Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ವಿಶೇಷ ಸುದ್ದಿ

ಹಿಂದುತ್ವಕ್ಕೆ ವಿರುದ್ಧವಾದ ಧ್ರುವೀಕರಣಕ್ಕೆ ನಾಂದಿ ಹಾಡಿದ ಚುನಾವಣಾ ಫಲಿತಾಂಶ

editor tv by editor tv
May 19, 2023
in ವಿಶೇಷ ಸುದ್ದಿ
0
ಹಿಂದುತ್ವಕ್ಕೆ ವಿರುದ್ಧವಾದ ಧ್ರುವೀಕರಣಕ್ಕೆ ನಾಂದಿ ಹಾಡಿದ ಚುನಾವಣಾ ಫಲಿತಾಂಶ
1.9k
VIEWS
Share on FacebookShare on TwitterShare on Whatsapp

ಗುರುಪ್ರಸಾದ್ ಡಿ. ಎನ್

ನರೇಂದ್ರ ಮೋದಿಯವರು ಎರಡನೇ ಬಾರಿಗೆ ಭಾರಿ ಬಹುಮತದಲ್ಲಿ ಪ್ರಧಾನಿಯಾದ ನಂತರ ಇನ್ನು ಮಂದೆ ಬಿಜೆಪಿ ಪಕ್ಷಕ್ಕೆ ಸೋಲಿನ ಆಯ್ಕೆಯೇ ಇಲ್ಲ ಮತ್ತು ವಿರೋಧ ಪಕ್ಷಗಳ ಸಂಖ್ಯಾಬಲ ಹಾಗೂ ಜಂಘಾಬಲವೆರಡನ್ನೂ ಉಡುಗಿಸುತ್ತೇವೆಂಬ ಅಬ್ಬರದಲ್ಲಿ ತೇಲುತ್ತಿದ್ದ ಬಿಜೆಪಿಯನ್ನು ಹಲವು ರಾಜ್ಯಗಳು ಚುನಾವಣೆಗಳಲ್ಲಿ ಸೋಲಿಸಿದ್ದರೂ ಕರ್ನಾಟಕದ ಚುನಾವಣಾ ಫಲಿತಾಂಶ ಕೆಲವು ಕಾರಣಗಳಿಗೆ ಮಹತ್ವದ್ದಾಗಿದೆ. 2021ರಲ್ಲಿ ಕೇರಳದಲ್ಲಿ ಬಿಜೆಪಿ ಇದೇ ರೀತಿಯ ಅಬ್ಬರದ ಪ್ರಚಾರ ಕೈಗೊಂಡಿದ್ದರೂ ಅಲ್ಲಿ ಶೂನ್ಯ ಸಂಪಾದನೆ ಮಾಡಿತ್ತು. ಹಿಂದಿನ ಅವಧಿಯಲ್ಲಿ ಗಳಿಸಿದ್ದ ಒಂದು ಸ್ಥಾನವನ್ನೂ ಕಳೆದುಕೊಂಡಿತ್ತು. ಹಾಗೆಯೆ ಅದೇ ವರ್ಷ ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಚುನಾವೆಣೆಗಳಲ್ಲೂ ಬಿಜೆಪಿ ಅಬ್ಬರಿಸಿದ್ದಕ್ಕೂ ಮತ್ತು ಅದು ಗಳಿಸಿದ ಸ್ಥಾನಗಳಗೂ ಅಜಗಜಾಂತರ ವ್ಯತ್ಯಾಸವಿತ್ತು.

