Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ಕಾಲೇಜು ವಿದ್ಯಾರ್ಥಿನಿ, ಶವವಾಗಿ ಮನೆಗೆ ಹೋದಳು

editor tv by editor tv
June 23, 2023
in ರಾಜ್ಯ
0
ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ಕಾಲೇಜು ವಿದ್ಯಾರ್ಥಿನಿ, ಶವವಾಗಿ ಮನೆಗೆ ಹೋದಳು
1.9k
VIEWS
Share on FacebookShare on TwitterShare on Whatsapp

M. ASHRAF KAMMAJE Published Jun 23, 2023, 8:02 PM IST

ಹೊಟ್ಟೆನೋವು ಎಂದು ಉಡುಪಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಿಕಾರಿಯಾಗದೇ ಮೃತಪಟ್ಟಿದ್ದಾಳೆ.

ಉಡುಪಿ (ಜೂ.23): ಆಕೆ ಮಂಗಳೂರಿನಲ್ಲಿ ಕಾಲೇಜು ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿನಿ. ಹೊಟ್ಟೆ ನೋವು ಎಂದು ಉಡುಪಿಯ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದಾಕೆ, ಶವವಾಗಿ ಮನೆಗೆ ಮರಳಿದ್ದಾಳೆ. ಯಾವುದೇ ಕಾಯಿಲೆಯ ಲಕ್ಷಣವಿಲ್ಲದೆ ಕೇವಲ ಹೊಟ್ಟೆ ನೋವಿಗೆ ಎಂದು ಆಸ್ಪತ್ರೆ ದಾಖಲಾಗಿದ್ದವಳ ಈ ಸಾವು ಮನೆಯವರನ್ನ ಮತ್ತು ವಿದ್ಯಾರ್ಥಿ ಸಮೂಹವನ್ನ ಆಕ್ರೋಶಕ್ಕೀಡು ಮಾಡಿದೆ. ಇಂದು ಆಕ್ರೋಶದ ಕಟ್ಟೆ ಒಡೆದು ಬೃಹತ್ ಪ್ರತಿಭಟನೆ ನಡೆಯಿತು.

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಕೆಮ್ಮುಂಡೇಲು ನಿವಾಸಿ ನಿಕಿತಾ( 20) ಎನ್ನುವ ವಿದ್ಯಾರ್ಥಿನಿಯ ಕಥೆ. ಮಂಗಳೂರು ಕೆಪಿಟಿಯಲ್ಲಿ ಪೈನಲ್ ಇಯರ್ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದವಳು. ಒಂದು ದಿನ ಮನೆಗೆ ಬಂದವಳು ವಿಪರೀತ ಹೊಟ್ಟೆ ನೋವು ಎಂದು ಹೇಳಿದ್ದಾಳೆ. ಮನೆಯವರು ಉಡುಪಿ ನಗರದ ಸಿಟಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಳೆದ ಬುಧವಾರದಂದು ಹೊಟ್ಟೆ ನೋವೆಂದು ದಾಖಲಾಗದ ಹುಡುಗಿ ಭಾನುವಾರ ಇಹಲೋಕ ತ್ಯಜಿಸಿದ್ದಾಳೆ.

ಕಾಪುವಿನ ಹುಡಿಗಿ ಸಾವಿಗೆ ಭಾರಿ ಪ್ರತಿಭಟನೆ:  ಇದೇ ವಿಚಾರವಾಗಿ ಆಸ್ಪತ್ರೆಯವರ ನಿರ್ಲಕ್ಷದಿಂದಾಗಿ ನನ್ನ ಮಗಳು ಸಾವನ್ನಪ್ಪಿದ್ದಾಳೆ ಎನ್ನುವ ಆಡಿಯೋ ಸಂದೇಶವನ್ನು ಕರಾವಳಿಯಂತೆ ವೈರಲ್ ಆಗಿತ್ತು. ಆದರೆ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗದ ಕಾರಣ ಈಕೆ ಎಲ್ಲಿಯ ಹುಡುಗಿ ಅನ್ನೋದು ಬಯಲಾಗಿರಲಿಲ್ಲ. ಆದರೆ ಉಡುಪಿಗೆ ಸಮೀಪದ ಕಾಪುವಿನ ಹುಡುಗಿ ಎಂದ ಗೊತ್ತಾದ ತಕ್ಷಣ, ಸ್ಥಳೀಯರು ಮತ್ತು ವಿದ್ಯಾರ್ಥಿ ಸಂಘಟನೆಗಳ ತಾಳ್ಮೆ ಕಟ್ಟೆ ಒಡೆದಿದೆ. ಮನೆಯವರಿಗೆ ಧೈರ್ಯ ತುಂಬಿದ ಆಕೆಯ ಕುಲಾಲ ಸಮುದಾಯದ ಮುಖಂಡರು ಹಾಗೂ ವಿದ್ಯಾರ್ಥಿಗಳು ಇಂದು ಬೆಳಿಗ್ಗೆ ಎಬಿವಿಪಿ ನೇತೃತ್ವದಲ್ಲಿ ಭಾರಿ ಪ್ರತಿಭಟನೆ ನಡೆಸಿದರು . ಈ ಸಾವಿಗೆ ಸ್ಪಷ್ಟ ಉತ್ತರ ನೀಡುವಂತೆ ಆಗ್ರಹಿಸಿ ಆಸ್ಪತ್ರೆಗೆ ನುಗ್ಗುವ ಯತ್ನ ಮಾಡಿದೆ.

