Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಅಲ್ಪ ಸಂಖ್ಯಾತರನ್ನು EWSಗೆ ಸೇರ್ಪಡೆ: ಸರ್ಕಾರದ ನಿರ್ಧಾರದ ವಿರುದ್ಧ ಮುಸ್ಲಿಂ ಸಮುದಾಯ ಅಸಮಾಧಾನ

editor tv by editor tv
March 25, 2023
in ರಾಜ್ಯ, ಸುದ್ದಿ
0
ಅಲ್ಪ ಸಂಖ್ಯಾತರನ್ನು EWSಗೆ ಸೇರ್ಪಡೆ: ಸರ್ಕಾರದ ನಿರ್ಧಾರದ ವಿರುದ್ಧ ಮುಸ್ಲಿಂ ಸಮುದಾಯ ಅಸಮಾಧಾನ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ರಾಜ್ಯ ಸರ್ಕಾರ (OBC) 2ಬಿಯಲ್ಲಿದ್ದ ಮುಸ್ಲಿಂರನ್ನು (Muslim), ಆರ್ಥಿಕವಾಗಿ ದುರ್ಬಲ ವಿಭಾಗ (EWS) ಗೆ ಸೇರಿಸಿದ್ದನ್ನು ನಾವು ಒಪ್ಪುವುದಿಲ್ಲ. ಏಕೆಂದರೆ ಮುಂದಿನ ದಿನಗಳಲ್ಲಿ ಇಡ್ಲೂಎಸ್​​ಗೆ ಯಾವ ಸಮುದಾಯದವರನ್ನು ಬೇಕಾದರೂ ಸರ್ಕಾರ (Karnataka Government) ಸೇರಿಸಬಹುದು. ಹೀಗಾಗಿ ಇದನ್ನು ಮುಸ್ಲಿಂ ಸಮುದಾಯ ಒಪ್ಪಲ್ಲ ಎಂದು ಸರ್ಕಾರದ ನಿರ್ಧಾರದ ವಿರುದ್ಧ ಮುಸ್ಲಿಂ ಸಮುದಾಯ ಅಸಮಾಧಾನ ಹೊರಹಾಕಿದೆ. ನಮಗೆ 2ಬಿಯಲ್ಲಿ ಶೇ 4 ರಷ್ಟು ಪ್ರತ್ಯೇಕ‌ ಮೀಸಲಾತಿ ಇತ್ತು. ಆದರೆ ಈಗ ಈ ಮೀಸಲಾತಿ ನಮಗೆ ಸಿಗುವುದಿಲ್ಲ. ಈ ಹಿನ್ನೆಲೆ ನಾವು ಅಧಿಸೂಚನೆ ಹೊರಡಿಸದಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ ಹೇಳಿದರು.

ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರ ಶೇ 10 ರಷ್ಟು ಮೀಸಲಾತಿ ನಮಗೆ ಸಿಗಲ್ಲ. ಏಕೆಂದರೆ ಇಡ್ಲೂಎಸ್​​ನಿಂದ ಬ್ರಾಹ್ಮಣರಿಗೆ, ಜೈನರಿಗೆ ಮತ್ತು ಬೇರೆ ಸಮುದಾಯದವರನ್ನು ಸೇರಿದರೇ ಅವರಿಗೂ ಹಂಚಿಕೆಯಾಗುತ್ತದೆ. ಈ ಸಂಬಂಧ ಮುಸ್ಲಿಂ ಸಮುದಾಯದವರ ಮಧ್ಯೆ ದೊಡ್ಡ ಚರ್ಚೆಯಾಗುತ್ತಿದೆ. ನಿನ್ನೆ (ಮಾ.24) ರಂದು ನಾನು ಕಾನೂನು ಸಚಿವ ಮಾಧುಸ್ವಾಮಿ ಅವರ ಜೊತೆ ಮಾತಾನಾಡಿದ್ದೆ, ಆಗ ಅವರು ಹೇಳಿದರು ಇದರಿಂದ ನಿಮಗೆ ಸಮಸ್ಯೆಯಾಗಲ್ಲ ಆರ್ಥಿಕ ಹಿಂದುಳಿದ ಪ್ರವರ್ಗದಡಿ ಮೀಸಲಾತಿ ಸಿಗಲಿದೆ ಅಂದರು. ಆದರೆ ಇದನ್ನು ನಾವು ಒಪ್ಪುವುದಿಲ್ಲ ಎಂದು ಶಾಫಿ ಸಅದಿ ಹೇಳಿದ್ದಾರೆ.

ಇದುವರೆಗೆ ಸಾಮಾಜಿಕವಾಗಿ ಹಿಂದುಳಿದ ಮೀಸಲಾತಿ ಸಿಗುತ್ತಿತ್ತು. ಆದರೆ ಈಗ ಮುಸ್ಲಿಂರಿಗೆ ಅನ್ಯಾಯವಾಗುತ್ತೆ. ನಮ್ಮಲ್ಲಿ ಜಾತಿ ಪದ್ಧತಿಯಿಲ್ಲ. ಮುಸ್ಲಿಂರು ಸಾಮಾಜಿಕವಾಗಿ ಹಿಂದುಳಿದವರು. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಅವಧಿಯಲ್ಲಿ ಈ ಕಾಯ್ದೆ ಬಂದಿತ್ತು ಎಂದು ತಿಳಸಿದರು.

