Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಮಂಗಳೂರು: ಇನ್ನೂ ಮೃತರ ಹೆಸರಲ್ಲೇ ಇರುವ ಕರೆಂಟ್‌ ಬಿಲ್‌!

editor tv by editor tv
June 19, 2023
in ರಾಜ್ಯ
0
ಮಂಗಳೂರು: ಇನ್ನೂ ಮೃತರ ಹೆಸರಲ್ಲೇ ಇರುವ ಕರೆಂಟ್‌ ಬಿಲ್‌!
1.9k
VIEWS
Share on FacebookShare on TwitterShare on Whatsapp

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹ ಜ್ಯೋತಿ’ ಯೋಜನೆಗೆ ದ.ಕ.ದಲ್ಲಿ ಫಲಾನುಭವಿಗಳು ಇದ್ದರೂ ಹೆಚ್ಚಿನ ಮಂದಿ ಇದರಿಂದ ವಂಚಿತರಾಗುವ ಸಂಭವ ಎದುರಾಗಿದೆ.

ಮಂಗಳೂರು (ಜೂ.19): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹ ಜ್ಯೋತಿ’ ಯೋಜನೆಗೆ ದ.ಕ.ದಲ್ಲಿ ಫಲಾನುಭವಿಗಳು ಇದ್ದರೂ ಹೆಚ್ಚಿನ ಮಂದಿ ಇದರಿಂದ ವಂಚಿತರಾಗುವ ಸಂಭವ ಎದುರಾಗಿದೆ. ಇದಕ್ಕೆ ಕಾರಣ ಜಿಲ್ಲೆಯಲ್ಲಿ ಹೆಚ್ಚಿನ ಮನೆಗಳ ವಿದ್ಯುತ್‌ ಬಿಲ್‌ಗಳು ಮೃತರ ಹೆಸರಿನಲ್ಲಿ ಇರುವುದು ಈ ಯೋಜನೆಯ ಫಲಾನುಭವಿಯಾಗಲು ಅಡ್ಡಿಯಾಗಲಿದೆ.

ಗೃಹ ಬಳಕೆಗೆ ನೀಡುವ ಉಚಿತ ವಿದ್ಯುತ್‌ ‘ಗೃಹ ಜ್ಯೋತಿ’ ಯೋಜನೆ (Gruhajyoti scheme)ಗೆ ಅರ್ಜಿ ಸಲ್ಲಿಕೆಯನ್ನು ರಾಜ್ಯ ಸರ್ಕಾರ ಭಾನುವಾರದಿಂದ ರಾಜ್ಯಾದ್ಯಂತ ಆರಂಭಿಸಿದೆ. ಅರ್ಜಿ ಸಲ್ಲಿಕೆ ವೇಳೆ ಪ್ರಾಥಮಿಕವಾಗಿ ಆಧಾರ್‌ ಗುರುತಿನ ಚೀಟಿ ಹಾಗೂ ಮೆಸ್ಕಾಂ ಬಿಲ್‌ನ ದಾಖಲೆಯನ್ನು ಮಾತ್ರ ಕೇಳಲಾಗಿದೆ. ಉಳಿದಂತೆ ಯಾವುದೇ ದಾಖಲೆ ಈಗ ಕೇಳುವುದಿಲ್ಲ ಎಂದು ಹೇಳಿದೆ. ಆದರೆ ಯೋಜನೆ ಅನುಷ್ಠಾನ ವೇಳೆ ಅಗತ್ಯ ದಾಖಲೆಗಳನ್ನು ಹಾಜರುಪಡಿಸಬೇಕಾಗುವ ಸಂಭವ ಇದೆ. ಬೇರೆ ಯಾವುದೇ ದಾಖಲೆ ಕೇಳದಿದ್ದರೂ ವಿದ್ಯುತ್‌ ಸಂಪರ್ಕ ಮನೆಯ ಯಜಮಾನನ ಹೆಸರಿನಲ್ಲಿ ಇರಲೇ ಬೇಕಾದ್ದು ಕಡ್ಡಾಯ. ಇಲ್ಲದಿದ್ದರೆ ಈ ಯೋಜನೆ ಎಲ್ಲ ಫಲಾನುಭವಿಗಳಿಗೆ ತಲುಪಲು ಸಾಧ್ಯವಾಗದು.

