

ಬೆಂಗಳೂರು ನಗರದ ಶಾಂತಿ ನಗರ, ಕಾಕ್ಸ್ ಟೌನ್, ಶಿವಾಜಿ ನಗರ, ಆರ್ಎಂವಿ ಎಕ್ಸ್ಟೆನ್ಶನ್, ಕನ್ನಿಂಗ್ಹ್ಯಾಮ್ ರಸ್ತೆ, ಸದಾಶಿವ ನಗರ, ಕುಮಾರಪಾರ್ಕ್ ವೆಸ್ಟ್ ಮತ್ತು ಫೇರ್ಫೀಲ್ಡ್ ಲೇಔಟ್ ಪ್ರದೇಶಗಳಲ್ಲಿ ದಾಳಿ ನಡೆಸಲಾಗಿದೆ.ಬೆಂಗಳೂರು ಹಾಗೂ ಮೈಸೂರಿನಲ್ಲಿ ಏಕಕಾಲಕ್ಕೆ ದಾಳಿ ಮಾಡಲಾಗಿದೆ. ಬೆಂಗಳೂರಿನ ಶಾಂತಿನಗರ, ಆರ್.ಎಂ.ವಿ ಲೇಔಟ್, ಕನ್ನಿಂಗ್ ಹ್ಯಾಂ ರೋರ್, ಸದಾಶಿವ ನಗರ, ಕುಮಾರ ಪಾರ್ಕ್ ವೆಸ್ಟ್ ಸೇರಿ ಹಲವೆಡೆ ದಾಳಿ ಮಾಡಲಾಗಿದೆ.


ಈ ದಾಳಿಗಳ ಪರಿಣಾಮವಾಗಿ ಅವರ ರಹಸ್ಯ ಅಡಗುತಾಣಗಳಲ್ಲಿ ಸಂಗ್ರಹಿಸಲಾಗಿದ್ದ ಅಪಾರ ಪ್ರಮಾಣದ ಲೆಕ್ಕಕ್ಕೆ ಸಿಗದ ನಗದು ಮತ್ತು ಚಿನ್ನಾಭರಣಗಳು ಮತ್ತು ಗಟ್ಟಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಐಟಿ ದಾಳಿಯಿಂದ 15 ಕೋಟಿ ರೂ. ನಗದು ಹಾಗೂ 5 ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗುದೆ ಎಂದು ಆದಾಯ ತೆರಿಗೆ ಇಲಾಖೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.



