Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಸುಮಲತಾ ಅಂಬರೀಶ್​ ಬಿಜೆಪಿ ಸೇರಿದ್ರೆ ಸಂಸದೆ ಸ್ಥಾನದಿಂದ ಅನರ್ಹ ? ಕಮಲ ಮುಡಿಯಲು ಹೊರಟ ಮಂಡ್ಯ ಗೌಡ್ತಿಗೆ ಕಾನೂನು ತೊಡಕು!

editor tv by editor tv
March 9, 2023
in ರಾಜ್ಯ, ಸುದ್ದಿ
0
ಸುಮಲತಾ ಅಂಬರೀಶ್​ ಬಿಜೆಪಿ ಸೇರಿದ್ರೆ ಸಂಸದೆ ಸ್ಥಾನದಿಂದ ಅನರ್ಹ ? ಕಮಲ ಮುಡಿಯಲು ಹೊರಟ ಮಂಡ್ಯ ಗೌಡ್ತಿಗೆ ಕಾನೂನು ತೊಡಕು!
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಾರ್ಚ್​ 12ರಂದು ಮಂಡ್ಯಕ್ಕೆ (Mandya) ಆಗಮಿಸಲಿದ್ದಾರೆ. ಮೋದಿ ಆಗಮನಕ್ಕೂ ಮುನ್ನವೇ  ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮಂಡ್ಯದಿಂದ ಆಯ್ಕೆಯಾಗಿರುವ ಸಂಸದೆ ಸುಮಲತಾ ಅಂಬರೀಶ್(Sumalatha Ambareesh) ಬಿಜೆಪಿ ಸೇರುವ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಬಿಜೆಪಿ ಹೈಕಮಾಂಡ್​ ಸಹ ಸಮಲತಾ ಅಂಬರೀಶ್​ ಪಕ್ಷಕ್ಕೆ ಸೇರಿಸಿಕೊಳ್ಳಲು ಗ್ರೀನ್​ ಸಿಗ್ನಲ್​ ನೀಡಿದೆ. ಈ ಹಿನ್ನೆಲೆಯಲ್ಲಿ ಸುಮಲತಾ ಕಮಲ ಮುಡಿಯುವುದಕ್ಕೆ ಸಿದ್ಧತೆ ನಡೆಸಿದ್ದಾರೆ. ಆದರೆ, ಸಂಸದೆ ಬಿಜೆಪಿ ಸೇರಲು ಬಹುದೊಡ್ಡ ತಾಂತ್ರಿಕ ಅಡಚಣೆ ಎದುರಾಗಿದೆ. ಯಾವುದಾದರೊಂದು ರಾಜಕೀಯ ಪಕ್ಷದಿಂದ ಆಯ್ಕೆಯಾದ ಸದಸ್ಯರು ರಾಜೀನಾಮೆ ನೀಡದೇ ಮತ್ತೊಂದು ಪಕ್ಷಕ್ಕೆ ಸೇರ್ಪಡೆಯಾದರೆ, ಅವರು ಅನರ್ಹಗೊಳ್ಳುತ್ತಾರೆ. ಅಲ್ಲದೇ ಪಕ್ಷೇತರರಾಗಿ ಸ್ಪರ್ಧಿಸಿ ಆಯ್ಕೆಯಾದ ಸಂಸದರು ಒಂದು ವೇಳೆ ರಾಜಕೀಯ ಪಕ್ಷವೊಂದಕ್ಕೆ ಸೇರ್ಪಡೆಯಾದರೆ ಅನರ್ಹಗೊಳ್ಳುತ್ತಾರೆ.

