Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಪ್ರಮೋದ್ ಮುತಾಲಿಕ್ ಕಾರ್ಕಳದಿಂದ ಸ್ಪರ್ಧೆ, ಶ್ರೀರಾಮ ಸೇನೆ ಸಂಘಟನೆಯೊಳಗೆ ಭುಗಿಲೆದ್ದ ಭಿನ್ನಮತ

editor tv by editor tv
February 10, 2023
in ಕರಾವಳಿ, ಸುದ್ದಿ
0
ಪ್ರಮೋದ್ ಮುತಾಲಿಕ್ ಕಾರ್ಕಳದಿಂದ ಸ್ಪರ್ಧೆ, ಶ್ರೀರಾಮ ಸೇನೆ ಸಂಘಟನೆಯೊಳಗೆ ಭುಗಿಲೆದ್ದ ಭಿನ್ನಮತ
1.9k
VIEWS
Share on FacebookShare on TwitterShare on Whatsapp

ಉಡುಪಿ: ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್(Pramod Muthalik) ಅವರು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಉಡುಪಿಯ ಕಾರ್ಕಳ ಕ್ಷೇತ್ರದಿಂದ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಇದಕ್ಕೆ ಈಗಾಗಲೇ ಭರ್ಜರಿ ತಯಾರಿ ನಡೆಸಿದ್ದಾರೆ. ಅಲ್ಲದೇ ಕಾರ್ಕಳದಲ್ಲಿ ಚುನಾವಣೆ ಪ್ರಚಾರದ ಕಚೇರಿಯನ್ನು ಸಹ ತೆರೆದಿದ್ದಾರೆ. ಆದ್ರೆ, ಪ್ರಮೋದ್ ಮುತಾಲಿಕ್ ಕಾರ್ಕಳದಿಂದ ಸ್ಪರ್ಧಿಸುತ್ತಿರುವುದಕ್ಕೆ ಶ್ರೀರಾಮ ಸೇನೆ ಸಂಘಟನೆಯೊಳಗೆ ಭಿನ್ನಮತ ಭುಗಿಲೆದ್ದಿದೆ. ಪ್ರಮೋದ್ ಮುತಾಲಿಕ್ ಕಾರ್ಕಳದಿಂದ​ ಸ್ಪರ್ಧೆಗೆ ಶ್ರೀರಾಮಸೇನೆ ಮಂಗಳೂರು ವಿಭಾಗ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುವಂತೆ ಮಂಗಳೂರು ವಿಭಾಗೀಯ ಅಧ್ಯಕ್ಷ ಮೋಹನ್ ಭಟ್ ಆಗ್ರಹಿಸಿದ್ದಾರೆ.

ಮುತಾಲಿಕ್ ಸ್ಪರ್ಧೆಯಿಂದ ಶ್ರೀರಾಮ ಸೇನೆ ಸಂಘಟನೆ ಒಡೆದು ಹೋಳಾಗುತ್ತಿದೆ. ಸೋಲುವ ಕಣದಲ್ಲಿ ಮುತಾಲಿಕ್ ಸ್ಪರ್ಧೆ ಯಾಕೆ? ಚುನಾವಣಾ ಕಣಕ್ಕೆ ಇಳಿಯುವ ಮುನ್ನ ಮುತಾಲಿಕ್ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದಿಲ್ಲ. ಕಾರ್ಕಳದ ಓರ್ವ ಉದ್ಯಮಿ ಹಾಗೂ ವಕೀಲರ ಪ್ರಭಾವದಿಂದ ಮುತಾಲಿಕ್ ಸ್ಪರ್ಧಿಸುತ್ತಿದ್ದಾರೆ. ಸಚಿವ ಸುನಿಲ್ ಕುಮಾರ್ ವಿರೋಧಿಗಳು ಮುತಾಲಿಕ್ ರನ್ನು ಬಲಿಕೊಡುತ್ತಿದ್ದಾರೆ. ಬಿಜೆಪಿ ಸಂಘ ಪರಿವಾರದ ಜೊತೆ ಮಾತನಾಡಿ ಗೆಲ್ಲುವ ಕ್ಷೇತ್ರದಿಂದ ಸ್ಪರ್ಧಿಸಬೇಕು. ಪ್ರಮೋದ್ ಮುತಾಲಿಕ್ ರಿಗೆ ನಮ್ಮ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದರು.

ಶ್ರೀರಾಮ ಸೇನ ಸಂಘಟನೆಯಿಂದ ಪ್ರತ್ಯೇಕಗೊಂಡು ಬೇಕಾದರೆ ಸ್ಪರ್ಧಿಸಲಿ. ಪ್ರಮೋದ್ ಮುತಾಲಿಕ್ ನಮ್ಮ ಗುರುಗಳು ಅವರು ಸೋಲುವುದನ್ನು ನಾವು ಬಯಸುವುದಿಲ್ಲ. ಫೆಬ್ರವರಿ 20ರಂದು ಈ ಕುರಿತು ಚರ್ಚಿಸಲು ಕಾರ್ಯಕರ್ತರ ಬೈಠಕ್ ಕರೆಯಲಾಗಿದೆ. ಇನ್ನೂ ಕಾಲ ಮಿಂಚಿಲ್ಲ. ಸ್ಪರ್ಧೆಯಿಂದ ಹಿಂದಕ್ಕೆ ಸರಿಯಬೇಕೆಂದು ಮೋಹನ್ ಭಟ್ ಒತ್ತಾಯಿಸಿದರು.

