Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

Tripura Election Results: ತ್ರಿಪುರಾದಲ್ಲಿ ಕಿಂಗ್ ಮೇಕರ್ ಆಗಲಿದೆಯೇ ಟಿಪ್ರಾ ಮೋಥಾ? ಯಾರಿದು ಪ್ರದ್ಯೋತ್ ಬಿಕ್ರಮ್ ಮಾಣಿಕ್ಯ ದೆಬ್ಬರ್ಮಾ?

editor tv by editor tv
March 2, 2023
in ರಾಷ್ಟ್ರೀಯ, ಸುದ್ದಿ
0
Tripura Election Results: ತ್ರಿಪುರಾದಲ್ಲಿ ಕಿಂಗ್ ಮೇಕರ್ ಆಗಲಿದೆಯೇ ಟಿಪ್ರಾ ಮೋಥಾ? ಯಾರಿದು ಪ್ರದ್ಯೋತ್ ಬಿಕ್ರಮ್ ಮಾಣಿಕ್ಯ ದೆಬ್ಬರ್ಮಾ?
1.9k
VIEWS
Share on FacebookShare on TwitterShare on Whatsapp

ದೆಹಲಿ: ಟಿಪ್ರಾ ಮೋಥಾ (Tipraha Indigenous Progressive Regional Alliance) ಮುಖ್ಯಸ್ಥ ಮತ್ತು ತ್ರಿಪುರದ ರಾಜವಂಶಸ್ಥರಾದ ಪ್ರದ್ಯೋತ್ ಬಿಕ್ರಮ್ ಮಾಣಿಕ್ಯ ದೆಬ್ಬರ್ಮಾ (Pradyot Bikram Manikya Debbarma) ತ್ರಿಪುರಾದಲ್ಲಿ ಈ ಬಾರಿಯ ವಿಧಾನಸಭಾ ಚುನಾವಣೆಯ(Tripura Election )ಹೈಲೈಟ್ ಆಗಿದ್ದಾರೆ. ಕಾಂಗ್ರೆಸ್ ಮೈತ್ರಿಕೂಟವು ತನ್ನ ಮೈತ್ರಿಕೂಟಕ್ಕೆ ಸೇರಲು ಟಿಪ್ರಾ ಮೋಥಾವನ್ನು ಸ್ವಾಗತಿಸಿದ ನಂತರ ಟಿಪ್ರಾ ಮೋಥಾವನ್ನು ತ್ರಿಪುರಾ ಚುನಾವಣೆ 2023 ರ ಕಿಂಗ್ ಮೇಕರ್ ಎಂದು ಕರೆಯಲಾಗುತ್ತದೆ. 2023ರ ತ್ರಿಪುರಾ ವಿಧಾನಸಭೆ ಚುನಾವಣೆಯಲ್ಲಿ ಟಿಪ್ರಾ ಮೋಥಾ 42 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ತ್ರಿಪುರಾ ವಿಧಾನಸಭಾ ಚುನಾವಣೆಗೆ ಮುನ್ನ ಪ್ರದ್ಯೋತ್ ದೆಬ್ಬರ್ಮಾ ಯಾವುದೇ ಮೈತ್ರಿಯನ್ನು ಒಪ್ಪಿಕೊಂಡಿರಲಿಲ್ಲ.

ಯಾರು ಈ ಪ್ರದ್ಯೋತ್ ಬಿಕ್ರಮ್ ಮಾಣಿಕ್ಯ ದೆಬ್ಬರ್ಮಾ?

ಕಾಂಗ್ರೆಸ್ ಪಕ್ಷದ ಆಗಿನ ಪ್ರಧಾನ ಕಾರ್ಯದರ್ಶಿ ಮತ್ತು ಈಶಾನ್ಯ ಉಸ್ತುವಾರಿ ಲುಯಿಜಿನ್ಹೊ ಫಲೈರೊ ಅವರೊಂದಿಗಿನ ಭಿನ್ನಾಭಿಪ್ರಾಯಗಳ ನಂತರ 2019 ರಲ್ಲಿ ಪಕ್ಷವನ್ನು ತೊರೆಯುವ ಮೊದಲು ದೆಬ್ಬರ್ಮಾ ಅವರು ಕಾಂಗ್ರೆಸ್‌ನೊಂದಿಗೆ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ಮಾಜಿ ರಾಜಮನೆತನದ ವಂಶಸ್ಥ ಪ್ರದ್ಯೋತ್ ಬಿಕ್ರಮ್ ಕಿಶೋರ್ ಮಾಣಿಕ್ಯ ದೇಬ್ ಬರ್ಮಾ ಬಹದ್ದೂರ್ 2019 ರಲ್ಲಿ ಟಿಪ್ರಾ ಮೋಥಾವನ್ನು ಸ್ಥಾಪಿಸಿದರು.

