೆಟ್!

Next Post

Mangaluru: ಹಿಂದೂ ಮುಸ್ಲಿಂ ವಿದ್ಯಾರ್ಥಿಗಳ ಲವ್ ಸ್ಟೋರಿ: ಕಾಲೇಜಿನಿಂದ 18 ಮಂದಿ ಡಿಬಾರ್

Next Post
Mangaluru: ಹಿಂದೂ ಮುಸ್ಲಿಂ ವಿದ್ಯಾರ್ಥಿಗಳ ಲವ್ ಸ್ಟೋರಿ: ಕಾಲೇಜಿನಿಂದ 18 ಮಂದಿ ಡಿಬಾರ್

Mangaluru: ಹಿಂದೂ ಮುಸ್ಲಿಂ ವಿದ್ಯಾರ್ಥಿಗಳ ಲವ್ ಸ್ಟೋರಿ: ಕಾಲೇಜಿನಿಂದ 18 ಮಂದಿ ಡಿಬಾರ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.