ಮುತಾಲಿಕರಿಗೆ ಗೌರವ ಪೂರಕ ಸ್ಥಾನ ಮಾನ ಸಿಕ್ಕಿದರೆ ಓಕೆ. ಮುತಾಲಿಕ್ ನನಗೆ ಇನ್ನು ಮುಂದೆ ರಾಜಕೀಯ ಬೇಡ ಎನ್ನುತ್ತಿದ್ದರು. ಕೇವಲ ಸಂಘಟನೆ ಮಾಡಿಕೊಂಡು ಇರುತ್ತೇನೆ ಎನ್ನುತ್ತಿದ್ದರು. ಈ ಬಾರಿ ವಿಧಾನಸೌಧ ಮೆಟ್ಟಿಲು ಏರಬೇಕು ಅನ್ನೋದು ನಮಗೂ ಆಸೆ ಇದೆ. ಆದರೆ ಕಾರ್ಕಳದಿಂದ ಸ್ಪರ್ಧಿಸಿ ಸಂಘಟನೆಯಲ್ಲಿ ಗೊಂದಲ ಉಂಟು ಮಾಡಿದ್ದಾರೆ. 20 ವರ್ಷ ಕಷ್ಟಪಟ್ಟು ಸಂಘಟನೆ ಕಟ್ಟಿದ್ದೇವೆ. ಸಂಘಟನೆ ಕಟ್ಟುತ್ತಾ ಬಂದಂತೆ ಕೆಲವರು ಹೊಡೆಯುತ್ತಾ ಹೋಗುತ್ತಾರೆ. ಮುತಾಲಿಕ್ ಸ್ಪರ್ಧೆಯಿಂದ ಕಾರ್ಯಕರ್ತರ ಒಳಗೆ ಗೊಂದಲ ಉಂಟಾಗಿದೆ. ಬಿಜೆಪಿಯನ್ನು ನಾವು ಹಿಂದುತ್ವದ ಪಕ್ಷ ಎಂದು ನಂಬಿದ್ದೇವೆ. ಕಾರ್ಕಳದಲ್ಲಿ ಮುತಾಲಿಕ್ ನಿಂತು ಕಾಂಗ್ರೆಸ್ಸಿಗೆ ಲಾಭ ಆಗೋದು ಬೇಡ. ಬಿಜೆಪಿ ಸಂಘ ಪರಿವಾರ ಇವರಿಗೆ ಸ್ಥಾನಮಾನ ಕೊಡಲು ಸಿದ್ಧವಿದೆ. ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಬೇಕಿತ್ತು. ಕಾರ್ಯಕರ್ತರ ಜೊತೆ ಬೈಟಕ್ ಮಾಡದೆ ನಿರ್ಧಾರ ಕೈಗೊಂಡಿದ್ದಾರೆ. ಇವರು ಕಾರ್ಕಳದಲ್ಲಿ ಏನು ಸರ್ವೇ ಮಾಡಿದ್ದಾರೆ ? ಕಾರ್ಕಳದ ಬಗ್ಗೆ ಏನು ಗೊತ್ತು? ಎಂದು ಪ್ರಶ್ನಿಸಿದರು.

ಸುನಿಲ್ ಗೆ ಆಗದ ವ್ಯಕ್ತಿಗಳು ಮುತಾಲಿಕರನ್ನು ಎತ್ತಿ ಕಟ್ಟಿದ್ದಾರೆ. ಕಾರ್ಯಕರ್ತರನ್ನು ಬಿಟ್ಟರೆ ಮುತಾಲಿಕ್ ಜೊತೆ ಯಾರಿದ್ದಾರೆ. ನಾಳಿನ ದಿನ ಇವರ ಹಿಂದೆ ಹೋದವರ ಗತಿ ಏನು? ಸಂಘಟನೆ ಮಾಡಿದಷ್ಟು ರಾಜಕೀಯ ಸುಲಭ ಅಲ್ಲ. ದುಡ್ಡು ಹಣ ವ್ಯವಸ್ಥೆ ಇದ್ದರೆ ಮಾತ್ರ ರಾಜಕೀಯ. ಸುನಿಲ್ ಕುಮಾರ್ ಅವರ ಪ್ರಭಾವದಿಂದ ನಾವು ಈ ರೀತಿ ಹೇಳುತ್ತಿಲ್ಲ. ಮಂಗಳೂರು ವಿಭಾಗ ನನ್ನ ಜವಾಬ್ದಾರಿ. ಉಡುಪಿ, ಮಂಗಳೂರು ಉತ್ತರ ಕನ್ನಡ ಸಹಿತ ನಾಲ್ಕು ಜಿಲ್ಲೆ ನನ್ನ ಜವಾಬ್ದಾರಿ. ನನಗೆ ಬಿಜೆಪಿಯ ಚಿಂತೆ ಇಲ್ಲ. ನನ್ನ ಕಾರ್ಯಕರ್ತರ ಚಿಂತೆ ಇದೆ. ನಮ್ಮ ಕಾರ್ಯಕರ್ತರು ಬೀದಿಗೆ ಬೀಳದಂತೆ ನಾನು ಎಚ್ಚರಿಕೆವಹಿಸಬೇಕಾಗಿದೆ ಎಂದರು.