ಈಗ 2023 ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು 2018ಕ್ಕೆ ಹೋಲಿಸಿದರೆ ಬಿಜೆಪಿ ಪಕ್ಷ ದಯನೀಯ ಸೋಲು ಕಂಡಿದೆ. ಇಲ್ಲಿ ಉದಾಹರಿಸಿದ ರಾಜ್ಯಗಳಿಗೂ ಕರ್ನಾಟಕದ ಸೋಲಿಗೂ ಇರುವ ಮುಖ್ಯ ವ್ಯತ್ಯಾಸವೆಂದರೆ ಆ ರಾಜ್ಯಗಳಲ್ಲಿ ಬಿಜೆಪಿ ಇನ್ನೂ ನೆಲೆ ಕಂಡಿರಲಿಲ್ಲ ಅಥವಾ ಬೀಡುಬಿಟ್ಟಿರಲಿಲ್ಲ. ಅದಕ್ಕೆ ವಿರುದ್ಧವಾಗಿ ಕರ್ನಾಟಕದಲ್ಲಿ 2018ರಲ್ಲಿ ಬಿಜೆಪಿ ಪಕ್ಷ ಸುಮಾರು 36% ಮತ ಹಂಚಿಕೆ ಪ್ರಮಾಣದೊಂದಿಗೆ 104 ಸ್ಥಾನಗಳನ್ನು ಗಳಿಸಿಕೊಂಡಿತ್ತು. ನಂತರ 2019ರ ಆಪರೇಷನ್ ಕಮಲದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮತ್ತಷ್ಟು ಸಚಿವರನ್ನು ತನ್ನ ತೆಕ್ಕೆಗೆ ತೆಗೆದುಕೊಂಡು ಬಹುಮತವನ್ನು ಕೂಡ ಪಡೆದುಕೊಂಡು (ಆಗಿದ್ದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸಿ) ಸರ್ಕಾರ ರಚಿಸಿತ್ತು. 2023ರಲ್ಲಿ ತನ್ನ ಹಿಂದಿನ ಮತ ಹಂಚಿಕೆ ಪ್ರಮಾಣ 36%ಅನ್ನು ಉಳಿಸಿಕೊಂಡಿದ್ದರೂ ಗೆದ್ದ ಸೀಟುಗಳ ಸಂಖ್ಯೆ 66ಕ್ಕೆ ಕುಸಿದಿದೆ. ಇದು ಮೇಲ್ನೋಟಕ್ಕೇ ನಮಗೆ ತಿಳಿಸುವುದೇನೆಂದರೆ ಬಿಜೆಪಿಯ ವಿರುದ್ಧ ಮತ್ತು ಬಿಜೆಪಿ ಪ್ರತಿನಿಧಿಸುವ ಹಿಂದುತ್ವದ ವಿರುದ್ಧದ ವೋಟುಗಳು ಧ್ರುವೀಕರಣಗೊಂಡಿವೆ ಎಂದು. ಈ ಮತಗಳನ್ನು ತನ್ನೆಡೆಗೆ ಕ್ರೋಢೀಕರಿಸಿಕೊಳ್ಳುವುದರಲ್ಲಿ ಕಾಂಗ್ರೆಸ್ ಸಫಲವಾದಂತೆ ಕಾಣುತ್ತದೆ. ಹಿಂದೆ 2018ರಲ್ಲಿ ಗಳಿಸಿದ್ದ 38% ವೋಟ್ ಶೇರ್‌ನಿಂದ ಕಾಂಗ್ರೆಸ್ ಈ ಚುನಾವಣೆಯಲ್ಲಿ 42.9% ಮತ ಹಂಚಕೆ ಪ್ರಮಾಣವನ್ನು ಪಡೆದದೆ. ಇದು ಕಾಂಗ್ರೆಸ್ ಗೆದ್ದ ಸ್ಥಾನಗಳನ್ನು 78ರಿಂದ 135ಕ್ಕೆ ಏರಿಸಿದೆ!

ಭಜರಂಗ ದಳ ನಿಷೇಧ ಕೂಡ ಈ ರಿವರ್ಸ್ ಪೋಲರೈಸೇಷನ್‌ಗೆ ಸಹಕರಿಸಿತೇ?

