Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಮಂಗಳೂರಿಗರ ಗಮನಕ್ಕೆ: ರಸ್ತೆ ಸಂಚಾರದಲ್ಲಿ ಬದಲಾವಣೆ, ನಿಯಮ ಪಾಲಿಸಲು ಸೂಚನೆ

editor tv by editor tv
March 4, 2023
in ಕರಾವಳಿ, ಸುದ್ದಿ
0
ಮಂಗಳೂರಿಗರ ಗಮನಕ್ಕೆ: ರಸ್ತೆ ಸಂಚಾರದಲ್ಲಿ ಬದಲಾವಣೆ, ನಿಯಮ ಪಾಲಿಸಲು ಸೂಚನೆ
1.9k
VIEWS
Share on FacebookShare on TwitterShare on Whatsapp

ಮಂಗಳೂರು (ಮಾ.4): ನೂತನ ಕಮಿಷನರ್ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಮಂಗಳೂರು ನಗರದ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಮುಂದಾಗಿದ್ದು, ಅದರ ಮೊದಲ ಹಂತವಾಗಿ ನಗರದ ಅತೀ ವಾಹನ ದಟ್ಟಣೆ ಇರುವ ಹಂಪನಕಟ್ಟೆ ವೃತ್ತದಲ್ಲಿ ಪ್ರಾಯೋಗಿಕವಾಗಿ ಬದಲಾವಣೆ ಮಾಡಲಾಗಿದೆ. ಸದ್ಯ ಈ ಪ್ರಾಯೋಗಿಕ ಬದಲಾವಣೆ ಜಾರಿಗೆ ಬರಲಿದ್ದು, ಸಾರ್ವಜನಿಕರು ನಿಯಮ ಪಾಲಿಸಲು ಮಂಗಳೂರು ಕಮಿಷನರ್ ಕುಲದೀಪ್ ಜೈನ್ ಮನವಿ ಮಾಡಿದ್ದಾರೆ. ಮಂಗಳೂರು ನಗರದ ಹಂಪನಕಟ್ಟ ಜಂಕ್ಷನ್ ನಗರದ ಪ್ರಮುಖ ಜಂಕ್ಷನ್ ಆಗಿದ್ದು, ಈ ಜಂಕ್ಷನ್ ಅತೀ ವಾಹನ ದಟ್ಟಣೆ ಹಾಗೂ ಹೆಚ್ಚು ಪಾದಚಾರಿಗಳ ಚಲನೆಯಿಂದ ಕೂಡಿದೆ. ಈ ಜಂಕ್ಷನ್ ನಲ್ಲಿ ವಾಹನ ದಟ್ಟಣೆಯನ್ನು ಕಡಿಮೆ ಮಾಡಿ ವಾಹನಗಳ ಸುಗಮ ಸಂಚಾರ ಮತ್ತು ಪಾದಚಾರಿಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ಹಂಪನಕಟ್ಟೆ ಜಂಕ್ಷನ್‌ನ ಮಧ್ಯದಲ್ಲಿ ಬ್ಯಾರಿಕೇಡ್‌ ಅಳವಡಿಸಿ ಈ ಕೆಳಗಿನಂತೆ ಸಂಚಾರ ಮಾರ್ಗದಲ್ಲಿ ಪ್ರಾಯೋಗಿಕವಾಗಿ ಬದಲಾವಣೆ ಮಾಡಲಾಗಿದೆ.