ಸಂಘ ಪರಿವಾರಕ್ಕೆ ಮನವಿ ಕೊಟ್ಟು ಮಾತನಾಡೋಣ. ಮುತಾಲಿಕರಿಗೆ ಈಗ 68 ವರ್ಷ ವಯಸ್ಸು. ಈಗ ಸೋತರೆ ಅದಕ್ಕಿಂತ ದೊಡ್ಡ ಅವಮಾನ ಉಂಟಾ? ಇಷ್ಟರವರೆಗೆ ಸಂಪಾದಿಸಿದ ಹೆಸರು ಸಂಘಟನೆ ಎಲ್ಲಾ ಮುರಿದು ಬೀಳುತ್ತೆ. ಕಾರ್ಯಕರ್ತರು ಕೈ ಬಿಟ್ಟು ಹೋಗುತ್ತಾರೆ ಯಾವ ಪುರುಷಾರ್ಥಕ್ಕೆ ಈ ಸ್ಪರ್ಧೆ? ಒಬ್ಬ ಉದ್ಯಮಿ ಮತ್ತು ವಕೀಲಗೆ ಸುನಿಲ್ ಕುಮಾರ್ ವಿರುದ್ಧ ವೈಯಕ್ತಿಕ ದ್ವೇಷ ಇದೆ. ಅವರ ದ್ವೇಶ ಸಾಧನೆಗೋಸ್ಕರ ಮುತಾಲಿಕ್​ ಅವರನ್ನು ಬಲಿಕೊಡುತ್ತಿದ್ದಾರೆ. ಯಾರು, ದ್ವೇಷ ಸಾಧನೆ ಮಾಡುತ್ತಿದ್ದಾರೋ ಅವರೇ ಚುನಾವಣೆಗೆ ನಿಲ್ಲಬಹುದಿತ್ತಲ್ಲ? ಕಾರ್ಕಳದ ಇಬ್ಬರು ವ್ಯಕ್ತಿಗಳಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಅದಕ್ಕಾಗಿ ಮುತಾಲಿಕರನ್ನು ಎತ್ತಿ ಕಟ್ಟಿದ್ದಾರೆ. ಈ ಬಗ್ಗೆ ಎರಡು ತಿಂಗಳ ಹಿಂದೆ ನನ್ನ ಮನೆಯಲ್ಲಿ ಚರ್ಚೆಯಾಗಿತ್ತು. ಹಲವು ಹಿಂದೂ ಸಂಘಟನೆಗಳ ಪ್ರಮುಖರು ಕೂಡ ಬಂದಿದ್ದರು. ಆ ವ್ಯಕ್ತಿಗಳ ಜೊತೆ ಸೇರಬೇಡಿ ಎಂದು ಎಲ್ಲರೂ ಬುದ್ಧಿವಾದ ಹೇಳಿದ್ದರು. ಈಗ ಪ್ರಮೋದ್ ಮುತಾಲಿಕ್ ಅಭಿಮಾನಿ ಬಳಗ ಕಟ್ಟಿಕೊಂಡಿದ್ದಾರೆ. ಹಾಗಾದರೆ ಶ್ರೀರಾಮ ಸೇನೆ ಸಂಘಟನೆ ಕಾರ್ಯಕರ್ತರು ಬೇಡವಾ? ಎಂದು ಪ್ರಶ್ನಿಸಿದರು.

Previous Post

ದೇಶದಲ್ಲೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರದಲ್ಲಿ ಲಿಥಿಯಮ್ ನಿಕ್ಷೇಪ ಪತ್ತೆ

Next Post

ನಾವೆಲ್ಲ ಒಂದೇ ಕುಟುಂಬ ಸದಸ್ಯರು: ಬೋಹ್ರಾ ಮುಸ್ಲಿಮರನ್ನು ಭೇಟಿ ಮಾಡಿದ ಪ್ರಧಾನಿ

Next Post
ನಾವೆಲ್ಲ ಒಂದೇ ಕುಟುಂಬ ಸದಸ್ಯರು: ಬೋಹ್ರಾ ಮುಸ್ಲಿಮರನ್ನು ಭೇಟಿ ಮಾಡಿದ ಪ್ರಧಾನಿ

ನಾವೆಲ್ಲ ಒಂದೇ ಕುಟುಂಬ ಸದಸ್ಯರು: ಬೋಹ್ರಾ ಮುಸ್ಲಿಮರನ್ನು ಭೇಟಿ ಮಾಡಿದ ಪ್ರಧಾನಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.