ಇಂತಹ ಪ್ರಶ್ನೆಯೊಂದಕ್ಕೆ ಉತ್ತರ ಪಡೆಯಲು ಮತ ಹಂಚಿಕೆಯ ಇನ್ನೂ ಆಳವಾದ ವಿಶ್ಲೇಷಣೆ ಅಗತ್ಯವಿದ್ದರೂ ಮತದಾನಕ್ಕೂ ಮುಂಚಿತವಾಗಿ ಕಾಂಗ್ರೆಸ್ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಭಜರಂಗ ದಳ ನಿಷೇಧದ ಪ್ರಸ್ತಾಪದ ಕಾರಣಕ್ಕೆ ಬಂದಂತಹ ಪ್ರತಿಕ್ರಿಯೆಗಳನ್ನು ನೆನಪಿಸಿಕೊಳ್ಳಿ. ಆ ಸಮಯಕ್ಕಾಗಲೇ ಹಲವು ಒಪಿನಿಯನ್ ಸರ್ವೇಗಳ ಪ್ರಕಾರ ಕಾಂಗ್ರೆಸ್ ಪಕ್ಷಕ್ಕೆ 115-135 ಸ್ಥಾನಗಳು ಬರಲಿವೆ ಎಂಬ ಅಂದಾಜಿತ್ತು. ಪ್ರಣಾಳಿಕೆ ಬಿಡುಗಡೆಯ ನಂತರ ಭಜರಂಗ ದಳದ ಸದಸ್ಯರು ಶುರು ಮಾಡಿದ ಅಭಿಯಾನದಿಂದ ಹಾಗೂ ಮೋದಿ ತಮ್ಮ ಪ್ರತಿ ಭಾಷಣದಲ್ಲಿಯೂ ಭಜರಂಗ ಬಲಿಯನ್ನು ಇನ್ವೋಕ್ ಮಾಡಲು ಆರಂಭಿಸಿದ್ದರಿಂದ ಕಾಂಗ್ರೆಸ್‌ಗೆ ಸುಮಾರು 10-15 ಸ್ಥಾನಗಳು ಕುತ್ತಾಗಲಿವೆ ಎಂಬ ವಿಶ್ಲೇಷಣೆ ಎಲ್ಲೆಡೆ ಕೇಳಿಬಂದಿತ್ತು. ಆದರೆ ಈ ಎಪಿಸೋಡ್ ಬಿಜೆಪಿಗೆ ಸಹಾಯ ಮಾಡಿತು ಅನ್ನುವುದನ್ನು ಫಲಿತಾಂಶಗಳು ಸುಳ್ಳು ಮಾಡಿದವು. ಈ ಊಹೆಗೆ ವಿರುದ್ಧವಾಗಿ ಕಾಂಗ್ರೆಸ್‌ಗೆ ಸ್ಪಷ್ಟ ಮ್ಯಾಂಡೇಟ್ ಕೊಡಬೇಕು ಅನ್ನುವ ಕಾರಣಕ್ಕೆ ಅಲ್ಪಸಂಖ್ಯಾತ ಮತ್ತು ಹಿಂದುಳಿದ ಸಮುದಾಯದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ನಿರ್ಣಾಯಕವಾಗಿ ಮತ ನೀಡಿರುವುದನ್ನು ಕಾಣಬಹುದಾಗಿದೆ.