ಹೌದು….ಇದೀಗ ಸುಮಲತಾ ಅಂಬರೀಶ್ ಅವರು ಸಹ ಪಕ್ಷೇತರ ಸಂಸದೆಯಾಗಿದ್ದು, ಇದೀಗ ಬಿಜೆಪಿ ಸೇರ್ಪಡೆಗೆ ತೀರ್ಮಾನಿಸಿದ್ದಾರೆ. ಆದ್ರೆ, ಮಂಡ್ಯ ಗೌಡ್ತಿ ಬಿಜೆಪಿ ಸೇರ್ಪಡೆ ಹಾದಿ ಅಷ್ಟು ಸುಲಭವಿಲ್ಲ. ಅವರಿಗೆ ಕಾನುನು ತೊಡಕು ಎದುರಾಗಲಿದೆ. ಸಂವಿಧಾನದ 10ನೇ ಷೆಡ್ಯೂಲ್​ನಡಿ ಪಕ್ಷ ಸೇರಲು ಅವಕಾಶವಿಲ್ಲ. ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾದ 6 ತಿಂಗಳೊಳಗೆ ರಾಜಕೀಯ ಪಕ್ಷ ಸೇರಬೇಕು. 6 ತಿಂಗಳ ನಂತರ ಸೇರಿದರೆ ಸಂಸದ ಸ್ಥಾನದಿಂದ ಅನರ್ಹಗೊಳ್ಳುತ್ತಾರೆ. ಒಂದೇ ವೇಳೆ ರಾಜಕೀಯ ಪಕ್ಷ ಸೇರಬೇಕಿದ್ದರೆ ಸಂಸದೆ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾಗಿರುವುದರಿಂದ ಈ ನಿರ್ಬಂಧವಿದೆ. ಹಾಗಾದ್ರೆ, ಭಾರತೀಯ ಸಂವಿಧಾನದ 10ನೇ ಷೆಡ್ಯೂಲ್ ನ ಪ್ಯಾರಾ (2) ಹಾಗೂ ಪ್ಯಾರಾ(3) ಏನು ಹೇಳುತ್ತೆ ಎನ್ನುವುದು ಈ ಕೆಳಗಿನಂತಿದೆ ನೋಡಿ.

ಸಂವಿಧಾನದ 10ನೇ ಶೆಡ್ಯೂಲ್​ನ ಪ್ಯಾರಾ (2),(3) ಹೇಳುವುದೇನು?

ಪ್ಯಾರಾ (2): ಸಂಸತ್ತಿನ ಯಾವುದೇ ಸದನದ ಸದಸ್ಯರಾಗಿ ರಾಜಕೀಯ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿ ಆಯ್ಕೆಯಾಗದೇ ಸ್ವತಂತ್ರವಾಗಿ ಸ್ಪರ್ಧಿಸಿ ಆಯ್ಕೆಯಾಗುವ ಸದಸ್ಯರು ಯಾವುದಾದರೊಂದು ರಾಜಕೀಯ ಪಕ್ಷ ಸೇರಿದರೆ ಅನರ್ಹಗೊಳ್ಳುತ್ತಾರೆ.

ಪ್ಯಾರಾ (3): ಉಭಯ ಸದನಗಳ ಪೈಕಿ ಒಂದು ಸದನಕ್ಕೆ ನಾಮನಿರ್ದೇಶಿತ ಅಥವಾ ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾಗುವ ಸದಸ್ಯರು, ಹೀಗೆ ಆಯ್ಕೆಯಾದ 6 ತಿಂಗಳ ನಂತರ ಯಾವುದಾದರೂ ರಾಜಕೀಯ ಪಕ್ಷಕ್ಕೆ ಸೇರ್ಪಡೆಗೊಂಡರೆ ಅವರು ಅನರ್ಹಗೊಳ್ಳುತ್ತಾರೆ.

ಸಂಸದೆ ಸುಮಲತಾ ವಿಚಾರದಲ್ಲಿ ಆಗಿರುವುದೂ ಇದೇ. ಸಂಸದೆಯಾಗಿ ಆಯ್ಕೆಯಾದ 6 ತಿಂಗಳೊಳಗೆ ಸುಮಲತಾ ಬಿಜೆಪಿ ಸೇರಿಲ್ಲ. ಆದರೆ ಈಗ ಅಧಿಕೃತವಾಗಿ ಬಿಜೆಪಿ ಸೇರಿದರೆ ಅವರು ತಮ್ಮ ಸಂಸದೆ ಸ್ಥಾನದಿಂದ ಅನರ್ಹಗೊಳ್ಳುವ ಭೀತಿ ಎದುರಿಸಬೇಕಾಗುತ್ತದೆ. ಸಂಸದೆ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಬಿಜೆಪಿ ಸೇರಲು ಅಡ್ಡಿಯಿರುವುದಿಲ್ಲ. ಆದರೆ ಸ್ವತಂತ್ರ ಸಂಸದೆಯಾಗಿದ್ದುಕೊಂಡು ರಾಜಕೀಯ ಪಕ್ಷದ ಸದಸ್ಯೆಯಾಗುವುದು ಸಂವಿಧಾನದ 10 ನೇ ಶೆಡ್ಯೂಲ್ ಪ್ರಕಾರ ಪಕ್ಷಾಂತರ ನಿಷೇಧ ನಿಯಮಾವಳಿಯಂತೆ ಅನರ್ಹಗೊಳ್ಳುತ್ತಾರೆ. ಲೋಕಸಭೆಯ ಸ್ಪೀಕರ್ ಅನರ್ಹತೆ ಬಗ್ಗೆ ತೀರ್ಮಾನಿಸುತ್ತಾರೆ.

