Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಎಲ್‌ಕೆಜಿ ಸೇರಲು 4 ವರ್ಷ ಆಗಿರಲೇಬೇಕು! ಸರಕಾರದ ನಿಯಮಕ್ಕೆ ಬೆಚ್ಚಿಬಿದ್ದ ಪಾಲಕ, ಪೋಷಕರು

editor tv by editor tv
June 2, 2023
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ಉಡುಪಿ: ಒಂದನೇ ತರಗತಿ ಸೇರುವ ಮಗುವಿಗೆ ಜೂನ್‌ 1ಕ್ಕೆ ಆರು ವರ್ಷ ತುಂಬಿರಲೇ ಬೇಕೆಂಬ ನಿಯಮ 2025-26ನೇ ಸಾಲಿನಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ. ಈ ಹಿನ್ನೆಲೆ ಯಲ್ಲಿ ಈ ವರ್ಷದಿಂದಲೇ ಎಲ್‌ಕೆಜಿ ಸೇರಲು ನಾಲ್ಕು ವರ್ಷ ಆಗಿರಲೇ ಬೇಕು ಎಂಬ ನಿಯಮ ಅನ್ವಯಿಸಿರುವುದು ಪಾಲಕ, ಪೋಷಕರನ್ನು ಕಂಗೆಡಿಸಿದೆ.

ಸಮಗ್ರ ಶಿಕ್ಷಣ ಕರ್ನಾಟಕದಿಂದ ಹೊರಡಿಸಿರುವ ಆದೇಶದನ್ವಯ 2023-24ನೇ ಸಾಲಿಗೆ ಎಲ್‌ಕೆಜಿಗೆ ದಾಖಲಾಗುವ ಮಗುವಿಗೆ ಜೂನ್‌ 1ಕ್ಕೆ 4 ವರ್ಷ ತುಂಬಿರಬೇಕು. ಅದರಂತೆ ಆ ಮಗು ಎಲ್‌ಕೆಜಿ, ಯುಕೆಜಿ ಮುಗಿಸಿ ಒಂದನೇ ತರಗತಿ ಸೇರುವಾಗ 6 ವರ್ಷ ತುಂಬಿರುತ್ತದೆ. ಈ ವರ್ಷ ಎಲ್‌ಕೆಜಿಗೆ ಸೇರುವ ಮಗುವಿಗೆ ಜೂನ್‌ 1ಕ್ಕೆ 3 ವರ್ಷ 11 ತಿಂಗಳಾದರೂ ದಾಖಲಿಸಿಕೊಳ್ಳುವುದಿಲ್ಲ. ಆಗ ಆ ಮಗು 4.11 ವರ್ಷಕ್ಕೆ ಎಲ್‌ಕೆಜಿಗೆ ಸೇರಬೇಕು. ಅಂದರೆ ಒಂದು ವರ್ಷ ಪೂರ್ತಿ ವ್ಯರ್ಥವಾಗಲಿದೆ.

ಶಾಲಾ ಶಿಕ್ಷಣ ಇಲಾಖೆ ಈ ನಿಯಮವು ಪಾಲಕ, ಪೋಷಕರ ಆಕ್ರೋಶಕ್ಕೀಡಾಗಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳೂ ಪಾಲಕ, ಪೋಷಕರ ಪ್ರಶ್ನೆಗೆ ಉತ್ತರಿಸದೇ ಮೌನ ತಳೆದಿದ್ದಾರೆ.
ಇದು ಈ ಹಿಂದಿನ ಬಿಜೆಪಿ ಸರಕಾರ ರೂಪಿಸಿದ ನಿಯಮ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ಹಿನ್ನೆಲೆಯಲ್ಲಿ ಒಂದನೇ ತರಗತಿ ಸೇರುವ ಮಗುವಿಗೆ ಆರು ವರ್ಷ ತುಂಬಿರಬೇಕು ಎಂಬುದು ನಿಯಮದ ತಾತ್ಪರ್ಯ. ಅದೇ ಸಂದರ್ಭದಲ್ಲಿ 5 ವರ್ಷ 11 ತಿಂಗಳು, 5 ವರ್ಷ 10 ತಿಂಗಳು ತುಂಬಿದ ಮಕ್ಕಳು ಏನು ಮಾಡಬೇಕೆಂಬುದರ ಬಗ್ಗೆ ಸ್ಪಷ್ಟತೆ ನೀಡಿಲ್ಲ.

ಶಿಕ್ಷಕರ ಗೋಳು
ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಈಗಾಗಲೇ ಸರಕಾರದ ವತಿಯಿಂದಲೇ ಎಲ್‌ಕೆಜಿ, ಯುಕೆಜಿ ನಡೆಯುತ್ತಿದೆ. ಇನ್ನು ಕೆಲವು ಸರಕಾರಿ ಶಾಲೆಗಳಲ್ಲಿ ಎಸ್‌ಡಿಎಂಸಿ ಹಾಗೂ ಹಳೇ ವಿದ್ಯಾರ್ಥಿಗಳು ಹಾಗೂ ದಾನಿಗಳ ನೆರವಿನಿಂದ ನಡೆಸಲಾಗುತ್ತಿದೆ. ಇದಕ್ಕೆ ಸರಕಾರದ ಅನುದಾನ ಅಥವಾ ಯಾವುದೇ ಸವಲತ್ತು ಇಲ್ಲ. ಆದರೆ ಹೊಸ ನಿಯಮದಿಂದ 3 ವರ್ಷ 10 ತಿಂಗಳು, 3 ವರ್ಷ 11 ತಿಂಗಳು ಆಗಿರುವ ಮಕ್ಕಳನ್ನು ದಾಖಲಿಸಿಕೊಳ್ಳಲಾಗದೇ ಇಕ್ಕಟ್ಟಿಗೆ ಸಿಲುಕಿಕೊಂಡಂತಾಗಿದೆ.