ಮಧ್ಯ ಕರ್ನಾಟಕದ ಉದಾಹರಣೆಯನ್ನೇ ತೆಗೆದುಕೊಂಡರೆ, ಬಾಬಾಬುಡನ್‌ಗಿರಿಯನ್ನು ಕೋಮುವಾದೀಕರಣಕ್ಕೆ ಯೋಜನೆಗೆ ಒಳಪಡಿಸಿ ಹಿಂದುತ್ವ ರಾಜಕೀಯದಲ್ಲಿ ಬೆಳೆದ ಸಿ.ಟಿ ರವಿ ಸೋಲಿಗೆ ಶರಣಾಗಿದ್ದಾರೆ. ಭಜರಂಗ ದಳ ಎಪಿಸೋಡ್ ಆದರೂ ಇವರನ್ನು ಕಾಪಾಡಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಇಡೀ ಚಿಕ್ಕಮಗಳೂರು ಜಿಲ್ಲೆಯಲ್ಲಿಯೇ ಬಿಜೆಪಿ ಶೂನ್ಯ ಸಂಪಾದನೆ ಮಾಡಿದೆ. 2018ರಲ್ಲಿ ಐದರಲ್ಲಿ ನಾಲ್ಕನ್ನು ಗೆದ್ದುಕೊಂಡಿದ್ದ ಬಿಜೆಪಿ ಈ ಬಾರಿ ಎಲ್ಲಾ ಕ್ಷೇತ್ರಗಳಲ್ಲಿಯೂ ಸೋಲನುಭವಿಸಿದೆ. ದಾವಣಗೆರೆಯಲ್ಲಿಯೂ ಕಳೆದ ಬಾರಿ ಗೆದ್ದಿದ್ದ 5 ಸ್ಥಾನಗಳಲ್ಲಿ ಒಂದನ್ನು ಮಾತ್ರ ಬಿಜೆಪಿಗೆ ಉಳಿಸಿಕೊಳ್ಳಲು ಸಾಧ್ಯವಾಗಿದೆ. ಹೊನ್ನಾಳಿಯಲ್ಲಿ ಬಿಜೆಪಿಯ ಮಾಜಿ ಸಚಿವ ರೇಣುಕಾಚಾರ್ಯ ಸೋತಿದ್ದಾರೆ. ಮಾಜಿ ಮುಖ್ಯಮಮಂತ್ರಿ ಯಡಿಯೂರಪ್ಪನವರ ಜಿಲ್ಲೆಯಾದ ಶಿವಮೊಗ್ಗದಲ್ಲಿ ತನ್ನ ಸ್ಕೋರ್‌ಅನ್ನು 6ರಿಂದ ಮೂರಕ್ಕೆ ಇಳಿಸಿಕೊಂಡಿದೆ ಬಿಜೆಪಿ. ಯಡಿಯೂರಪ್ಪನವರು ಪ್ರತಿನಿಧಿಸುತ್ತಿದ್ದ ಶಿಕಾರಿಪುರದಲ್ಲಿ ಅವರ ಪುತ್ರ ವಿಜಯೇಂದ್ರ ಬಿಜೆಪಿಯಿಂದ ಸ್ಪರ್ಧಿಸಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಎದುರು ಕೇವಲ 10664 ಮತಗಳ ಅಂತರದಿಂದ ಪ್ರಯಾಸಕರ ಗೆಲುವು ಸಾಧಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಮಾಜಿ ಸಚಿವ ಕಾಂಗ್ರೆಸ್‌ನ ಆಂಜನೇಯ ಪ್ರತಿನಿಧಿಸುವ ಮೀಸಲು ಕ್ಷೇತ್ರ ಹೊಳಲ್ಕೆರೆ ಒಂದನ್ನು ಬಿಟ್ಟು ಇನ್ನೆಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ನೆಲಕಚ್ಚಿದೆ. ಹೀಗೆ ಮಧ್ಯ ಕರ್ನಾಟಕದಲ್ಲಿ 2018ರಲ್ಲಿ ಗೆದ್ದಿದ್ದ 21 ಸೀಟುಗಳಿಂದ ಬಿಜೆಪಿ 5ಕ್ಕೆ ಕುಸಿದಿದೆ. ಹಿಂದುತ್ವ ಮತ್ತು ಲಿಂಗಾಯತ ಮತಗಳು ಹೆಚ್ಚಿರುವ ಈ ಪ್ರದೇಶದಲ್ಲಿ ಬಿಜೆಪಿಗೆ ವಿರುದ್ಧವಾಗಿ ಮತದಾರರು ನಿರ್ಣಾಯಕವಾಗಿ ಮತ ಚಲಾಯಿಸಿರುವುದನು ಸ್ಪಷ್ಟವಾಗಿ ಗಮನಿಸಬಹುದಾಗಿದೆ.