ಸುಮಲತಾ ಬಿಜೆಪಿ ಸೇರ್ಪಡೆಯಾಗಲು ಬಯಸಿದರೂ ಅಧಿಕೃತವಾಗಿ ಸೇರಲು ಸಾಧ್ಯವಿಲ್ಲ. ಬದಲಿಗೆ ಬಿಜೆಪಿಯನ್ನು ಬಾಹ್ಯವಾಗಿ ಬೆಂಬಲಿಸಬಹುದು. ರಾಜಕೀಯ ಪಕ್ಷದ ಸದಸ್ಯತ್ವ ಪಡೆಯುವಂತಿಲ್ಲ. ಬಿಜೆಪಿಯ ಸಂಸದೀಯ ಪಕ್ಷದ ಸಭೆಯಲ್ಲಿಯೂ ಸುಮಲತಾ ಭಾಗವಹಿಸುವಂತಿಲ್ಲ. ಭಾಗವಹಿಸಿದರೆ ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಳ್ಳುತ್ತಾರೆ. ಬಾಹ್ಯ ಬೆಂಬಲ ನೀಡಿದರೆ ಬಿಜೆಪಿ ಹೊರಡಿಸುವ ವಿಪ್ ಕೂಡಾ ಸುಮಲತಾರಿಗೆ ಅನ್ವಯವಾಗುವುದಿಲ್ಲ. ಅವರು ಸ್ವತಂತ್ರ ಸಂಸದೆಯಾಗಿ ಮುಂದುವರಿಯಬೇಕಾಗಲಿದೆ. ಇನ್ನು ಹೊಸಕೋಟೆಯಿಂದ ವಿಧಾನಸಭೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಶರತ್ ಬಚ್ಚೇಗೌಡ ಕಾಂಗ್ರೆಸ್ ನ ಅಧಿಕೃತ ಸದಸ್ಯರಲ್ಲ. ಕಾಂಗ್ರೆಸ್ ಗೆ ಬಾಹ್ಯ ಬೆಂಬಲ ನೀಡಿದ್ದಾರೆ. ಕಾಂಗ್ರೆಸ್ ಸದಸ್ಯರಾಗಿದ್ದಾರೆಂದು ಅವರ ವಿರುದ್ಧ ಯಾರೂ ದೂರು ನೀಡಿಲ್ಲ. ಹೀಗಾಗಿ ಅವರು ಅನರ್ಹಗೊಂಡಿಲ್ಲ.

ಒಟ್ಟಿನಲ್ಲಿ ಸುಮಲಯಾ ಅಂಬರೀಶ್​ ಬಿಜೆಪಿ ಸೇರ್ಪಡೆಗೆ ಕಾನೂನು ತೊಡಕು ಎದುರಾಗಲಿದ್ದು, ಸಂಸದೆ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರಾ? ಅಥವಾ ಕೇವಲ ಈಗ ಸದ್ಯಕ್ಕೆ ಬಾಹ್ಯ ಬೆಂಬಲ ಘೋಷಿಸಿಸುತ್ತಾರಾ? ಎನ್ನುವುದು ನಾಳಿನ ಸುದ್ದಿಗೋಷ್ಠಿ ನಂತರ ತಿಳಿಯಲಿದೆ.

Previous Post

ಸುಮಲತಾ ಶುಕ್ರವಾರ ಬಿಜೆಪಿ ಸೇರ್ತಾರೆ: ಶಾಸಕ ಪುಟ್ಟರಾಜು

Next Post

ಕರ್ನಾಟಕದಲ್ಲಿ ಹೆಚ್ಚಾದ ಕೋಮು ಸಂಘರ್ಷ ಪ್ರಕರಣಗಳು: 12 ದಿನಕ್ಕೊಂದು ಕೇಸ್‌..!

Next Post
ಕರ್ನಾಟಕದಲ್ಲಿ ಹೆಚ್ಚಾದ ಕೋಮು ಸಂಘರ್ಷ ಪ್ರಕರಣಗಳು: 12 ದಿನಕ್ಕೊಂದು ಕೇಸ್‌..!

ಕರ್ನಾಟಕದಲ್ಲಿ ಹೆಚ್ಚಾದ ಕೋಮು ಸಂಘರ್ಷ ಪ್ರಕರಣಗಳು: 12 ದಿನಕ್ಕೊಂದು ಕೇಸ್‌..!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.