ಸಾವಿರಾರು ಬಿಲ್‌ಗಳು ಮೃತರ ಹೆಸರಲ್ಲಿ!:

ಲಭ್ಯ ಮಾಹಿತಿ ಪ್ರಕಾರ ದ.ಕ. ಜಿಲ್ಲೆಯಲ್ಲಿ ಸಾವಿವಾರು ಗೃಹ ಬಳಕೆಯ ವಿದ್ಯುತ್‌ ಬಿಲ್‌ಗಳು ಈಗಲೂ ಮೃತಪಟ್ಟವರ ಹೆಸರಿನಲ್ಲೇ ಇದೆ. ಹಿರಿಯರು ಗತಿಸಿದರೂ ಬಿಲ್‌ ಮಾತ್ರ ಅವರದೇ ಹೆಸರಿನಲ್ಲಿ ಗ್ರಾಹಕರನ್ನು ತಲುಪುತ್ತಿದೆ!

ಸುಳ್ಯ ತಾಲೂಕಿನಲ್ಲೂ ಸಾವಿರಾರು ಕರೆಂಟ್‌ ಬಿಲ್‌ಗಳು ಮೃತರ ಹೆಸರಿನಲ್ಲೇ ಗ್ರಾಹಕರಿಗೆ ರವಾನೆಯಾಗುತ್ತಿದೆ. ಇದನ್ನು ಹಾಲಿ ಗ್ರಾಹಕರೂ ತಮ್ಮ ಹೆಸರಿಗೆ ವರ್ಗಾಯಿಸಿಲ್ಲ, ವಿದ್ಯುತ್‌ ನಿಗಮ ಕೂಡ ಕಾಲಕಾಲಕ್ಕೆ ಮಾಹಿತಿ ನೀಡಿಲ್ಲ. ಆದರೆ ಸರ್ಕಾರ ಗೃಹ ಜ್ಯೋತಿ ಯೋಜನೆ ಜಾರಿಗೆ ಸಿದ್ಧತೆ ಆರಂಭಿಸಿದಾಗ ಎಚ್ಚೆತ್ತ ಮೆಸ್ಕಾಂ ಅಧಿಕಾರಿಗಳಿಗೆ ವಿದ್ಯುತ್‌ ಬಿಲ್‌ ಮೃತರ ಹೆಸರಿಗೆ ರವಾನೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಕೂಡಲೇ ಮೃತರ ಹೆಸರಿನಿಂದ ಹಾಲಿ ಗ್ರಾಹಕರ ಹೆಸರಿಗೆ ವಿದ್ಯುತ್‌ ಬಿಲ್‌ ವರ್ಗಾಯಿಸುವಂತೆ ಮೆಸ್ಕಾಂ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಹೀಗಾಗಿ ಕಳೆದ ಒಂದು ವಾರದಿಂದ ಮೃತ ವ್ಯಕ್ತಿಗಳ ಹೆಸರಿನಿಂದ ಹಾಲಿ ಗ್ರಾಹಕರ ಹೆಸರಿಗೆ ವಿದ್ಯುತ್‌ ಬಿಲ್‌ ವರ್ಗಾಯಿಸುವ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ.

