Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಬಿಲ್ಲವರ 3 ಬೇಡಿಕೆ ಈಡೇರಿಸಿದರೆ ಪಾದಯಾತ್ರೆ ವಾಪಸ್‌: ಪ್ರಣವಾನಂದ ಶ್ರೀ

editor tv by editor tv
December 23, 2022
in ರಾಜ್ಯ, ಸುದ್ದಿ
0
ಬಿಲ್ಲವರ 3 ಬೇಡಿಕೆ ಈಡೇರಿಸಿದರೆ ಪಾದಯಾತ್ರೆ ವಾಪಸ್‌: ಪ್ರಣವಾನಂದ ಶ್ರೀ
1.9k
VIEWS
Share on FacebookShare on TwitterShare on Whatsapp

ಮಂಗಳೂರು(ಡಿ.23): ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸೇರಿದಂತೆ ಬಿಲ್ಲವ ಸಮುದಾಯದ ಪ್ರಮುಖ ಮೂರು ಬೇಡಿಕೆಯನ್ನು ರಾಜ್ಯ ಸರ್ಕಾರ ಈಡೇರಿಸಿದರೆ ಪಾದಯಾತ್ರೆ ನಿರ್ಧಾರವನ್ನು ವಾಪಸ್‌ ಪಡೆಯುವ ಚಿಂತನೆ ನಡೆಸುತ್ತೇವೆ. ಇಲ್ಲದಿದ್ದರೆ 658 ಕಿ.ಮೀ. ಪಾದಯಾತ್ರೆ ನಡೆಸಿಯೇ ಸಿದ್ಧ ಎಂದು ಕಲಬುರಗಿ ನಾರಾಯಣಗುರು ಶಕ್ತಿಪೀಠದ ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ.

ನಗರದಲ್ಲಿ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.6ರಂದು ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಬೆಂಗಳೂರುವರೆಗೆ ವಿವಿಧ ಜಿಲ್ಲೆಗಳ ಮೂಲಕ 658 ಕಿಮೀ ಪಾದಯಾತ್ರೆ ಆರಂಭವಾಗಲಿದೆ. ಪಾದಯಾತ್ರೆಗೆ ಮುನ್ನ ಬೆಳಗ್ಗೆ 10ಕ್ಕೆ ಧಾರ್ಮಿಕ ಸಭೆ ನಡೆಯಲಿದ್ದು, 25 ಹಿಂದುಳಿದ ವರ್ಗದ ಮಠಾಧಿಪತಿಗಳು ಭಾಗವಹಿಸಲಿದ್ದಾರೆ. ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ತೆಲಂಗಾಣದ ಮಂತ್ರಿ ಶ್ರೀನಿವಾಸ ಗೌಡ್‌ ನೆರವೇರಿಸುತ್ತಾರೆ. ಶಿವಗಿರಿ ಮಠದಿಂದ ಇಬ್ಬರು ಸನ್ಯಾಸಿಗಳು, ಸಮುದಾಯದ ಸ್ವಾಮೀಜಿಗಳು, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳದಲ್ಲಿರುವ ಬಿಲ್ಲವ ಸಮುದಾಯದ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಲಿದ್ದಾರೆ ಎಂದು ತಿಳಿಸಿದರು.

