

ಹುಬ್ಬಳ್ಳಿ: ಈದ್ಗಾ ಮೈದಾನಕ್ಕೆ ರಾಣಿ ಚೆನ್ನಮ್ಮ (Rani Chennamma) ಹೆಸರಿಡಲು ವಿರೋಧ ವ್ಯಕವಾಗಿದ್ದು, ಹುಬ್ಬಳ್ಳಿ-ಧಾರವಾಡ ಪಾಲಿಕೆ ಕಚೇರಿ ಎದುರು AIMIM ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಅಲ್ಲಿಗೆ ಮತ್ತೆ ಈದ್ಗಾ ಮೈದಾನ ವಿವಾದ ಮುನ್ನೆಲೆಗೆ ಬಂದಿದೆ. ಜಿಲ್ಲಾಧ್ಯಕ್ಷ ನಜೀರ್ ಅಹ್ಮದ್ ಹೊನ್ಯಾಳ್ ನೇತೃತ್ವದಲ್ಲಿ ಧರಣಿ ಮಾಡಿದ್ದು, ಹುಬ್ಬಳ್ಳಿಯ ಈದ್ಗಾ ಮೈದಾನಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಹೀಗಿರುವಾಗ ಮೈದಾನದ ಹೆಸರು ಬದಲಾಯಿಸುವುದು ಸರಿಯಲ್ಲ. ರಾಜಕೀಯ ದುರುದ್ದೇಶದಿಂದ ಹೆಸರು ಬದಲಿಸುತ್ತಿದ್ದಾರೆಂದು ಆರೋಪಿಸಿದರು. ಮರುನಾಮಕರಣ ಪ್ರಕ್ರಿಯೆ ಕೈಬಿಡುವಂತೆ ಪ್ರತಿಭಟನಾಕಾರರ ಆಗ್ರಹಿಸಿದರು. ಬಳಿಕ ಮೇಯರ್ ಈರೇಶ್ ಅಂಚಟಗೇರಿಗೆ ಮನವಿ ಸಲ್ಲಿಸಲಾಯಿತು.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಈದ್ಗಾ ಮೈದಾನವನ್ನು ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರನ್ನು ಇಡಲು ಮುಂದಾಗಿದ್ದು, ಇದಕ್ಕೆ ಯಾರಾದರೂ ತಕರಾರು ಇದ್ದರೆ ಮೂವತ್ತು ದಿನಗಳಲ್ಲಿ ತಕರಾರರು ಅರ್ಜಿ ಸಲ್ಲಿಸಲು ಹುಬ್ಬಳ್ಳಿ-ಧಾರವಾಡ ಪಾಲಿಕೆ ಇತ್ತೀಚೆಗೆ ಅರ್ಜಿ ಕೂಡ ಆಹ್ವಾನಿಸಿತ್ತು.
