Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಕ್ರೀಡೆ

IPL 2023: ಗೆದ್ದರೂ RCB ಚಿಂತೆ ಮಾತ್ರ ದೂರವಾಗಿಲ್ಲ..!

editor tv by editor tv
April 23, 2023
in ಕ್ರೀಡೆ
0
IPL 2023: ಗೆದ್ದರೂ RCB ಚಿಂತೆ ಮಾತ್ರ ದೂರವಾಗಿಲ್ಲ..!
1.9k
VIEWS
Share on FacebookShare on TwitterShare on Whatsapp

IPL 2023 Kannada: ಇನಿಂಗ್ಸ್ ಆರಂಭಿಸಿದ ಆರ್​ಸಿಬಿ ಮೊದಲ ಎಸೆತದಲ್ಲೇ ಆಘಾತ ಅನುಭವಿಸಿತ್ತು. ಆರಂಭಿಕ ಆಟಗಾರ ವಿರಾಟ್ ಕೊಹ್ಲಿಯನ್ನು ಟ್ರೆಂಟ್ ಬೌಲ್ಟ್ ಶೂನ್ಯಕ್ಕೆ ಪೆವಿಲಿಯನ್​ಗೆ ಕಳುಹಿಸಿದರು

IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 7 ರನ್​ಗಳ ರೋಚಕ ಜಯ ಸಾಧಿಸಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಆರ್ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ಕೆ ಮಾಡಿದ್ದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಆರ್​ಸಿಬಿ ಮೊದಲ ಎಸೆತದಲ್ಲೇ ಆಘಾತ ಅನುಭವಿಸಿತ್ತು. ಆರಂಭಿಕ ಆಟಗಾರ ವಿರಾಟ್ ಕೊಹ್ಲಿಯನ್ನು ಟ್ರೆಂಟ್ ಬೌಲ್ಟ್ ಶೂನ್ಯಕ್ಕೆ ಪೆವಿಲಿಯನ್​ಗಟ್ಟಿದ್ದರು. ಆದರೆ ಇದಾದ ಬಳಿಕ ಜೊತೆಯಾದ ಫಾಫ್ ಡುಪ್ಲೆಸಿಸ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

3ನೇ ವಿಕೆಟ್​ಗೆ ಜೊತೆಯಾದ ಡುಪ್ಲೆಸಿಸ್ ಹಾಗೂ ಮ್ಯಾಕ್ಸ್​ವೆಲ್ 127 ರನ್​ಗಳ ಭರ್ಜರಿ ಜೊತೆಯಾಟವಾಡಿದರು. ಪರಿಣಾಮ 13.1 ಓವರ್​ಗಳಲ್ಲಿ ಆರ್​ಸಿಬಿ ತಂಡದ ಮೊತ್ತ 139 ಕ್ಕೆ ಬಂದು ನಿಂತಿತು. ಈ ಹಂತದಲ್ಲಿ ಡುಪ್ಲೆಸಿಸ್ (62) ರನೌಟ್ ಆಗಿ ನಿರ್ಮಿಸಿತು. ಇದರ ಬೆನ್ನಲ್ಲೇ ಮ್ಯಾಕ್ಸ್​ವೆಲ್ (77) ಕೂಡ ಔಟಾದರು.

ಅಂದರೆ ಆರ್​ಸಿಬಿ ತಂಡವು 13.1 ಓವರ್​ಗಳಲ್ಲಿ ಪ್ರತಿ ಓವರ್​ಗೆ 10 ರನ್​ ಸರಾಸರಿಯಲ್ಲಿ 139 ರನ್​ ಕಲೆಹಾಕಿದರೆ, ಉಳಿದ 6.5 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 50 ರನ್​ ಮಾತ್ರ.

ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು 41 ಎಸೆತಗಳನ್ನು ಎದುರಿಸಿದರೂ 50 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇದರ ನಡುವೆ 7 ವಿಕೆಟ್​ಗಳನ್ನು ಕೂಡ ಕಳೆದುಕೊಂಡಿತ್ತು. ಇದರೊಂದಿಗೆ ಆರ್​ಸಿಬಿ ತಂಡವು ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಅವಲಂಭಿಸಿರುವುದು ಮತ್ತೊಮ್ಮೆ ಸ್ಪಷ್ಟವಾಗಿದೆ.

