
ಮಂಡ್ಯ: ಹಿರಿಯ ಸಾಹಿತಿ ಪ್ರೊ.ಭಗವಾನ್ (prof. Bhagavan) ವಿರುದ್ಧ ಜಿಲ್ಲೆಯ ಶ್ರಿರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಇತ್ತೀಚೆಗೆ ಕೆ.ಆರ್.ಪೇಟೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಾಲಗೆ ಹರಿಬಿಟ್ಟಿದ್ದ ಭಗವಾನ್, ಶ್ರೀರಾಮಚಂದ್ರರ (Sri Ramachandra) ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಶ್ರೀರಾಮಚಂದ್ರ ಮದ್ಯಸೇವನೆ ಮಾಡ್ತಿದ್ದ, ಸೀತೆಯನ್ನ ಕಾಡಿಗೆ ಅಟ್ಟಿದ್ದ. ಶ್ರೀರಾಮನನ್ನ ಶಂಭೂಕನನ್ನ ಕೊಲೆಗೈದ ಹಂತಕ ಎಂದು ಬಿಂಬಿಸಿದ್ದಾರೆನ್ನಲಾಗಿದ್ದು, ಇದರಿಂದ ರೊಚ್ಚಿಗೆದ್ದ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರು ತಕ್ಷಣವೇ ಎಫ್ಐಆರ್ ದಾಖಲಿಸಿಕೊಂಡು ಭಾಗವಾನ್ರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಭಗವಾನ್ ವಿರುದ್ಧ ಜಾಮೀನು ರಹಿತ ವಾರಂಟ್
ಇತ್ತೀಚೆಗೆ ಧಾರ್ಮಿಕ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಕೃತಿ ರಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಎಂಎಫ್ಸಿ ನ್ಯಾಯಾಲಯ ಭಗವಾನ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು. ಭಗವಾನ್ ಅವರು ರಾಮ ಮಂದಿರ ಏಕೆ ಬೇಡ ಎಂಬ ತಮ್ಮ ಕೃತಿಯಲ್ಲಿ ಹಿಂದೂ ಧರ್ಮಕ್ಕೆ ಧಕ್ಕೆ ತರುವ ವಿಚಾರಗಳನ್ನು ಬರೆದಿದ್ದಾರೆ ಎಂದು ಆರೋ ಪಿಸಲಾಗಿತ್ತು. ಮಹಾಬಲೇಶ್ದವರ ಎಂಬುವವರು ಇವರ ವಿರುದ್ಧ ಖಾಸಗಿ ದೂರು ನೀಡಿದ್ದರು.