Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

Shakti Scheme: ಉಚಿತ ಬಸ್​ಗೆ ಮುಗಿಬಿದ್ದ ಮಹಿಳೆಯರು; ಸಂಕಷ್ಟದಲ್ಲಿ ಖಾಸಗಿ ಬಸ್ ಮಾಲೀಕರು

editor tv by editor tv
June 12, 2023
in ರಾಜ್ಯ
0
Shakti Scheme: ಉಚಿತ ಬಸ್​ಗೆ ಮುಗಿಬಿದ್ದ ಮಹಿಳೆಯರು; ಸಂಕಷ್ಟದಲ್ಲಿ ಖಾಸಗಿ ಬಸ್ ಮಾಲೀಕರು
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಮೊದಲ ಗ್ಯಾರಂಟಿ, ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಯು ರಾಜ್ಯಾದ್ಯಂತ ಜೂನ್‌ 11ರ ಭಾನುವಾರ ಯಶಸ್ವಿಯಾಗಿ ಉದ್ಘಾಟನೆಯಾಗಿದೆ(Shakti Scheme). ಇಂದು ಈ ಯೋಜನೆಯ ಎರಡನೇ ದಿನವಾಗಿದ್ದು ವಿದ್ಯಾರ್ಥಿನಿಯರು, ಯುವತಿಯರು, ಮಹಿಳೆಯರು ಸರ್ಕಾರಿ ಬಸ್​ಗಳಿಗೆ ಮುಗಿಬಿದ್ದಿದ್ದಾರೆ. ಉಚಿತ ಪ್ರಯಾಣವೆಂದು ಕೆಂಪು ಬಸ್​ಗಳನ್ನತ್ತುತ್ತಿದ್ದಾರೆ. ಇದರಿಂದ ಖಾಸಗಿ ಬಸ್​ಗಳಿಗೆ ನಷ್ಟ ಎದುರಾಗಿದೆ.

ಶಿವಮೊಗ್ಗ, ಮಂಗಳೂರು, ಹಾಸನ, ಚಿತ್ರದುರ್ಗ ಸೇರಿದಂತೆ ಅನೇಕ ಕಡೆ ಸಾರಿಗೆ ಬಸ್ ನಿಲ್ದಾಣ ಫುಲ್ ರಶ್ ಆಗಿದ್ದು ಮತ್ತೊಂದು ಕಡೆ ಖಾಸಗಿ ಬಸ್ ನಿಲ್ದಾಣ ಖಾಲಿ ಖಾಲಿ ಕಂಡು ಬಂದಿದೆ. ಉಚಿತ ಬಸ್ ಪ್ರಯಾಣದ ಲಾಭ ಪಡೆಯಲು ನಾರಿಮಣಿಗಳು ಸರ್ಕಾರಿ ಬಸ್​ಗಳಿಗೆ ಮುಗಿಬೀಳುತ್ತಿದ್ದಾರೆ.

ಉಚಿತ ಬಸ್‌ಗಳ ಸೇವೆ ಆರಂಭವಾಗುತ್ತಿದ್ದಂತೆ ಮಹಿಳೆಯರು ಖಾಸಗಿ ಬಸ್‌ಗಳತ್ತ ಮುಖ ಮಾಡುತ್ತಿಲ್ಲ. ಹಲವು ನಗರಗಳಲ್ಲಿ ಖಾಸಗಿ ಬಸ್‌ ನಿಲ್ದಾಣಗಳು ಬಿಕೋ ಎನ್ನುತ್ತಿವೆ. ಅಲ್ಲದೆ ಖಾಸಗಿ ಬಸ್​ಗಳ ಟಿಕೆಟ್‌ ಬುಕ್ಕಿಂಗ್‌ ಕೂಡ ಕಡಿಮೆ ಆಗಿದೆ. ದಿನಕ್ಕೆ 30ರಿಂದ 40 ಮಂದಿ ಮಹಿಳೆಯರು ಖಾಸಗಿ ಬಸ್​ನಲ್ಲಿ ಓಡಾಡುತ್ತಿದ್ದರು. ಆದ್ರೆ ಈಗ ಒಬ್ಬರು ಕೂಡ ಬರುತ್ತಿಲ್ಲ ಎಂದು ಖಾಸಗಿ ಬಸ್​ಗಳ ಮಾಲೀಕರು ಅಳಲು ತೋಡಿಕೊಂಡಿದ್ದಾರೆ.