ಟಿಪ್ರಾ ಮೋಥಾಗೆ ಪ್ರದ್ಯೋತ್ ದೇಬ್ ಬರ್ಮಾ ನೇತೃತ್ವವಿದ್ದು ಇದು ರಾಜಕೀಯ ಪಕ್ಷವಾಗುವ ಮೊದಲು, ಸಾಮಾಜಿಕ ಸಂಘಟನೆಯಾಗಿತ್ತು.
ಇವರು TNT-The Northeast Today ಪತ್ರಿಕೆಯ ಸಂಪಾದಕರೂ ಆಗಿದ್ದರು.

ನವದೆಹಲಿಯಲ್ಲಿ ಜುಲೈ 4, 1978 ರಂದು ಬುಬಾಗ್ರಾ ಪ್ರದ್ಯೋತ್ ಮಾಣಿಕ್ಯ ಅವರು ಮಹಾರಾಜ ಕಿರಿತ್ ಬಿಕ್ರಮ್ ಕಿಶೋರ್ ದೆಬ್ಬರ್ಮಾ (ತ್ರಿಪುರದ 185 ನೇ ರಾಜ) ಮತ್ತು ಮಹಾರಾಣಿ ಭಿಬು ಕುಮಾರಿ ದೇವಿಯ ಮೊದಲ ಮಗನಾಗಿ ಜನಿಸಿದರು. ಅವರ ತಂದೆ-ತಾಯಿ ಇಬ್ಬರೂ ಕಾಂಗ್ರೆಸ್‌ನಲ್ಲಿದ್ದರು.ಅವರು ತಮ್ಮ ಆರಂಭಿಕ ದಿನಗಳನ್ನು ಮೇಘಾಲಯದ ಶಿಲ್ಲಾಂಗ್‌ನಲ್ಲಿ ತ್ರಿಪುರಾ ಕೋಟೆಯಲ್ಲಿ ಕಳೆದರು. ಅಲ್ಲದೆ, ಅವರ ಆರಂಭಿಕ ಉನ್ನತ ಶಿಕ್ಷಣ ಶಿಲ್ಲಾಂಗ್‌ನಲ್ಲಿತ್ತು.

ಕಿಂಗ್ ಮೇಕರ್ ಆಗಲಿದೆಯೇ ಟಿಪ್ರಾ ಮೋಥಾ

ಮತ ಎಣಿಕೆ ಪ್ರಕ್ರಿಯೆ ಮುಂದುವರಿದ್ದು, ಇಲ್ಲಿಯವರೆಗೆ ಲಭಿಸಿದ ಮಾಹಿತಿ ಪ್ರಕಾರ ಟಿಪ್ರಾ ಮೋಥಾ 4ಸೀಟುಗಳನ್ನು ಗೆದ್ದಿದ್ದು 8 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇತ್ತ ಬಿಜೆಪಿ 11 ಸೀಟುಗೆದ್ದು, 22 ರಲ್ಲಿ ಮುನ್ನಡೆ ಸಾಧಿಸಿದೆ. ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಮಾರ್ಕ್ಸಿಸ್ಟ್) 1 ಸ್ಥಾನ ಗೆದ್ದಿದ್ದು, 10ರಲ್ಲಿ ಮುನ್ನಡೆ ಇದೆ. ರಾಜ್ಯದ ಬುಡಕಟ್ಟು ಬೆಲ್ಟ್‌ಗಳಲ್ಲಿ ಬಿಜೆಪಿಯ ಮತಗಳ ಪಾಲನ್ನು ಟಿಪ್ರಾ ಮೋಥಾ ಗಳಿಸಿರುವುದು ಇಲ್ಲಿ ಕಾಣಸಿಗುತ್ತದೆ.

2018 ರ ಚುನಾವಣೆಯಲ್ಲಿ, ಬಿಜೆಪಿ ಪರಿಶಿಷ್ಟ ಪಂಗಡಗಳಿಗೆ ಮೀಸಲಾದ 10 ಸ್ಥಾನಗಳನ್ನು ಗಳಿಸಿತ್ತು ಮತ್ತು ಅದರ ಮಿತ್ರಪಕ್ಷವಾದ ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರಾ (IPFT) ಎಂಟು ಸ್ಥಾನಗಳನ್ನು ಗೆದ್ದಿದ್ದು ಸಿಪಿಐ(ಎಂ) ಎರಡು ಸ್ಥಾನಗಳನ್ನು ಗೆದ್ದಿತ್ತು.

