

ಶಿವಮೊಗ್ಗ: ಶಿವಮೊಗ್ಗ ಏರ್ಪೋರ್ಟ್ಗೆ (Shimoga airport) ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೆಸರಿಡಲು ನಿರ್ಧಾರ ಮಾಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಈ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಜಿಲ್ಲೆಯ ಎನ್ಇಎಸ್ ಮೈದಾನದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಬಳಿಕ ಮಾತನಾಡಿ,ಬಿಎಸ್ವೈ ಪರಿಶ್ರಮದಿಂದ ವಿಮಾನ ನಿಲ್ದಾಣ ನಿರ್ಮಾಣ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಏರ್ಪೋರ್ಟ್ ಉದ್ಘಾಟನೆ ಮಾಡ್ತಾರೆ ಎಂದರು. ಯಡಿಯೂರಪ್ಪ, ಈಶ್ವರಪ್ಪ ಶಿವಮೊಗ್ಗ ಅಭಿವೃದ್ಧಿಯ ರೂವಾರಿಗಳು. ಶಿವಮೊಗ್ಗ ರಾಜ್ಯದ ಭವಿಷ್ಯದ ನಗರ ಆಗಲಿದೆ ಎಂದು ಹೇಳಿದರು.
ಡಬಲ್ ಇಂಜಿನ್ ಸರ್ಕಾರದಿಂದ ಮಾತ್ರ ಶಾಶ್ವತ ಪರಿಹಾರ ಸಾಧ್ಯ
ಶರಾವತಿ ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡುತ್ತೇವೆ. ಡಬಲ್ ಇಂಜಿನ್ ಸರ್ಕಾರದಿಂದ ಮಾತ್ರ ಶಾಶ್ವತ ಪರಿಹಾರ ಸಾಧ್ಯ. ವಿಐಎಲ್ಎಲ್ ಕಾರ್ಖಾನೆಯನ್ನು ಹಾಳು ಮಾಡಿದ್ದು ಕಾಂಗ್ರೆಸ್ ಪಕ್ಷ. ಕಾಂಗ್ರೆಸ್ ನಾಯಕರು ಈಗ ಬಂದು ದೊಡ್ಡ ಭಾಷಣ ಮಾಡುತ್ತಿದ್ದಾರೆ. ಈ ದೇಶದಲ್ಲಿ ಭಾಷಣದಿಂದ ಯಾವುದೇ ಕೆಲಸ ಆಗಿಲ್ಲ. ವಿಐಎಲ್ಎಲ್ ಕಾರ್ಖಾನೆ ವಿಚಾರವಾಗಿ ಮುಂದಿರ ಸಭೆ ನಡೆಸುವೆ. ಕಾರ್ಮಿಕರ ಹಿತ ಕಾಪಾಡುವುದಕ್ಕೆ ನಾನು ಬದ್ಧನಾಗಿದ್ದೇನೆ ಎಂದರು.
ಜನರು ನಮ್ಮ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಮತ ಹಾಕ್ತಾರೆ
ಇನ್ನು ಜೋಶಿ ಸಿಎಂ ಮಾಡಲು RSS ಹುನ್ನಾರ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ಬಗ್ಗೆ ನನಗೆ ನಂಬಿಕೆ ಇಲ್ಲ. ಈ ನಾಡು ಸ್ಥಾಪನೆ ಆಗಿ 75 ವರ್ಷ ಕಳೆದಿದೆ. ಕರ್ನಾಟಕದಲ್ಲಿ ಎಲ್ಲ ಸಮುದಾಯದವರಿಗೂ ಅಧಿಕಾರ ಸಿಕ್ಕಿದೆ. ಜನರು ನಮ್ಮ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಮತ ಹಾಕ್ತಾರೆ. ಇಂತಹ ಜಾತಿಯ ವಿಚಾರದಲ್ಲಿ ತಲೆಕೆಡಿಸಿಕೊಳ್ಳುವುದಿಲ್ಲ. ಇಂತಹ ವಿಚಾರದಿಂದ ಯಾವುದೇ ಸಾಧನೆಯಾಗಲ್ಲ ಎಂದು ಹೇಳಿದರು.