ಪಂಚಾಯ್ತಿಗಳಲ್ಲಿ ಸರತಿ ಸಾಲು:

ಗೃಹ ಜ್ಯೋತಿ ಯೋಜನೆಯ ಫಲಾನುಭವಿ ಆಗಬೇಕಾದರೆ ಗೃಹ ಬಳಕೆ ವಿದ್ಯುತ್‌ನ ದಾಖಲೆ ಮನೆಯ ಯಜಮಾನರ ಹೆಸರಿನಲ್ಲಿ ಇರಬೇಕು. ಇದು ಮೃತಪಟ್ಟವರ ಹೆಸರಿನಲ್ಲಿ ಇದ್ದರೆ ಯೋಜನೆ ಫಲಾನುಭವಿ ಆಗಲು ಸಾಧ್ಯವಾಗದು. ಅದಕ್ಕಾಗಿ ಇದನ್ನು ವರ್ಗಾವಣೆ ಮಾಡಿಸಿಕೊಳ್ಳಲು ಮೊದಲು ಗ್ರಾಮ ಪಂಚಾಯ್ತಿಗಳಿಗೆ ಗ್ರಾಹಕರು ಮುಗಿಬೀಳುತ್ತಿದ್ದಾರೆ.

200 ರು. ಸ್ಟಾಪ್‌ ಪೇಪರ್‌ ಬಾಂಡ್‌ ಪಡೆದುಕೊಂಡು ಆಧಾರ್‌ ಕಾರ್ಡ್‌, ಪಡಿತರ ಕಾರ್ಡ್‌, ಮನೆ ತರಿಗೆ ರಸೀದಿ, ಕರೆಂಟ್‌ ಬಿಲ್‌, ವಾರಸುದಾರರ ಒಪ್ಪಿಗೆ ಪತ್ರ, ನೋಟರಿ ಪ್ರಮಾಣ ಪತ್ರ ಮಾಡಿ ಬಳಿಕ ಪಂಚಾಯ್ತಿಯ ನಿರಕ್ಷೇಪಣಾ ಪತ್ರ ಕಡ್ಡಾಯ ಇರಬೇಕು. ನಿರಕ್ಷೇಪಣಾ ಪತ್ರ ನೀಡಬೇಕಾದರೆ, ಪಂಚಾಯ್ತಿಗೆ ಬಾಕಿ ಇರುವ ಮನೆ ತೆರಿಗೆ ಹಾಗೂ ನೀರಿನ ತೆರಿಗೆಯನ್ನು ಬಾಕಿ ಇರಿಸುವಂತಿಲ್ಲ. ಹೀಗಾಗಿ ಈ ಯೋಜನೆ ಮೂಲಕವೂ ಪಂಚಾಯ್ತಿಗಳು ಸುಲಭದಲ್ಲಿ ಆದಾಯ ಕ್ರೋಢೀಕರಿಸುವಂತಾಗಿದೆ.

ಯಜಮಾನರ ಹೆಸರಿಗೆ ಬಿಲ್‌ ರವಾನೆ ಅಗತ್ಯ

ದ.ಕ, ಉಡುಪಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳನ್ನು ಒಳಗೊಂಡ ಮೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು 25 ಲಕ್ಷ ಗೃಹ ವಿದ್ಯುತ್‌ ಬಳಕೆಯ ಗ್ರಾಹಕರಿದ್ದಾರೆ. ಇವರಲ್ಲಿ ಮೃತರ ಹೆಸರಲ್ಲಿ ಎಷ್ಟುಮಂದಿಗೆ ವಿದ್ಯುತ್‌ ಬಿಲ್‌ ಕಳುಹಿಸಲಾಗುತ್ತಿದೆ ಎಂಬ ಮಾಹಿತಿ ಮೆಸ್ಕಾಂ ಅಧಿಕಾರಿಗಳಲ್ಲಿ ಇಲ್ಲ. ಈಗ ಗೃಹ ಜ್ಯೋತಿ ಯೋಜನೆ ಜಾರಿ ಹಂತದಲ್ಲಿ ಫಲಾನುಭವಿಗಳ ಲೆಕ್ಕ ಪಕ್ಕಾ ಆಗಬೇಕಾದರೆ, ವಿದ್ಯುತ್‌ ಬಿಲ್‌ ಮನೆಯ ಯಜಮಾನರ ಹೆಸರಿಗೆ ರವಾನೆಯಾಗುತ್ತಿದೆ ಎಂಬುದೂ ಅಷ್ಟೇ ಪಕ್ಕಾ ಇರಬೇಕು ಎಂಬ ಸೂಚನೆಯನ್ನು ಮೇಲಧಿಕಾರಿಗಳು ನೀಡಿದ್ದಾರೆ. ಹೀಗಾಗಿ ತರಾತುರಿಯಲ್ಲಿ ವಿದ್ಯುತ್‌ ಬಿಲ್‌ನ್ನು ಮನೆಯ ಹಾಲಿ ಯಜಮಾನರ ಹೆಸರಿಗೆ ವರ್ಗಾಯಿಸಿಕೊಳ್ಳುವಂತೆ ಅಧಿಕಾರಿಗಳು ಒತ್ತಡ ಹಾಕಲಾರಂಭಿಸಿದ್ದಾರೆ ಎಂದು ಗ್ರಾಹಕ ಮೂಲಗಳು ಹೇಳುತ್ತಿವೆ.

