Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಅದಾನಿ ಗ್ರೂಪ್ ವಿರುದ್ಧ ವಂಚನೆ ಆರೋಪ; LIC, SBIಯಲ್ಲಿನ ನಿಮ್ಮ ಹೂಡಿಕೆಗೂ ಅಪಾಯ ಇದೆಯಾ?

editor tv by editor tv
January 28, 2023
in ರಾಷ್ಟ್ರೀಯ, ಸುದ್ದಿ
0
ಅದಾನಿ ಗ್ರೂಪ್ ವಿರುದ್ಧ ವಂಚನೆ ಆರೋಪ; LIC, SBIಯಲ್ಲಿನ ನಿಮ್ಮ ಹೂಡಿಕೆಗೂ ಅಪಾಯ ಇದೆಯಾ?
1.9k
VIEWS
Share on FacebookShare on TwitterShare on Whatsapp

ನವದೆಹಲಿ( ಜ.28): ಅದಾನಿ ಗ್ರೂಪ್ ವಂಚನೆ ಎಸಗಿದೆ ಎಂದು ಹಿಂಡೆನ್‌ಬರ್ಗ್ ವರದಿ ಆರೋಪಿಸಿದ ಬೆನ್ನಲ್ಲೇ ಶುಕ್ರವಾರ ಗೌತಮ್ ಅದಾನಿ ಒಡೆತನದ ಸಂಸ್ಥೆಗಳ ಷೇರುಗಳ ಬೆಲೆಯಲ್ಲಿ ಭಾರೀ ಕುಸಿತವಾಗಿದೆ. ಇದರಿಂದ ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಅದಾನಿ ಸ್ಥಾನ ಮೂರರಿಂದ ಏಳಕ್ಕೆ ಕುಸಿದಿದೆ. ಈ ಬೆಳವಣಿಗೆಗಳ ನಡುವೆ ಭಾರತದ ಸಾರ್ವಜನಿಕ ವಲಯದ ಅತೀದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಭಾರತೀಯ ಜೀವ ವಿಮಾ ನಿಗಮದಲ್ಲಿ (ಎಲ್ಐಸಿ) ಹೂಡಿಕೆ ಮಾಡಿರೋರಿಗೆ ಕೂಡ ಭೀತಿ ಕಾಡಲು ಪ್ರಾರಂಭವಾಗಿದೆ. ಇದಕ್ಕೆ ಕಾರಣ ಈ ಎರಡು ಸಂಸ್ಥೆಗಳು ಅದಾನಿ ಗ್ರೂಪ್ ನಲ್ಲಿ ಹೂಡಿಕೆ ಮಾಡಿವೆ. ಹೀಗಾಗಿ ಈ ಸಂಸ್ಥೆಗಳಿಗೂ ಕೂಡ ತೊಂದರೆ ಎದುರಾಗಲಿದೆ ಎಂದು ಹೇಳಲಾಗುತ್ತಿದೆ. ಪ್ರತಿಪಕ್ಷಗಳು ಕೂಡ  ಹಿಂಡೆನ್‌ಬರ್ಗ್ ವರದಿ ಕುರಿತು ಸರ್ಕಾರ ಸಮಗ್ರ ತನಿಖೆ ಕೈಗೊಳ್ಳುವಂತೆ ಆಗ್ರಹಿಸಿ. ಈ ವಂಚನೆ ದೇಶದ ಹಣಕಾಸು ವ್ಯವಸ್ಥೆಯನ್ನು ಅಪಾಯಕ್ಕೆ ತಳ್ಳುವ ಸಾಧ್ಯತೆಯಿದೆ ಎಂದು ಪ್ರತಿಪಕ್ಷಗಳು ಆತಂಕ ವ್ಯಕ್ತಪಡಿಸಿವೆ. ಎಸ್ ಬಿಐ ಹಾಗೂ ಎಲ್ಐಸಿಯಲ್ಲಿ ಹೂಡಿಕೆ ಮಾಡಿರುವ ಕೋಟ್ಯಂತರ ಜನರ ಹಣಕ್ಕೆ ಕೂಡ ಆಪತ್ತು ಎದುರಾಗಲಿದೆ ಎಂದು ಹೇಳಿದೆ.