ರಾಷ್ಟ್ರ ರಾಜಕಾರಣಕ್ಕೂ ಹೊಸ ಹುರುಪು

ಕರ್ನಾಟಕ ಚುನಾವಣೆಗಳ ಫಲಿತಾಂಶದ ಬೆನ್ನಲ್ಲೇ ಲೋಕಸಭಾ ಚುನಾವಣೆಯಲ್ಲಿ ಸೆಣೆಸಲು ವಿರೋಧ ಪಕ್ಷಗಳಿಗೆ ಹೊಸ ಹುರುಪೊಂದು ಮೂಡಿರುವುದನ್ನು ಅಲ್ಲಗಳಯುವಂತಿಲ್ಲ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಕಾಂಗ್ರೆಸ್ ಬಲವಾಗಿರುವ ಕಡೆಗೆ ಟಿಎಂಸಿ ಬೆಂಬಲಿಸುವುದಾಗಿ ಹೇಳಿದ್ದಾರೆ. ಅದೇ ಬೆಂಬಲವನ್ನು ಕಾಂಗ್ರೆಸ್ ಪಶ್ಚಿಮ ಬಂಗಾಳದಲ್ಲಿ ನೀಡಬೇಕೆಂಬ ಕಿವಿಮಾತನ್ನೂ ಸೇರಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಸಾಂಪ್ರದಾಯಕ ವಿರೋಧಿಯಾದ ಮಮತಾ ಅವರಿಂದ ಈ ತರಹದ ಮಾತೊಂದು ಹೊರಬಿದ್ದಿರುವುದು ಕರ್ನಾಟಕ ಫಲಿತಾಂಶ ವಿರೋಧ ಪಕ್ಷಗಳಲ್ಲಿ ಮೂಡಿಸಿರುವ ಭರವಸೆ-ಉತ್ಸಾಹವನ್ನು ಸೂಚಿಸುತ್ತದೆ. ಇದು ಮುಂದೆ ಯಾವಯಾವ ತಿರುವುಗಳನ್ನು ಪಡೆದುಕೊಳ್ಳುತ್ತದೋ ಕಾದುನೋಡಬೇಕಿದೆ.

Previous Post

Karnataka Politics: ಪದಗ್ರಹಣ ಕಾರ್ಯಕ್ರಮಕ್ಕೆ ಎಲ್ಲರಿಗೂ ಆಹ್ವಾನ ನೀಡಿದ ಡಿಕೆ ಶಿವಕುಮಾರ್

Next Post

ವಿವಿ ಕ್ಯಾಂಪಸ್‌ನಲ್ಲೇ ಸ್ನೇಹಿತೆಯನ್ನು ಶೂಟ್ ಮಾಡಿ ಕೊಂದ ವಿದ್ಯಾರ್ಥಿ – ಬಳಿಕ ತಾನೂ ಆತ್ಮಹತ್ಯೆ

Next Post
ವಿವಿ ಕ್ಯಾಂಪಸ್‌ನಲ್ಲೇ ಸ್ನೇಹಿತೆಯನ್ನು ಶೂಟ್ ಮಾಡಿ ಕೊಂದ ವಿದ್ಯಾರ್ಥಿ – ಬಳಿಕ ತಾನೂ ಆತ್ಮಹತ್ಯೆ

ವಿವಿ ಕ್ಯಾಂಪಸ್‌ನಲ್ಲೇ ಸ್ನೇಹಿತೆಯನ್ನು ಶೂಟ್ ಮಾಡಿ ಕೊಂದ ವಿದ್ಯಾರ್ಥಿ – ಬಳಿಕ ತಾನೂ ಆತ್ಮಹತ್ಯೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.