ಬಾಗಲಕೋಟೆ ಟಂಟಂ ಚಾಲಕರಿಗೆ ಬಾರಿ ಹೊಡೆತ

ಶಕ್ತಿ ಯೋಜನೆಯು ಬಾಗಲಕೋಟೆ ಟಂಟಂ ಚಾಲಕರಿಗೆ ಬಾರಿ ಹೊಡೆತ ಕೊಟ್ಟಿದೆ. ಬಹುತೇಕ ಮಹಿಳಾ ಪ್ರಯಾಣಿಕರ ಮೇಲೆ ಅವಲಂಭಿತರಾಗಿರುವ ಟಂಟಂ ಚಾಲಕರು ಈಗ ಪ್ರಯಾಣಿಕರಿಲ್ಲದೆ ಖಾಲಿ ಕುಂತಿದ್ದಾರೆ. ವಿದ್ಯಾರ್ಥಿನಿಯರು, ತರಕಾರಿ ವ್ಯಾಪಾರಸ್ಥ ಮಹಿಳೆಯರು, ಮಹಿಳಾ ಸರಕಾರಿ ಹಾಗೂ ಖಾಸಗಿ ನೌಕರರ ಮೇಲೆ ಟಂಟಂ ಚಾಲಕರು ಅವಲಂಭಿತರಾಗಿದ್ದರು. ಬಾಗಲಕೋಟೆಯಿಂದ ನವನಗರ, ವಿದ್ಯಾಗಿರಿ, ಗದ್ದನಕೇರಿ ಕ್ರಾಸ್ ವರೆಗೂ ನಿತ್ಯ ಸಂಚರಿಸುವ ಟಂಟಂಗಳು ಬೆಳಗ್ಗೆಯಿಂದ ನಿಂತಲ್ಲೇ ನಿಂತಿವೆ.

ಬಾಗಲಕೋಟೆ ನಗರದಲ್ಲಿ 3 ಸಾವಿರ ಟಂಟಂಗಳಿವೆ. 3 ಸಾವಿರ ಕುಟುಂಬಗಳು ಟಂಟಂ ದುಡಿಮೆಯ ಮೇಲೆಯೇ ಜೀವನ ಸಾಗಿಸುತ್ತಿವೆ. ಕೆಎಸ್​ಆರ್​ಟಿಸಿ ಬಸ್​ನಲ್ಲಿ ಮಹಿಳೆಯರಿಗೆ ಫ್ರೀ ಮಾಡಿದಾರೆ. ನಮ್ಮ ಪ್ಯಾಸೆಂಜರ್​ಗಳೆ ಹೆಚ್ಚು ಮಹಿಳೆಯರು. ಈಗ ಅವರೇ ಇಲ್ಲದ ಕಾರಣ ಬಹಳ ತೊಂದರೆಯಾಗಿದೆ. ಬೆಳಿಗ್ಗೆ ಐದು ಗಂಟೆಗೆ ಸ್ಟ್ಯಾಂಡ್ ನಲ್ಲಿ ಟಂಟಂ ನಿಲ್ಲಿಸಿ ಖಾಲಿ ಕೂತಿದ್ದೇವೆ. ಬೆಳಿಗ್ಗೆಯಿಂದ ಇಲ್ಲಿವರೆಗೆ ಎರಡೆರಡು ಟ್ರಿಪ್ ಹೊಡೆಯುತ್ತಿದ್ದೆವು. ಇಂದು ಇದುವರೆಗೂ ಒಂದು ಟ್ರಿಪ್ ಆಗಿಲ್ಲ. ಲೋನ್ ಮೇಲೆ ಟಂಟಂ‌ ಖರೀದಿ ಮಾಡಿರುತ್ತೇವೆ. ತಿಂಗಳಾದರೆ ಲೋನ್ ಕಟ್ಟೋದು ಹೇಗೆ? ಮಕ್ಕಳ ಶಾಲೆ, ಕುಟುಂಬ ನಿರ್ವಹಣೆ ಹೇಗೆ? ಮಹಿಳೆಯರ ಉಚಿತ ಪ್ರಯಾಣ ಬಾರಿ ನಷ್ಟ ತಂದಿದೆ. ಹೀಗೆ ಮುಂದುವರೆದರೆ ಟಂಟಂ ಮಾರುವ ಸ್ಥಿತಿ ಬರುತ್ತದೆ. ನಮಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಎಂದು ಟಂಟಂ ಚಾಲಕರು ಅಳಲು ತೋಡಿಕೊಂಡಿದ್ದಾರೆ.