ನಮ್ಮ ಒಟ್ಟು 10 ಬೇಡಿಕೆಗಳ ಪೈಕಿ ನಾರಾಯಣ ಗುರು ನಿಗಮ ಸ್ಥಾಪನೆ, ರಾಜ್ಯಾದ್ಯಂತ ಸೇಂದಿ ಇಳಿಸಿ ಮಾರಾಟಕ್ಕೆ ಅವಕಾಶ ನೀಡಬೇಕು, ಸಿಗಂದೂರು ದೇವಳ ವಿಚಾರದಲ್ಲಿ ಈಡಿಗ ಸಮಾಜದ ಬೇಡಿಕೆ ಈಡೇರಿಸುವ ಮೂರು ಪ್ರಬಲ ಬೇಡಿಕೆ ನಮ್ಮದು. ಈ ಬೇಡಿಕೆಗಳು ಈಡೇರಲೇಬೇಕು ಎಂದರು. ಪಾದಯಾತ್ರೆ ಸಮಿತಿ ಜಿಲ್ಲಾಧ್ಯಕ್ಷ ಜಿತೇಂದ್ರ ಜೆ. ಸುವರ್ಣ, ಮಾಜಿ ಮೇಯರ್‌ ಕವಿತಾ ಸನಿಲ್‌, ರಾಜ್ಯ ಧಾರ್ಮಿಕ ಪರಿಷತ್‌ ಮಾಜಿ ಸದಸ್ಯ ಪದ್ಮನಾಭ ಕೋಟ್ಯಾನ್‌, ಶಂಕರ್‌ ಸುವರ್ಣಇದ್ದರು.

ದ.ಕ.ದಲ್ಲಿ 4 ಸ್ಥಾನ ಕೊಡಬೇಕು

ಬಿಲ್ಲವ ಸಮುದಾಯ ಅತ್ಯಧಿಕ ಸಂಖ್ಯೆಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ತಲಾ 4 ಸೀಟುಗಳನ್ನು ಬಿಲ್ಲವ ಸಮುದಾಯಕ್ಕೆ ನೀಡಬೇಕು. ಉಡುಪಿಯಲ್ಲಿ 3 ಸೀಟುಗಳನ್ನು ನೀಡಲೇಬೇಕು ಎಂದು ಪ್ರಣವಾನಂದ ಶ್ರೀ ಆಗ್ರಹಿಸಿದರು. ಅದೇ ರೀತಿ ಶಿವಮೊಗ್ಗದಲ್ಲಿ 4, ಉ.ಕ.ದಲ್ಲಿ 3 ಸೀಟ್‌ ನೀಡಬೇಕು. ಇಷ್ಟುವರ್ಷ ಬಿಲ್ಲವರನ್ನು ಒಡೆದು ಆಳಿದ್ದೀರಿ. ಮುಂದೆಯೂ ಸಮುದಾಯಕ್ಕೆ ಅನ್ಯಾಯ ಆಗಬಾರದು ಎಂದರು.

Previous Post

ಸದ್ಯಕ್ಕೆ ಚೀನಾದಿಂದ ಬರೋ ವಿಮಾನಗಳನ್ನ ಬ್ಯಾನ್ ಮಾಡಲ್ವಂತೆ; ಕೇಂದ್ರದ ಮಾರ್ಗಸೂಚಿ ಹೀಗಿದೆ.

Next Post

ಗಂಗಾವತಿಯಲ್ಲಿ ದರ್ಗಾ ಅಭಿವೃದ್ಧಿಗೆ 6 ಕೋಟಿ ದೇಣಿಗೆ ಕೊಟ್ಟ ಜನಾರ್ದನ ರೆಡ್ಡಿ: ಕಾಂಗ್ರೆಸ್, ಬಿಜೆಪಿ ಪಾಳಯದಲ್ಲಿ ನಡುಕ

Next Post
ಗಂಗಾವತಿಯಲ್ಲಿ ದರ್ಗಾ ಅಭಿವೃದ್ಧಿಗೆ 6 ಕೋಟಿ ದೇಣಿಗೆ ಕೊಟ್ಟ ಜನಾರ್ದನ ರೆಡ್ಡಿ: ಕಾಂಗ್ರೆಸ್, ಬಿಜೆಪಿ ಪಾಳಯದಲ್ಲಿ ನಡುಕ

ಗಂಗಾವತಿಯಲ್ಲಿ ದರ್ಗಾ ಅಭಿವೃದ್ಧಿಗೆ 6 ಕೋಟಿ ದೇಣಿಗೆ ಕೊಟ್ಟ ಜನಾರ್ದನ ರೆಡ್ಡಿ: ಕಾಂಗ್ರೆಸ್, ಬಿಜೆಪಿ ಪಾಳಯದಲ್ಲಿ ನಡುಕ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.