‘ಅದಾನಿ ಗ್ರೂಪ್ ಸಾಮಾನ್ಯ ಸಂಸ್ಥೆಯಲ್ಲ. ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಸಮಯದಿಂದಲೂ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದೆ’ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಆರೋಪಿಸಿದ್ದಾರೆ. ‘ಅದಾನಿ ಗ್ರೂಪ್ ನಲ್ಲಿ ಎಸ್ ಬಿಐ ಹಾಗೂ ಎಲ್ಐಸಿ ಹೂಡಿಕೆ ಮಾಡಿರುವ ಕಾರಣ ಈ ಎರಡೂ ಸಂಸ್ಥೆಗಳಲ್ಲಿರುವ ಕೋಟ್ಯಂತರ ಭಾರತೀಯರ ಉಳಿತಾಯ ಕೂಡ ಅಪಾಯದಲ್ಲಿದೆ’ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.’ಅದಾನಿ ಗ್ರೂಪ್ ವಿರುದ್ಧ  ಹಿಂಡೆನ್‌ಬರ್ಗ್ ವರದಿಯಲ್ಲಿ ಮಾಡಿರುವ ಆರೋಪ ಸಾಬೀತಾದರೆ ಭವಿಷ್ಯಕ್ಕಾಗಿ ಎಲ್ಐಸಿ ಹಾಗೂ ಎಸ್ ಬಿಐಯಲ್ಲಿ ಉಳಿತಾಯ ಮಾಡಿರುವ ಕೋಟ್ಯಂತರ ಭಾರತೀಯರ ಜೀವನವನ್ನೇ ನಾಶಪಡಿಸಲಿದೆ’ ಎಂದು ಸಿಪಿಐಎಂ ನಾಯಕ ಸೀತಾರಾಮ್ ಯೆಚ್ಯೂರಿ ಹೇಳಿದ್ದಾರೆ.

ಅದಾನಿ ಗ್ರೂಪ್ ಷೇರುಗಳು ಶುಕ್ರವಾರ ಕುಸಿತ ದಾಖಲಿಸಿದ ಬೆನ್ನಲ್ಲೇ ಈ ಸಂಸ್ಥೆಗಳಿಗೆ ಸಾಲ ನೀಡಿರುವ ಎಸ್ ಬಿಐ ಹಾಗೂ ಎಲ್ಐಸಿ ಷೇರುಗಳು ಕೂಡ ಕುಸಿತ ಕಂಡಿವೆ. ಆದರೆ, ಅದಾನಿ ಗ್ರೂಪ್ ನಲ್ಲಿ ನಾವು ಮಾಡಿರುವ ಹೂಡಿಕೆ ಆರ್ ಬಿಐ ಸೂಚಿಸಿರುವ  ಮಿತಿಯಲ್ಲೇ ಇದೆ ಎಂದು ಈ ಸಂಸ್ಥೆಗಳು ತಿಳಿಸಿವೆ. ಸಾಮಾನ್ಯವಾಗಿ ಯಾವುದೇ ಒಂದು ಸಂಸ್ಥೆಯಲ್ಲಿ ಅರ್ಹ ಬಂಡವಾಳದ ಶೇ.25ಕ್ಕಿಂತ ಹೆಚ್ಚಿನ ಮೊತ್ತದ ಹೂಡಿಕೆಗೆ ಆರ್ ಬಿಐ ಅನುಮತಿ ನೀಡುವುದಿಲ್ಲ.ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್ ಬಿಐ ಚೇರ್ಮನ್ ದಿನೇಶ್ ಕುಮಾರ್ ಖಾರ ‘ಅದಾನಿ ಗ್ರೂಪ್ ನಲ್ಲಿ ನಾವು ಮಾಡಿರುವ ಹೂಡಿಕೆಗೆ ಸದ್ಯ ಯಾವುದೇ ಅಪಾಯವಿಲ್ಲ. ಇತ್ತೀಚಿನ ದಿನಗಳಲ್ಲಿ ಅದಾನಿ ಗ್ರೂಪ್ ನಮ್ಮಿಂದ ಯಾವುದೇ ಸಾಲ ಪಡೆದಿಲ್ಲ. ಭವಿಷ್ಯದಲ್ಲಿ ಅಂಥ ಬೇಡಿಕೆ ಬಂದಾಗ ಎಚ್ಚರಿಕೆಯಿಂದ ಪರಿಗಣಿಸುತ್ತೇವೆ’ ಎಂದಿದ್ದಾರೆ.