ಮೆಸ್ಕಾಂ(Mescom) ವ್ಯಾಪ್ತಿಯಲ್ಲಿ 25 ಲಕ್ಷ ಗೃಹ ಬಳಕೆ ಗ್ರಾಹಕರಿದ್ದಾರೆ, ಅವರಲ್ಲಿ ಮೃತ ವ್ಯಕ್ತಿಗಳ ಹೆಸರಿನಲ್ಲಿ ಈಗಲೂ ವಿದ್ಯುತ್‌ ಬಿಲ್‌ ರವಾನೆಯಾಗುತ್ತಿರುವುದು ಗಮನಕ್ಕೆ ಬಂದಿದ್ದು, ಈಗ ಸರಿಪಡಿಸುವಂತೆ ಸೂಚಿಸಲಾಗಿದೆ. ಮೃತರ ಹೆಸರಿನಲ್ಲಿ ಕರೆಂಟ್‌ ಬಿಲ್‌ ಇದ್ದರೆ ಗೃಹ ಜ್ಯೋತಿ ಯೋಜನೆಯ ಫಲಾನುಭವಿಯಾಗಲು ಅಡ್ಡಿಯಾಗಲಿದೆ ಎನ್ನುತ್ತಾರೆ ಹೆಸರು ಹೇಳಲಿಚ್ಛಿಸದ ಮೆಸ್ಕಾಂ ಅಧಿಕಾರಿಯೊಬ್ಬರು.

Previous Post

ನಾವು ನಮ್ಮ ಕಾನೂನನ್ನೇ ಅನುಸರಿಸುತ್ತೇವೆ, ಆದರೆ ಏಕ​ರೂಪ ಸಂಹಿ​ತೆ ವಿರುದ್ಧ ಬೀದಿಗೆ ಇಳಿಯಲ್ಲ: ಜಮೀಯ​ತ್‌ ಮುಖ್ಯಸ್ಥ

Next Post

ಬಿಜೆಪಿಗರು ಅಕ್ಕಿ ಕೊಡಲಾಗದಿದ್ದರೆ ಹಣ ಕೊಡಿ ಅಂತಾರೆ, ದುಡ್ಡು ತಿನ್ನೋಕೆ ಆಗುತ್ತಾ?: ಸಿದ್ದು

Next Post
ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ಮಾಡಿದರೂ ಅಕ್ಕಿ ಗ್ಯಾರಂಟಿ: ಸಿದ್ದರಾಮಯ್ಯ

ಬಿಜೆಪಿಗರು ಅಕ್ಕಿ ಕೊಡಲಾಗದಿದ್ದರೆ ಹಣ ಕೊಡಿ ಅಂತಾರೆ, ದುಡ್ಡು ತಿನ್ನೋಕೆ ಆಗುತ್ತಾ?: ಸಿದ್ದು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.