ಹತ್ತಾರು ಪರೀಕ್ಷೆ ಮಾಡಿದರೂ ಸತ್ತಿದ್ದೇಗೆ? : ಇಂದು ಬೆಳಿಗ್ಗೆ ನೂರಾರು ಜನ ವಿದ್ಯಾರ್ಥಿಗಳು ಉಡುಪಿ ನಗರದ ಸಿಟಿ ಆಸ್ಪತ್ರೆ ಮುಂಭಾಗದಲ್ಲಿ ಜಮಾಯಿಸಿದ್ದರು. ಹೊಟ್ಟೆ ನೋವು ಎಂದು ಆಸ್ಪತ್ರೆಗೆ ದಾಖಲಿಸಿದಾಕೆಯನ್ನ ಶವವಾಗಿ ಹೊರಗೆ ಕಳುಹಿಸಿದ್ದೀರಿ. ಈ ಸಾವಿನ ಕುರಿತಾಗಿ ಉತ್ತರ ನೀಡಿ ಆಸ್ಪತ್ರೆಯವರು ಸಾವಿನ ಜವಾಬ್ದಾರಿ ತೆಗೆದುಕೊಳ್ಳಿ ಎನ್ನುವ ಬೇಡಿಕೆ ಇಟ್ಟು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಆಸ್ಪತ್ರೆಗೆ ದಾಖಲಾದ ನಿಕಿತಾಳಿಗೆ ಸ್ಕ್ಯಾನಿಂಗ್, ಎಂಡೋಸ್ಕೋಪಿ, ಸಿಟಿ ಸ್ಕ್ಯಾನ್ ಮಾಡಲಾಗಿತ್ತು. ಬಳಿಕ ಸರಿಯಾದ ಮಾಹಿತಿ ನೀಡದೆ ಆಪರೇಷನ್ ನಡೆಸಿದ್ದಾರೆ ಎಂದು ಆರೋಪಿಸಲಾಯಿತು‌. ಈ ಸಂದರ್ಭ ಉಡುಪಿ ಜಿಲ್ಲಾ ಪೊಲೀಸರು ವಿದ್ಯಾರ್ಥಿಗಳನ್ನ ಮನವೊಲಿಸುವ ಪ್ರಯತ್ನ ಮಾಡಿದರು. ಆದರೆ ಆಸ್ಪತ್ರೆಯವರು ಬಂದು ಮಾತನಾಡುವ ತನಕ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ವಿದ್ಯಾರ್ಥಿಗಳು ತಿಳಿಸಿದರು.

ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗೆ ದೂರು:  ಬಳಿಕ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಆಸ್ಪತ್ರೆಯ ಮುಖ್ಯ ವೈದ್ಯರು ಪ್ರತಿಭಟನಾಕಾರರಿಗೆ ನಿಖಿತ ಚಿಕಿತ್ಸೆ ವಿಚಾರವಾಗಿ ಮಾತನಾಡಿ ಮನವೊಲಿಸುವ ಯತ್ನ ಮಾಡಿದರು. ಅಲ್ಲದೇ ಆ ದಿನ ಡ್ಯುಟಿಯಲ್ಲಿ ವೈದ್ಯೆ ಬಂದು ಘಟನೆ ವಿಚಾರವಾಗಿ ಮಾತಾನಾಡಿದರು. ಇಷ್ಟಾದರೂ ಕೂಡ ವಿದ್ಯಾರ್ಥಿಗಳು ನ್ಯಾಯಕ್ಕಾಗಿ ಪಟ್ಟು ಹಿಡಿದರು. ಬಳಿಕ ಪ್ರತಿಭಟನೆ ಗೆ ತಾತ್ಕಾಲಿಕ ಬ್ರೇಕ್ ನೀಡಿದ ಎಬಿವಿಪಿ ವಿದ್ಯಾರ್ಥಿಗಳು ಉಡುಪಿ ಡಿಸಿ, ಡಿಎಚ್ ಓ ದೂರು ನೀಡಿ ತನಿಖೇ ನಡೆಸುವಂತೆ ಮನವಿ ಸಲ್ಲಿಸಿದಾಗಿ ತಿಳಿಸಿ ತೆರಳಿದರು.

