

ಶ್ರೀನಗರ: 1999ರ ಕಾರ್ಗಿಲ್ ಯುದ್ಧದ (1999 Kargil war) ಸಂದರ್ಭದಲ್ಲಿ ಸ್ಫೋಟಗೊಂಡಿರದ ಬಾಂಬ್ ಒಂದು ಇತ್ತೀಚೆಗೆ ಸ್ಫೋಟಗೊಂಡ ಪರಿಣಾಮ ಓರ್ವ ಬಾಲಕ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡ ಘಟನೆ ಲಡಾಖ್ನ (Ladakh) ಕುರ್ಬಥಾಂಗ್ನ (Kurbathang) ಫುಟ್ಬಾಲ್ ಮೈದಾನ (Football Ground) ಒಂದರಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಗಾಯಗೊಂಡಿರುವ ಮಕ್ಕಳಲ್ಲಿ ಒಬ್ಬ ಅಪಾಯದಿಂದ ಪಾರಾಗಿದ್ದು, ಇನ್ನೊಬ್ಬ ಬದುಕುಳಿಯುವ ಸಾಧ್ಯತೆ ಇದೆ. ಮೃತನ ಕುಟುಂಬಕ್ಕೆ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 1 ಲಕ್ಷ ರೂ. ಪರಿಹಾರ ನೀಡಲಾಗುವುದು. ಹಾಗೂ ಕಾರ್ಗಿಲ್ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಮದ್ದುಗುಂಡುಗಳನ್ನು ಶೀಘ್ರದಲ್ಲಿ ಬೇರೆಡೆ ಸ್ಥಳಾಂತರಿಸುತ್ತೇವೆ ಎಂದು ಲಡಾಖ್ನ ಲೆಫ್ಟಿನೆಂಟ್ ಗವರ್ನರ್ ಬಿ.ಡಿ ಮಿಶ್ರಾ ಹೇಳಿದ್ದಾರೆ.

ಈ ಘಟನೆಯು ಜನರ ಸುರಕ್ಷತೆಯ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ. ಮೈದಾನಗಳಲ್ಲಿ ಆಡುವ ಮಕ್ಕಳ ಸುರಕ್ಷತೆಯ ಬಗ್ಗೆ ಆತಂಕ ಮೂಡುತ್ತಿದೆ. ಸ್ಫೋಟಗೊಳ್ಳದ ಬಾಂಬ್ಗಳನ್ನು ತೆರವುಗೊಳಿಸಲು ಮತ್ತು ನಿವಾಸಿಗಳ ಸುರಕ್ಷತೆಗಾಗಿ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.