Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಒಡಿಶಾ ರೈಲು ದುರಂತ, ಆ್ಯಂಬುಲೆನ್ಸ್‌ನಲ್ಲಿ 230 ಕಿ.ಮೀ ತೆರಳಿ ಶವಗಾರದಲ್ಲಿ ಬಿಸಾಕಿದ್ದ ಮಗನ ಉಳಿಸಿದ ತಂದೆ!

editor tv by editor tv
June 5, 2023
in ರಾಷ್ಟ್ರೀಯ
0
ಒಡಿಶಾ ರೈಲು ದುರಂತ, ಆ್ಯಂಬುಲೆನ್ಸ್‌ನಲ್ಲಿ 230 ಕಿ.ಮೀ ತೆರಳಿ ಶವಗಾರದಲ್ಲಿ ಬಿಸಾಕಿದ್ದ ಮಗನ ಉಳಿಸಿದ ತಂದೆ!
1.9k
VIEWS
Share on FacebookShare on TwitterShare on Whatsapp

ಒಡಿಶಾ ರೈಲು ದುರಂತದಲ್ಲಿ ಒಬ್ಬೊಬ್ಬರದ್ದೂ ಒಂದೊಂದು ನೋವಿನ ಕತೆ. ದುರಂತ ಸಂಭವಿಸಿದ ಮರುಕ್ಷಣದಲ್ಲೇ ಆ್ಯಂಬುಲೆನ್ಸ್ ಕರೆದು 230 ಕಿ.ಮೀ ಪ್ರಯಾಣ ಮಾಡಿ ಘಟನಾ ಸ್ಥಳ ತಲುಪಿದ ತಂದೆ, ಮಗನಿಗಾಗಿ ಹುಡುಕಾಟ ಶುರುಮಾಡಿದ್ದಾರೆ. ಶುಕ್ರವಾರ, ಶನಿವಾರ ಗಾಯಾಳುಗಳ ಆಸ್ಪತ್ರೆ ಹುಡುಕಿದ್ದಾರೆ ಸಿಗಲಿಲ್ಲ. ಕೊನೆಗೆ ಶವಗಾರದಲ್ಲಿ ತಡಕಾಡಿದಾಗ, ಜೀವಂತವಾಗಿ ಪತ್ತೆಯಾಗಿದ್ದಾನೆ. ತಕ್ಷಣವೇ ಆಸ್ಪತ್ರೆ ದಾಖಲಿಸಿ ಮಗನ ಬದುಕಿಸುವಲ್ಲಿ ತಂದೆ ಯಶಸ್ವಿಯಾಗಿದ್ದಾರೆ.

ಒಡಿಶಾ(ಜೂ.05): ಒಡಿಶಾ ರೈಲು ದುರಂತದ ನೋವಿನ ಕತೆಗಳು ಒಂದೊಂದಾಗಿ ತೆರೆದುಕೊಳ್ಳುತ್ತಿದೆ. ಇದರ ನಡವೆ ಕೆಲವು ಭಯಾನಕ ಘಟನೆಗಳೂ ನಡೆದಿದೆ.ಮಗನ ಬದುಕಿಸಲು ತಂದೆ ಬರೋಬ್ಬರಿ 230 ಕಿಲೋಮೀಟರ್ ಆ್ಯಂಬುಲೆನ್ಸ್ ಮೂಲಕ ತೆರಳಿ, ಕೊನೆಗೆ ಶವಗಾರದಲ್ಲಿಟ್ಟಿದ್ದ ಶವಗಳ ರಾಶಿಯಿಂದ ಮಗನ ಜೀವಂತವಾಗಿ ಹೊರತೆಗೆದು ಆಸ್ಪತ್ರೆ ದಾಖಲಿಸಿದ ಘಟನೆಯೂ ನಡೆದಿದೆ. ಎರಡು ದಿನದ ಸತತ ಹಡುಕಾಟ ಹಾಗೂ ಪರಿಶ್ರಮದಿಂದ ಮಗನ ಜೀವವನ್ನು ಉಳಿಸಿದ ತಂದೆಗೆ ಎಲ್ಲರು ಶಹಬ್ಬಾಷ್ ಎಂದಿದ್ದಾರೆ