ಹಿಂದಿನಂತಿದ್ದರೆ ಚೆಂದ
ಈ ಹಿಂದೆ 5 ವರ್ಷ 9 ತಿಂಗಳು ಆಗಿರುವ ಮಕ್ಕಳನ್ನು ಒಂದನೇ ತರಗತಿಗೆ ದಾಖಲು ಮಾಡಿಕೊಳ್ಳಲಾಗುತ್ತಿತ್ತು. ಆದರೆ ಈಗಿನ ಜೂನ್‌ 1ಕ್ಕೆ ಪೂರ್ಣ 6 ವರ್ಷ ಆಗಿರಬೇಕು ಎಂಬ ನಿಯಮ ಸೂಕ್ತವಾಗಿಲ್ಲ. ಸರಕಾರ ಇಂತಹ ನಿಯಮಗಳನ್ನು ಜಾರಿ ಮಾಡಿ ಅನಗತ್ಯ ಆತಂಕ ಸೃಷ್ಟಿಸುತ್ತಿದೆ. ಹಾಗಾಗಿ ಈ ಹಿಂದಿನ ನಿಯಮವನ್ನೇ ಪುನರ್‌ ಅನುಷ್ಠಾನಕ್ಕೆ ತರಬೇಕು ಎನ್ನುವುದು ಕೆಲವು ಪಾಲಕ, ಪೋಷಕರ ಆಗ್ರಹ.

ಅಧಿಕಾರಿಗಳಲ್ಲೂ ಸ್ಪಷ್ಟತೆಯಿಲ್ಲ
ಈ ನಿಯಮದಿಂದ ಪುಟ್ಟ ಮಕ್ಕಳ ಭವಿಷ್ಯದ ಒಂದು ವರ್ಷ ಹಾಳಾಗದಂತೆ ತಡೆಯಲು ಪರ್ಯಾಯ ಮಾರ್ಗ ಏನು ಎಂಬ ಬಗ್ಗೆ ಅಧಿಕಾರಿಗಳನ್ನು ಕೇಳಿದರೂ ಸ್ಪಷ್ಟತೆ ಇಲ್ಲ. ಸರಕಾರದ ಆದೇಶವನ್ನು ಪಾಲಿಸುತ್ತಿದ್ದೇವೆ ಎಂದಷ್ಟೇ ಹೇಳುತ್ತಿದ್ದಾರೆ.

ಖಾಸಗಿ ಶಾಲೆಗೂ ಅನ್ವಯ
ಈ ಆದೇಶ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೂ ಅನ್ವಯಿಸುತ್ತದೆ. ಆದರೆ ಖಾಸಗಿ ಹಾಗೂ ಅನುದಾನಿತ ಶಾಲೆಗಳು ಇದನ್ನು ಅಷ್ಟು ಗಂಭೀರವಾಗಿ ಪಾಲಿಸದ ಮಾತು ಕೇಳಿಬಂದಿದೆ. ಆದರೆ ಸರಕಾರಿ ಶಾಲೆಗಳಲ್ಲಿ ಆದೇಶ ಉಲ್ಲಂ ಸಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಅನಿವಾರ್ಯವಾಗಿ ಶಿಕ್ಷಕರು ಪಾಲಿಸುತ್ತಿದ್ದಾರೆ.

Previous Post

2024ರ ಚುನಾವಣೆಯಲ್ಲಿ ವಿಪಕ್ಷಗಳು ಬಿಜೆಪಿಯನ್ನು ಸೋಲಿಸಲಿವೆ:ಅಮೆರಿಕದಲ್ಲಿ ರಾಹುಲ್ ಗಾಂಧಿ

Next Post

BIG BREAKING ಎಲ್ಲಾ ಐದು ಗ್ಯಾರೆಂಟಿ ಜಾರಿಗೊಳಿಸಿದ ಸರ್ಕಾರ, ಸುದ್ದಿಗೋಷ್ಠಿಯಲ್ಲಿ ನೂತನ ಯೋಜನೆ ಮಾಹಿತಿ ನೀಡಿದ ಸಿಎಂ!

Next Post
BIG BREAKING ಎಲ್ಲಾ ಐದು ಗ್ಯಾರೆಂಟಿ ಜಾರಿಗೊಳಿಸಿದ ಸರ್ಕಾರ, ಸುದ್ದಿಗೋಷ್ಠಿಯಲ್ಲಿ ನೂತನ ಯೋಜನೆ ಮಾಹಿತಿ ನೀಡಿದ ಸಿಎಂ!

BIG BREAKING ಎಲ್ಲಾ ಐದು ಗ್ಯಾರೆಂಟಿ ಜಾರಿಗೊಳಿಸಿದ ಸರ್ಕಾರ, ಸುದ್ದಿಗೋಷ್ಠಿಯಲ್ಲಿ ನೂತನ ಯೋಜನೆ ಮಾಹಿತಿ ನೀಡಿದ ಸಿಎಂ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.