Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ರೈತರ ಸಾಲ ಮನ್ನಾ ಮಾಡದವರು ಉದ್ಯಮಿಗಳ ಸಾಲ ಮನ್ನಾ ಮಾಡಿರುವುದು ಸರಿಯೇ?: ತೇಜಸ್ವಿ ಸೂರ್ಯಗೆ ಸಿದ್ದರಾಮಯ್ಯ ಪ್ರಶ್ನೆ

editor tv by editor tv
February 14, 2023
in ಸುದ್ದಿ
0
ರೈತರ ಸಾಲ ಮನ್ನಾ ಮಾಡದವರು ಉದ್ಯಮಿಗಳ ಸಾಲ ಮನ್ನಾ ಮಾಡಿರುವುದು ಸರಿಯೇ?: ತೇಜಸ್ವಿ ಸೂರ್ಯಗೆ ಸಿದ್ದರಾಮಯ್ಯ ಪ್ರಶ್ನೆ
1.9k
VIEWS
Share on FacebookShare on TwitterShare on Whatsapp

ವಿಧಾನಸಭೆ: ರೈತರ ಸಾಲಮನ್ನಾ ಮಾಡಿದರೆ ದೇಶಕ್ಕೆ ಒಳ್ಳೆಯದಲ್ಲ ಅಂತಾ ಹೇಳುತ್ತಾರೆ. ಆದರೆ ಉದ್ಯಮಿಗಳ ಸಾಲ ಮನ್ನಾ ಮಾಡಿದ್ದೀರಲ್ಲ ಇದು ಸರಿಯೇ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರು ಪ್ರಶ್ನಿಸಿದರು. ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ ಮಾತನಾಡುವ ವೇಳೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಹೇಳಿಕೆ ಪ್ರಸ್ತಾಪಿಸಿದ ಅವರು, ೧೨ ಲಕ್ಷಕ್ಕೂ ಹೆಚ್ಚು ಕೋಟಿ‌ ಸಾಲ ಮನ್ನಾ ಮಾಡಿದ್ದೀರಿ. ಯಾವ ಕಾರಣಕ್ಕೆ ಉದ್ಯಮಿಗಳ ಸಾಲ ಮನ್ನಾ ಮಾಡಿದ್ದೀರಾ ಹೇಳಿ? ಇದು ಬಿಜೆಪಿಯವರ ಮೈಂಡ್​ ಸೆಟ್​​​​ ಎಂದು ಖಾರವಾಗಿ ನುಡಿದರು. ನೀವು ನರೇಗಾ ಯೋಜನೆಯ ಹಣವನ್ನು ಕಡಿತ ಮಾಡಿದ್ದೀರಿ, ರಸಗೊಬ್ಬರದ ಸಬ್ಸಿಡಿಯನ್ನು ಕೂಡ ತೆಗೆದು ಹಾಕಿದ್ದೀರಿ. ಇನ್ನೆಲ್ಲಿ ರೈತರ ಆದಾಯ ದುಪ್ಪಟ್ಟಾಗುತ್ತದೆ ಎಂದು ಹೇಳಿದರು.

ಮೊದಲು ಗೋ ಹತ್ಯೆ ನಿಷೇಧ ಕಾನೂನು ವಾಪಸ್ ಪಡೆಯಿರಿ

ಗೋವಿನ ರಕ್ಷಣೆ ಆಗಿದೆ ಎಂದು ಹೇಳುತ್ತಾರೆ. ಆದರೆ ರಾಜ್ಯದಲ್ಲಿ ಗೋ ಶಾಲೆಗಳು ಜಾಸ್ತಿ ಇಲ್ಲ. ರೈತರಿಗೆ ಮಾರಲು ಆಗುತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಇದಕ್ಕೆ ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ್ ಆಕ್ಷೇಪ ವ್ಯಕ್ತಪಡಿಸಿದಾಗ ಪಾಟೀಲರನ್ನು ಗದರಿಸಿದ ಸಿದ್ದರಾಮಯ್ಯ, ನೀವು ರೈತರಿದ್ದೀರಿ, ರೈತರ ಸಮಸ್ಯೆ ಅರ್ಥ ಮಾಡಿಕೊಳ್ಳಿ ಎಂದರು. ಗೋ ಹತ್ಯೆ ನಿಷೇಧ ಕಾಯಿದೆ ಹಿಂಪಡೆಯಿರಿ. ಮೊದಲಿನಂತೆಯೇ ಕಾಯಿದೆ ಇರಲಿ. ಅನುಪಯುಕ್ತ ರಾಸುಗಳನ್ನ ಮಾರಲು ಅವಕಾಶ ಮಾಡಿಕೊಡಿ ಎಂದು ಆಗ್ರಹಿಸಿದರು.

ಕೋಮುವಾದಿ ಅಜೆಂಡಾ ತರಲು ಗೋ ಹತ್ಯೆ ನಿಷೇಧ ಕಾಯಿದೆ ಜಾರಿ ಮಾಡಲಾಗಿದೆ. ಒಂದು ಹಸುವಿಗೆ‌ 60 ರೂಪಾಯಿ‌ ಕೊಡುತ್ತೀರಿ, ಇದು ಸಾಕಾಗುತ್ತಾ? ಈ ಮೊದಲು ನಿರುಪಯುಕ್ತ ಗೋವುಗಳನ್ನು ರೈತರು‌ ಮಾರಾಟ ಮಾರಿಕೊಳ್ಳುತ್ತಿದ್ದರು. ಆದರೆ ಈಗ ಮಾರಾಟ‌ ಮಾಡುವಂತಿಲ್ಲ ಎಂದು ಸಿದ್ದರಾಮಯ್ಯ ಹೇಳುವಾಗ ಮಧ್ಯಪ್ರವೇಶಿಸಿದ ಗೃಹಸಚಿವ ಆರಗ ಜ್ಞಾನೇಂದ್ರ, ಮಾರಾಟ ಮಾಡಬಹುದು ಎಂದರು.