ಹೌರಾದ ಅಂಗಡಿ ಮಾಲೀಕ ಹೆಲರಾಮ್ ತನ್ನ  24 ವರ್ಷದ ಮಗ ಬಿಸ್ವಜೀತ್ ಮಲಿಕ್‌ನನ್ನ ಉಳಿಸಿದ ರೋಚಕ ಕತೆ ಇಲ್ಲಿದೆ. ಕೊರಮಂಡಲ್ ಎಕ್ಸ್‌ಪ್ರೆಸ್ ರೈಲಿಗೆ ಮಗನ ಹತ್ತಿಸಿ ಮನಗೆ ಮರಳಿದ ತಂದೆಗೆ ಕೆಲ ಹೊತ್ತಲ್ಲೇ ಅಪಘಾತದ ಸುದ್ದಿ ಬಂದಿದೆ. ತಕ್ಷಣವೇ ಮಗನಿಗೆ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸಿದ ಬಿಸ್ವಜಿತ್ ತೀವ್ರವಾಗಿ ಗಾಯಗೊಂಡಿದ್ದೇನೆ ಎಲ್ಲಿದ್ದೇನೆ ಎಂದು ತಿಳಿಯುತ್ತಿಲ್ಲ ಎಂದಷ್ಟೇ ಹೇಳಿದ್ದಾನೆ. ಮತ್ತೆ ಫೋನ್ ಕಟ್ ಮಾಡಿಲ್ಲ. ಆದರೆ ಮಾತಿಲ್ಲ. ಇತ್ತ ತಂದೆ ಮತ್ತಷ್ಟು ಆಘಾತಗೊಂಡಿದ್ದಾರೆ.

ತನ್ನ ಮನೆಯಿಂದ 230 ಕಿಲೋಮೀಟರ್ ದೂರದಲ್ಲಿ ಅಪಘಾತ ನಡೆದಿತ್ತು. ತಕ್ಷಣ ತಲುಪಲು ಆ್ಯಂಬುಲೆನ್ಸ್ ಕರೆದು ಇಬ್ಬರು ಕುಟುಂಬಸ್ಥರೊಂದಿಗೆ ಘಟನಾ ಸ್ಥಳಕ್ಕೆ ತಂದೆ ಹೆಲರಾಮ್ ತಲುಪಿದ್ದರು. ಶನಿವಾರ ಮುಂಜಾನೆಯಿಂದ ಹುಡುಕಾಟ ಶುರುವಾಗಿದೆ. ಗಾಯಳುಗಳಿಗೆ ಚಿಕಿತ್ಸೆ ನೀಡುತ್ತಿದ್ದ ಎಲ್ಲಾ ಆಸ್ಪತ್ರೆಗಳಲ್ಲಿ ಹುಡುಕಾಡಿದರೂ ಮಗನ ಸುಳಿವಿಲ್ಲ. ಅಧಿಕಾರಿಗಳು ಮಗ ಮೃತಪಟ್ಟಿದ್ದಾನೆ. ಹೀಗಾಗಿ ಶವಗಾರದಲ್ಲಿ ಹುಡುಕಾಡಲು ಸೂಚಿಸಿದ್ದಾರೆ.

ಬಹನಗದ ಸರ್ಕಾರಿ ಶಾಲೆಯಯನ್ನು ತಾತ್ಕಾಲಿಕ ಶವಗಾರವಾಗಿ ಮಾಡಲಾಗಿತ್ತು. ರೈಲು ದುರಂತದಲ್ಲಿ ಮೃತಪಟ್ಟವರನ್ನು ಇದೇ ಶವಗಾರಕ್ಕೆ ಸಾಗಿಸಲಾಗಿತ್ತು. ತ್ವರಿತ ಕಾರ್ಯಾಚರಣೆಯಲ್ಲಿ ಪ್ರಜ್ಞಾಹೀನನಾಗಿದ್ದ ಬಿಸ್ವಜಿತ್ ಮಲಿಕ್‌ನನ್ನು ರಕ್ಷಣಾ ಸಿಬ್ಬಂದಿಗಳು ಶವಗಾರಕ್ಕೆ ಕಳುಹಿಸಿದ್ದಾರೆ. ಶವಗಾರದಲ್ಲಿ ಶವಗಳ ರಾಶಿ ನಡುವೆ ಬಿಸ್ವಜಿತ್ ಮಲಿಕ್ ಬಿದ್ದಿದ್ದ. ಆದರೆ ಸಾರ್ವಜನಿಕರಿಗೆ ಈ ಶವಗಾರಕ್ಕೆ ಪ್ರವೇಶ ಇರಲಿಲ್ಲ.