ಮಗಳ ಸಾವಿನ ಬಗ್ಗೆ ದೂರು ನೀಡದ ಪೋಷಕರು: ಮಗಳ ಸಾವಿನ ಆಘಾತದಲ್ಲಿ ಮನೆಯವರು ಯಾವುದೇ ಪೊಲೀಸ್ ದೂರು ನೀಡಿಲ್ಲ. ಮೇಲಾಗಿ ಮೃತಳ ಮರಣೋತ್ತರ ಪರೀಕ್ಷೆ ನಡೆಸದೆ, ಅಂತಿಮ ಸಂಸ್ಕಾರ ಪೂರೈಸಿದ್ದಾರೆ. ಇನ್ನೊಂದೆಡೆ ವೈದ್ಯರು ತಾವು ನೀಡಿರುವ ಸ್ಪಷ್ಟೀಕರಣ ದಲ್ಲಿ ಎಲ್ಲಾ ತಾಂತ್ರಿಕ ವಿವರಗಳನ್ನು ನಮೂದಿಸಿದ್ದಾರೆ. ಮಾತ್ರವಲ್ಲ ಆಕೆಗೆ ನಡೆಸಿದ ಶಸ್ತ್ರಚಿಕಿತ್ಸೆಯ ವಿಡಿಯೋ ದಾಖಲೀಕರಣ ಕೂಡ ಇದೆ ಎಂದು ತಿಳಿಸಿದ್ದಾರೆ. ನಮ್ಮಿಂದ ಯಾವುದೇ ತಪ್ಪಾಗಿಲ್ಲ ಈ ಸಾವಿನ ಬಗ್ಗೆ ನಮಗೆ ವಿಷಾಧವಿದೆ ಎಂದು ಹೇಳಿದ್ದಾರೆ. 

ನಿತ್ಯವೂ ಮನೆಯಿಂದ ಕಾಲೇಜಿಗೆ ತೆರಳಿ ನಗುನಗುತ ಇರುತ್ತಿದ್ದ ವಿದ್ಯಾರ್ಥಿನಿ ಹಠಾತ್ತನೆ ಸಾವನ್ನಪ್ಪಿರೋದು ಮನೆಯವರಿಗೆ ನೋವು ತಂದಿದೆ. ಸಾವಿನ ವಿಚಾರವಾಗಿ ಸೂಕ್ತ ತನಿಖೆ ನಡೆಸಿ ತಪ್ಪಿತಸರಿಗೆ ಶಿಕ್ಷೆ ನೀಡಬೇಕು ಹಾಗೂ ಮನೆಯವರಿಗೆ ಪರಿಹಾರವನ್ನು ನೀಡಬೇಕು ಎನ್ನುವ ಎಬಿವಿಪಿ ವಿದ್ಯಾರ್ಥಿ ಸಂಘಟನೆಗೆ ಉಳಿದ ಸಂಘಟನೆಗಳು ಸಹಕಾರ ನೀಡಿದೆ. ಇನ್ನು ಈ ವಿಚಾರವಾಗಿ ಇಲಾಖೆ ಯಾವ ರೀತಿ ಕ್ರಮ ಕೈಗೊಳ್ಳಲಿದೆ ಕಾದುನೋಡಬೇಕಿದೆ. ತಪ್ಪಿದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಬಿವಿಪಿ ಎಚ್ಚರಿಸಿದೆ.

Previous Post

ಅನ್ನಭಾಗ್ಯ ಯೋಜನೆಗಿಲ್ಲ ಕೇಂದ್ರದ ಅಕ್ಕಿ – ಆಶಾಭಾವನೆಯಿಂದ ಬಂದ ನಮಗೆ ಎರಡನೇ ಬಾರಿ ನಿರಾಸೆ: ಮುನಿಯಪ್ಪ

Next Post

ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ: ಹೈಕಮಾಂಡ್‌ಗೆ ಸೋಮಣ್ಣ ಮನವಿ

Next Post
ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ: ಹೈಕಮಾಂಡ್‌ಗೆ ಸೋಮಣ್ಣ ಮನವಿ

ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ: ಹೈಕಮಾಂಡ್‌ಗೆ ಸೋಮಣ್ಣ ಮನವಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.