ಕಾಯಿದೆ ಜಾರಿ ನಂತರ ಮಾರಾಟ ಮಾಡಲು ಅವಕಾಶ ಇಲ್ಲ ಕಣ್ರೀ‌ ಎಂದು ಸಿದ್ದರಾಮಯ್ಯ ಅವರು ಗೃಹಸಚಿವರಿಗೆ ತಿರುಗೇಟು ನೀಡಿದರಲ್ಲದೆ, ಹೇ ಮಾಧುಸ್ವಾಮಿ, ಇವರಿಗೆ ಸ್ವಲ್ಪ ನೀವೇ ಹೇಳಿ ಕೊಡ್ರೀ ಎಂದರು. ಈ ವೇಳೆ, ಹಾಗಾದರೆ‌ ಏನು ಮಾಡಬೇಕು ನೀವೇ ಹೇಳಿ‌ ಸಿದ್ದರಾಮಯ್ಯ ‌ನವರೇ ಎಂದು ಗೃಹಸಚಿವರು ಕೇಳಿದರು. ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ಗೋ ಹತ್ಯೆ ನಿಷೇಧ ಕಾನೂನು ವಾಪಸ್ ಪಡೆಯಿರಿ, ಈ‌ ಮೊದಲು‌ ಇದ್ದಂತೆ‌ಯೇ ಇರಲಿ. ಮೊದಲು ಕಾನೂನು ವಾಪಸ್ ಪಡೆಯಿರಿ ಎಂದು ಆಗ್ರಹಿಸಿದರು.

ಸಚಿವ ಜೆ.ಸಿ.ಮಾಧುಸ್ವಾಮಿ ಬ್ಯಾಡ್ ಕೇಸ್​​ ಗುಡ್​ ಲಾಯರ್​​

ರಾಜ್ಯಪಾಲರ ಭಾಷಣಕ್ಕೆ ಬನ್ನಿ ಎಂದು ಮಾಧುಸ್ವಾಮಿ ಹೇಳಿದರು. ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಬಗ್ಗೆ ನನಗೆ ಗೌರವವಿದೆ. ಅವರು ಬ್ಯಾಡ್ ಕೇಸ್​​ ಗುಡ್​ ಲಾಯರ್. ನಾನು ವಕೀಲನಾಗಿದ್ದಾಗ ಓರ್ವ ಹಿರಿಯ ವಕೀಲರಿದ್ದರು. ಯಾವುದೇ ಬ್ಯಾಡ್ ಕೇಸ್ ಬಂದರೂ ಅವರ ಬಳಿ ಕಳಿಸುತ್ತಿದ್ದರು. 25 ಮಧ್ಯಂತರ ಅರ್ಜಿಗಳನ್ನು ಹಾಕುತ್ತಿದ್ದರು. ಜಡ್ಜ್​​ ಈ ಎಲ್ಲಾ ವಾದಗಳನ್ನು ಕೇಳಿ ತೀರ್ಪು ಕೊಡಬೇಕಿತ್ತು. ಇದು ಮುಗಿಯಲು 15ರಿಂದ 20 ವರ್ಷ ಸಮಯ ತೆಗೆದುಕೊಳ್ಳುತ್ತಿತ್ತು. ಅರ್ಜಿ ಹಾಕಿದವನು, ಮಕ್ಕಳು ಸತ್ತು, ಮೊಮ್ಮಕ್ಕಳ ಕಾಲಕ್ಕೆ ತೀರ್ಪು ಬರುತ್ತಿತ್ತು. ಹಾಗಾಗಿ ಗೆದ್ದವನು ಸೋತ-ಸೋತವನು ಸತ್ತ ಎಂದು ಹೇಳುತ್ತಿದ್ದೆವು ಎಂದರು.

Previous Post

ದೆಹಲಿ, ಮುಂಬೈನಲ್ಲಿರುವ BBC ಕಚೇರಿಗಳಲ್ಲಿ ಐಟಿ ಪರಿಶೀಲನೆ – ಸಿಬ್ಬಂದಿ ಮೊಬೈಲ್‌, ಲ್ಯಾಪ್‌ಟಾಪ್‌ ವಶ

Next Post

ಮಂಗಳೂರಿನಲ್ಲಿ ರಜನಿಕಾಂತ್ : ಚಿತ್ರೀಕರಣ ಸ್ಥಳ, ದೃಶ್ಯದ ಮಾಹಿತಿ

Next Post
ಮಂಗಳೂರಿನಲ್ಲಿ ರಜನಿಕಾಂತ್ : ಚಿತ್ರೀಕರಣ ಸ್ಥಳ, ದೃಶ್ಯದ ಮಾಹಿತಿ

ಮಂಗಳೂರಿನಲ್ಲಿ ರಜನಿಕಾಂತ್ : ಚಿತ್ರೀಕರಣ ಸ್ಥಳ, ದೃಶ್ಯದ ಮಾಹಿತಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.