ಈ ಬಾರಿ, ದೆಬ್ಬರ್ಮಾ ಅವರ ‘ಗ್ರೇಟರ್ ಟಿಪ್ರಾಲ್ಯಾಂಡ್’ ಭರವಸೆಯೊಂದಿಗೆ ಬುಡಕಟ್ಟು ಮತದಾರರ ದೊಡ್ಡ ವರ್ಗದ ಬೆಂಬಲವನ್ನು ಸ್ಪಷ್ಟವಾಗಿ ಗೆದ್ದಿರುವ ಕಾರಣ, IPFT ಬದಲು ಟಿಪ್ರಾ ಮೋಥಾ ಅತ್ಯಂತ ಪ್ರಮುಖ ಬುಡಕಟ್ಟು ಪಕ್ಷವಾಗಿ ಹೊರಹೊಮ್ಮಿದೆ.
2018 ರ ಚುನಾವಣೆಯಲ್ಲಿ ಎಡರಂಗದ ಸರ್ಕಾರವನ್ನು ಉರುಳಿಸುವ ಹಿಂದಿನ ಪ್ರಮುಖ ಅಂಶವೆಂದರೆ IPFT ಯೊಂದಿಗಿನ ಬಿಜೆಪಿಯ ಮೈತ್ರಿಯಾಗಿತ್ತು

2018 ರ ಚುನಾವಣೆಗೆ ಮುಂಚಿತವಾಗಿ ಎದ್ದ ಜನಪ್ರಿಯ ಬೇಡಿಕೆಯಾದ ‘ಟಿಪ್ರಾಲ್ಯಾಂಡ್’ ಭರವಸೆಯನ್ನು ನೀಡಲು IPFT ವಿಫಲವಾದಾಗ, ದೆಬ್ಬರ್ಮಾ ತನ್ನ ರಾಜಮನೆತನ ಪರಂಪರೆಯನ್ನು ಬಳಸಿ ವ್ಯವಸ್ಥಿತವಾಗಿ ಬುಡಕಟ್ಟು ಜನಾಂಗದ ಜನರತ್ತ ಹೋದರು.
ಕ್ರಮೇಣ, ಅವರು ಸ್ಥಳೀಯ ಜನರ ದನಿಯಾಗುವಲ್ಲಿ ಯಶಸ್ವಿಯಾದರು.ಜನರು ಅವರನ್ನು ‘ಬುಬಾಗ್ರಾ (ರಾಜ)’ ಎಂದು ಕರೆಯಲು ಪ್ರಾರಂಭಿಸಿದರು. ಬುಡಕಟ್ಟು ಪ್ರಾಬಲ್ಯದ ಪ್ರದೇಶಗಳಲ್ಲಿ ಐಪಿಎಫ್‌ಟಿಯ ಪ್ರಾಬಲ್ಯ ಕಡಿಮೆಯಾಗುತ್ತಾ ಬಂತು.

ಒಂದು ಕಾಲದಲ್ಲಿ ತ್ರಿಪುರಾದಲ್ಲಿ ಭದ್ರಕೋಟೆ ಹೊಂದಿದ್ದ ಸಿಪಿಐ(ಎಂ) ಕೂಡ ಟಿಪ್ರಾ ಮೋಥಾಕ್ಕೆ ತನ್ನ ಹಿಡಿತವನ್ನು ಬಿಟ್ಟುಕೊಟ್ಟಿದೆ.
ಟಿಟಿಎಡಿಸಿ ಚುನಾವಣೆಯಲ್ಲಿ ಟಿಪ್ರಾ ಮೋಥಾ 18 ಸ್ಥಾನಗಳನ್ನು ಗೆದ್ದುಕೊಂಡಿದ್ದು ಬಿಜೆಪಿ ಕೇವಲ 10 ಸ್ಥಾನಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು. ಹಲವಾರು ಪ್ರಯತ್ನಗಳ ಹೊರತಾಗಿಯೂ ಆಡಳಿತಾರೂಢ ಬಿಜೆಪಿ ಅಥವಾ ಪ್ರತಿಪಕ್ಷ ಸಿಪಿಐ(ಎಂ)ಗೆ ವಿಧಾನಸಭೆ ಚುನಾವಣೆಯಲ್ಲಿ ತಿಪ್ರಾ ಮೋಥಾದೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ.

Previous Post

ಕೇಂದ್ರ ಸರ್ಕಾರದ ಅಧಿಕಾರ ಕಿತ್ತುಕೊಂಡ ಸುಪ್ರೀಂ- ಚುನಾವಣಾ ಆಯುಕ್ತರ ನೇಮಕಕ್ಕೆ ಸಮಿತಿ ರಚನೆ

Next Post

40 ಲಕ್ಷ ಲಂಚ – ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಪುತ್ರ

Next Post
40 ಲಕ್ಷ ಲಂಚ – ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಪುತ್ರ

40 ಲಕ್ಷ ಲಂಚ – ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಪುತ್ರ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.