Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

Karnataka 2nd PUC District Wise Result 2023: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಯಾದಗಿರಿಗೆ ಕೊನೆಯ ಸ್ಥಾನ

editor tv by editor tv
April 21, 2023
in ರಾಜ್ಯ, ಸುದ್ದಿ
0
Karnataka 2nd PUC District Wise Result 2023: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಯಾದಗಿರಿಗೆ ಕೊನೆಯ ಸ್ಥಾನ
1.9k
VIEWS
Share on FacebookShare on TwitterShare on Whatsapp

ಇಂದು 2022-23ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡರೆ, ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಹಾಗೆಯೇ ಉಡುಪಿ ಜಿಲ್ಲೆಗೆ 2 ನೇ ಸ್ಥಾನ, ಕೊಡಗಿಗೆ 3ನೇ ಸ್ಥಾನ, ಉತ್ತರ ಕನ್ನಡ 4ನೇ ಸ್ಥಾನದಲ್ಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ 9ನೇ ಸ್ಥಾನದಲ್ಲಿದ್ದರೆ, ಬೆಂಗಳೂರು ದಕ್ಷಿಣ ಜಿಲ್ಲೆ 10ನೇ ಸ್ಥಾನದಲ್ಲಿದೆ. ಬೆಂಗಳೂರು ಉತ್ತರ ಜಿಲ್ಲೆ 11ನೇ ಸ್ಥಾನದಲ್ಲಿದೆ.

ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. 7,02,067 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಈ ಬಾರಿ 74.67% ಫಲಿತಾಂಶ ದಾಖಲಾಗಿದೆ.

ದಕ್ಷಿಣ ಕನ್ನಡ ಮೊದಲ ಸ್ಥಾನ (95.33%) ಉಡುಪಿಗೆ ಎರಡನೇ ಸ್ಥಾನ( 95.24%) ಕೊಡಗಿಗೆ 3ನೇ ಸ್ಥಾನ (90.55%) ಸಿಕ್ಕಿದರೆ ಯಾದಗಿರಿಗೆ (78.97%) ಕೊನೆಯ ಸ್ಥಾನ ಸಿಕ್ಕಿದೆ.

ಎಂದಿನಂತೆ ಬಾಲಕೀಯರೇ ಮೇಲುಗೈ ಸಾಧಿಸಿದ್ದು 80.25% ಪಾಸ್ ಆಗಿದ್ದರೆ ಬಾಲಕರು 69.05% ಪಾಸ್‌ ಆಗಿದ್ದಾರೆ. ಗ್ರಾಮೀಣ ಭಾಗದ 74.79% ಮಕ್ಕಳು ತೇರ್ಗಡೆಯಾಗಿದ್ದರೆ 74.63% ನಗರ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಬೆಂಗಳೂರಿನ ಎನ್ ಎಂಕೆಆರ್ ವಿ ಕಾಲೇಜಿನ ತಬಸ್ಸುಮ್ ಶೇಖ್ ಕಲಾ ವಿಭಾಗದಲ್ಲಿ 593 ಅಂಕ ಪಡೆಯುವುದರ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ, ಬಳ್ಳಾರಿಯ ಹಿಂದೂ ಇಂದು ಇನ್ನೋವೇಟಿವ್ ಪಿಯು ಕಾಲೇಜಿನ ಕುಷಾ ನಾಯ್ಕ್ ಜಿಎಲ್ ಅವರು 592 ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಅದೇ ಕಾಲೇಜಿನ ದದ್ದಿ ಕರಿಬಸಮ್ಮ, ಬಳ್ಳಾರಿಯ ಎಸ್ ಯುಜೆಎಂ ಕಾಲೇಜಿನ ಮುತ್ತೂರು ಮಲ್ಲಮ್ಮ, ಬೆಳಗಾವಿಯ ಲಿಂಗರಾಜ ಪಿಯು ಕಾಲೇಜಿನ ಪ್ರಿಯಾಂಕ ಕುಲಕರ್ಣಿ, ವಿಜಯಪುರದ ಎಸ್ ಕೆ ಪಿಯು ಕಾಲೇಜಿನ ರಾಹುಲ್ 592 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಮೂಡುಬಿದಿರೆಯ ಆಳ್ವಾಸ್ ಪಿಯು ಕಾಲೇಜಿನ ಅನನ್ಯ ಕೆ.ಎ. ಅವರು 600 ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಶಿವಮೊಗ್ಗದ ವಿಕಾಸ್ ಕಾಲೇಜಿನ ಅನ್ವಿತಾ ಡಿಎನ್, ಬೆಂಗಳೂರಿನ ಟ್ರಾನ್ಸೆಂಡ್ ಪಿಯು ಕಾಲೇಜಿನ ಛಾಯಾ ರವಿಕುಮಾರ್ ಹಾಗೂ ವರ್ಷಾ, ಮೂಡಬಿದಿರೆ ಎಕ್ಸ ಲೆಂಟ್ ಕಾಲೇಜಿನ ಖುಷಿ, ಮಂಗಳೂರಿನ ವಿಕಾಸ್ ಪಿಯು ಕಾಲೇಜಿನ ಸ್ವಾತಿ, ಬೆಂಗಳೂರಿನ ಕ್ರೈಸ್ಟ್ ಕಾಲೇಜಿನ ಧನ್ಯಶ್ರೀ ಹಾಗೂ ಘಾನ, ಮೂಡಬಿದಿರೆ ಆಳ್ವಾಸ್ ಪಿಯು ಕಾಲೇಜಿನ ದಿಶಾ ರಾವ್, ಬೆಂಗಳೂರಿನ ಎಎಸ್ ಸಿ ಪಿಯು ಕಾಲೇಜಿನ ಇಂಚರಾ  ಅವರು 596 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಕೋಲಾರ ಗಂಗೋತ್ರಿ ಪಿಯು ಕಾಲೇಜಿನ ಎಸ್.ಎಂ.ಕೌಶಿಕ್ ಹಾಗೂ ಬೆಂಗಳೂರಿನ ಆರ್ ವಿ ಕಾಲೇಜಿನ ಸುರಭಿ ಅವರು 596 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಆರ್ ವಿ ಪಿಯು ಕಾಲೇಜಿನ ಕೆ.ಜಯಷಿಕಾ, ಉಡುಪಿ ಮಹಾತ್ಮ ಗಾಂಧಿ ಪಿಯು ಕಾಲೇಜಿನ ಸತ್ವಿಕ್, ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಜಿಸ್ವಿತಾ ಅವರು 595 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ.