1) ಕ್ಲಾಕ್ ಟವರ್ ಕಡೆಯಿಂದ ಫಳ್ನೀರ್ ರಸ್ತೆ (ಮದರ್ ಥೆರೇಸಾ ರಸ್ತೆ) ಕಡೆಗೆ ಹೋಗುವ ಎಲ್ಲಾ ವಾಹನಗಳು ಇನ್ನು ಮುಂದೆ ಹಂಪನಕಟ್ಟ ಸರ್ಕಲ್ ನಲ್ಲಿ ನೇರವಾಗಿ ಮುಲ್ಕಿ ಸುಂದರ್‌ರಾಮ್ ಶೆಟ್ಟಿ ರಸ್ತೆಯಲ್ಲಿ ಚಲಸಿ, ಜೋಸ್ ಅಲುಕಾಸ್ ಎದುರು U ಟರ್ನ್ ಪಡೆದು ವಾಪಾಸು ಹಂಪನಕಟ್ಟ ಜಂಕ್ಷನ್‌ಗೆ ಬಂದು ಎಡಕ್ಕೆ ತಿರುಗಿ (ಫ್ರೀ ಲೆಫ್ಟ್) ಫ‌ಳ್ನಿರ್ ರಸ್ತೆ (ಮದರ್ ಥೆರೇಸಾ ರಸ್ತೆ) ಕಡೆಗೆ ಸಂಚರಿಸಬಹುದಾಗಿದೆ.

2) ಫಳ್ನೀರ್ ರಸ್ತೆ (ಮದರ್ ಥೆರೇಸಾ ರಸ್ತೆ) ಕಡೆಯಿಂದ ನವಭಾರತ್ ಸರ್ಕಲ್ ಕಡೆಗೆ ಹೋಗುವ ವಾಹನಗಳು ಹಂಪನಕಟ್ಟ ಸರ್ಕಲ್‌ನಲ್ಲಿ ಎಡಕ್ಕೆ ತಿರುಗಿ (ಫ್ರೀ ಲೆಫ್ಟ್) ಕ್ಲಾಕ್ ಟವರ್ ಕಡೆಗೆ ಚಲಿಸಿ, ಕ್ಲಾಕ್ ಟವರ್, ಜಂಕ್ಷನ್‌ನಲ್ಲಿ U ಟರ್ನ್ ತೆಗೆದು ಹಂಪನಕಟ್ಟೆ ಜಂಕ್ಷನ್‌ಗೆ ಬಂದು ಎಡಕ್ಕೆ ತಿರುಗಿ (ಫ್ರೀ ಲೆಫ್ಟ್) ನವಭಾರತ್ ಸರ್ಕಲ್ ಕಡೆಗೆ ಸಂಚರಿಸಬಹುದಾಗಿದೆ.

3) ನವಭಾರತ್ ಸರ್ಕಲ್ ಕಡೆಯಿಂದ ಕ್ಲಾಕ್ ಟವರ್ ಕಡೆಗೆ ಸಂಚರಿಸುವ ಎಲ್ಲಾ ವಾಹನಗಳು ಪಂಜೆ ಮಂಗೇಶ್ವರ ರಾವ್ ರಸ್ತೆಯ (ಪಿ.ಎಂ.ರಾವ್) ಮೂಲಕ ಸಂಚರಿಸಿ, ಗಣಪತಿ ಹೈಸ್ಕೂಲ್ ರಸ್ತೆ (ಜಿಹೆಚ್‌ಎಸ್) ಮೂಲಕ ಕೃಷ್ಣಭವನಕಟ್ಟೆ ಜಂಕ್ಷನ್(ಕೆ.ಬಿ.ಕಟ್ಟೆ) ತಲುಪಿ, ಅಲ್ಲಿಂದ ಕ್ಲಾಕ್ ಟವರ್ ಕಡೆಗೆ ಸಂಚರಿಸಬಹುದಾಗಿದೆ. ಹಾಗೆಯೇ ನವಭಾರತ್ ಸರ್ಕಲ್ ಕಡೆಯಿಂದ ಫಳ್ನೀರ್ ರಸ್ತೆ (ಮದರ್ ಥೆರೇಸಾ ರಸ್ತೆ) ಕಡೆಗೆ ಹೋಗುವ ವಾಹನಗಳು ಹಂಪನಕಟ್ಟ ಜಂಕ್ಷನ್‌ನಲ್ಲಿ ಎಡ ತಿರುವು (ಫ್ರೀ ಲೆಫ್ಟ್) ಪಡೆದು ಮೂಲ್ಕಿ ಸುಂದರ್‌ರಾಮ್ ಶೆಟ್ಟಿ ರಸ್ತೆಯಲ್ಲಿ ಚಲಿಸಿ ಜೋಸ್ ಅಲುಕಾಸ್ ಎದುರು U ಟರ್ನ್ ಪಡೆದು ಹಂಪನಕಟ್ಟ ಜಂಕ್ಷನ್ ಗೆ ಬಂದು ಎಡಕ್ಕೆ ತಿರುಗಿ (ಫ್ರೀ ಲೆಫ್ಟ್) ಫಳ್ನೀರ್ (ಮದರ್ ಥೆರೇಸಾ ರಸ್ತೆ) ಕಡೆಗೆ ಹಾಗೂ ನೇರವಾಗಿ ಕ್ಲಾಕ್‌ಟವ‌ ಕಡೆಗೆ ಸಂಚರಿಸಬಹುದಾಗಿದೆ.