ಬಿಜೆಪಿ ಬೆಂಬಲಿಗ ಪ್ರಬಲ ವರ್ಗಗಳಿಗೆ ಮೀಸಲಾತಿ ಹಂಚಿದ ಸರ್ಕಾರ

ಮುಸ್ಲಿಮರು ಈ ಹಿಂದೆ ರಾಜ್ಯದಲ್ಲಿ ಇತರ ಹಿಂದುಳಿದ ವರ್ಗಗಳ (ಒಬಿಸಿ) 2B ಗುಂಪಿನ ಅಡಿಯಲ್ಲಿದ್ದರು. ಇದರಿಂದ ಈ ಸಮುದಾಯಕ್ಕೆ ಶೇ 4 ರಷ್ಟು ಮೀಸಲಿತ್ತು. ಪ್ರವರ್ಗ 2 ಬಿಯಲ್ಲಿರುವ ಮುಸ್ಲಿಮರನ್ನು ಇಡ್ಲೂಎಸ್​ಗೆ ಸೇರಿಸಿ, 2ಬಿಯಲ್ಲಿರುವ ಶೇ 4ರಷ್ಟು ಮೀಸಲಾತಿಯನ್ನು ಪ್ರಬಲ ವರ್ಗಗಳಾದ ಒಕ್ಕಲಿಗರಿಗೆ ಹಾಗೂ ವೀರಶೈವ ಲಿಂಗಾಯತರಿಗೆ ತಲಾ ಎರಡು ಪ್ರತಿಶತದಷ್ಟು ಸರ್ಕಾರ ಹಂಚಿಕೆ ಮಾಡಿದೆ.

ಏನಿದು ಇಡಬ್ಲ್ಯೂಎಸ್ ಕೋಟಾ?

ಸಮಾಜದ ಆರ್ಥಿಕವಾಗಿ ದುರ್ಬಲವಾಗಿರುವ ವರ್ಗಗಳಿಗೆ ಉದ್ಯೋಗ ಮತ್ತು ಉನ್ನತ ಶಿಕ್ಷಣದಲ್ಲಿ ಮೀಸಲಾತಿ ನೀಡುವ ಉದ್ದೇಶದಿಂದ 2019ರಲ್ಲಿ ಇಡಬ್ಲ್ಯೂಎಸ್ ಕೋಟಾವನ್ನು ಸರ್ಕಾರ ಜಾರಿಗೆ ತಂದಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳು ಮತ್ತು ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ (ಎಸ್‌ಇಬಿಸಿ) ಶೇ 50ರಷ್ಟು ಮೀಸಲಾತಿಯ ಹಾಲಿ ವ್ಯವಸ್ಥೆಯಿಂದ ಹೊರತಾಗಿರುವವರಿಗೆ ಈ ಶೇ 10ರಷ್ಟು ಮೀಸಲಾತಿ ಅನ್ವಯವಾಗುತ್ತದೆ.

ಇಡಬ್ಲ್ಯೂಎಸ್‌ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಮೀಸಲಾತಿ ನೀಡಲು ಅವಕಾಶ ಒದಗಿಸುವ ಸಂವಿಧಾನ (103ನೇ ತಿದ್ದಪಡಿ) ಕಾಯ್ದೆ 2019ಕ್ಕೆ ಸಂಸತ್‌ನಲ್ಲಿ ಅಂಗೀಕಾರ ದೊರೆತಿತ್ತು. ಸಂವಿಧಾನಕ್ಕೆ ಹೊಸದಾಗಿ ಸೇರ್ಪಡೆ ಮಾಡಲಾದ 15 (6) ವಿಧಿ ಮತ್ತು 16 (6) ವಿಧಿಗಳು, ರಾಜ್ಯ ಸರ್ಕಾರಿ ಉದ್ಯೋಗ ಹಾಗೂ ರಾಜ್ಯ ಸರ್ಕಾರದ ಶಿಕ್ಷಣ ಸಂಸ್ಥೆಗಳಲ್ಲಿ ಇಡಬ್ಲ್ಯೂಎಸ್‌ಗೆ ಮೀಸಲಾತಿ ನೀಡಬೇಕೇ ಅಥವಾ ಬೇಡವೇ ಎಂಬ ನಿರ್ಧಾರವನ್ನು ತೆಗೆದುಕೊಳ್ಳುವ ಅವಕಾಶವನ್ನು ರಾಜ್ಯ ಸರ್ಕಾರಗಳಿಗೆ ನೀಡುತ್ತವೆ.

Previous Post

Congress Candidate List- ಯಾವ್ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್?

Next Post

ನಾನು ಸಾವರ್ಕರ್ ಅಲ್ಲ, ಕ್ಷಮೆ ಕೇಳುವುದಿಲ್ಲ: ಅನರ್ಹತೆ ಕುರಿತು ರಾಹುಲ್ ಗಾಂಧಿ

Next Post

ನಾನು ಸಾವರ್ಕರ್ ಅಲ್ಲ, ಕ್ಷಮೆ ಕೇಳುವುದಿಲ್ಲ: ಅನರ್ಹತೆ ಕುರಿತು ರಾಹುಲ್ ಗಾಂಧಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.