ನಡೆದ ಘಟನೆ ವಿವರಿಸಿದ ತಂದೆ ಹೆಲರಾಮ್ ಒಂದು ಸಾರಿ ಹುಡುಕಾಡುವುದಾಗಿ ಮನವಿ ಮಾಡಿದ್ದಾರೆ. ಬಳಿಕ ಒಳ ಪ್ರವೇಶಿಸಿದ ತಂದೆಯ ಜಂಗಾಬಲವೇ ಉಡುಗಿ ಹೋಗಿದೆ. ಶವಗಳ ರಾಶಿ, ತನ್ನ ಮಗ ಬದುಕಿದ್ದಾನೆ ಅನ್ನೋ ವಿಶ್ವಾಸದಲ್ಲಿ ಘಟನಾ ಸ್ಥಳಕ್ಕೆ ಆಗಮಿಸಿದ್ದ ತಂದೆ ಶವಗಳ ರಾಶಿಯಲ್ಲಿ ಮಗನ ಹುಡುಕಾಟ ಮಾಡುವ ಪರಿಸ್ಥಿತಿ ಬರುತ್ತದೆ ಎಂದು ಊಹಿಸಿರಲಿಲ್ಲ. ಹುಡುಕಾಟ ಶುರುವಾದರೂ ಪತ್ತೆ ಇಲ್ಲ. ಶವಗಾರದ ಕೋಣೆಯ ಮೂಲೆಯೊಂದರಲ್ಲಿ ಕೈಯ ಚಲನೆಯೊಂದನ್ನು ತಂದೆ ಮಗನಿಸಿದ್ದಾರೆ. ತಕ್ಷಣವೇ ಓಡಿದ್ದಾರೆ. ಹತ್ತಿರಬರುತ್ತಿದ್ದಂತೆ ತಂದೆಗೆ ಇದು ತನ್ನ ಮಗನ ಕೈಯೆಂದು ಖಚಿತಗೊಂಡಿದೆ. ಇತರ ಶವಗಳನ್ನು ಪಕ್ಕಕ್ಕೆ ಸರಿಸಿದಾಗ ಊಹೆ ನೀಡವಾಗಿದೆ. ಬಿಸ್ವಜಿತ್ ಮಲಿಕ್ ಪ್ರಜ್ಞಾಹೀನನಾಗಿ ಬಿದ್ದಿದ್ದಾನೆ.

ಶವಗಾರದಿಂದ ಬಿಸ್ವಜಿತ್ ಮಲಿಕ್ ಹೊರತಂದ ತಂದೆ, ತಾವು ಆಗಮಿಸಿದ ಅದೇ ಆ್ಯಂಬುಲೆನ್ಸ್‌ನಲ್ಲಿ ಬಾಲಾಸೋರ್ ಆಸ್ಪತ್ರೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ್ದಾಳೆ. ಗಂಭೀರವಾಗಿ ಗಾಯಗೊಂಡ ಕಾರಣ ಕಟಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಲ್ಲಿಂದ ಕೋಲ್ಕತಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಸ್ವಜಿತ್‌ಗೆ ಎರಡು ಸರ್ಜರಿ ಮಾಡಲಾಗಿದೆ. ಸದ್ಯ ಬಿಸ್ವಜಿತ್ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Previous Post

Gruha Jyothi Scheme: ಗೃಹಜ್ಯೋತಿಗೆ ಹೊಸ ನಿಬಂಧನೆ, ಉಚಿತ ವಿದ್ಯುತ್​ಗಾಗಿ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಲು ಸೂಚನೆ

Next Post

ಸೋಮೇಶ್ವರ ನೈತಿಕ ಪೊಲೀಸ್ ಗಿರಿ ಬೆನ್ನಲ್ಲೇ ಇಂದು ಮಂಗಳೂರಿಗೆ ಗೃಹ ಸಚಿವರ ಭೇಟಿ!

Next Post
ಸೋಮೇಶ್ವರ ನೈತಿಕ ಪೊಲೀಸ್ ಗಿರಿ ಬೆನ್ನಲ್ಲೇ ಇಂದು ಮಂಗಳೂರಿಗೆ ಗೃಹ ಸಚಿವರ ಭೇಟಿ!

ಸೋಮೇಶ್ವರ ನೈತಿಕ ಪೊಲೀಸ್ ಗಿರಿ ಬೆನ್ನಲ್ಲೇ ಇಂದು ಮಂಗಳೂರಿಗೆ ಗೃಹ ಸಚಿವರ ಭೇಟಿ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.