Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಕಾಂಗ್ರೆಸ್ಸಿಗರು ಪಕ್ಷ ಸೇರಿದ ಬಳಿಕ ಬಿಜೆಪಿಯಲ್ಲಿ ಅಶಿಸ್ತು , ಪಕ್ಷದಲ್ಲಿ ಅಶಿಸ್ತಿನ ಚಟುವಟಿಕೆಯಲ್ಲಿ ತೊಡಗಿದವರ ಬಾಲವನ್ನು ಕಟ್‌ ಮಾಡುತ್ತೇವೆ ಎಂದ ಈಶ್ವರಪ್ಪ

editor tv by editor tv
June 27, 2023
in ರಾಜ್ಯ
0
ಕಾಂಗ್ರೆಸ್ಸಿಗರು ಪಕ್ಷ ಸೇರಿದ ಬಳಿಕ ಬಿಜೆಪಿಯಲ್ಲಿ ಅಶಿಸ್ತು , ಪಕ್ಷದಲ್ಲಿ ಅಶಿಸ್ತಿನ ಚಟುವಟಿಕೆಯಲ್ಲಿ ತೊಡಗಿದವರ ಬಾಲವನ್ನು ಕಟ್‌ ಮಾಡುತ್ತೇವೆ ಎಂದ ಈಶ್ವರಪ್ಪ
1.9k
VIEWS
Share on FacebookShare on TwitterShare on Whatsapp

M. Ashraf Kammaje : published 7:48 am

ಕಾಂಗ್ರೆಸ್ಸಿಗರು ಪಕ್ಷ ಸೇರಿದ ಬಳಿಕ ಬಿಜೆಪಿಯಲ್ಲಿ ಅಶಿಸ್ತು , ಪಕ್ಷದಲ್ಲಿ ಅಶಿಸ್ತಿನ ಚಟುವಟಿಕೆಯಲ್ಲಿ ತೊಡಗಿದವರ ಬಾಲವನ್ನು ಕಟ್‌ ಮಾಡುತ್ತೇವೆ ಎಂದ ಈಶ್ವರಪ್ಪ

ಬೆಂಗಳೂರು, ಜೂನ್‌ 26: ಕರ್ನಾಟಕದಲ್ಲಿನ ಹೀನಾಯ ಸೋಲಿನ ಬಳಿಕ ಬಿಜೆಪಿಯಲ್ಲಿ ಅಸಮಾಧಾನದ ಬೆಂಕಿ ಹೊತ್ತಿಕೊಂಡಿದೆ. ಪಕ್ಷದ ಕೆಲ ಮುಖಂಡರು ತಮ್ಮದೇ ಪಕ್ಷದ ನಾಯಕರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸುತ್ತಿದ್ದಾರೆ. ಕೆಲವರು ಹೊಂದಾಣಿಕೆ ರಾಜಕಾರಣದ ಗೂಬೆ ಕೂರಿಸಿದರೆ, ಇನ್ನು ಕೆಲವರು ಪಕ್ಷ ವಿರೋಧ ಚಟುವಟಕೆ ಬಗ್ಗೆ ಆರೋಪಿಸಿದ್ದಾರೆ. ಇಂತಹ ಸಂದರ್ಭದಲ್ಲೇ, ಕೆಎಸ್‌ ಈಶ್ವರಪ್ಪ ಮತ್ತೊಂದು ಬಾಂಬ್‌ ಸಿಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಈ ಹಿಂದೆ ಶಿಸ್ತಿನ ಪಕ್ಷವಾಗಿತ್ತು. ಆದರೆ, ಈಗ ಪಕ್ಷದಲ್ಲಿ ಅಶಿಸ್ತಿನ ವಾತಾವರಣವಿದೆ. ಕಾಂಗ್ರೆಸ್‌ ಪಕ್ಷದಿಂದ ಬಿಜೆಪಿಗೆ ಬಂದಿರುವ ವಲಸಿಗರಿಂದ ಅಶಿಸ್ತು ಮೂಡಿದೆ. ಪಕ್ಷದಲ್ಲಿ ಅಶಿಸ್ತಿನ ಚಟುವಟಿಕೆಯಲ್ಲಿ ತೊಡಗಿದವರ ಬಾಲವನ್ನು ಕಟ್‌ ಮಾಡುತ್ತೇವೆ ಎಂದು ಹೇಳಿದ್ದಾರೆ. ಕಳೆದ ತಿಂಗಳು ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಆಪರೇಷನ್‌ ಕಮಲ ಬಿಜೆಪಿ ಗೆಲುವಿಗೆ ಮುಳುವಾಯಿತು. ಕಾಂಗ್ರೆಸ್‌ ಶಾಸಕರನ್ನು ಪಕ್ಷಕ್ಕೆ ಕರೆದುಕೊಂಡು ಬಂದೆವು. ಅದು ನಮ್ಮ ಸೋಲಿಗೆ ಕಾರಣವಾಗಿದೆ. ನಾವು ಮಾಡಿದ್ದನ್ನು ನಾವೇ ಅನುಭವಿಸಬೇಕಾಗಿದೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ.