ಪರಿಶಿಷ್ಟ ಜಾತಿಯ ಶೇಕಡಾ 64.44, ಪರಿಶಿಷ್ಟ ಪಂಗಡದ 65.62, ಸಿ-ಎ ವಿಭಾಗದ 50.37, 2-ಎ ವಿಭಾಗದ 77.89, 2-ಬಿ ವಿಭಾಗದ 72.42, 3-ಎ ವಿಭಾಗದ 82.40, 3-ಬಿ ವಿಭಾಗದ 79.50ರಷ್ಟು ಹಾಗೂ ಸಾಮಾನ್ಯ ವಿಭಾಗದ 79.95ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ಕನ್ನಡ ವಿಭಾಗದ 1,83,221 ವಿದ್ಯಾರ್ಥಿಗಳು ತೇರ್ಗಡೆಯಾಗಿ 63.68ರಷ್ಟು ಫಲಿತಾಂಶ ಬಂದಿದ್ದರೆ, ಇಂಗ್ಲೀಷ್ ವಿಭಾಗದಲ್ಲಿ 82.30ರಷ್ಟು ಫಲಿತಾಂಶ ಬಂದಿದೆ.

Previous Post

ಜೆ.ಆರ್‌.ಲೋಬೊ ಬಳಿ ರೂ. 13.39 ಕೋಟಿ ಆಸ್ತಿ , ಉತ್ತರ ಕಾಂಗ್ರೆಸ್‌ ಅಭ್ಯರ್ಥಿ ಇನಾಯತ್‌ ಅಲಿ ಬಳಿ ರೂ. 20.15 ಕೋಟಿ ಆಸ್ತಿ

Next Post

ಚಿಕ್ಕಮಗಳೂರು: ರೋಡ್ ಶೋಗೆ ಗ್ರಾಮಸ್ಥರನ್ನ ಕರೆದೊಯ್ದು ಹಣ ಕೊಡದಿದ್ದಕ್ಕೆ ಮುಖಂಡನನ್ನ ಮನಸ್ಸೋ ಇಚ್ಛೆ ಥಳಿಸಿದ ಮಹಿಳೆ

Next Post
ಚಿಕ್ಕಮಗಳೂರು: ರೋಡ್ ಶೋಗೆ ಗ್ರಾಮಸ್ಥರನ್ನ ಕರೆದೊಯ್ದು ಹಣ ಕೊಡದಿದ್ದಕ್ಕೆ ಮುಖಂಡನನ್ನ ಮನಸ್ಸೋ ಇಚ್ಛೆ ಥಳಿಸಿದ ಮಹಿಳೆ

ಚಿಕ್ಕಮಗಳೂರು: ರೋಡ್ ಶೋಗೆ ಗ್ರಾಮಸ್ಥರನ್ನ ಕರೆದೊಯ್ದು ಹಣ ಕೊಡದಿದ್ದಕ್ಕೆ ಮುಖಂಡನನ್ನ ಮನಸ್ಸೋ ಇಚ್ಛೆ ಥಳಿಸಿದ ಮಹಿಳೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.