. ಅದಾನಿ ಗ್ರೂಪ್ ಗೆ ಎಲ್ಐಸಿ 301 ಕೋಟಿ ರೂ. ನೆರವು ಒದಗಿಸುತ್ತಿದೆ. ಅದಾನಿ ಗ್ರೂಪ್ ನಲ್ಲಿ ಎಲ್ಐಸಿ ಶೇ.4.23ರಷ್ಟು ಹೂಡಿಕೆ ಹೊಂದಿದೆ.

ವರದಿಯಲ್ಲಿ ಏನಿದೆ?: ಅದಾನಿ ಗ್ರೂಪ್‌ನ ಎಲ್ಲಾ 7 ಪ್ರಮುಖ ಲಿಸ್ಟೆಡ್ ಕಂಪನಿಗಳು ಭಾರಿ ಪ್ರಮಾಣದ ಸಾಲವನ್ನು ಹೊಂದಿವೆ ಎಂದು ಫೋರೆನ್ಸಿಕ್ ಹಣಕಾಸು ಸಂಶೋಧನಾ ಸಂಸ್ಥೆ ಹಿಂಡೆನ್‌ಬರ್ಗ್ ಬುಧವಾರ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ. ಎಲ್ಲ ಗುಂಪಿನ ಕಂಪನಿಗಳ ಷೇರುಗಳು ಸಹ 85% ಕ್ಕಿಂತ ಹೆಚ್ಚು ಮೌಲ್ಯಯುತವಾಗಿವೆ. ಅದಾನಿ ಗ್ರೂಪ್ ತನ್ನ ಷೇರುಗಳನ್ನು ಮ್ಯಾನಿಪುಲೇಟ್ ಮಾಡಿದೆ. ಲೆಕ್ಕಪತ್ರದಲ್ಲಿ ವಂಚನೆ ನಡೆದಿದೆ. ಅದಾನಿ ಗ್ರೂಪ್ ಹಲವಾರು ದಶಕಗಳಿಂದ ಮಾರುಕಟ್ಟೆ ಕುಶಲತೆ, ಲೆಕ್ಕಪತ್ರ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆಯಲ್ಲಿ ತೊಡಗಿಸಿಕೊಂಡಿದೆ ಎಂದು ಹಿಂಡೆನ್‌ಬರ್ಗ್ ತನ್ನ ವರದಿಯಲ್ಲಿ ತಿಳಿಸಿದೆ. 

Previous Post

ಇಸ್ರೇಲ್‌ನಲ್ಲಿ ಗುಂಡಿನ ದಾಳಿಗೆ 7 ಮಂದಿ ಬಲಿ, 10 ಮಂದಿಗೆ ಗಾಯ

Next Post

ಮಜ್ಲಿ ಸ್ ಪಬ್ಲಿಕ್ ಸ್ಕೂಲ್:ಝೋಮೇರೋ ಮೆರೊ ಕಿಡ್ ಫೇಸ್ಟ್

Next Post
ಮಜ್ಲಿ ಸ್ ಪಬ್ಲಿಕ್ ಸ್ಕೂಲ್:ಝೋಮೇರೋ ಮೆರೊ ಕಿಡ್ ಫೇಸ್ಟ್

ಮಜ್ಲಿ ಸ್ ಪಬ್ಲಿಕ್ ಸ್ಕೂಲ್:ಝೋಮೇರೋ ಮೆರೊ ಕಿಡ್ ಫೇಸ್ಟ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.