ಮೋಸ ಮಾಡುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ವಿಧಾನಸಭೆ ಚುನಾವಣೆಗೂ ಮುನ್ನ ಪ್ರಣಾಳಿಕೆಯಲ್ಲಿದ್ದ ಐದು ಗ್ಯಾರಂಟಿಗಳ ಬಗ್ಗೆ ಈವರೆಗೂ ಗೊಂದಲ ಬಗೆ ಹರಿದಿಲ್ಲ. ಗ್ಯಾರಂಟಿಳನ್ನು ಅನುಷ್ಠಾನ ಮಾಡುತ್ತೇವೆ ಎನ್ನುತ್ತಾ, ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವಂತ ಕೆಲಸ ಮಾಡುತ್ತಿದೆ ಎಂದು ಈಶ್ವರಪ್ಪ ಕಿಡಿಕಾರಿದರು.

ಮೊದಲ ಕ್ಯಾಬಿನೇಟ್​ನಲ್ಲೇ ನಿರುದ್ಯೋಗಿ ಯುವಕರಿಗೆ ಕಾಂಗ್ರೆಸ್ ಸರ್ಕಾರ ಮೋಸ ಮಾಡಿದೆ. ಕೇಂದ್ರ ಸರ್ಕಾರ ಉಚಿತವಾಗಿ ಅಕ್ಕಿ ಕೊಡುತ್ತಿರುವ ವಿಚಾರದಲ್ಲಿ ಯಾರೊಬ್ಬರೂ ಅಭಿನಂದನೆ ಸಲ್ಲಿಸುತ್ತಿಲ್ಲ. ಆದರೆ ಕೇಂದ್ರ ಅಕ್ಕಿ ನೀಡುತ್ತಿಲ್ಲ ಎಂದು ಗೂಬೆ ಕೂರಿಸುತ್ತಿದ್ದಾರೆ. ಸಚಿವ ರಮೇಶ್ ಜಾರಕಿಹೊಳಿ ನಾಚಿಕೆಗೇಡಿನ‌ ಹೇಳಿಕೆ ನೀಡುತ್ತಾರೆ. ಇವರಿಗೆ ಸ್ವಲ್ಪವಾದರೂ ಜವಾಬ್ದಾರಿ ಇದೆಯಾ? ಎಂದು ಪ್ರಶ್ನಿಸಿದರು.

ಸರ್ಕಾರದ ಗ್ಯಾರಂಟಿ ಭರವಸೆಗಳ ವಿರುದ್ಧ ರಾಜ್ಯದ ಜನ ಆಕ್ರೋಶಗೊಂಡಿದ್ದಾರೆ. ಮಹಿಳೆಯರಿಗೆ ಗೃಹಲಕ್ಷ್ಮೀ, ಗೃಹಜ್ಯೋತಿ ಯೋಜನೆಗಳ ಕುರಿತು ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಈ ಎಲ್ಲ ಯೋಜನೆಗಳ ಅನುಷ್ಠಾನಕ್ಕೆ ಹಣ ಯಾವ ರೀತಿ ಹೊಂದಿಸುತ್ತಾರೆ ಎಂದು ಈವರೆಗೂ ಸ್ಪಷ್ಟಪಡಿಸಿಲ್ಲ. ಕಾಂಗ್ರೆಸ್ ಸರ್ಕಾರದ ಈ ನ್ಯೂನತೆಗಳ ವಿರುದ್ಧ ಬಿಜೆಪಿ ಹೋರಾಟ ಹಮ್ಮಿಕೊಳ್ಳಲಿದೆ. ವಿದ್ಯುತ್ ದರ ಏರಿಕೆ ವಿಚಾರದಲ್ಲಿ ಸರ್ಕಾರ ಸ್ಪಷ್ಟನೆ ನೀಡಬೇಕು. ಮತಾಂತರ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಸೇರಿದಂತೆ ನಾವು ಜಾರಿ ಮಾಡಿದ ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳಲು ಕಾಂಗ್ರೆಸ್ ಹೊರಟಿದೆ ಎಂದು ಆರೋಪಿಸಿದರು.

Previous Post

ವಿಜಯಪುರ: ಬಿಜೆಪಿ ಸಭೆಯಲ್ಲಿ ಯತ್ನಾಳ್ – ನಿರಾಣಿ ಪರೋಕ್ಷ ವಾಗ್ದಾಳಿ, ಕಾರ್ಯಕರ್ತರ ಜಟಾಪಟಿ

Next Post

Uttar Pradesh: ಎನ್​ಕೌಂಟರ್​ನಲ್ಲಿ ಮೋಸ್ಟ್​ ವಾಂಟೆಡ್ ​ಕ್ರಿಮಿನಲ್​ ಹತ್ಯೆ

Next Post
Uttar Pradesh: ಎನ್​ಕೌಂಟರ್​ನಲ್ಲಿ ಮೋಸ್ಟ್​ ವಾಂಟೆಡ್ ​ಕ್ರಿಮಿನಲ್​ ಹತ್ಯೆ

Uttar Pradesh: ಎನ್​ಕೌಂಟರ್​ನಲ್ಲಿ ಮೋಸ್ಟ್​ ವಾಂಟೆಡ್ ​ಕ್ರಿಮಿನಲ್​ ಹತ್ಯೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.