ಏಕೆಂದರೆ 7 ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ 279 ರನ್​ ಕಲೆಹಾಕಿದರೆ, ಗ್ಲೆನ್ ಮ್ಯಾಕ್ಸ್​ವೆಲ್ 253 ರನ್​ಗಳಿಸಿದ್ದಾರೆ. ಹಾಗೆಯೇ ಫಾಫ್ ಡುಪ್ಲೆಸಿಸ್ 7 ಪಂದ್ಯಗಳಲ್ಲಿ 405 ರನ್​ ಬಾರಿಸಿದ್ದಾರೆ. ಈ ಮೂವರನ್ನು ಹೊರತುಪಡಿಸಿದರೆ ಉಳಿದ ಯಾವುದೇ ಬ್ಯಾಟರ್​ 70 ರನ್​ ಕೂಡ ಕಲೆಹಾಕಿಲ್ಲ.

ದಿನೇಶ್ ಕಾರ್ತಿಕ್ 7 ಪಂದ್ಯಗಳಿಂದ ಒಟ್ಟು 61 ರನ್​ಗಳಿಸಿದರೆ, ಶಹಬಾಝ್ ಅಹ್ಮದ್ 40 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಇನ್ನು ಮಹಿಪಾಲ್ ಲೋಮ್ರರ್ 5 ಪಂದ್ಯಗಳಿಂದ 41 ರನ್​ ಕಲೆಹಾಕಿದರೆ, ಸುಯಶ್ ಪ್ರಭುದೇಸಾಯಿ 3 ಪಂದ್ಯಗಳಿಂದ ಕಲೆಹಾಕಿದ್ದು ಕೇವಲ 19 ರನ್​ ಮಾತ್ರ.

ಅಂದರೆ ಆರ್​ಸಿಬಿ ಬ್ಯಾಟಿಂಗ್ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಫಾಫ್ ಡುಪ್ಲೆಸಿಸ್ ಅವರನ್ನು ಅವಲಂಭಿಸಿರುವುದು ಸ್ಪಷ್ಟ.

ಇದು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಮತ್ತೊಮ್ಮೆ ಸಾಬೀತಾಗಿದೆ. ಇದುವೇ ಈಗ ಆರ್​ಸಿಬಿ ತಂಡ ಚಿಂತೆಯನ್ನು ಮತ್ತಷ್ಟು ಹೆಚ್ಚಿಸಿದೆ

Previous Post

ಸುಡಾನ್ ಹಿಂಸಾಚಾರ – ವಿಮಾನ ನಿಲ್ದಾಣಗಳ ಸ್ಥಗಿತ; ಪ್ರಜೆಗಳನ್ನು ಕರೆತರಲು ಭೂಮಾರ್ಗ ಹುಡುಕಾಟದಲ್ಲಿ ಭಾರತ

Next Post

► BREAKING NEWS ಬ್ರಹ್ಮಾವರ: ನದಿಯಲ್ಲಿ ದೋಣಿ ಮಗುಚಿ ಮೂರು ಮಂದಿ ಯುವಕರು ಮೃತ್ಯು, ಓರ್ವ ನಾಪತ್ತೆ

Next Post
► BREAKING NEWS ಬ್ರಹ್ಮಾವರ: ನದಿಯಲ್ಲಿ ದೋಣಿ ಮಗುಚಿ ಮೂರು ಮಂದಿ ಯುವಕರು ಮೃತ್ಯು, ಓರ್ವ ನಾಪತ್ತೆ

► BREAKING NEWS ಬ್ರಹ್ಮಾವರ: ನದಿಯಲ್ಲಿ ದೋಣಿ ಮಗುಚಿ ಮೂರು ಮಂದಿ ಯುವಕರು ಮೃತ್ಯು, ಓರ್ವ ನಾಪತ್ತೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.