4) ಹಂಪನಕಟ್ಟೆ ಜಂಕ್ಷನ್‌ನಲ್ಲಿ ಪಾದಚಾರಿಗಳ ಸುರಕ್ಷಿತಾ ಸಂಚಾರಕ್ಕೆ ಪಾದಚಾರಿಗಳ ಮಾರ್ಗ (Zebra Cross)ಅನ್ನು ಗುರುತಿಸಿದ್ದು, ಪಾದಚಾರಿಗಳು ಕಡ್ಡಾಯವಾಗಿ ಪಾದಚಾರಿಗಳ ಮಾರ್ಗಗಳನ್ನು ಉಪಯೋಗಿಸುವುದು.

ಸಾರ್ವಜನಿಕರಿಗೆ ವಿಶೇಷ ಸೂಚನೆ:ಸ್ಟೇಟ್‌ಬ್ಯಾಂಕ್‌ ಬಸ್‌ ನಿಲ್ದಾಣ ಹಾಗೂ ನಗರ ಸರ್ವಿಸ್ ಬಸ್ ನಿಲ್ದಾಣದಿಂದ ಹೊರಡುವ ಬಸ್ಸುಗಳಿಗೆ ಕೆ.ಜಿ ಕಟ್ಟೆ ಬಸ್ಸು ನಿಲ್ದಾಣದ ನಂತರ ಜೋಸ್ ಅಲುಕಾಸ್ ಎದುರಿನ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಬಸ್ಸುಗಳನ್ನು ಹತ್ತಲು ಅನುವು ಮಾಡಲಾಗಿದ್ದು, ಸಾರ್ವಜನಿಕರು ಯಾವುದೇ ಕಾರಣಕ್ಕೂ ಈ ಬಸ್ಸು ನಿಲ್ದಾಣಗಳನ್ನು ಹೊರತುಪಡಿಸಿ ಹಂಪನಕಟ್ಟೆಯ ಬಳಿ ಬಸ್ಸನ್ನು ಹತ್ತಲು ನಿಲ್ಲದೇ ಕೆ.ಜಿ ಕಟ್ಟೆ ಅಥವಾ ಜೋಸ್ ಅಲುಕಾಸ್ ಬಸ್ ನಿಲ್ದಾಣಗಳನ್ನೇ ಉಪಯೋಗಿಸುವುದು.

Previous Post

ರೋಹನ್ ಕಾರ್ಪೊರೇಷನ್‌ನಿಂದ ರಾಷ್ಟ್ರೀಯ ಸುರಕ್ಷತಾ ದಿನಾಚರಣೆ

Next Post

ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣ ಹೆಚ್ಚಳ

Next Post
ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣ ಹೆಚ್ಚಳ

ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣ ಹೆಚ್ಚಳ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.