

ಜಗದೀಶ್ ಶೆಟ್ಟರ್ ನಮ್ಮ ಬೀಗರು. ನಾನು ಇನ್ನು ಅವರ ಜತೆಗೆ ಮಾತಾಡಿಲ್ಲ. ಅವರು ಕಾಂಗ್ರೆಸ್ ಸೇರೋದು ಪಕ್ಕಾ ಎಂದು ದಾವಣಗೆರೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ್ದಾರೆ.
ದಾವಣಗೆರೆ (ಏ.16): ಜಗದೀಶ್ ಶೆಟ್ಟರ್ ನಮ್ಮ ಬೀಗರು. ನಾನು ಇನ್ನು ಅವರ ಜತೆಗೆ ಮಾತಾಡಿಲ್ಲ. ಅವರು ಕಾಂಗ್ರೆಸ್ ಬರಬಹುದು ಎಂದು ದಾವಣಗೆರೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿ ಕೇಂದ್ರ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಗುಡ್ಬೈ ಹೇಳಲು ತೀರ್ಮಾನಿದ್ದು, ಶಾಮನೂರು ಶಿವಶಂಕರಪ್ಪ ಅವರು ನೀಡಿರುವ ಈ ಹೇಳಿಕೆ ಮಹತ್ವ ಪಡೆದಿದೆ. ಬಿಜೆಪಿ ಇಂತಹ ಕೆಲಸ ಮಾಡಿ ಎಲ್ಲವನ್ನು ಕಳೆದುಕೊಳ್ಳುತ್ತಾರೆ. ಬಿಜೆಪಿ ರಾಜ್ಯದಲ್ಲಿ 60 ಸೀಟು ಕೂಡ ಗೆಲ್ಲಲ್ಲ. ಕಾಂಗ್ರೆಸ್ ಗೆ ಬಂದ್ರೆ ಟಿಕೆಟ್ ಕೊಡಲೇಬೇಕಾಗುತ್ತದೆ. ಟಿಕೆಟ್ ಕೊಟ್ಟರೇಬೆ ಅವರು ಕಾಂಗ್ರೆಸ್ ಸೇರೋದು. ಕಾಂಗ್ರೆಸ್ ಗೆ ಅವರು ಬರೋದು ಪಕ್ಕಾ. ನಮ್ಮ ಮಗ ಅವರ ಜತೆಗೆ ಮಾತನಾಡುತ್ತಾನೆ.

ನಮ್ಮ ಕಾಂಗ್ರೆಸ್ ಹಿರಿಯ ನಾಯಕರು ಈಗಾಗಲೇ ಮಾತನಾಡಿದ್ದಾರೆ. ಲಿಂಗಾಯತ ನಾಯಕರು ಒಬ್ಬೊಬ್ಬರಾಗಿ ಕಾಂಗ್ರೆಸ್ ಗೆ ಬರುತ್ತಿದ್ದಾರೆ. ಮುಂದೆ ಏನಾಗೊತ್ತೋ ಕಾದು ನೋಡೋಣ ಎಂದು ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ್ದಾರೆ.