ನಾವೂ ಕೂಡ ಉಚಿತ ಸೇವೆ ನೀಡ್ತೀವಿ, ಅದರ ವೆಚ್ಚ ಸರ್ಕಾರ ಭರಿಸಲಿ -ಖಾಸಗಿ ಬಸ್ ಮಾಲೀಕರ ಅಳಲು

ಒಂದು ಕಡೆ ರಾಜ್ಯದಲ್ಲಿ ಶಕ್ತಿ ಯೋಜನೆ ಅತ್ಯಂತ ಯಶಸ್ವಿಯಾಗಿ ಸಾಗುತ್ತಿದ್ದರೆ ಮತ್ತೊಂದು ಕಡೆ ಖಾಸಗಿ ಬಸ್ ಮಾಲೀಕರು ಸಮಸ್ಯೆಗೆ ಸಿಲುಕಿದ್ದಾರೆ. ಮೈಸೂರಿನ ಖಾಸಗಿ ಬಸ್ ನಿಲ್ದಾಣ ಖಾಲಿ ಖಾಲಿಯಾಗಿದೆ. ಸರ್ಕಾರ ನಮಗೂ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿ ಕೊಡಲಿ. ನಾವು ಉಚಿತವಾಗಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತೇವೆ. ಅದರ ಹಣವನ್ನು ಸರ್ಕಾರ ಭರಿಸಿ ಕೊಡಲಿ. ಯಾವುದೇ ನಿಯಮ ವಿಧಿಸಲಿ ಎಂದು ಟಿವಿ9 ಮೂಲಕ ಖಾಸಗಿ ಬಸ್ ಮಾಲೀಕರು ಮನವಿ ಮಾಡಿದರು. ಎಲ್ಲರಿಗೂ ಉಚಿತ ಕೊಟ್ಟಿರುವುದು ಸರಿಯಲ್ಲ. ವಯಸ್ಸಾದವರಿಗೆ, ಆಸ್ಪತ್ರೆಗೆ ಹೋಗುವವರಿಗೆ, ಬಡವರಿಗೆ ಈ ರೀತಿ ಆಯ್ದ ಕೆಲವರಿಗೆ ಮಾತ್ರ ಯೋಜನೆ ನೀಡಿ ಎಂದು ಖಾಸಗಿ ಬಸ್ ಮಾಲೀಕರು ಒತ್ತಾಯಿಸಿದ್ದಾರೆ.

Previous Post

ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸುದ್ದು ಮಾಡುತ್ತಿರುವ ನಿಂಗವ್ವ ಸಿದ್ದರಾಮಯ್ಯ ಬಗ್ಗೆ ಹೇಳಿದ್ದಿಷ್ಟು

Next Post

ಪಿಯು ಫೇಲ್‌ ಅಲ್ಲ, ನ್ಯಾಷನಲ್‌ ಲಾ ಸ್ಕೂಲಲ್ಲಿ ಓದಿದವನು: ಸಚಿವ ಪ್ರಿಯಾಂಕ್‌ ಖರ್ಗೆ

Next Post
ನೆಮ್ಮದಿ, ಶಾಂತಿ ಕೆಡಿಸಿದ್ರೆ ಆರ್​ಎಸ್​ಎಸ್​, ಭಜರಂಗದಳ ಯಾವ ಸಂಘಟನೆಯೆಂದು ನೋಡದೇ ಕ್ರಮ ಕೈಗೊಳ್ಳುತ್ತೇವೆ -ಪ್ರಿಯಾಂಕ್ ಖರ್ಗೆ

ಪಿಯು ಫೇಲ್‌ ಅಲ್ಲ, ನ್ಯಾಷನಲ್‌ ಲಾ ಸ್ಕೂಲಲ್ಲಿ ಓದಿದವನು: ಸಚಿವ ಪ್ರಿಯಾಂಕ್‌ ಖರ್ಗೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.